AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜೂನ್ 14ಕ್ಕೆ ‘ಶೆಫ್​ ಚಿದಂಬರ’ ಬಿಡುಗಡೆ; ಟ್ರೇಲರ್​ ಅನಾವರಣ ಮಾಡಿ ಹಾರೈಸಿದ ರಮೇಶ್​

‘ಶೆಫ್​ ಚಿದಂಬರ’ ಸಿನಿಮಾ ಬಿಡುಗಡೆಗೆ ಸಜ್ಜಾಗಿದೆ. ರಮೇಶ್​ ಅರವಿಂದ್​ ಅವರು ಈ ಸಿನಿಮಾದ ಟ್ರೇಲರ್​ ಬಿಡುಗಡೆ ಮಾಡಿದ್ದಾರೆ. ಅನಿರುದ್ಧ್​ ಜತ್ಕರ್​, ನಿಧಿ ಸುಬ್ಬಯ್ಯ, ರೇಚಲ್ ಡೇವಿಡ್ ಮುಂತಾದವರು ಈ ಚಿತ್ರದಲ್ಲಿ ನಟಿಸಿದ್ದಾರೆ. ರೂಪಾ ಡಿ.ಎನ್​. ಅವರ ನಿರ್ಮಾಣ, ಆನಂದ್​ರಾಜ್​ ಅವರ ನಿರ್ದೇಶನ ಈ ಸಿನಿಮಾಗಿದೆ. ಟ್ರೇಲರ್​ ಬಿಡುಗಡೆ ಕಾರ್ಯಕ್ರಮ ಇತ್ತೀಚೆಗೆ ನಡೆಯಿತು.

ಜೂನ್ 14ಕ್ಕೆ ‘ಶೆಫ್​ ಚಿದಂಬರ’ ಬಿಡುಗಡೆ; ಟ್ರೇಲರ್​ ಅನಾವರಣ ಮಾಡಿ ಹಾರೈಸಿದ ರಮೇಶ್​
‘ಶೆಫ್​ ಚಿದಂಬರ’ ಟ್ರೇಲರ್​ ಬಿಡುಗಡೆ ಕಾರ್ಯಕ್ರಮ
ಮದನ್​ ಕುಮಾರ್​
|

Updated on: Jun 02, 2024 | 2:48 PM

Share

ಸೀರಿಯಲ್​ ಮತ್ತು ಸಿನಿಮಾ ಈ ಎರಡೂ ಕ್ಷೇತ್ರಗಳಲ್ಲಿ ಫೇಮಸ್​ ಆಗಿರುವ ನಟ ಅನಿರುದ್ಧ್​ ಜತ್ಕರ್ (Anirudh Jatkar) ಅವರು ಹೀರೋ ಆಗಿ ಅಭಿನಯಿಸಿರುವ ‘ಶೆಫ್​ ಚಿದಂಬರ’ ಸಿನಿಮಾದ ಟ್ರೇಲರ್​ ಬಿಡುಗಡೆ ಆಗಿದೆ. ರೂಪ ಡಿ.ಎನ್. ನಿರ್ಮಾಣ ಮಾಡಿರುವ ಈ ಸಿನಿಮಾಗೆ ಆನಂದ್​ರಾಜ್ ಎಂ ಅವರು ನಿರ್ದೇಶನ ಮಾಡಿದ್ದಾರೆ. ಕನ್ನಡದ ಖ್ಯಾತ ನಟ ರಮೇಶ್ ಅರವಿಂದ್ (Ramesh Aravind) ಅವರು ಈ ಸಿನಿಮಾದ ಟ್ರೇಲರ್ ಅನಾವರಣ ಮಾಡಿದ್ದಾರೆ. ಅಲ್ಲದೇ ಅವರು ಟ್ರೇಲರ್​​ಗೆ ಮೆಚ್ಚುಗೆ ಸೂಚಿಸಿದ್ದಾರೆ. ಜೂನ್ 14ಕ್ಕೆ ‘ಶೆಫ್​ ಚಿರಂಬರ’ ಸಿನಿಮಾ (Chef Chidambara Movie) ಬಿಡುಗಡೆ ಆಗಲಿದೆ. 5 ವರ್ಷಗಳ ಬಳಿಕ ಅನಿರುದ್ದ್ ಅವರು ನಟಿಸಿರುವ ಸಿನಿಮಾ ಎಂಬ ಕಾರಣಕ್ಕೆ ಅವರ ಅಭಿಮಾನಿಗಳಿಗೆ ಈ ಸಿನಿಮಾ ವಿಶೇಷವಾಗಿದೆ.

ಟ್ರೇಲರ್​ ಬಿಡುಗಡೆ ವೇಳೆ ರಮೇಶ್​ ಅರವಿಂದ್​ ಅವರು ವಿಷ್ಣುವರ್ಧನ್ ಜೊತೆಗಿನ ತಮ್ಮ ಒಡನಾಟವನ್ನು ನೆನಪಿಸಿಕೊಂಡರು. ಬಳಿಕ ಅನಿರುದ್ಧ್​ ಬಗ್ಗೆ ಮಾತನಾಡಿದರು. ‘ನನ್ನ ನಿರ್ದೇಶನದ ‘ರಾಮ ಶ್ಯಾಮ ಭಾಮ’ ಸೇರಿದಂತೆ 2 ಸಿನಿಮಾಗಳಲ್ಲಿ ಅನಿರುದ್ಧ್​ ಅಭಿನಯಿಸಿದ್ದಾರೆ. ಅವರು ಪ್ರತಿಭಾವಂತ ಕಲಾವಿದ. ಈ ಸಿನಿಮಾ ಟ್ರೇಲರ್ ಕೂಡ ಚೆನ್ನಾಗಿದೆ. ಡಾರ್ಕ್ ಕಾಮಿಡಿ ಶೈಲಿಯ ಈ ಸಿನಿಮಾದ ಟ್ರೇಲರ್ ಕುತೂಹಲ ಮೂಡಿಸಿದೆ. ಸಿನಿಮಾ ನೋಡುವ ಕಾತುರವನ್ನು ಹೆಚ್ಚು ಮಾಡಿದೆ‌. ಚಿತ್ರತಂಡದವರ ಶ್ರಮ ಕಾಣುತ್ತಿದೆ. ಸಿನಿಮಾ ಯಶಸ್ವಿಯಾಗಲಿ’ ಎಂದು ರಮೇಶ್​ ಅರವಿಂದ್​ ಹಾರೈಸಿದರು.

ನಟ ಅನಿರುದ್ಧ್​ ಮಾತನಾಡಿ, ‘ನಿರ್ಮಾಪಕಿ ರೂಪಾ ಅವರ ಪತಿ ಸರ್ವೋತಮ್ ಮತ್ತು ನಾನು ಬಹಳ ವರ್ಷಗಳಿಂದ ಗೆಳೆಯರು. ಅವರು‌ ಸಿನಿಮಾ ಮಾಡೋಣ ಎಂದಾಗ ಅನೇಕ ಕಥೆಗಳನ್ನು ಕೇಳಿದ್ದೆ. ಆನಂದ್​ರಾಜ್ ಅವರು ಹೇಳಿದ ಈ ಕಥೆ ಇಷ್ಟ ಆಯಿತು. ನಂತರ ವಿಷ್ಣುವರ್ಧನ್ ಸ್ಮಾರಕದ ಬಳಿ ಸ್ಕ್ರಿಪ್ಟ್ ಪೂಜೆ ಮಾಡಿದೆವು. ಮುಹೂರ್ತದ ದಿನ ಭಾರತಿ ವಿಷ್ಣುವರ್ಧನ್ ಅವರು ಕ್ಲ್ಯಾಪ್ ಮಾಡಿ ಚಾಲನೆ ನೀಡಿದ್ದರು. ಕಿಚ್ಚ ಸುದೀಪ್ ಅವರು ಟೀಸರ್​ಗೆ ಧ್ವನಿ ನೀಡಿ ಪ್ರೋತ್ಸಾಹಿಸಿದರು. ಈಗ ರಮೇಶ್ ಅರವಿಂದ್ ಅವರು ಟ್ರೇಲರ್ ಅನಾವರಣ ಮಾಡಿ ಕೊಟ್ಟಿದ್ದಾರೆ. ಎಲ್ಲರಿಗೂ ಧನ್ಯವಾದ ತಿಳಿಸುತ್ತೇನೆ‌’ ಎಂದರು.

‘ಶೆಫ್​ ಚಿದಂಬರ’ ಸಿನಿಮಾದ ಚಿತ್ರೀಕರಣವು ಚಿತ್ರತಂಡದ ಸಹಕಾರದಿಂದ ಕೇವಲ 29 ದಿನಗಳಲ್ಲಿ ಮುಕ್ತಾಯವಾಗಿದೆ ಎಂದು ನಿರ್ದೇಶಕ ಆನಂದ್​ರಾಜ್​ ಹೇಳಿದರು. ‘ ಈ ಸಿನಿಮಾದಲ್ಲಿ 3 ಹಾಡುಗಳಿವೆ. ಒಂದು ಹಾಡಿಗೆ ಅನಿರುದ್ಧ್​ ಅವರೇ ಧ್ವನಿ ನೀಡಿದ್ದಾರೆ. ರೂಪಾ ಡಿ.ಎನ್. ಅವರು ಯಾವುದೇ ಕೊರತೆ ಬಾರದ ರೀತಿಯಲ್ಲಿ ಸಿನಿಮಾ ನಿರ್ಮಾಣ ಮಾಡಿದ್ದಾರೆ. ಡಾರ್ಕ್ ಕಾಮಿಡಿ ಇರುವ ಈ ಸಿನಿಮಾ ಎಲ್ಲರಿಗೂ ಪ್ರಿಯವಾಗಲಿದೆ’ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಪ್ರಜ್ವಲ್ ಕೇಸ್ ಬೆನ್ನಲ್ಲೇ ರಮೇಶ್ ಅರವಿಂದ್​​ಗೆ ಪೆನ್​ಡ್ರೈವ್ ಕೊಟ್ಟ ಫ್ಯಾನ್; ನಟನ ರಿಯಾಕ್ಷನ್ ನೋಡಿ

ಈ ಸಿನಿಮಾದಲ್ಲಿ ನಾಯಕಿಯರಾಗಿ ನಿಧಿ ಸುಬ್ಬಯ್ಯ ಮತ್ತು ರೆಚೆಲ್ ಡೇವಿಡ್ ನಟಿಸಿದ್ದಾರೆ. ಶಿವಮಣಿ ಕೂಡ ಪಾತ್ರವರ್ಗದಲ್ಲಿ ಇದ್ದಾರೆ. ರಿತ್ವಿಕ್ ಮುರಳಿಧರ್ ಅವರ ಸಂಗೀತ, ಉದಯ್ ಲೀಲ ಅವರ ಛಾಯಾಗ್ರಹಣ, ವಿಜೇತ್ ಚಂದ್ರ ಅವರ ಸಂಕಲನ, ಗಣೇಶ್ ಪರಶುರಾಮ್ ಅವರ ಸಂಭಾಷಣೆ ಈ ಸಿನಿಮಾಗೆ ಇದೆ. ಟ್ರೇಲರ್ ಬಿಡುಗಡೆ ಮಾಡಿದ ರಮೇಶ್ ಅರವಿಂದ್ ಅವರಿಗೆ ಮತ್ತು ಇಡೀ ಚಿತ್ರತಂಡಕ್ಕೆ ನಿರ್ಮಾಪಕಿ ರೂಪಾ ಡಿ.ಎನ್. ಅವರು ಧನ್ಯವಾದ ಅರ್ಪಿಸಿದರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್