AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Ramesh Aravind Birthday: ಕೈಕೋಳ ತೊಟ್ಟು ಬಂದ ಶಿವಾಜಿ ಸುರತ್ಕಲ್​; ಸೂಪರ್​ ಹಿಟ್​ ಚಿತ್ರದ ಸೀಕ್ವೆಲ್​ಗೆ ಸಿದ್ಧತೆ

Shivaji Surathkal 2: ರಮೇಶ್ ಅರವಿಂದ್​ ಜನ್ಮದಿನದ ಪ್ರಯುಕ್ತ ‘ಶಿವಾಜಿ ಸುರತ್ಕಲ್​ 2’ ಚಿತ್ರದ ಫಸ್ಟ್​ಲುಕ್​ ಪೋಸ್ಟರ್​ ಬಿಡುಗಡೆ ಆಗಿದೆ. ಅದನ್ನು ಕಂಡು ಅವರ ಅಭಿಮಾನಿಗಳು ಇಷ್ಟಪಟ್ಟಿದ್ದಾರೆ. ಸೋಶಿಯಲ್​ ಮೀಡಿಯಾದಲ್ಲಿ ಹಂಚಿಕೊಳ್ಳುವ ಮೂಲಕ ರಮೇಶ್​ಗೆ ಹುಟ್ಟುಹಬ್ಬದ ಶುಭಕೋರಲಾಗುತ್ತಿದೆ.

Ramesh Aravind Birthday: ಕೈಕೋಳ ತೊಟ್ಟು ಬಂದ ಶಿವಾಜಿ ಸುರತ್ಕಲ್​; ಸೂಪರ್​ ಹಿಟ್​ ಚಿತ್ರದ ಸೀಕ್ವೆಲ್​ಗೆ ಸಿದ್ಧತೆ
ರಮೇಶ್ ಅರವಿಂದ್
TV9 Web
| Updated By: ಮದನ್​ ಕುಮಾರ್​|

Updated on: Sep 10, 2021 | 1:20 PM

Share

ನಟ ರಮೇಶ್​ ಅರವಿಂದ್​ ಪಾಲಿಗೆ ಇಂದು (ಸೆ.10) ಎರಡೆರಡು ಸಂಭ್ರಮ. ಅವರ ಹುಟ್ಟುಹಬ್ಬದ ದಿನವೇ ಗೌರಿ-ಗಣೇಶ್​ ಹಬ್ಬ ಕೂಡ ಬಂದಿದೆ. ಈ ಖುಷಿಯನ್ನು ದುಪ್ಪಟ್ಟು ಮಾಡಲು ‘ಶಿವಾಜಿ ಸುರತ್ಕಲ್​ 2’ ಚಿತ್ರದ ಹೊಸ ಪೋಸ್ಟರ್​ ರಿಲೀಸ್​ ಆಗಿದೆ. ‘ಶಿವಾಜಿ ಸುರತ್ಕಲ್​’ ಸಿನಿಮಾ ಮಾಡಿದ್ದ ತಂಡವೇ ಸೇರಿಕೊಂಡು ಈಗ ಅದರ ಎರಡನೇ ಪಾರ್ಟ್​ ತಯಾರಿಸುತ್ತಿದೆ. ಆಕಾಶ್​ ಶ್ರೀವತ್ಸ ನಿರ್ದೇಶನ ಮಾಡುತ್ತಿದ್ದು, ರೇಖಾ ಕೆ.ಎನ್​. ಹಾಗೂ ಅನೂಪ್​ ಗೌಡ ನಿರ್ಮಾಣದ ಹೊಣೆ ಹೊತ್ತಿದ್ದಾರೆ.

2020ರ ಆರಂಭದಲ್ಲಿ ಲಾಕ್​ಡೌನ್​ ಶುರು ಆಗುವುದಕ್ಕೂ ಮುನ್ನ ‘ಶಿವಾಜಿ ಸುರತ್ಕಲ್​’ ಸಿನಿಮಾ ತೆರೆಕಂಡು ಯಶಸ್ವಿಯಾಗಿತ್ತು. ಸಸ್ಪೆನ್ಸ್​-ಥ್ರಿಲ್ಲರ್​ ಕಥೆಯುಳ್ಳ ಚಿತ್ರ ಎಲ್ಲೆಡೆ ಹೌಸ್​ಫುಲ್​ ಪ್ರದರ್ಶನ ಕಾಣುತ್ತಿರುವಾಗಲೇ ಲಾಕ್​ಡೌನ್​ ಜಾರಿ ಆಗಿದ್ದರಿಂದ ಪ್ರದರ್ಶನ ನಿಲ್ಲಿಸುವುದು ಅನಿವಾರ್ಯ ಆಯಿತು. ಬಳಿಕ ಓಟಿಟಿ ಮೂಲಕವೂ ಈ ಸಿನಿಮಾ ಹೆಚ್ಚಿನ ಜನರನ್ನು ತಲುಪಿತ್ತು. ಮೊದಲ ಪಾರ್ಟ್​ನಲ್ಲಿ ಇದ್ದ ಶಿವಾಜಿ ಸುರತ್ಕಲ್​ ಪಾತ್ರ ಎರಡನೇ ಪಾರ್ಟ್​​ನಲ್ಲೂ ಮುಂದುವರಿಯುತ್ತಿದೆ. ಪತ್ತೆದಾರಿ ಆಗಿರುವ ಆತ ಈಗ ಹೊಸ ಕೇಸ್​ ಭೇದಿಸಲು ಸಜ್ಜಾಗುತ್ತಿದ್ದಾನೆ.

ಮೊದಲ ಪಾರ್ಟ್​ಗೆ ‘ದಿ ಕೇಸ್​ ಆಫ್​ ರಣಗಿರಿ ರಹಸ್ಯ’ ಎಂಬ ಟ್ಯಾಗ್​ಲೈನ್​ ಇತ್ತು. ಈಗ ಎರಡನೇ ಪಾರ್ಟ್​ಗೆ ‘ದಿ ಮಿಸ್ಟೀರಿಯಸ್​ ಕೇಸ್​ ಆಫ್​ ಮಾಯಾವಿ’ ಎಂಬ ಟ್ಯಾಗ್​ಲೈನ್​ ಇದೆ. ಇದರ ಪೋಸ್ಟರ್​ ಗಮನ ಸೆಳೆಯುತ್ತಿದೆ. ಪತ್ತೇದಾರಿ ಆಗಿರುವ ಶಿವಾಜಿಯ ಕೈಗೆ ಕೋಳ ತೊಡಿಸಲಾಗಿದೆ. ಹಾಗಾದರೆ ಈ ಕೇಸ್​ನಲ್ಲಿ ಆತನೇ ಆರೋಪಿ ಆಗಲಿದ್ದಾನಾ? ಆ ಮಾಯಾವಿ ಯಾರು ಎಂಬ ಪ್ರಶ್ನೆ ಸಿನಿಪ್ರಿಯರ ಮನದಲ್ಲಿ ಮೂಡುವಂತಾಗಿದೆ.

ಅಕ್ಟೋಬರ್​ನಿಂದ ಈ ಚಿತ್ರಕ್ಕೆ ಶೂಟಿಂಗ್​ ಶುರುವಾಗಲಿದೆ. ಹಲವು ಗೆಟಪ್​ಗಳಲ್ಲಿ ರಮೇಶ್​ ಅರವಿಂದ್​ ಕಾಣಿಸಿಕೊಳ್ಳಲಿದ್ದಾರೆ. ಕರ್ನಾಟಕದ ಅನೇಕ ಕಡೆಗಳಲ್ಲಿ ಚಿತ್ರೀಕರಣ ನಡೆಯಲಿದೆ. ರಾಧಿಕಾ ನಾರಾಯಣ್​ ಕೂಡ ಈ ಸಿನಿಮಾದಲ್ಲಿ ಪ್ರಮುಖ ಪಾತ್ರ ಮಾಡುತ್ತಿದ್ದಾರೆ. ಈ ಟೀಮ್​ ಜೊತೆ ಕೆಲಸ ಮಾಡಲು ರಮೇಶ್​ ಉತ್ಸುಕರಾಗಿದ್ದಾರೆ. ತಮ್ಮ ಸೋಶಿಯಲ್​ ಮೀಡಿಯಾ ಖಾತೆಗಳಲ್ಲಿ ಅವರು ಈ ಪೋಸ್ಟರ್​ ಹಂಚಿಕೊಂಡಿದ್ದಾರೆ.

ಇದನ್ನೂ ಓದಿ:

ಚಿತ್ರರಂಗದ ಸಮಸ್ಯೆಗಳಿಗೆ ಟಿವಿ9 ಮೂಲಕ ಸಿಎಂ ಬಸವರಾಜ ಬೊಮ್ಮಾಯಿ ಬಳಿ ಪರಿಹಾರ ಕೇಳಿದ ರಮೇಶ್​ ಅರವಿಂದ್​

ಹೇಗಿತ್ತು ಗೊತ್ತಾ ರಮೇಶ್​ ಅರವಿಂದ್ ಮಗಳ ಮದುವೆ?: ಇಲ್ಲಿದೆ ಚಿತ್ರನೋಟ

ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ