AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜೊತೆಯಾಗಿ ಫೋಟೋಶೂಟ್ ಮಾಡಿಸಿದ ರಮ್ಯಾ-ವಿನಯ್ ರಾಜ್​ಕುಮಾರ್; ಏನಿದು ಹೊಸ ಅಪ್​ಡೇಟ್

ವಿನಯ್ ರಾಜಕುಮಾರ್ ಮತ್ತು ರಮ್ಯಾ ಅವರ ಇತ್ತೀಚಿನ ಫೋಟೋಶೂಟ್ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಫ್ಯಾನ್ಸ್ ಹೊಸ ಚಿತ್ರದ ನಿರೀಕ್ಷೆಯಲ್ಲಿದ್ದಾರೆ. ರಮ್ಯಾ ಅವರ ದೊಡ್ಡ ಪರದೆಗೆ ಮರಳುವಿಕೆಯ ಬಗ್ಗೆ ಇನ್ನೂ ಸ್ಪಷ್ಟನೆ ಸಿಕ್ಕಿಲ್ಲ. ಈ ಫೋಟೋಶೂಟ್ ಅವರ ಅಭಿಮಾನಿಗಳಿಗೆ ಸಂತೋಷ ತಂದಿದೆ.

ಜೊತೆಯಾಗಿ ಫೋಟೋಶೂಟ್ ಮಾಡಿಸಿದ ರಮ್ಯಾ-ವಿನಯ್ ರಾಜ್​ಕುಮಾರ್; ಏನಿದು ಹೊಸ ಅಪ್​ಡೇಟ್
ರಮ್ಯಾ-ವಿನಯ್
ರಾಜೇಶ್ ದುಗ್ಗುಮನೆ
|

Updated on: Jul 24, 2025 | 8:55 AM

Share

ನಟಿ ರಮ್ಯಾ ಅವರು ಹಿರಿತೆರೆ ತೊರೆದು ಅದೆಷ್ಟೋ ಸಮಯ ಕಳೆದಿದೆ. ಅವರು ಮತ್ತೆ ದೊಡ್ಡ ಪರದೆಯಮೇಲೆ ಯಾವಾಗ ಕಾಣಿಸಿಕೊಳ್ಳುತ್ತಾರೆ ಎನ್ನುವ ಪ್ರಶ್ನೆಗೆ ಸ್ಪಷ್ಟ ಉತ್ತರ ಇಲ್ಲ. ಹೀಗಿರುವಾಗಲೇ ವಿನಯ್ ರಾಜ್​ಕುಮಾರ್ ಹಾಗೂ ರಮ್ಯಾ (Ramya) ಹೊಸ ಫೋಟೋಶೂಟ್ ಮಾಡಿಸಿದ್ದಾರೆ. ಈ ಫೋಟೋಶೂಟ್ ನೋಡಿ ಫ್ಯಾನ್ಸ್ ಕೂಡ ಖುಷಿಪಟ್ಟಿದ್ದಾರೆ. ಹಾಗಾದರೆ ಇವರು ಹೊಸ ಸಿನಿಮಾದಲ್ಲಿ ಒಟ್ಟಾಗಿ ನಟಿಸುತ್ತಿದ್ದಾರಾ? ಖಂಡಿತವಾಗಿಯೂ ಇಲ್ಲ. ಇವರು ಮ್ಯಾಗಜಿನ್ ಒಂದರ ಫೋಟೋಶೂಟ್​ಗಾಗಿ ಒಟ್ಟಿಗೆ ಬಂದಿದ್ದಾರೆ.

ರಮ್ಯಾ ಅವರು ಹಲವು ವರ್ಷಗಳಿಂದ ಚಿತ್ರರಂಗದಲ್ಲಿ ಆ್ಯಕ್ಟೀವ ಆಗಿದ್ದಾರೆ. ಇತ್ತೀಚೆಗೆ ಅವರಿಗೆ ನಟನೆಯ ಬಗ್ಗೆ ಆಸಕ್ತಿ ಹೋದಂತೆ ಇದೆ. ಅವರು ನಾಯಕಿ ಆಗಿ ಪರದೆ ಮೇಲೆ ಕಾಣಿಸಿಕೊಳ್ಳದೇ ಹಲವು ವರ್ಷಗಳೇ ಕಳೆದಿವೆ. ಅವರು ದೊಡ್ಡಪರದೆಗೆ ಬರಲಿ ಎಂದು ಫ್ಯಾನ್ಸ್ ಆಶಿಸುತ್ತಿರುವಾಗಲೇ ಈ ಫೋಟೋಶೂಟ್ ವಿಡಿಯೋ ವೈರಲ್ ಆಗಿದೆ. ಅನೇಕರು ಇದು ಲುಕ್ ಟೆಸ್ಟ್ ಇರಬಹುದು ಎಂದು ಭಾವಿಸಿದ್ದರು. ಆದರೆ, ಅದರ ಅಸಲಿಯತ್ತು ಬೇರೆಯೇ ಇದೆ.

ಇದನ್ನೂ ಓದಿ
Image
ರಾಮಾಚಾರಿ ಪಾತ್ರ ಕೊನೆ; ಕೊಲೆಯಲ್ಲಿ ಅಂತ್ಯವಾಯ್ತು ಕ್ಯಾರೆಕ್ಟರ್
Image
ಗೌತಮ್-ಭೂಮಿಕಾ ಮಗನಿಗೆ ನಾಮಕರಣ ಶಾಸ್ತ್ರ; ಇಟ್ಟ ಹೆಸರೇನು?
Image
‘ವಿಂಟೇಜ್ ಪವನ್ ಕಲ್ಯಾಣ್’; ‘ಹರಿ ಹರ ವೀರ ಮಲ್ಲು’ ವಿಮರ್ಶೆ ಕೊಟ್ಟ ಫ್ಯಾನ್ಸ್
Image
ಆರೇ ದಿನಕ್ಕೆ 150 ಕೋಟಿ ಕಲೆಕ್ಷನ್ ಮಾಡಿದ ‘ಸೈಯಾರಾ’; ಹರಿಯುತ್ತಲೇ ಇದೆ ಹಣ

ರಮ್ಯಾ ಹಾಗೂ ವಿನಯ್ ರಾಜ್​ಕುಮಾರ್ ‘ಸ್ವಾಸ ಲೈಫ್’ ಹೆಸರಿನ ಮ್ಯಾಗಜಿನ್​ಗಾಗಿ ಈ ಫೋಟೋಶೂಟ್ ಮಾಡಿಸಿದ್ದಾರೆ. ವಿನಯ್ ಅವರು ಮಸ್ತ್ ಆಗಿ ಕಾಣಿಸಿಕೊಂಡಿದ್ದಾರೆ. ರಮ್ಯಾ ಅವರು ಈಗಲೂ ಸಾಕಷ್ಟು ಸುಂದರವಾಗಿ ಕಾಣಿಸುತ್ತಿದ್ದಾರೆ. ಅವರ ಸೌಂದರ್ಯ ಯಾವಾಗಲೂ ಕಡಿಮೆ ಆಗುವಂಥದ್ದಲ್ಲ ಎಂದು ಅನೇಕರು ಅಭಿಪ್ರಾಯ ಪಟ್ಟಿದ್ದಾರೆ.

ರಮ್ಯಾ ಹಾಗೂ ವಿನಯ್​ಗೆ ಮೊದಲಿನಿಂದಲೂ ಪರಿಚಯ ಇದೆ. ರಮ್ಯಾ ಅವರು ಬಣ್ಣದ ಲೋಕಕ್ಕೆ ಕಾಲಿಟ್ಟಿದ್ದು ರಾಜ್​ಕುಮಾರ್ ಕುಟುಂಬದ ಬ್ಯಾನರ್ ಮೂಲಕ. ಇನ್ನು, ಪುನೀತ್ ಜೊತೆ ಅವರು ಕೆಲವು ಸಿನಿಮಾ ಮಾಡಿದ್ದಾರೆ. ಹೀಗಾಗಿ, ಸೆಟ್​ನಲ್ಲಿ ಇರುವಾಗ ವಿನಯ್ ಹಾಗೂ ರಮ್ಯಾ ಅನೇಕ ಬಾರಿ ಭೇಟಿ ಮಾಡಿದ್ದು ಇದೆ. ಇವರು ತೆರೆಮೇಲೆ ಒಟ್ಟಾಗಿ ಕಾಣಿಸಕೊಳ್ಳಲಿ ಎಂದು ಫ್ಯಾನ್ಸ್ ಬಯಸುತ್ತಿದ್ದಾರೆ.

ಇದನ್ನೂ ಓದಿ: ಒಂದೇ ಬೇರಿನ ಕವಲು ನಾವು, ಶ್ರೇಷ್ಠತೆಗೆ ಬಡಿದಾಡುವುದು ಬೇಡ: ರಮ್ಯಾ

ರಮ್ಯಾ ದೊಡ್ಡ ಪರದೆಗೆ ಯಾವಾಗ ಕಂಬ್ಯಾಕ್ ಮಾಡುತ್ತಾರೆ ಎಂಬುದು ಇನ್ನೂ ಸ್ಪಷ್ಟವಾಗಿಲ್ಲ. ಅವರು ‘ಸ್ವಾತಿ ಮುತ್ತಿನ ಮಳೆ ಹನಿಯೇ’ ಚಿತ್ರದಲ್ಲಿ ರಮ್ಯಾ ನಟಿಸಬೇಕಿತ್ತು. ಆದರೆ, ಅವರು ಚಿತ್ರದಿಂದ ಹೊರ ಬಂದರು. ‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಸಿನಿಮಾದಲ್ಲಿ ಅತಿಥಿ ಪಾತ್ರದಲ್ಲಿ ಅವರು ನಟಿಸಿದರು. ನಂತರ ಭಿನ್ನಾಭಿಪ್ರಾಯ ಮೂಡಿ ಚಿತ್ರತಂಡದ ಮೇಲೆ ಕೇಸ್ ಹಾಕಿದರು. ಇನ್ನು, ಉತ್ತರಕಾಂಡ’ ಚಿತ್ರದಿಂದಲೂ ಅವರು ಹೊರ ನಡೆದಿದ್ದಾರೆ. ಇನ್ನು, ವಿನಯ್ ದುನಿಯಾ ವಿಜಯ್ ನಿರ್ದೇಶನ ಮಾಡುತ್ತಿರುವ ‘ಸಿಟಿಲೈಟ್ಸ್’ ಚಿತ್ರದ ಭಾಗವಾಗಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು