AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಶಿವಾಜಿ ಸುರತ್ಕಲ್​ 2’ ಬಿಡುಗಡೆ ದಿನಾಂಕ ಘೋಷಣೆ​; ರಮೇಶ್ ಅರವಿಂದ್ ಸಿನಿಮಾಗೆ ಲಕ್ಕಿ ಡೇಟ್​

Shivaji Surathkal 2 Release Date: ‘ಕೆಜಿಎಫ್ 2’ ಸಿನಿಮಾ 2022ರ ಏಪ್ರಿಲ್ 14ರಂದು ರಿಲೀಸ್ ಆಯಿತು. ಈ ಚಿತ್ರ ದೊಡ್ಡ ಗೆಲುವು ಕಂಡಿತು. ‘ಶಿವಾಜಿ ಸುರತ್ಕಲ್ 2’ ಚಿತ್ರ ಈ ವರ್ಷ ಏಪ್ರಿಲ್ 14ರಂದು ಬಿಡುಗಡೆ ಆಗುತ್ತಿದೆ.

‘ಶಿವಾಜಿ ಸುರತ್ಕಲ್​ 2’ ಬಿಡುಗಡೆ ದಿನಾಂಕ ಘೋಷಣೆ​; ರಮೇಶ್ ಅರವಿಂದ್ ಸಿನಿಮಾಗೆ ಲಕ್ಕಿ ಡೇಟ್​
ರಮೇಶ್ ಅರವಿಂದ್
ರಾಜೇಶ್ ದುಗ್ಗುಮನೆ
|

Updated on:Mar 07, 2023 | 9:52 AM

Share

‘ಶಿವಾಜಿ ಸುರತ್ಕಲ್’ ಚಿತ್ರ (Shivaji Surathkal) ಸಸ್ಪೆನ್ಸ್​ ಶೈಲಿಯಲ್ಲಿ ಮೂಡಿ ಬಂದಿತ್ತು. ಈ ಚಿತ್ರ ಗೆದ್ದ ನಂತರ ರಮೇಶ್ ಅರವಿಂದ್ (Ramesh Aravind) ಅವರು ‘ಶಿವಾಜಿ ಸುರತ್ಕಲ್ 2’ ಚಿತ್ರ ಘೋಷಿಸಿದರು. ‘ದಿ ಮಿಸ್ಟೀರಿಯಸ್ ಕೇಸ್ ಆಫ್ ಮಾಯಾವಿ’ ಎಂಬ ಅಡಿಬರಹ ಇರುವ ಈ ಚಿತ್ರಕ್ಕೆ ಈಗ ರಿಲೀಸ್ ದಿನಾಂಕ ಘೋಷಣೆ ಆಗಿದೆ. ಏಪ್ರಿಲ್ 14ರಂದು ಸಿನಿಮಾ ರಿಲೀಸ್ ಆಗಲಿದೆ. ಲಕ್ಕಿ ದಿನಾಂಕದಂದು ಈ ಚಿತ್ರ ಬಿಡುಗಡೆ ಆಗುತ್ತಿದೆ ಎನ್ನುವ ಅಭಿಪ್ರಾಯ ಸಿನಿಪ್ರಿಯರ ವಲಯದಲ್ಲಿ ವ್ಯಕ್ತವಾಗಿದೆ.

‘ಕೆಜಿಎಫ್ 2’ ಸಿನಿಮಾ 2022ರ ಏಪ್ರಿಲ್ 14ರಂದು ರಿಲೀಸ್ ಆಯಿತು. ಈ ಚಿತ್ರ ದೊಡ್ಡ ಗೆಲುವು ಕಂಡಿತು. ‘ಶಿವಾಜಿ ಸುರತ್ಕಲ್ 2’ ಚಿತ್ರ ಈ ವರ್ಷ ಏಪ್ರಿಲ್ 14ರಂದು ಬಿಡುಗಡೆ ಆಗುತ್ತಿದೆ. ಈ ಕಾರಣಕ್ಕೆ ಅಭಿಮಾನಿಗಳಲ್ಲಿ ಸಾಕಷ್ಟು ಕುತೂಹಲ ಮೂಡಿದೆ. ಈ ಸಿನಿಮಾ ದೊಡ್ಡ ಮಟ್ಟದಲ್ಲಿ ಗೆಲುವು ಕಾಣಲಿ ಎಂದು ಫ್ಯಾನ್ಸ್ ಕೋರುತ್ತಿದ್ದಾರೆ. ಆಕಾಶ್ ಶ್ರೀವತ್ಸ ಚಿತ್ರವನ್ನು ನಿರ್ದೇಶನ ಮಾಡಿದ್ದು, ಅಂಜನಾದ್ರಿ ಸಿನಿ ಕ್ರಿಯೇಶನ್ಸ್ ಮೂಲಕ ಅನೂಪ್ ಗೌಡ ಮತ್ತು ರೇಖಾ ಕೆ ಎನ್. ಸಿನಿಮಾ ನಿರ್ಮಾಣ ಮಾಡಿದ್ದಾರೆ. ಖ್ಯಾತ ಸಂಸ್ಥೆ ಕೆಆರ್​ಜಿ ಸ್ಟುಡಿಯೋಸ್ ಮೂಲಕ ಸಿನಿಮಾ ಬಿಡುಗಡೆ ಆಗಲಿದೆ. ಇದು ರಮೇಶ್ ಅರವಿಂದ್ ಅವರ 103ನೇ ಚಿತ್ರ ಅನ್ನೋದು ವಿಶೇಷ.

ಇತ್ತೀಚೆಗೆ ಸಂಗೀತಾ ಶೃಂಗೇರಿ ಅವರು ಸಿನಿಮಾ ತಂಡ ಸೇರಿಕೊಂಡ ವಿಚಾರ ರಿವೀಲ್ ಆಗಿತ್ತು. ಈ ಚಿತ್ರದಲ್ಲಿ ಬರುವ ವಿಶೇಷ ಹಾಡಿಗೆ ಅವರು ಹೆಜ್ಜೆ ಹಾಕಿದ್ದಾರೆ. ಧನಂಜಯ್ ಮಾಸ್ಟರ್ ಈ ಹಾಡಿಗೆ ಕೊರಿಯೋಗ್ರಫಿ ಮಾಡಿದ್ದಾರೆ. ಈ ಹಾಡಿನ ಶೂಟಿಂಗ್ ಕೂಡ ಪೂರ್ಣಗೊಂಡಿದ್ದು, ಪೋಸ್ಟ್ ಪ್ರೊಡಕ್ಷನ್ ಕೆಲಸಗಳು ಭರದಿಂದ ಸಾಗುತ್ತಿವೆ. ರಮೇಶ್ ಅರವಿಂದ್ ಜೊತೆ ರಾಧಿಕಾ ನಾರಾಯಣ್ ಹಾಗೂ ಮೇಘನಾ ಗಾಂವ್ಕರ್ ನಟಿಸಿದ್ದಾರೆ. ರಾಘು ರಮಣಕೊಪ್ಪ, ವಿದ್ಯಾ ಮೂರ್ತಿ, ಆರಾಧ್ಯ ಸೇರಿದಂತೆ ಹಲವಾರು ಕಲಾವಿದರು ಪಾತ್ರವರ್ಗದಲ್ಲಿದ್ದಾರೆ.

ಇದನ್ನೂ ಓದಿ: ರಮೇಶ್ ಅರವಿಂದ್ ನಟನೆಯ ‘ಶಿವಾಜಿ ಸುರತ್ಕಲ್​ 2’ ತಂಡಕ್ಕೆ ಸಂಗೀತಾ ಶೃಂಗೇರಿ ಸೇರ್ಪಡೆ; ಯಾವ ಪಾತ್ರ?

‘ಶಿವಾಜಿ ಸುರತ್ಕಲ್​’ ಚಿತ್ರದಲ್ಲಿ ರಣಗಿರಿ ರಹಸ್ಯವನ್ನು ಶಿವಾಜಿ ಬೇಧಿಸಿದ್ದರು. ಈಗ ಹೊಸ ಚಿತ್ರದಲ್ಲಿ ಮತ್ತೊಂದು ದೊಡ್ಡ ಸವಾಲನ್ನು ಶಿವಾಜಿ ಎದುರಿಸಲಿದ್ದಾರೆ. ಮೊದಲ ಚಿತ್ರದಲ್ಲಿ ಇದ್ದಂತೆ ಈ ಚಿತ್ರದಲ್ಲಿಯೂ, ಶಿವಾಜಿಯ ಖಾಸಗಿ ಬದುಕಿನ ಒಂದು ಕಿರುನೋಟ ಬರುತ್ತದೆ. ಚಿತ್ರದ ಶೀರ್ಷಿಕೆಯಲ್ಲಿರುವ ಆ ಮಾಯಾವಿ ಯಾರು? ಅವನ ಇಂದ್ರಜಾಲವನ್ನು ಶಿವಾಜಿ ಹೇಗೆ ಬೇಧಿಸುತ್ತಾನೆ ಎಂಬ ಪ್ರಶ್ನೆಗಳಿಗೆ ಚಿತ್ರಮಂದಿರದಲ್ಲಿಯೇ ಉತ್ತರ ಸಿಗಬೇಕು.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 9:26 am, Tue, 7 March 23

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!