AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಜ್ವಲ್ ದೇವರಾಜ್ ‘ಕರಾವಳಿ’ಯಲ್ಲಿ ದೊಡ್ಡವರಾದ ರಮೇಶ್ ಇಂದಿರಾ

Ramesh Indira: ‘ಸಪ್ತ ಸಾಗರದಾಚೆ ಎಲ್ಲೊ’ ಸಿನಿಮಾದ ವಿಲನ್ ಪಾತ್ರದ ಮೂಲಕ ಪ್ರೇಕ್ಷಕರಿಗೆ ಹೆಚ್ಚು ಹತ್ತಿರವಾಗಿದ್ದ ರಮೇಶ್ ಇಂದಿರಾ ಈಗ ಪ್ರಜ್ವಲ್ ದೇವರಾಜ್ ನಟನೆಯ ‘ಕರಾವಳಿ’ ಸಿನಿಮಾದಲ್ಲಿ ಖಡಕ್ ಪಾತ್ರದಲ್ಲಿ ನಟಿಸಿದ್ದಾರೆ. ಇಲ್ಲಿದೆ ನೋಡಿ ಅವರ ಪೋಸ್ಟರ್.

ಪ್ರಜ್ವಲ್ ದೇವರಾಜ್ ‘ಕರಾವಳಿ’ಯಲ್ಲಿ ದೊಡ್ಡವರಾದ ರಮೇಶ್ ಇಂದಿರಾ
Follow us
ಮಂಜುನಾಥ ಸಿ.
|

Updated on: Nov 01, 2024 | 11:51 AM

ಪ್ರಜ್ವಲ್ ದೇವರಾಜ್ ನಟನೆಯ ‘ಕರಾವಳಿ’ ಸಿನಿಮಾ ಚಿತ್ರೀಕರಣ ಪ್ರಾರಂಭ ಆದಾಗಿನಿಂದಲೂ ಸಾಕಷ್ಟು ಕುತೂಹಲ ಕೆರಳಿಸಿದೆ. ತಮ್ಮ ಭಿನ್ನ ಟೀಸರ್, ಪೋಸ್ಟರ್​ಗಳ ಮೂಲಕ ಕುತೂಹಲ ಮೂಡಿಸಿದೆ. ಪ್ರಜ್ವಲ್ ದೇವರಾಜ್ ನಟಿಸಿ ಗುರುದತ್ ಗಾಣಿಗ ನಿರ್ದೇಶನ ಮಾಡಿರುವ ‘ಕರಾವಳಿ’ ಸಿನಿಮಾ ಕರಾವಳಿ ಗ್ರಾಮ ಭಾಗದ ಕತೆ ಹೊಂದಿದ್ದು, ಕೆಲ ದಶಗಳ ಹಿಂದೆ ನಡೆಯುವ ಕತೆ ಒಳಗೊಂಡಿದೆ. ಸಿನಿಮಾದಲ್ಲಿ ಖಡಕ್ ವಿಲನ್​ಗಳ ಸಾಲೇ ಇದ್ದು, ಇದೀಗ ಅವರಲ್ಲಿ ಒಬ್ಬರ ಪೋಸ್ಟರ್ ಬಿಡುಗಡೆ ಮಾಡಲಾಗಿದೆ.

‘ಸಪ್ತ ಸಾಗರದಾಚೆ ಎಲ್ಲೊ’ ಸೈಡ್ ಎ ಮತ್ತು ಬಿ ಸಿನಿಮಾದಲ್ಲಿ ನಾಯಕ ನಾಯಕಿಯರಷ್ಟೆ ಗಮನ ಸೆಳೆದಿದ್ದು ಸಿನಿಮಾದ ವಿಲನ್ ಪಾತ್ರ. ‘ಲವ್ ಯು ಮನು’ ಎನ್ನುತ್ತಾ ಪ್ರೇಕ್ಷಕರಿಗೆ ಹತ್ತಿರವಾಗಿದ್ದ ರಮೇಶ್ ಇಂದಿರಾ ಈಗ ‘ಕರಾವಳಿ’ ಸಿನಿಮಾನಲ್ಲಿ ವಿಲನ್ ಪಾತ್ರದಲ್ಲಿ ನಟಿಸಿದ್ದಾರೆ. ಸಿನಿಮಾದಲ್ಲಿ ಬೇರೆ ಪಾತ್ರಗಳು ಅವರನ್ನು ಕರೆಯುವುದು ‘ದೊಡ್ಡವರು’ ಎಂದು. ಇದೀಗ ದೀಪಾವಳಿ ಹಬ್ಬಕ್ಕೆ ಅವರ ಖಡಕ್ ಆಗಿರುವ ಪೋಸ್ಟರ್ ಒಂದನ್ನು ಬಿಡುಗಡೆ ಮಾಡಲಾಗಿದೆ.

ರಮೇಶ್ ಇಂದಿರಾ, ಉದ್ದನೆಯ ಹಳೆ ಮರ್ಸಿಡೀಸ್ ಬೆಂಜ್ ಕಾರಿನ ಮೇಲೆ ಪಂಚೆ ತೊಟ್ಟು ಬರಿಮೈಯಲ್ಲಿ, ಹೆಗಲಿಗೆ ಟವೆಲ್ ಒಂದನ್ನು ಹಾಕಿಕೊಂಡು ಕೂತು, ಕೈಯಲ್ಲಿ ಉದ್ದನೆಯ ಸಿಂಗಲ್ ಶಾಟ್ ಬಂದೂಕು ಹಿಡಿದಿರುವ ಪೋಸ್ಟರ್ ಸಖತ್ ಗಮನ ಸೆಳೆಯುತ್ತಿದೆ. ‘ಕರಾವಳಿ’ ಸಿನಿಮಾನಲ್ಲಿ ಕತ್ತು, ಮಚ್ಚುಗಳೇ ಅಬ್ಬರಿಸಲಿವೆ ಎಂದು ಈ ವರೆಗೆ ಬಿಡುಗಡೆ ಆದ ಪೋಸ್ಟರ್​​ಗಳಿಂದ ಗೊತ್ತಾಗಿತ್ತು, ಆದರೆ ರಮೇಶ್ ಇಂದಿರಾ ಆಧುನಿಕ ಬಂದೂಕು ಹಿಡಿದು ಕಾಣಿಸಿಕೊಂಡಿರುವುದು ನೋಡಿದರೆ ಸಿನಿಮಾದ ಕತೆ ನಡೆಯುವ ಕಾಲಮಾನದ ಬಗ್ಗೆ ಅನುಮಾನ ಮೂಡುತ್ತಿದೆ.

ಇದನ್ನೂ ಓದಿ:ಪ್ರಜ್ವಲ್ ದೇವರಾಜ್ ಜನ್ಮದಿನಕ್ಕೆ ‘ರಾಕ್ಷಸ’, ‘ಕರಾವಳಿ’ ಲುಕ್ ಬಿಡುಗಡೆ; ಒಂದಕ್ಕಿಂತ ಒಂದು ಭಿನ್ನ

‘ಕರಾವಳಿ’ ಸಿನಿಮಾದಲ್ಲಿ ರಮೇಶ್ ಇಂದಿರಾ ಮಾತ್ರವೇ ಅಲ್ಲದೆ ಮಿತ್ರ ಸಹ ಬಹಳ ಭಿನ್ನವಾದ ಪಾತ್ರದಲ್ಲಿ ನಟಿಸುತ್ತಿದ್ದಾರೆ. ಈ ಸಿನಿಮಾಕ್ಕಾಗಿ ಮಿತ್ರ ಭಿನ್ನ ಹೇರ್​ಸ್ಟೈಲ್ ಮತ್ತು ಲುಕ್ ಮಾಡಿಸಿಕೊಂಡಿದ್ದಾರೆ. ಇನ್ನು ಇದೇ ಸಿನಿಮಾದಲ್ಲಿ ಅಚ್ಯುತ್ ಕುಮಾರ್ ಸಹ ಇರಲಿದ್ದಾರೆ ಎನ್ನಲಾಗುತ್ತಿದೆ. ಸಿನಿಮಾದಲ್ಲಿ ಹಲವು ಪ್ರತಿಭಾವಂತ ನಟರು, ತಂತ್ರಜ್ಞರು ಒಟ್ಟಿಗೆ ಕೆಲಸ ಮಾಡುತ್ತಿದ್ದಾರೆ. ಸಿನಿಮಾದ ಚಿತ್ರೀಕರಣ ಇನ್ನೇನು ಮುಗಿಯಲಿದ್ದು ಸಿನಿಮಾದ ಪೋಸ್ಟ್ ಪ್ರೊಡಕ್ಷನ್ ಪ್ರಾರಂಭ ಆಗಲಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ರಾಕೇಶ್ ಪೂಜಾರಿ ಅಂತಿಮ ದರ್ಶನ ಪಡೆದು ಕಣ್ಣೀರು ಹಾಕಿದ ನಟಿ ರಕ್ಷಿತಾ ಪ್ರೇಮ್
ರಾಕೇಶ್ ಪೂಜಾರಿ ಅಂತಿಮ ದರ್ಶನ ಪಡೆದು ಕಣ್ಣೀರು ಹಾಕಿದ ನಟಿ ರಕ್ಷಿತಾ ಪ್ರೇಮ್
ದೇವೇಗೌಡರ ಮಾರ್ಗದರ್ಶನದಲ್ಲಿ ಪಕ್ಷ ಸಂಘಟನೆ ಕೆಲಸ ಶುರುವಾಗಲಿದೆ: ನಿಖಿಲ್
ದೇವೇಗೌಡರ ಮಾರ್ಗದರ್ಶನದಲ್ಲಿ ಪಕ್ಷ ಸಂಘಟನೆ ಕೆಲಸ ಶುರುವಾಗಲಿದೆ: ನಿಖಿಲ್
ಇಂದು ಸಾಯಂಕಾಲ 5 ಗಂಟೆಗೆ ನಡೆಯಬಹುದು ಡಿಜಿಎಂಒಗಳ ಸಭೆ
ಇಂದು ಸಾಯಂಕಾಲ 5 ಗಂಟೆಗೆ ನಡೆಯಬಹುದು ಡಿಜಿಎಂಒಗಳ ಸಭೆ
ಕೇಂದ್ರ ಸಚಿವ ಕುಮಾರಸ್ವಾಮಿ ಆರೋಗ್ಯದ ಬಗ್ಗೆ ಅಪ್ಡೇಟ್ ನೀಡಿದ ನಿಖಿಲ್​
ಕೇಂದ್ರ ಸಚಿವ ಕುಮಾರಸ್ವಾಮಿ ಆರೋಗ್ಯದ ಬಗ್ಗೆ ಅಪ್ಡೇಟ್ ನೀಡಿದ ನಿಖಿಲ್​
ಕೊಹ್ಲಿಯ ಕೊನೆ ಟೆಸ್ಟ್ ಶತಕದ ವಿಡಿಯೋ ಹಂಚಿಕೊಂಡ ಆರ್​ಸಿಬಿ
ಕೊಹ್ಲಿಯ ಕೊನೆ ಟೆಸ್ಟ್ ಶತಕದ ವಿಡಿಯೋ ಹಂಚಿಕೊಂಡ ಆರ್​ಸಿಬಿ
ಭಾರತೀಯ 3 ಸೇನಾಪಡೆ ಮುಖ್ಯಸ್ಥರ ಸುದ್ದಿಗೋಷ್ಠಿ ನೇರಪ್ರಸಾರ
ಭಾರತೀಯ 3 ಸೇನಾಪಡೆ ಮುಖ್ಯಸ್ಥರ ಸುದ್ದಿಗೋಷ್ಠಿ ನೇರಪ್ರಸಾರ
ಮುಖ್ಯಮಂತ್ರಿಯವರನ್ನು ಸ್ವಾಗತಿಸಲು ಸ್ಥಳೀಯ ನಾಯಕರ ನೂಕುನುಗ್ಗಲು
ಮುಖ್ಯಮಂತ್ರಿಯವರನ್ನು ಸ್ವಾಗತಿಸಲು ಸ್ಥಳೀಯ ನಾಯಕರ ನೂಕುನುಗ್ಗಲು
ಲೆಜೆಂಡರಿ ಬ್ಯಾಟರ್​ ಒಡಿಐಗಳಲ್ಲಿ ಮಾತ್ರ ಭಾರತವನ್ನು ಪ್ರತಿನಿಧಿಸುತ್ತಾರೆ
ಲೆಜೆಂಡರಿ ಬ್ಯಾಟರ್​ ಒಡಿಐಗಳಲ್ಲಿ ಮಾತ್ರ ಭಾರತವನ್ನು ಪ್ರತಿನಿಧಿಸುತ್ತಾರೆ
ರಾಕೇಶ್ ಪೂಜಾರಿಗೆ ‘ಕಾಂತಾರ’ ಚಿತ್ರದಲ್ಲಿ ಸಿಕ್ಕಿತ್ತು ಒಳ್ಳೆಯ ಪಾತ್ರ
ರಾಕೇಶ್ ಪೂಜಾರಿಗೆ ‘ಕಾಂತಾರ’ ಚಿತ್ರದಲ್ಲಿ ಸಿಕ್ಕಿತ್ತು ಒಳ್ಳೆಯ ಪಾತ್ರ
ರಾಕೇಶ್ ಒಮ್ಮೆ ಎದೆ ಮುಟ್ಟಿಕೊಳ್ಳುವುದು ವಿಡಿಯೋದಲ್ಲಿ ಕಾಣುತ್ತದೆ
ರಾಕೇಶ್ ಒಮ್ಮೆ ಎದೆ ಮುಟ್ಟಿಕೊಳ್ಳುವುದು ವಿಡಿಯೋದಲ್ಲಿ ಕಾಣುತ್ತದೆ