AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಟ ದರ್ಶನ್ ಅಭಿಮಾನಿಗಳ ಕಮೆಂಟ್ ನೋಡಿ ರಮ್ಯಾ ಖಡಕ್ ಪ್ರತಿಕ್ರಿಯೆ

ಇತ್ತೀಚೆಗೆ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ದರ್ಶನ್ ಅವರ ಜಾಮೀನು ವಿಚಾರಣೆ ನಡೆದಿತ್ತು. ಸುಪ್ರೀಂ ಕೋರ್ಟ್​​ನಲ್ಲಿ ರೇಣುಕಾಸ್ವಾಮಿ ಕುಟುಂಬಕ್ಕೆ ನ್ಯಾಯ ಸಿಗವ ಭರವಸೆ ಇದೆ ಎಂದು ರಮ್ಯಾ ಟ್ವೀಟ್ ಮಾಡಿದ್ದರು. ಆ ಬಳಿಕ ದರ್ಶನ್ ಫ್ಯಾನ್ಸ್ ಮಾಡಿದ ಕಮೆಂಟ್​ಗಳನ್ನು ನೋಡಿ ರಮ್ಯಾ ಖಾರವಾಗಿ ಪ್ರತಿಕ್ರಿಯಿಸಿದ್ದಾರೆ.

ನಟ ದರ್ಶನ್ ಅಭಿಮಾನಿಗಳ ಕಮೆಂಟ್ ನೋಡಿ ರಮ್ಯಾ ಖಡಕ್ ಪ್ರತಿಕ್ರಿಯೆ
Darshan, Ramya
ಮದನ್​ ಕುಮಾರ್​
|

Updated on: Jul 27, 2025 | 7:25 AM

Share

ನಟಿ ರಮ್ಯಾ (Ramya Divya Spandana) ಅವರು ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಆಗಿದ್ದಾರೆ. ಹಲವು ವಿಷಯಗಳ ಬಗ್ಗೆ ಅವರು ತಮ್ಮ ಧ್ವನಿ ಎತ್ತುತ್ತಾರೆ. ಬರೀ ಸಿನಿಮಾಗಳ ವಿಷಯ ಮಾತ್ರವಲ್ಲದೇ ಅನೇಕ ಸಾಮಾಜಿಕ ಸಂಗತಿಗಳ ಬಗ್ಗೆಯೂ ಮಾತನಾಡುತ್ತಾರೆ. ಅಭಿಮಾನಿಗಳೇ ಹೇಳುವಂತೆ ಅವರು ನ್ಯಾಯದ ಪರ ನಿಲ್ಲುತ್ತಾರೆ. ಇತ್ತೀಚೆಗೆ ದರ್ಶನ್ (Darshan) ಕೇಸ್ ಬಗ್ಗೆ ರಮ್ಯಾ ಅವರು ಪೋಸ್ಟ್ ಮಾಡಿದ್ದರು. ಆ ಬಳಿಕ ದರ್ಶನ್ ಅಭಿಮಾನಿಗಳು (Darshan Fans) ಕಮೆಂಟ್ ಮಾಡಿದ ರೀತಿಗೆ ರಮ್ಯಾ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಅವರು ಇನ್​ಸ್ಟಾಗ್ರಾಮ್ ಸ್ಟೋರಿ ಮೂಲಕ ಖಡಕ್ ಆಗಿ ಪ್ರತಿಕ್ರಿಯೆ ನೀಡಿದ್ದಾರೆ.

‘ಎಲ್ಲ ಡಿ ಬಾಸ್ ಅಭಿಮಾನಿಗಳಿಗಳೂ ನನ್ನ ಇನ್​ಸ್ಟಾಗ್ರಾಮ್ ಖಾತೆಗೆ ಸ್ವಾಗತ. ರೇಣುಕಾಸ್ವಾಮಿ ಕುಟುಂಬಕ್ಕೆ ಯಾಕೆ ನ್ಯಾಯ ಸಿಗಬೇಕು ಎಂಬುದಕ್ಕೆ ನಿಮ್ಮ ಕಮೆಂಟ್​ಗಳೇ ಸಾಕ್ಷಿ’ ಎಂದು ರಮ್ಯಾ ಅವರು ಬರೆದುಕೊಂಡಿದ್ದಾರೆ. ದರ್ಶನ್ ಅಭಿಮಾನಿಗಳ ವರ್ತನೆ ಬಗ್ಗೆ ಈ ಮೊದಲು ನಟರಾದ ಪ್ರಥಮ್, ಜಗ್ಗೇಶ್ ಮುಂತಾದವರು ಕೂಡ ಅಸಮಾಧಾನ ವ್ಯಕ್ತಪಡಿಸಿದ್ದರು.

ದರ್ಶನ್ ಕೇಸ್ ಬಗ್ಗೆ ರಮ್ಯಾ ಹೇಳಿದ್ದೇನು? ‘ಭಾರತದ ಜನಸಾಮಾನ್ಯರಿಗೆ ಸುಪ್ರೀಂ ಕೋರ್ಟ್ ಒಂದು ಭರವಸೆಯ ಬೆಳಕಾಗಿದೆ. ರೇಣುಕಾಸ್ವಾಮಿ ಕುಟುಂಬಕ್ಕೆ ನ್ಯಾಯ ಸಿಗುವ ಭರವಸೆ ಮೂಡಿದೆ’ ಎಂದು ರಮ್ಯಾ ಅವರು ಇನ್​ಸ್ಟಾಗ್ರಾಮ್ ಸ್ಟೋರಿ ಮತ್ತು ಎಕ್ಸ್ (ಟ್ವಿಟರ್) ಖಾತೆಯಲ್ಲಿ ಬರೆದುಕೊಂಡಿದ್ದರು. ಇತ್ತೀಚೆಗೆ ಸುಪ್ರೀಂ ಕೋರ್ಟ್​ನಲ್ಲಿ ದರ್ಶನ್ ಜಾಮೀನು ವಿಚಾರಣೆ ನಡೆದ ಬಳಿಕ ರಮ್ಯಾ ಈ ರೀತಿ ಪೋಸ್ಟ್ ಮಾಡಿದ್ದರು. ಆದರೆ ಬಳಿಕ ಕಮೆಂಟ್ ಆಯ್ಕೆಯನ್ನು ಅವರು ಆಫ್ ಮಾಡಿದ್ದಾರೆ.

ಇದನ್ನೂ ಓದಿ
Image
ದರ್ಶನ್​ಗೆ ದೇವರ ಮೇಲೆ ಎಷ್ಟು ಭಕ್ತಿ ನೋಡಿ; ಇಲ್ಲಿದೆ ವಿಡಿಯೋ ಸಾಕ್ಷಿ
Image
ಪತ್ನಿಯೊಂದಿಗೆ ಚಾಮುಂಡೇಶ್ವರಿ ತಾಯಿ ದರ್ಶನ ಪಡೆದ ನಟ ದರ್ಶನ್
Image
ಫಾರ್ಮ್​ಹೌಸ್​ನಲ್ಲಿ ಎತ್ತಿನಗಾಡಿ ಓಡಿಸಿದ ನಟ ದರ್ಶನ್; ದಾಸನ ಜಾಲಿ ಮೂಡ್
Image
ಕರ್ನಾಟಕದ ಮುಖ್ಯ ಮಂತ್ರಿಯಾದ ನಟ ದರ್ಶನ್, ಪಕ್ಷ ಯಾವುದು ಗೊತ್ತೆ?

ರೇಣುಕಾ ಸ್ವಾಮಿ ಕೇಸ್ ಮಾತ್ರವಲ್ಲದೇ ಧರ್ಮಸ್ಥಳದ ವಿವಾದದ ಬಗ್ಗೆಯೂ ರಮ್ಯಾ ತಮ್ಮ ಅಭಿಪ್ರಾಯ ತಿಳಿಸಿದ್ದಾರೆ. ‘ಧರ್ಮಸ್ಥಳದಲ್ಲಿ ಆಗಿರುವ ಪ್ರಕರಣಗಳ ಬಗ್ಗೆ ನ್ಯಾಯಯುತವಾದ ತನಿಖೆ ಆಗುತ್ತದೆ ಎಂಬ ಭರವಸೆ ಇದೆ. ನಮಗೆ ಸತ್ಯ ತಿಳಿಯಬೇಕು’ ಎಂದು ರಮ್ಯಾ ಪೋಸ್ಟ್ ಮಾಡಿದ್ದಾರೆ.

ಇದನ್ನೂ ಓದಿ: ದರ್ಶನ್​ಗೆ​ ಜಾಮೀನು ಕೊಟ್ಟ ಹೈಕೋರ್ಟ್ ಬಗ್ಗೆ ನೇರವಾಗಿ ಅಸಮಾಧಾನ ಹೊರಹಾಕಿದ ಸುಪ್ರೀಂ

ರಮ್ಯಾ ಅವರ ಸಾಮಾಜಿಕ ಕಳಕಳಿ ಕಂಡು ಅವರ ಅಭಿಮಾನಿಗಳು ಭೇಷ್ ಎಂದಿದ್ದಾರೆ. ‘ಕೇಸ್ ಯಾವುದೇ ಇರಲಿ, ಯಾರದ್ದೇ ಇರಲಿ, ಸದಾ ನ್ಯಾಯದ ಪರ. ತೆರೆಯ ಮೇಲಷ್ಟೇ ಅಲ್ಲ. ನಿಜ ಜೀವನದಲ್ಲೂ ರಮ್ಯಾ ಹೀರೋಯಿನ್’ ಎಂದು ಅವರ ಅಭಿಮಾನಿಗಳು ಪೋಸ್ಟ್ ಮಾಡಿದ್ದಾರೆ. ಇದನ್ನು ಕೂಡ ರಮ್ಯಾ ಅವರು ಇನ್​ಸ್ಟಾಗ್ರಾಮ್ ಸ್ಟೋರಿಯಲ್ಲಿ ಹಂಚಿಕೊಂಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಮಡಿಕೇರಿ-ಕೊಡಗು ಭಾಗದಲ್ಲಿ ಕಾಫಿ ಬೆಳೆಗಾರರಿಗೆ ಎದುರಾಯ್ತು ಹೊಸ ತಲೆನೋವು
ಮಡಿಕೇರಿ-ಕೊಡಗು ಭಾಗದಲ್ಲಿ ಕಾಫಿ ಬೆಳೆಗಾರರಿಗೆ ಎದುರಾಯ್ತು ಹೊಸ ತಲೆನೋವು
ಮಂಗಳೂರಿನಲ್ಲಿ ಆಹಾರ ಪರೀಕ್ಷಾ ಲ್ಯಾಬ್‌ನ ಅಗತ್ಯ
ಮಂಗಳೂರಿನಲ್ಲಿ ಆಹಾರ ಪರೀಕ್ಷಾ ಲ್ಯಾಬ್‌ನ ಅಗತ್ಯ
ಬೆಂಗಳೂರಿನ 2ನೇ ವಿಮಾನ ನಿಲ್ದಾಣಕ್ಕೆ ಹಾರೋಹಳ್ಳಿಯಲ್ಲಿ ಸ್ಥಳ ಪರಿಶೀಲನೆ
ಬೆಂಗಳೂರಿನ 2ನೇ ವಿಮಾನ ನಿಲ್ದಾಣಕ್ಕೆ ಹಾರೋಹಳ್ಳಿಯಲ್ಲಿ ಸ್ಥಳ ಪರಿಶೀಲನೆ
ಹನೂರು ಪ್ರಕರಣ: ಗೃಹ ಪ್ರವೇಶದ ಸಂಭ್ರಮ ತುಂಬಿರಬೇಕಿದ್ದ ಮನೆಯಲ್ಲೀಗ ಸೂತಕ!
ಹನೂರು ಪ್ರಕರಣ: ಗೃಹ ಪ್ರವೇಶದ ಸಂಭ್ರಮ ತುಂಬಿರಬೇಕಿದ್ದ ಮನೆಯಲ್ಲೀಗ ಸೂತಕ!
ನಿಮ್ಮ ಕನಸಿನ ಮನೆ ಅಥವಾ ಆಸ್ತಿಯನ್ನು ಖರೀದಿಸುವ ಸುವರ್ಣಾವಕಾಶ ಈಗ ನಿಮ್ಮದು
ನಿಮ್ಮ ಕನಸಿನ ಮನೆ ಅಥವಾ ಆಸ್ತಿಯನ್ನು ಖರೀದಿಸುವ ಸುವರ್ಣಾವಕಾಶ ಈಗ ನಿಮ್ಮದು
ಬೆಂಗಳೂರಿನಲ್ಲಿ ಕಾರಿನಲ್ಲಿ ಸಾಗಿಸುತ್ತಿದ್ದ 9 ಕೋಟಿ ರೂ. ನಗದು ಜಪ್ತಿ
ಬೆಂಗಳೂರಿನಲ್ಲಿ ಕಾರಿನಲ್ಲಿ ಸಾಗಿಸುತ್ತಿದ್ದ 9 ಕೋಟಿ ರೂ. ನಗದು ಜಪ್ತಿ
ಶ್ರೀರಂಗಪಟ್ಟಣದ ಚಾಮುಂಡೇಶ್ವರಿಗೆ 3 ಲಕ್ಷ ರೂಪಾಯಿ ನೋಟುಗಳ ವಿಶೇಷ ಅಲಂಕಾರ
ಶ್ರೀರಂಗಪಟ್ಟಣದ ಚಾಮುಂಡೇಶ್ವರಿಗೆ 3 ಲಕ್ಷ ರೂಪಾಯಿ ನೋಟುಗಳ ವಿಶೇಷ ಅಲಂಕಾರ
ಹುಬ್ಬಳ್ಳಿ ಲಕ್ಷ್ಮೀ ದೇವಸ್ಥಾನದಲ್ಲಿ ಭಕ್ತರ ದಂಡು, ವಿಶೇಷ ಅಲಂಕಾರ
ಹುಬ್ಬಳ್ಳಿ ಲಕ್ಷ್ಮೀ ದೇವಸ್ಥಾನದಲ್ಲಿ ಭಕ್ತರ ದಂಡು, ವಿಶೇಷ ಅಲಂಕಾರ
ಶೇಷಾದ್ರಿಪುರಂ ಮಹಾಲಕ್ಷ್ಮೀ ದೇವಾಲಯದಲ್ಲಿ ಸಡಗರದ ಪೂಜೆ
ಶೇಷಾದ್ರಿಪುರಂ ಮಹಾಲಕ್ಷ್ಮೀ ದೇವಾಲಯದಲ್ಲಿ ಸಡಗರದ ಪೂಜೆ
ಗೊರವನಹಳ್ಳಿ ಮಹಾಲಕ್ಷ್ಮೀ ದೇವಾಲಯದಲ್ಲಿ ವರಮಹಾಲಕ್ಷ್ಮೀ ಹಬ್ಬದ ಸಂಭ್ರಮ
ಗೊರವನಹಳ್ಳಿ ಮಹಾಲಕ್ಷ್ಮೀ ದೇವಾಲಯದಲ್ಲಿ ವರಮಹಾಲಕ್ಷ್ಮೀ ಹಬ್ಬದ ಸಂಭ್ರಮ