AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘100’ ಚಿತ್ರದಲ್ಲಿ ಸೈಬರ್​ ಕ್ರೈಂ ಕಥೆ; ತೆರೆ ಹಿಂದೆಯೂ, ತೆರೆ ಮೇಲೂ ರಮೇಶ್​ ಅರವಿಂದ್​ ಕಸುಬುದಾರಿಕೆ

Ramesh Aravind: ರಮೇಶ್​ ಅರವಿಂದ್​ ನಿರ್ದೇಶನ ಮಾಡಿರುವ ‘100’ ಚಿತ್ರವನ್ನು ಎಂ. ರಮೇಶ್​ ರೆಡ್ಡಿ ಅವರು ನಿರ್ಮಾಣ ಮಾಡಿದ್ದಾರೆ. ಸೈಬರ್​ ಕ್ರೈಂ ಸಂಬಂಧಿತ ವಿಷಯಗಳನ್ನು ಇಟ್ಟುಕೊಂಡು ಈ ಚಿತ್ರದ ಕಥೆ ಹೆಣೆಯಲಾಗಿದೆ.

‘100’ ಚಿತ್ರದಲ್ಲಿ ಸೈಬರ್​ ಕ್ರೈಂ ಕಥೆ; ತೆರೆ ಹಿಂದೆಯೂ, ತೆರೆ ಮೇಲೂ ರಮೇಶ್​ ಅರವಿಂದ್​ ಕಸುಬುದಾರಿಕೆ
ರಮೇಶ್ ಅರವಿಂದ್
TV9 Web
| Edited By: |

Updated on: Nov 10, 2021 | 2:41 PM

Share

ರಮೇಶ್ ಅರವಿಂದ್​​ (Ramesh Aravind) ಅವರು ನಟನಾಗಿ ಮಾತ್ರವಲ್ಲದೇ ನಿರ್ದೇಶಕನಾಗಿಯೂ ಫೇಮಸ್​. ಹಲವು ಸಿನಿಮಾಗಳನ್ನು ನಿರ್ದೇಶನ ಮಾಡಿ ಅವರು ಯಶಸ್ಸು ಕಂಡಿದ್ದಾರೆ. ಕಮಲ್​ ಹಾಸನ್​ ಅವರಂಥ ದಿಗ್ಗಜ ನಟನಿಗೂ ಆ್ಯಕ್ಷನ್​-ಕಟ್​ ಹೇಳಿರುವ ಅವರು ತೆರೆ ಹಿಂದೆಯೂ ಸೈ ಎನಿಸಿಕೊಂಡಿದ್ದಾರೆ. ಹಾಗಾಗಿ ರಮೇಶ್​ ಅರವಿಂದ್​ ನಿರ್ದೇಶನದ ಸಿನಿಮಾ ಎಂದರೆ ಪ್ರೇಕ್ಷಕರಿಗೆ ದೊಡ್ಡಮಟ್ಟದ ಕುತೂಹಲ ಇದ್ದೇ ಇರುತ್ತದೆ. ಈಗ ಅವರ ನಿರ್ದೇಶನದಲ್ಲಿ ಮೂಡಿಬರುತ್ತಿರುವ ‘100’ ಚಿತ್ರ ಬಿಡುಗಡೆಗೆ ಸಜ್ಜಾಗಿದೆ. ವಿಶೇಷ ಕಥಾಹಂದರ ಹೊಂದಿರುವ ಈ ಸಿನಿಮಾ ನ.19ರಂದು ರಾಜ್ಯಾದ್ಯಂತ ರಿಲೀಸ್​ ಆಗಲಿದೆ. ಈಗ ಈ ಚಿತ್ರದ ಮೇಕಿಂಗ್​ ವಿಡಿಯೋ (100 movie making video) ಕೂಡ ಗಮನ ಸೆಳೆಯುತ್ತಿದೆ. ರಮೇಶ್​ ಅರವಿಂದ್​ ಜೊತೆಗೆ ರಚಿತಾ ರಾಮ್​ (Rachita Ram), ಪೂರ್ಣಾ ಕೂಡ ಮುಖ್ಯಪಾತ್ರಗಳನ್ನು ನಿಭಾಯಿಸಿದ್ದಾರೆ.

ಇತ್ತೀಚೆಗಷ್ಟೇ ‘100’ ಸಿನಿಮಾದ ಟ್ರೇಲರ್​ ಬಿಡುಗಡೆ ಆಗಿದೆ. ಈ ಚಿತ್ರಕ್ಕೆ ರವಿ ಬಸ್ರೂರು ಸಂಗೀತ ನಿರ್ದೇಶನ ಮಾಡಿದ್ದಾರೆ. ಸತ್ಯ ಹೆಗಡೆ ಅವರು ಛಾಯಾಗ್ರಹಣ ಮಾಡಿದ್ದಾರೆ. ಜಾಲಿ ಬಾಸ್ಟಿನ್​, ರವಿವರ್ಮಾ ಸಾಹಸ ನಿರ್ದೇಶನ ಮಾಡಿದ್ದಾರೆ. ಆ ಮೂಲಕ ತೆರೆಹಿಂದೆ ಘಟಾನುಘಟಿ ತಂತ್ರಜ್ಞರು ಕೆಲಸ ಮಾಡಿದ್ದಾರೆ. ಪ್ರಕಾಶ್​ ಬೆಳವಾಡಿ, ಶೋಭರಾಜ್​, ರಾಜು ತಾಳಿಕೋಟೆ ಮುಂತಾದವರು ಪೋಷಕ ಪಾತ್ರಗಳನ್ನು ನಿಭಾಯಿಸಿದ್ದಾರೆ.

ಎಂ. ರಮೇಶ್​ ರೆಡ್ಡಿ ಅವರು ‘100’ ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ. ಸೈಬರ್​ ಕ್ರೈಂ ಸಂಬಂಧಿತ ವಿಷಯಗಳನ್ನು ಇಟ್ಟುಕೊಂಡು ಈ ಚಿತ್ರದ ಕಥೆ ಹೆಣೆಯಲಾಗಿದೆ. ಹಾಗಾಗಿ ಇಂದಿನ ತಲೆಮಾರಿನ ಪ್ರೇಕ್ಷಕರಿಗೆ ‘100’ ಸಿನಿಮಾ ಹೆಚ್ಚು ಕನೆಕ್ಟ್​ ಆಗಲಿದೆ. ಸಸ್ಪೆನ್ಸ್​ ಥ್ರಿಲ್ಲರ್​ ಶೈಲಿಯಲ್ಲಿ ಚಿತ್ರ ಮೂಡಿಬಂದಿದೆ ಎಂಬುದಕ್ಕೆ ಟ್ರೇಲರ್​ನಲ್ಲಿ ಸಾಕ್ಷಿ ಸಿಕ್ಕಿದೆ. ರಮೇಶ್​ ಅರವಿಂದ್​ ಅವರು ಪೊಲೀಸ್​ ಅಧಿಕಾರಿಯಾಗಿ, ಫ್ಯಾಮಿಲಿ ಮ್ಯಾನ್​ ಆಗಿ ಕಾಣಿಸಿಕೊಂಡಿದ್ದಾರೆ.

‘ರಮೇಶ್​ ಅರವಿಂದ್​ ಜೊತೆ ನಾನು ಮಾಡುತ್ತಿರುವ ಮೂರನೇ ಸಿನಿಮಾ ಇದು. ಅವರ ಜೊತೆ ಕೆಲಸ ಮಾಡುವಾಗ ನಾವು ಜಾಸ್ತಿ ಅಲರ್ಟ್​ ಆಗಿರಬೇಕು. ಯಾಕೆಂದರೆ ಅವರು ಪರ್ಫೆಕ್ಟ್​ ಆಗಿರುತ್ತಾರೆ’ ಎನ್ನುತ್ತಾರೆ ಕ್ಯಾಮರಾಮ್ಯಾನ್​ ಸತ್ಯ ಹೆಗಡೆ. ‘ಇದೊಂದು ಫ್ಯಾಮಿಲಿ ಥ್ರಿಲ್ಲರ್​ ಸಿನಿಮಾ. ಮುಂದೇನಾಗುತ್ತದೆ ಎಂಬ ಕುತೂಹಲದಲ್ಲೇ ಇಡೀ ಸಿನಿಮಾ ಸಾಗುತ್ತದೆ. ಎಲ್ಲವೂ ಚೆನ್ನಾಗಿ ನಡೆಯುತ್ತಿರುವ ಕುಟುಂಬದಲ್ಲಿ ಸೈಬರ್​ ಕ್ರೈಮ್​ ಕಾರಣದಿಂದ ಒಂದೇ ಒಂದು ಕಹಿ ಘಟನೆ ನಡೆದರೆ ಎಲ್ಲವೂ ಹಾಳಾಗಿ ಹೋಗುತ್ತದೆ. ಅಂಥ ಒಂದು ಕಥೆ ಈ ಚಿತ್ರದಲ್ಲಿದೆ. ಸೈಬರ್​ ಕ್ರೈಮ್​ನಿಂದಾಗಿ ಹಣಕಾಸಿನ ಮೋಸ ಮಾತ್ರವಲ್ಲದೇ ಜನರು ಭಾವನಾತ್ಮಕವಾಗಿಯೂ ತೊಂದರೆಗೆ ಒಳಗಾಗುತ್ತಿದ್ದಾರೆ. ಅದರಿಂದ ಏನೆಲ್ಲ ಅನಾಹುತಗಳು ಆಗಬಹುದು ಎಂಬುದು ಈ ಸಿನಿಮಾದಲ್ಲಿದೆ’ ಎಂದು ರಮೇಶ್​ ಅರವಿಂದ್​ ಹೇಳಿದ್ದಾರೆ.

ಇದನ್ನೂ ಓದಿ:

‘ಶಿವಾಜಿ ಸುರತ್ಕಲ್​ 2’ ಚಿತ್ರದಲ್ಲಿ ಮೇಘನಾ ಗಾಂವ್ಕರ್​ಗೆ ವಿಶೇಷ ಪಾತ್ರ; ರಮೇಶ್​ ಅರವಿಂದ್ ಜತೆ ​ನಟಿಸುವ ಚಾನ್ಸ್​

Puneeth Rajkumar: ಪುನೀತ್​ ಬಗ್ಗೆ ಅವಹೇಳನಕಾರಿ ಪೋಸ್ಟ್​ ಮಾಡಿದ್ದ ವ್ಯಕ್ತಿ ಅರೆಸ್ಟ್​; ಸೈಬರ್​ ಪೊಲೀಸರ ಬಲೆಗೆ ಬಿದ್ದ ಕಿಡಿಗೇಡಿ

Follow Us
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ