AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Puneeth Rajkumar: ಹಿಂದಿನ ದಿನ ಕಣ್ಣಿನಲ್ಲಿ ಕಣ್ಣಿಟ್ಟು ಮಾತಾಡಿದ ವ್ಯಕ್ತಿ, ಮರುದಿನ ಕಣ್ಣನ್ನು ದಾನ ಮಾಡಿದ್ದು ನಂಬೋಕೆ ಅಸಾಧ್ಯ: ರಮೇಶ್ ಅರವಿಂದ್

Ramesh Aravind: ನಟ ಪುನೀತ್ ಸ್ಥಾನವನ್ನು ತುಂಬುವುದು ಬಹಳ ಕಷ್ಟ. ಪುನೀತ್ ರಾಜ್‌ಕುಮಾರ್ ನೆನಪಲ್ಲೇ ಕಾಲ ಕಳೀಬೇಕು ಎಂದು ರಮೇಶ್ ಅರವಿಂದ್ ನುಡಿದಿದ್ದಾರೆ. ‘100’ ಸಿನಿಮಾ ಚಿತ್ರತಂಡ ಸುದ್ದಿಗೋಷ್ಠಿಗೂ ಮುನ್ನ ಪುನೀತ್​ಗೆ ಶ್ರದ್ಧಾಂಜಲಿ ಸಲ್ಲಿಸಿದ್ದು, ಆಗ ರಮೇಶ್ ಅರವಿಂದ್ ಮಾತನಾಡಿದ್ದಾರೆ.

Puneeth Rajkumar: ಹಿಂದಿನ ದಿನ ಕಣ್ಣಿನಲ್ಲಿ ಕಣ್ಣಿಟ್ಟು ಮಾತಾಡಿದ ವ್ಯಕ್ತಿ, ಮರುದಿನ ಕಣ್ಣನ್ನು ದಾನ ಮಾಡಿದ್ದು ನಂಬೋಕೆ ಅಸಾಧ್ಯ: ರಮೇಶ್ ಅರವಿಂದ್
ರಮೇಶ್ ಅರವಿಂದ್
TV9 Web
| Updated By: shivaprasad.hs|

Updated on:Nov 06, 2021 | 12:05 PM

Share

Puneeth Rajkumar: ರಮೇಶ್ ಅರವಿಂದ್ ಹಾಗೂ ರಚಿತಾ ರಾಮ್ ನಟನೆಯ ‘100’ ಚಿತ್ರತಂಡವು ಸುದ್ದಿಗೋಷ್ಠಿಗೂ ಮುನ್ನ ಅಗಲಿದ ನಟ ಪುನೀತ್ ರಾಜಕುಮಾರ್ ಅವರಿಗೆ ಶ್ರದ್ಧಾಂಜಲಿ ಸಲ್ಲಿಸಿದೆ. ಬೆಂಗಳೂರಿನ ರೇಣುಕಾಂಬ ಚಿತ್ರಮಂದಿರದಲ್ಲಿ ನಡೆಯುತ್ತಿರುವ ಕಾರ್ಯಕ್ರಮದಲ್ಲಿ ರಮೇಶ್ ಅರವಿಂದ್ ಮಾತನಾಡಿ, ಪುನೀತ್ ಜೊತೆಗಿನ ಒಡನಾಟವನ್ನು ಸ್ಮರಿಸಿಕೊಂಡಿದ್ದಾರೆ. ‘‘ಪುನೀತ್ ಜೊತೆಗಿನ ಮೊದಲ ಸಿನಿಮಾದ ವೇಳೆ ಜೊತೆಯಾಗಿದ್ದೆವು. ಕೊನೆಯದಾಗಿ ಗುರುಕಿರಣ್ ಮನೆಯಲ್ಲಿ ಎರಡು ಘಂಟೆ ಮಾತನಾಡಿದ್ದೆವು. ಅಂದು ಕಣ್ಣಿನಲ್ಲಿ ಕಣ್ಣಿಟ್ಟು ಮಾತಾಡಿದ ವ್ಯಕ್ತಿ, ಮರುದಿನ ಕಣ್ಣನ್ನು ದಾನ ಮಾಡಿದ್ದು ಅಂದರೆ ನಂಬೋಕೆ ಆಗಲ್ಲ’’ ಎಂದು ರಮೇಶ್ ತಮಗಾದ ಆಘಾತವನ್ನು ವಿವರಿಸಿದ್ಧಾರೆ. ಬುದ್ದ ಒಂದು ಮಾತು ಹೇಳುತ್ತಾನೆ. ನಾವು ಜೀವನದಲ್ಲಿ ತುಂಬ ಇಷ್ಟಪಡೋದನ್ನ ಒಂದು ದಿನ ಕಳೆದುಕೊಳ್ಳುತ್ತೇವೆ ಅನ್ನೋ ವಿಷಯದ ಬಗ್ಗೆಯೂ ಅಂದು ಚರ್ಚೆ ಮಾಡಿದ್ದೆವು. ಎಲ್ಲವನ್ನೂ ಒಂದು ದಿನ ಕಳ್ಕೋತೀವಿ ಅಂತ ಅನಿರುದ್ ಹೇಳಿದ್ದರು. ಅಪ್ಪು ಬಿಟ್ಟ ಜಾಗವನ್ನ ತುಂಬೋದು ಬಹಳ ಕಷ್ಟ. ಅವರ ನೆನಪಲ್ಲಿ ನಾವು ಕಾಲ ಕಳಿಬೇಕು ಎಂದು ರಮೇಶ್ ನುಡಿದಿದ್ಧಾರೆ. 

ರಮೇಶ್ ಅರವಿಂದ್ ಮಾತನಾಡುತ್ತಾ,  ನಟ ಪುನೀತ್ ಸ್ಥಾನವನ್ನು ತುಂಬುವುದು ಬಹಳ ಕಷ್ಟ. ಪುನೀತ್ ರಾಜ್‌ಕುಮಾರ್ ನೆನಪಲ್ಲೇ ಕಾಲ ಕಳೀಬೇಕು. ಮುಂದಿನ ದಿನಗಳಲ್ಲಿ ನಮಗೆ ಒಳ್ಳೆಯ ಡ್ಯಾನ್ಸ್ ಸಿಗಬಹುದು. ಒಳ್ಳೆಯ ನಟ, ಒಳ್ಳೆಯ ವ್ಯಕ್ತಿಯೂ ನಮಗೆ ಸಿಗಬೇಕು. ಎಲ್ಲಾ ಗುಣ ಹೊಂದಿದ್ದ ಅಪ್ಪುರಂತಹವರು ಸಿಗೋದಿಲ್ಲ ಎಂದು ಹೇಳಿದ್ದಾರೆ. ಚಿತ್ರತಂಡವು ಸುದ್ದಿಗೋಷ್ಠಿಗೂ ಮುನ್ನ ಮೌನಾಚರಣೆ ಮಾಡಿ, ಗೌರವ ಸಲ್ಲಿಸಿದೆ.

‘100’ ಚಿತ್ರತಂಡದ ಸುದ್ದಿಗೋಷ್ಠಿಯ ಲೈವ್ ಇಲ್ಲಿ ಲಭ್ಯವಿದೆ:

ಇದನ್ನೂ ಓದಿ:

Puneeth Rajkumar: ಪುನೀತ್​ಗೆ ಪದ್ಮ ಪ್ರಶಸ್ತಿ ನೀಡಲು ಅಭಿಮಾನಿಗಳ ಒತ್ತಾಯ; ಅಗತ್ಯ ಕ್ರಮಕ್ಕೆ ಮುಂದಾದ ಸರ್ಕಾರ

Puneeth Rajkumar: ಅನಧಿಕೃತವಾಗಿ ಪುನೀತ್ ಪುತ್ಥಳಿ ಪ್ರತಿಷ್ಠಾಪಿಸಬೇಡಿ, ಅನುಮತಿ ಪಡೆಯಿರಿ: ಅಭಿಮಾನಿಗಳಿಗೆ ಬಿಬಿಎಂಪಿ ಸೂಚನೆ

Published On - 11:44 am, Sat, 6 November 21

ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ