AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಿಂಗ್ ಕೊಡಿಸಲು ರಮ್ಯಾ ಜೊತೆ ಜ್ಯುವೆಲರಿ ಶಾಪ್​ಗೆ ಹೋದ ವಿನಯ್; ಟ್ವಿಸ್ಟ್​ ಮೇಲೆ ಟ್ವಿಸ್ಟ್

ವಿನಯ್ ರಾಜ್ ಕುಮಾರ್ ಮತ್ತು ರಮ್ಯಾ ಅವರ ನಡುವಿನ ಡೇಟಿಂಗ್ ಬಗ್ಗೆ ಸಾಕಷ್ಟು ವದಂತಿಗಳು ಹಬ್ಬಿವೆ. ಇತ್ತೀಚೆಗೆ ವೈರಲ್ ಆದ ಒಂದು ವಿಡಿಯೋದಲ್ಲಿ ಅವರಿಬ್ಬರು ಆಭರಣ ಅಂಗಡಿಯಲ್ಲಿ ರಿಂಗ್ ಖರೀದಿಸುವ ದೃಶ್ಯವಿದೆ. ಆದರೆ ವಿಡಿಯೋದಲ್ಲಿ ಟ್ವಿಸ್ಟ್ ಮೇಲೆ ಟ್ವಿಸ್ಟ್ ಕೊಡೋ ಕೆಲಸ ಆಗಿದೆ.

ರಿಂಗ್ ಕೊಡಿಸಲು ರಮ್ಯಾ ಜೊತೆ ಜ್ಯುವೆಲರಿ ಶಾಪ್​ಗೆ ಹೋದ ವಿನಯ್;  ಟ್ವಿಸ್ಟ್​ ಮೇಲೆ ಟ್ವಿಸ್ಟ್
ರಮ್ಯಾ-ವಿನಯ್
ರಾಜೇಶ್ ದುಗ್ಗುಮನೆ
|

Updated on:Sep 25, 2025 | 7:56 AM

Share

ವಿನಯ್ ರಾಜ್​ಕುಮಾರ್ (Vinay Rajkumar) ಹಾಗೂ ರಮ್ಯಾ ಮಧ್ಯೆ ಸಾಕಷ್ಟು ವಯಸ್ಸಿ ಅಂತರ ಇದೆ. ರಮ್ಯಾಗೆ ವಿನಯ್ ತಮ್ಮನಂತೆ. ಆದರೆ, ಈ ಸಂಬಂಧವನ್ನು ಕೆಲವರು ತಪ್ಪಾಗಿ ಕಲ್ಪಿಸಿಕೊಂಡಿದ್ದರು. ರಮ್ಯಾ ಹಾಗೂ ವಿನಯ್ ಸುತ್ತಾಡುತ್ತಿರುವುದನ್ನು ನೋಡಿ ಇವರಿಬ್ಬರೂ ಡೇಟ್ ಮಾಡುತ್ತಿದ್ದಾರೆ ಎಂದೆಲ್ಲ ಹೇಳಲಾಯಿತು. ಇದಕ್ಕೆ ರಮ್ಯಾ ಸ್ಪಷ್ಟನೆ ಕೂಡ ನೀಡಿದ್ದರು. ಆದರೆ, ಇದನ್ನು ಯಾರೂ ಒಪ್ಪಿಕೊಂಡಿಲ್ಲ. ಈಗ ಭಿನ್ನವಾಗಿ ಇದಕ್ಕೆ ಸ್ಪಷ್ಟನೆ ಕೊಡೋ ಕೆಲಸ ಆಗಿದೆ. ಈ ವಿಡಿಯೋ ಸದ್ಯ ಸಾಕಷ್ಟು ಲೈಕ್ಸ್​ ಪಡೆದಿದೆ.

‘ರಿಂಗ್ ಕೊಡಸ್ತೀನಿ ಬಾ’ ಅಂತ ರಮ್ಯಾಗೆ ಮೆಸೇಜ್ ಮಾಡಿದ್ದರು ವಿನಯ್ ರಾಜ್​ಕುಮಾರ್. ಆ ಬಳಿಕ ಇಬ್ಬರೂ ಜ್ಯುವೆಲರಿ ಶಾಪ್​ಗೆ ತೆರಳುತ್ತಾರೆ. ಅಲ್ಲಿ ರಿಂಗ್ ಹುಡುಕುವಾಗ, ‘ಯಾಕೆ ರಿಂಗ್ ಕೊಡಬೇಕು ಎಂದು ಅನಿಸಿತು’ ಎಂದು ರಮ್ಯಾ ಪ್ರಶ್ನೆ ಮಾಡುತ್ತಾರೆ. ‘ಅವಳನ್ನು ಮೀಟ್ ಮಾಡಿ ಮೂರು ವರ್ಷ ಆಯ್ತು. ಅದಕ್ಕೆ ಏನಾದರೂ ಸ್ಪೆಷಲ್ ಆಗಿ ಗಿಫ್ಟ್ ಕೊಡೋಣ ಅನಿಸಿತು’ ಎಂಬುದು ವಿನಯ್ ಉತ್ತರ.

ಇದನ್ನೂ ಓದಿ
Image
‘ಬಿಗ್ ಬಾಸ್ 12’ರ ನಾಲ್ಕು ಸ್ಪರ್ಧಿಗಳ ಹೆಸರು ಶನಿವಾರವೇ ರಿವೀಲ್?
Image
ಪುನೀತ್ ರಾಜ್​ಕುಮಾರ್ ಯಾವಾಗಲೂ ಸರಳ ಉಡುಗೆ ಧರಿಸುತ್ತಿದ್ದಿದ್ದೇಕೆ?
Image
ಸಾಯಿ ಪಲ್ಲವಿ ಪಡಿಯಚ್ಚು ಪೂಜಾ ಕಣ್ಣನ್;  ಕನ್​ಫ್ಯೂಸ್ ಆಗೋದು ಗ್ಯಾರಂಟಿ
Image
‘BBK 12’ ಆರಂಭಕ್ಕೆ ಕೆಲವೇ ದಿನ ಬಾಕಿ ಇರುವಾಗ ಬಂತು ಸ್ಪರ್ಧಿಗಳ ಹೊಸ ಪಟ್ಟಿ

ಕೊನೆಗೂ ಇಬ್ಬರೂ ಸೇರಿ ಒಂದು ರಿಂಗ್ ಫೈನಲ್ ಮಾಡುತ್ತಾರೆ. ಆಗ ರಿಂಗ್ ತೋರಿಸುತ್ತಿದ್ದ ವ್ಯಕ್ತಿ, ‘ಕಂಗ್ರಾಜ್ಯುಲೇಷನ್ ಸರ್, ಕಂಗ್ರ್ಯಾಜ್ಯುಲೇಷನ್ ಮ್ಯಾಮ್’ ಎಂದು ಹೇಳುತ್ತಾನೆ. ಆಗ ರಮ್ಯಾ, ‘ಇವನಿಗೆ ಓಕೆ, ನನಗೆ ಯಾಕೆ’ ಎಂದು ಕೇಳುತ್ತಾರೆ. ‘ಎಲ್ಲರೂ ಹಾಗೆಯೇ ಅಂದುಕೊಳ್ಳುತ್ತಾರೆ, ಆದರೆ ನಾವು ಜಸ್ಟ್ ಫ್ರೆಂಡ್ಸ್’ ಎಂದು ರಮ್ಯಾ ಹೇಳುತ್ತಾರೆ. ಈ ಮೂಲಕ ತಮ್ಮಿಬ್ಬರ ಮಧ್ಯೆ ಏನೂ ಇಲ್ಲ ಎಂಬುದನ್ನು ಕ್ಲಿಯರ್ ಕಟ್ ಆಗಿ ಹೇಳಿದ್ದಾರೆ.

ಇದನ್ನೂ ಓದಿ: ರಮ್ಯಾ ಜೊತೆ ಡೈಮಂಡ್ ರಿಂಗ್ ಖರೀದಿಸಿದ ವಿನಯ್ ರಾಜ್​ಕುಮಾರ್

ಇದು ಜ್ಯುವೆಲರಿ ಶಾಪ್​ನ ಜಾಹೀರಾತು. ಆದರೆ, ಇದನ್ನು ಭಿನ್ನವಾಗಿ ಕಟ್ಟಿಕೊಡಲಾಗಿದೆ. ಜಾಹೀರಾತಿನ ಜೊತೆಗೆ ತಮ್ಮಿಬ್ಬರ ಮಧ್ಯೆ ಏನೂ ಇಲ್ಲ ಎಂಬುದನ್ನು ರಮ್ಯಾ-ವಿನಯ್ ಹೇಳಿದಂತೆ ಆಗಿದೆ. ಇದೇ ವೇಳೆ ‘ವಿನಯ್ ರಾಜ್​ಕುಮಾರ್ ಮನದರಸಿ ಯಾರು’ ಎಂಬ ಪ್ರಶ್ನೆಯೂ ಮೂಡಿದೆ.

ರಮ್ಯಾ-ವಿನಯ್ ವಿಡಿಯೋ

ಪುನೀತ್ ಹಾಗೂ ರಮ್ಯಾ ಒಟ್ಟಾಗಿ ಸಿನಿಮಾಗಳಲ್ಲಿ ನಟಿಸಿದ್ದಾರೆ. ಈ ವೇಳೆ ಸೆಟ್​​ಗೆ ವಿನಯ್ ಕೂಡ ಬರುತ್ತಿದ್ದರು ಎನ್ನಲಾಗಿದೆ. ಆಗಿನಿಂದಲೇ ವಿನಯ್ ಹಾಗೂ ರಮ್ಯಾ ಮಧ್ಯೆ ಒಳ್ಳೆಯ ಗೆಳೆತನ ಮೂಡಿದ್ದು, ಅದನ್ನು ಈಗಲೂ ಮುಂದುವರಿಸಿಕೊಂಡು ಬರಲಾಗುತ್ತಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 7:35 am, Thu, 25 September 25

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
34 ರನ್​ಗಳಿದ್ದಾಗ ಕ್ಯಾಚ್ ಬಿಟ್ಟ ಸಿರಾಜ್; 93 ರನ್ ಚಚ್ಚಿದ ಅಲೆನ್
34 ರನ್​ಗಳಿದ್ದಾಗ ಕ್ಯಾಚ್ ಬಿಟ್ಟ ಸಿರಾಜ್; 93 ರನ್ ಚಚ್ಚಿದ ಅಲೆನ್
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಸಿದ್ದರಾಮಯ್ಯ ಬಿಟ್ರೆ CM ಆಗುವ ಅರ್ಹತೆ ಖರ್ಗೆಗೆ ಮಾತ್ರ: ರಾಯರೆಡ್ಡಿ
ಸಿದ್ದರಾಮಯ್ಯ ಬಿಟ್ರೆ CM ಆಗುವ ಅರ್ಹತೆ ಖರ್ಗೆಗೆ ಮಾತ್ರ: ರಾಯರೆಡ್ಡಿ