AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಜ್ವಲ್ ದೇವರಾಜ್ ‘ಕರಾವಳಿ’ಯಲ್ಲಿ ದೊಡ್ಡವರಾದ ರಮೇಶ್ ಇಂದಿರಾ

Ramesh Indira: ‘ಸಪ್ತ ಸಾಗರದಾಚೆ ಎಲ್ಲೊ’ ಸಿನಿಮಾದ ವಿಲನ್ ಪಾತ್ರದ ಮೂಲಕ ಪ್ರೇಕ್ಷಕರಿಗೆ ಹೆಚ್ಚು ಹತ್ತಿರವಾಗಿದ್ದ ರಮೇಶ್ ಇಂದಿರಾ ಈಗ ಪ್ರಜ್ವಲ್ ದೇವರಾಜ್ ನಟನೆಯ ‘ಕರಾವಳಿ’ ಸಿನಿಮಾದಲ್ಲಿ ಖಡಕ್ ಪಾತ್ರದಲ್ಲಿ ನಟಿಸಿದ್ದಾರೆ. ಇಲ್ಲಿದೆ ನೋಡಿ ಅವರ ಪೋಸ್ಟರ್.

ಪ್ರಜ್ವಲ್ ದೇವರಾಜ್ ‘ಕರಾವಳಿ’ಯಲ್ಲಿ ದೊಡ್ಡವರಾದ ರಮೇಶ್ ಇಂದಿರಾ
ಮಂಜುನಾಥ ಸಿ.
|

Updated on: Nov 01, 2024 | 11:51 AM

Share

ಪ್ರಜ್ವಲ್ ದೇವರಾಜ್ ನಟನೆಯ ‘ಕರಾವಳಿ’ ಸಿನಿಮಾ ಚಿತ್ರೀಕರಣ ಪ್ರಾರಂಭ ಆದಾಗಿನಿಂದಲೂ ಸಾಕಷ್ಟು ಕುತೂಹಲ ಕೆರಳಿಸಿದೆ. ತಮ್ಮ ಭಿನ್ನ ಟೀಸರ್, ಪೋಸ್ಟರ್​ಗಳ ಮೂಲಕ ಕುತೂಹಲ ಮೂಡಿಸಿದೆ. ಪ್ರಜ್ವಲ್ ದೇವರಾಜ್ ನಟಿಸಿ ಗುರುದತ್ ಗಾಣಿಗ ನಿರ್ದೇಶನ ಮಾಡಿರುವ ‘ಕರಾವಳಿ’ ಸಿನಿಮಾ ಕರಾವಳಿ ಗ್ರಾಮ ಭಾಗದ ಕತೆ ಹೊಂದಿದ್ದು, ಕೆಲ ದಶಗಳ ಹಿಂದೆ ನಡೆಯುವ ಕತೆ ಒಳಗೊಂಡಿದೆ. ಸಿನಿಮಾದಲ್ಲಿ ಖಡಕ್ ವಿಲನ್​ಗಳ ಸಾಲೇ ಇದ್ದು, ಇದೀಗ ಅವರಲ್ಲಿ ಒಬ್ಬರ ಪೋಸ್ಟರ್ ಬಿಡುಗಡೆ ಮಾಡಲಾಗಿದೆ.

‘ಸಪ್ತ ಸಾಗರದಾಚೆ ಎಲ್ಲೊ’ ಸೈಡ್ ಎ ಮತ್ತು ಬಿ ಸಿನಿಮಾದಲ್ಲಿ ನಾಯಕ ನಾಯಕಿಯರಷ್ಟೆ ಗಮನ ಸೆಳೆದಿದ್ದು ಸಿನಿಮಾದ ವಿಲನ್ ಪಾತ್ರ. ‘ಲವ್ ಯು ಮನು’ ಎನ್ನುತ್ತಾ ಪ್ರೇಕ್ಷಕರಿಗೆ ಹತ್ತಿರವಾಗಿದ್ದ ರಮೇಶ್ ಇಂದಿರಾ ಈಗ ‘ಕರಾವಳಿ’ ಸಿನಿಮಾನಲ್ಲಿ ವಿಲನ್ ಪಾತ್ರದಲ್ಲಿ ನಟಿಸಿದ್ದಾರೆ. ಸಿನಿಮಾದಲ್ಲಿ ಬೇರೆ ಪಾತ್ರಗಳು ಅವರನ್ನು ಕರೆಯುವುದು ‘ದೊಡ್ಡವರು’ ಎಂದು. ಇದೀಗ ದೀಪಾವಳಿ ಹಬ್ಬಕ್ಕೆ ಅವರ ಖಡಕ್ ಆಗಿರುವ ಪೋಸ್ಟರ್ ಒಂದನ್ನು ಬಿಡುಗಡೆ ಮಾಡಲಾಗಿದೆ.

ರಮೇಶ್ ಇಂದಿರಾ, ಉದ್ದನೆಯ ಹಳೆ ಮರ್ಸಿಡೀಸ್ ಬೆಂಜ್ ಕಾರಿನ ಮೇಲೆ ಪಂಚೆ ತೊಟ್ಟು ಬರಿಮೈಯಲ್ಲಿ, ಹೆಗಲಿಗೆ ಟವೆಲ್ ಒಂದನ್ನು ಹಾಕಿಕೊಂಡು ಕೂತು, ಕೈಯಲ್ಲಿ ಉದ್ದನೆಯ ಸಿಂಗಲ್ ಶಾಟ್ ಬಂದೂಕು ಹಿಡಿದಿರುವ ಪೋಸ್ಟರ್ ಸಖತ್ ಗಮನ ಸೆಳೆಯುತ್ತಿದೆ. ‘ಕರಾವಳಿ’ ಸಿನಿಮಾನಲ್ಲಿ ಕತ್ತು, ಮಚ್ಚುಗಳೇ ಅಬ್ಬರಿಸಲಿವೆ ಎಂದು ಈ ವರೆಗೆ ಬಿಡುಗಡೆ ಆದ ಪೋಸ್ಟರ್​​ಗಳಿಂದ ಗೊತ್ತಾಗಿತ್ತು, ಆದರೆ ರಮೇಶ್ ಇಂದಿರಾ ಆಧುನಿಕ ಬಂದೂಕು ಹಿಡಿದು ಕಾಣಿಸಿಕೊಂಡಿರುವುದು ನೋಡಿದರೆ ಸಿನಿಮಾದ ಕತೆ ನಡೆಯುವ ಕಾಲಮಾನದ ಬಗ್ಗೆ ಅನುಮಾನ ಮೂಡುತ್ತಿದೆ.

ಇದನ್ನೂ ಓದಿ:ಪ್ರಜ್ವಲ್ ದೇವರಾಜ್ ಜನ್ಮದಿನಕ್ಕೆ ‘ರಾಕ್ಷಸ’, ‘ಕರಾವಳಿ’ ಲುಕ್ ಬಿಡುಗಡೆ; ಒಂದಕ್ಕಿಂತ ಒಂದು ಭಿನ್ನ

‘ಕರಾವಳಿ’ ಸಿನಿಮಾದಲ್ಲಿ ರಮೇಶ್ ಇಂದಿರಾ ಮಾತ್ರವೇ ಅಲ್ಲದೆ ಮಿತ್ರ ಸಹ ಬಹಳ ಭಿನ್ನವಾದ ಪಾತ್ರದಲ್ಲಿ ನಟಿಸುತ್ತಿದ್ದಾರೆ. ಈ ಸಿನಿಮಾಕ್ಕಾಗಿ ಮಿತ್ರ ಭಿನ್ನ ಹೇರ್​ಸ್ಟೈಲ್ ಮತ್ತು ಲುಕ್ ಮಾಡಿಸಿಕೊಂಡಿದ್ದಾರೆ. ಇನ್ನು ಇದೇ ಸಿನಿಮಾದಲ್ಲಿ ಅಚ್ಯುತ್ ಕುಮಾರ್ ಸಹ ಇರಲಿದ್ದಾರೆ ಎನ್ನಲಾಗುತ್ತಿದೆ. ಸಿನಿಮಾದಲ್ಲಿ ಹಲವು ಪ್ರತಿಭಾವಂತ ನಟರು, ತಂತ್ರಜ್ಞರು ಒಟ್ಟಿಗೆ ಕೆಲಸ ಮಾಡುತ್ತಿದ್ದಾರೆ. ಸಿನಿಮಾದ ಚಿತ್ರೀಕರಣ ಇನ್ನೇನು ಮುಗಿಯಲಿದ್ದು ಸಿನಿಮಾದ ಪೋಸ್ಟ್ ಪ್ರೊಡಕ್ಷನ್ ಪ್ರಾರಂಭ ಆಗಲಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Manjunatha C
Manjunatha C

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More
ಅತಾವುಲ್ಲಾ ಹತ್ಯೆ ಪ್ರಕರಣದ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಪೊಲೀಸರು
ಅತಾವುಲ್ಲಾ ಹತ್ಯೆ ಪ್ರಕರಣದ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಪೊಲೀಸರು
34 ರನ್​ಗಳಿದ್ದಾಗ ಕ್ಯಾಚ್ ಬಿಟ್ಟ ಸಿರಾಜ್; 93 ರನ್ ಚಚ್ಚಿದ ಅಲೆನ್
34 ರನ್​ಗಳಿದ್ದಾಗ ಕ್ಯಾಚ್ ಬಿಟ್ಟ ಸಿರಾಜ್; 93 ರನ್ ಚಚ್ಚಿದ ಅಲೆನ್
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?