AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Puneeth Rajkumar: ಹಿಂದಿನ ದಿನ ಕಣ್ಣಿನಲ್ಲಿ ಕಣ್ಣಿಟ್ಟು ಮಾತಾಡಿದ ವ್ಯಕ್ತಿ, ಮರುದಿನ ಕಣ್ಣನ್ನು ದಾನ ಮಾಡಿದ್ದು ನಂಬೋಕೆ ಅಸಾಧ್ಯ: ರಮೇಶ್ ಅರವಿಂದ್

Ramesh Aravind: ನಟ ಪುನೀತ್ ಸ್ಥಾನವನ್ನು ತುಂಬುವುದು ಬಹಳ ಕಷ್ಟ. ಪುನೀತ್ ರಾಜ್‌ಕುಮಾರ್ ನೆನಪಲ್ಲೇ ಕಾಲ ಕಳೀಬೇಕು ಎಂದು ರಮೇಶ್ ಅರವಿಂದ್ ನುಡಿದಿದ್ದಾರೆ. ‘100’ ಸಿನಿಮಾ ಚಿತ್ರತಂಡ ಸುದ್ದಿಗೋಷ್ಠಿಗೂ ಮುನ್ನ ಪುನೀತ್​ಗೆ ಶ್ರದ್ಧಾಂಜಲಿ ಸಲ್ಲಿಸಿದ್ದು, ಆಗ ರಮೇಶ್ ಅರವಿಂದ್ ಮಾತನಾಡಿದ್ದಾರೆ.

Puneeth Rajkumar: ಹಿಂದಿನ ದಿನ ಕಣ್ಣಿನಲ್ಲಿ ಕಣ್ಣಿಟ್ಟು ಮಾತಾಡಿದ ವ್ಯಕ್ತಿ, ಮರುದಿನ ಕಣ್ಣನ್ನು ದಾನ ಮಾಡಿದ್ದು ನಂಬೋಕೆ ಅಸಾಧ್ಯ: ರಮೇಶ್ ಅರವಿಂದ್
ರಮೇಶ್ ಅರವಿಂದ್
TV9 Web
| Edited By: |

Updated on:Nov 06, 2021 | 12:05 PM

Share

Puneeth Rajkumar: ರಮೇಶ್ ಅರವಿಂದ್ ಹಾಗೂ ರಚಿತಾ ರಾಮ್ ನಟನೆಯ ‘100’ ಚಿತ್ರತಂಡವು ಸುದ್ದಿಗೋಷ್ಠಿಗೂ ಮುನ್ನ ಅಗಲಿದ ನಟ ಪುನೀತ್ ರಾಜಕುಮಾರ್ ಅವರಿಗೆ ಶ್ರದ್ಧಾಂಜಲಿ ಸಲ್ಲಿಸಿದೆ. ಬೆಂಗಳೂರಿನ ರೇಣುಕಾಂಬ ಚಿತ್ರಮಂದಿರದಲ್ಲಿ ನಡೆಯುತ್ತಿರುವ ಕಾರ್ಯಕ್ರಮದಲ್ಲಿ ರಮೇಶ್ ಅರವಿಂದ್ ಮಾತನಾಡಿ, ಪುನೀತ್ ಜೊತೆಗಿನ ಒಡನಾಟವನ್ನು ಸ್ಮರಿಸಿಕೊಂಡಿದ್ದಾರೆ. ‘‘ಪುನೀತ್ ಜೊತೆಗಿನ ಮೊದಲ ಸಿನಿಮಾದ ವೇಳೆ ಜೊತೆಯಾಗಿದ್ದೆವು. ಕೊನೆಯದಾಗಿ ಗುರುಕಿರಣ್ ಮನೆಯಲ್ಲಿ ಎರಡು ಘಂಟೆ ಮಾತನಾಡಿದ್ದೆವು. ಅಂದು ಕಣ್ಣಿನಲ್ಲಿ ಕಣ್ಣಿಟ್ಟು ಮಾತಾಡಿದ ವ್ಯಕ್ತಿ, ಮರುದಿನ ಕಣ್ಣನ್ನು ದಾನ ಮಾಡಿದ್ದು ಅಂದರೆ ನಂಬೋಕೆ ಆಗಲ್ಲ’’ ಎಂದು ರಮೇಶ್ ತಮಗಾದ ಆಘಾತವನ್ನು ವಿವರಿಸಿದ್ಧಾರೆ. ಬುದ್ದ ಒಂದು ಮಾತು ಹೇಳುತ್ತಾನೆ. ನಾವು ಜೀವನದಲ್ಲಿ ತುಂಬ ಇಷ್ಟಪಡೋದನ್ನ ಒಂದು ದಿನ ಕಳೆದುಕೊಳ್ಳುತ್ತೇವೆ ಅನ್ನೋ ವಿಷಯದ ಬಗ್ಗೆಯೂ ಅಂದು ಚರ್ಚೆ ಮಾಡಿದ್ದೆವು. ಎಲ್ಲವನ್ನೂ ಒಂದು ದಿನ ಕಳ್ಕೋತೀವಿ ಅಂತ ಅನಿರುದ್ ಹೇಳಿದ್ದರು. ಅಪ್ಪು ಬಿಟ್ಟ ಜಾಗವನ್ನ ತುಂಬೋದು ಬಹಳ ಕಷ್ಟ. ಅವರ ನೆನಪಲ್ಲಿ ನಾವು ಕಾಲ ಕಳಿಬೇಕು ಎಂದು ರಮೇಶ್ ನುಡಿದಿದ್ಧಾರೆ. 

ರಮೇಶ್ ಅರವಿಂದ್ ಮಾತನಾಡುತ್ತಾ,  ನಟ ಪುನೀತ್ ಸ್ಥಾನವನ್ನು ತುಂಬುವುದು ಬಹಳ ಕಷ್ಟ. ಪುನೀತ್ ರಾಜ್‌ಕುಮಾರ್ ನೆನಪಲ್ಲೇ ಕಾಲ ಕಳೀಬೇಕು. ಮುಂದಿನ ದಿನಗಳಲ್ಲಿ ನಮಗೆ ಒಳ್ಳೆಯ ಡ್ಯಾನ್ಸ್ ಸಿಗಬಹುದು. ಒಳ್ಳೆಯ ನಟ, ಒಳ್ಳೆಯ ವ್ಯಕ್ತಿಯೂ ನಮಗೆ ಸಿಗಬೇಕು. ಎಲ್ಲಾ ಗುಣ ಹೊಂದಿದ್ದ ಅಪ್ಪುರಂತಹವರು ಸಿಗೋದಿಲ್ಲ ಎಂದು ಹೇಳಿದ್ದಾರೆ. ಚಿತ್ರತಂಡವು ಸುದ್ದಿಗೋಷ್ಠಿಗೂ ಮುನ್ನ ಮೌನಾಚರಣೆ ಮಾಡಿ, ಗೌರವ ಸಲ್ಲಿಸಿದೆ.

‘100’ ಚಿತ್ರತಂಡದ ಸುದ್ದಿಗೋಷ್ಠಿಯ ಲೈವ್ ಇಲ್ಲಿ ಲಭ್ಯವಿದೆ:

ಇದನ್ನೂ ಓದಿ:

Puneeth Rajkumar: ಪುನೀತ್​ಗೆ ಪದ್ಮ ಪ್ರಶಸ್ತಿ ನೀಡಲು ಅಭಿಮಾನಿಗಳ ಒತ್ತಾಯ; ಅಗತ್ಯ ಕ್ರಮಕ್ಕೆ ಮುಂದಾದ ಸರ್ಕಾರ

Puneeth Rajkumar: ಅನಧಿಕೃತವಾಗಿ ಪುನೀತ್ ಪುತ್ಥಳಿ ಪ್ರತಿಷ್ಠಾಪಿಸಬೇಡಿ, ಅನುಮತಿ ಪಡೆಯಿರಿ: ಅಭಿಮಾನಿಗಳಿಗೆ ಬಿಬಿಎಂಪಿ ಸೂಚನೆ

Published On - 11:44 am, Sat, 6 November 21

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ