‘ಶಿವಾಜಿ ಸುರತ್ಕಲ್​ 2’ ಬಿಡುಗಡೆ ದಿನಾಂಕ ಘೋಷಣೆ​; ರಮೇಶ್ ಅರವಿಂದ್ ಸಿನಿಮಾಗೆ ಲಕ್ಕಿ ಡೇಟ್​

Shivaji Surathkal 2 Release Date: ‘ಕೆಜಿಎಫ್ 2’ ಸಿನಿಮಾ 2022ರ ಏಪ್ರಿಲ್ 14ರಂದು ರಿಲೀಸ್ ಆಯಿತು. ಈ ಚಿತ್ರ ದೊಡ್ಡ ಗೆಲುವು ಕಂಡಿತು. ‘ಶಿವಾಜಿ ಸುರತ್ಕಲ್ 2’ ಚಿತ್ರ ಈ ವರ್ಷ ಏಪ್ರಿಲ್ 14ರಂದು ಬಿಡುಗಡೆ ಆಗುತ್ತಿದೆ.

‘ಶಿವಾಜಿ ಸುರತ್ಕಲ್​ 2’ ಬಿಡುಗಡೆ ದಿನಾಂಕ ಘೋಷಣೆ​; ರಮೇಶ್ ಅರವಿಂದ್ ಸಿನಿಮಾಗೆ ಲಕ್ಕಿ ಡೇಟ್​
ರಮೇಶ್ ಅರವಿಂದ್
Follow us
|

Updated on:Mar 07, 2023 | 9:52 AM

‘ಶಿವಾಜಿ ಸುರತ್ಕಲ್’ ಚಿತ್ರ (Shivaji Surathkal) ಸಸ್ಪೆನ್ಸ್​ ಶೈಲಿಯಲ್ಲಿ ಮೂಡಿ ಬಂದಿತ್ತು. ಈ ಚಿತ್ರ ಗೆದ್ದ ನಂತರ ರಮೇಶ್ ಅರವಿಂದ್ (Ramesh Aravind) ಅವರು ‘ಶಿವಾಜಿ ಸುರತ್ಕಲ್ 2’ ಚಿತ್ರ ಘೋಷಿಸಿದರು. ‘ದಿ ಮಿಸ್ಟೀರಿಯಸ್ ಕೇಸ್ ಆಫ್ ಮಾಯಾವಿ’ ಎಂಬ ಅಡಿಬರಹ ಇರುವ ಈ ಚಿತ್ರಕ್ಕೆ ಈಗ ರಿಲೀಸ್ ದಿನಾಂಕ ಘೋಷಣೆ ಆಗಿದೆ. ಏಪ್ರಿಲ್ 14ರಂದು ಸಿನಿಮಾ ರಿಲೀಸ್ ಆಗಲಿದೆ. ಲಕ್ಕಿ ದಿನಾಂಕದಂದು ಈ ಚಿತ್ರ ಬಿಡುಗಡೆ ಆಗುತ್ತಿದೆ ಎನ್ನುವ ಅಭಿಪ್ರಾಯ ಸಿನಿಪ್ರಿಯರ ವಲಯದಲ್ಲಿ ವ್ಯಕ್ತವಾಗಿದೆ.

‘ಕೆಜಿಎಫ್ 2’ ಸಿನಿಮಾ 2022ರ ಏಪ್ರಿಲ್ 14ರಂದು ರಿಲೀಸ್ ಆಯಿತು. ಈ ಚಿತ್ರ ದೊಡ್ಡ ಗೆಲುವು ಕಂಡಿತು. ‘ಶಿವಾಜಿ ಸುರತ್ಕಲ್ 2’ ಚಿತ್ರ ಈ ವರ್ಷ ಏಪ್ರಿಲ್ 14ರಂದು ಬಿಡುಗಡೆ ಆಗುತ್ತಿದೆ. ಈ ಕಾರಣಕ್ಕೆ ಅಭಿಮಾನಿಗಳಲ್ಲಿ ಸಾಕಷ್ಟು ಕುತೂಹಲ ಮೂಡಿದೆ. ಈ ಸಿನಿಮಾ ದೊಡ್ಡ ಮಟ್ಟದಲ್ಲಿ ಗೆಲುವು ಕಾಣಲಿ ಎಂದು ಫ್ಯಾನ್ಸ್ ಕೋರುತ್ತಿದ್ದಾರೆ. ಆಕಾಶ್ ಶ್ರೀವತ್ಸ ಚಿತ್ರವನ್ನು ನಿರ್ದೇಶನ ಮಾಡಿದ್ದು, ಅಂಜನಾದ್ರಿ ಸಿನಿ ಕ್ರಿಯೇಶನ್ಸ್ ಮೂಲಕ ಅನೂಪ್ ಗೌಡ ಮತ್ತು ರೇಖಾ ಕೆ ಎನ್. ಸಿನಿಮಾ ನಿರ್ಮಾಣ ಮಾಡಿದ್ದಾರೆ. ಖ್ಯಾತ ಸಂಸ್ಥೆ ಕೆಆರ್​ಜಿ ಸ್ಟುಡಿಯೋಸ್ ಮೂಲಕ ಸಿನಿಮಾ ಬಿಡುಗಡೆ ಆಗಲಿದೆ. ಇದು ರಮೇಶ್ ಅರವಿಂದ್ ಅವರ 103ನೇ ಚಿತ್ರ ಅನ್ನೋದು ವಿಶೇಷ.

ಇತ್ತೀಚೆಗೆ ಸಂಗೀತಾ ಶೃಂಗೇರಿ ಅವರು ಸಿನಿಮಾ ತಂಡ ಸೇರಿಕೊಂಡ ವಿಚಾರ ರಿವೀಲ್ ಆಗಿತ್ತು. ಈ ಚಿತ್ರದಲ್ಲಿ ಬರುವ ವಿಶೇಷ ಹಾಡಿಗೆ ಅವರು ಹೆಜ್ಜೆ ಹಾಕಿದ್ದಾರೆ. ಧನಂಜಯ್ ಮಾಸ್ಟರ್ ಈ ಹಾಡಿಗೆ ಕೊರಿಯೋಗ್ರಫಿ ಮಾಡಿದ್ದಾರೆ. ಈ ಹಾಡಿನ ಶೂಟಿಂಗ್ ಕೂಡ ಪೂರ್ಣಗೊಂಡಿದ್ದು, ಪೋಸ್ಟ್ ಪ್ರೊಡಕ್ಷನ್ ಕೆಲಸಗಳು ಭರದಿಂದ ಸಾಗುತ್ತಿವೆ. ರಮೇಶ್ ಅರವಿಂದ್ ಜೊತೆ ರಾಧಿಕಾ ನಾರಾಯಣ್ ಹಾಗೂ ಮೇಘನಾ ಗಾಂವ್ಕರ್ ನಟಿಸಿದ್ದಾರೆ. ರಾಘು ರಮಣಕೊಪ್ಪ, ವಿದ್ಯಾ ಮೂರ್ತಿ, ಆರಾಧ್ಯ ಸೇರಿದಂತೆ ಹಲವಾರು ಕಲಾವಿದರು ಪಾತ್ರವರ್ಗದಲ್ಲಿದ್ದಾರೆ.

ಇದನ್ನೂ ಓದಿ: ರಮೇಶ್ ಅರವಿಂದ್ ನಟನೆಯ ‘ಶಿವಾಜಿ ಸುರತ್ಕಲ್​ 2’ ತಂಡಕ್ಕೆ ಸಂಗೀತಾ ಶೃಂಗೇರಿ ಸೇರ್ಪಡೆ; ಯಾವ ಪಾತ್ರ?

‘ಶಿವಾಜಿ ಸುರತ್ಕಲ್​’ ಚಿತ್ರದಲ್ಲಿ ರಣಗಿರಿ ರಹಸ್ಯವನ್ನು ಶಿವಾಜಿ ಬೇಧಿಸಿದ್ದರು. ಈಗ ಹೊಸ ಚಿತ್ರದಲ್ಲಿ ಮತ್ತೊಂದು ದೊಡ್ಡ ಸವಾಲನ್ನು ಶಿವಾಜಿ ಎದುರಿಸಲಿದ್ದಾರೆ. ಮೊದಲ ಚಿತ್ರದಲ್ಲಿ ಇದ್ದಂತೆ ಈ ಚಿತ್ರದಲ್ಲಿಯೂ, ಶಿವಾಜಿಯ ಖಾಸಗಿ ಬದುಕಿನ ಒಂದು ಕಿರುನೋಟ ಬರುತ್ತದೆ. ಚಿತ್ರದ ಶೀರ್ಷಿಕೆಯಲ್ಲಿರುವ ಆ ಮಾಯಾವಿ ಯಾರು? ಅವನ ಇಂದ್ರಜಾಲವನ್ನು ಶಿವಾಜಿ ಹೇಗೆ ಬೇಧಿಸುತ್ತಾನೆ ಎಂಬ ಪ್ರಶ್ನೆಗಳಿಗೆ ಚಿತ್ರಮಂದಿರದಲ್ಲಿಯೇ ಉತ್ತರ ಸಿಗಬೇಕು.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 9:26 am, Tue, 7 March 23

ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!