AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Ramya: ರಮ್ಯಾ ಜತೆ ರಾಜ್​ ಬಿ. ಶೆಟ್ಟಿ ಸಿನಿಮಾ; ‘ಸ್ವಾತಿ ಮುತ್ತಿನ ಮಳೆ ಹನಿಯೇ’ ಟೈಟಲ್​ ಘೋಷಣೆ

Swathi Mutthina Male Haniye: ರಮ್ಯಾ ಮತ್ತು ರಾಜ್​ ಬಿ. ಶೆಟ್ಟಿ ಕಾಂಬಿನೇಷನ್​ನ ಚಿತ್ರಕ್ಕೆ ‘ಸ್ವಾತಿ ಮುತ್ತಿನ ಮಳೆ ಹನಿಯೇ’ ಎಂದು ಶೀರ್ಷಿಕೆ ಇಡಲಾಗಿದೆ. ವಿಜಯ ದಶಮಿ ಪ್ರಯುಕ್ತ ರಮ್ಯಾ ಗುಡ್​ ನ್ಯೂಸ್​ ನೀಡಿದ್ದಾರೆ.

Ramya: ರಮ್ಯಾ ಜತೆ ರಾಜ್​ ಬಿ. ಶೆಟ್ಟಿ ಸಿನಿಮಾ; ‘ಸ್ವಾತಿ ಮುತ್ತಿನ ಮಳೆ ಹನಿಯೇ’ ಟೈಟಲ್​ ಘೋಷಣೆ
ರಮ್ಯಾ, ರಾಜ್ ಬಿ. ಶೆಟ್ಟಿ
TV9 Web
| Edited By: |

Updated on:Oct 05, 2022 | 11:16 AM

Share

ನಟಿ ರಮ್ಯಾ (Ramya) ಅವರು ಚಿತ್ರರಂಗದಲ್ಲಿ ಈಗ ಸಕ್ರಿಯರಾಗಿದ್ದಾರೆ. ರಾಜಕೀಯದಿಂದ ದೂರ ಉಳಿದುಕೊಂಡಿರುವ ಅವರು ಬಣ್ಣದ ಲೋಕದ ಕಡೆಗೆ ಮತ್ತೆ ಆಕರ್ಷಿತರಾಗಿದ್ದಾರೆ. ಕನ್ನಡ ಚಿತ್ರರಂಗಕ್ಕೆ ರಮ್ಯಾ (Ramya Divya Spandana) ಅವರು ಕಮ್​ಬ್ಯಾಕ್​ ಮಾಡಿದ್ದಾರೆ. ನಿರ್ಮಾಪಕಿಯಾಗಿ ತಮ್ಮದೇ ನಿರ್ಮಾಣ ಸಂಸ್ಥೆ ಆರಂಭಿಸಿದ್ದಾರೆ. ಅವರ ಮೊದಲ ನಿರ್ಮಾಣದ ಸಿನಿಮಾಗೆ ಈಗ ಶೀರ್ಷಿಕೆ ಅನೌನ್ಸ್​ ಆಗಿದೆ. ‘ಸ್ವಾತಿ ಮುತ್ತಿನ ಮಳೆ ಹನಿಯೇ’ ಎಂದು ಟೈಟಲ್​ ಇಡಲಾಗಿದೆ. ವಿಶೇಷ ಏನೆಂದರೆ, ಈ ಸಿನಿಮಾಗೆ ರಾಜ್​ ಬಿ. ಶೆಟ್ಟಿ (Raj B Shetty) ಅವರು ನಿರ್ದೇಶನ ಮಾಡಲಿದ್ದಾರೆ.

ರಮ್ಯಾ ಅವರು ಮತ್ತೆ ದೊಡ್ಡ ಪರದೆಯಲ್ಲಿ ಕಾಣಿಸಿಕೊಳ್ಳಬೇಕು ಎಂಬುದು ಅಭಿಮಾನಿಗಳ ಆಸೆ ಆಗಿತ್ತು. ಆ ಆಸೆ ನೆರವೇರುವ ಕಾಲ ಈಗ ಹತ್ತಿರವಾಗುತ್ತಿದೆ. ‘ಸ್ವಾತಿ ಮುತ್ತಿನ ಮಳೆ ಹನಿಯೇ’ ಸಿನಿಮಾಗೆ ರಮ್ಯಾ ಕೇವಲ ನಿರ್ಮಾಪಕಿ ಮಾತ್ರ ಅಲ್ಲ. ಈ ಚಿತ್ರದಲ್ಲಿ ಅವರು ಮುಖ್ಯ ಪಾತ್ರ ಕೂಡ ಮಾಡಲಿದ್ದಾರೆ. ಅವರ ಜೊತೆ ರಾಜ್​ ಬಿ. ಶೆಟ್ಟಿ ನಟಿಸಲಿದ್ದಾರೆ. ಈ ವಿಷಯ ಕೇಳಿ ಫ್ಯಾನ್ಸ್​ ಥ್ರಿಲ್​ ಆಗಿದ್ದಾರೆ.

ನಟನೆ ಮತ್ತು ನಿರ್ದೇಶನದ ಮೂಲಕ ರಾಜ್​ ಬಿ. ಶೆಟ್ಟಿ ಅವರು ತಮ್ಮ ಪ್ರತಿಭೆ ಏನೆಂಬುದನ್ನು ಈಗಾಗಲೇ ಸಾಬೀತು ಮಾಡಿದ್ದಾರೆ. ಅವರ ನಿರ್ದೇಶನದಲ್ಲಿ ಮೂಡಿಬಂದ ‘ಒಂದು ಮೊಟ್ಟೆಯ ಕಥೆ’ ಹಾಗೂ ‘ಗರುಡ ಗಮನ ವೃಷಭ ವಾಹನ’ ಸಿನಿಮಾಗಳು ಜನಮನ ಗೆದ್ದವು. ಈಗ ಅವರು ರಮ್ಯಾ ಜೊತೆಗಿನ ಸಿನಿಮಾದಲ್ಲಿ ಯಾವ ಕಥೆ ಹೇಳಲಿದ್ದಾರೆ ಎಂಬುದನ್ನು ತಿಳಿಯುವ ಕೌತುಕ ಮನೆ ಮಾಡಿದೆ.

ರಮ್ಯಾ ಒಡೆತನದ ‘ಆಪಲ್​ ಬಾಕ್ಸ್​ ಸ್ಟುಡಿಯೋಸ್​’ ಮೂಲಕ ‘ಸ್ವಾತಿ ಮುತ್ತಿನ ಮಳೆ ಹನಿಯೇ’ ಚಿತ್ರ ನಿರ್ಮಾಣ ಆಗಲಿದೆ. ‘ಲೈಟರ್​ ಬುದ್ಧ ಫಿಲ್ಮ್ಸ್​’ ಸಂಸ್ಥೆ ಕೂಡ ನಿರ್ಮಾಣದಲ್ಲಿ ಕೈ ಜೋಡಿಸುತ್ತಿದೆ. ಸದ್ಯಕ್ಕೆ ಪ್ರೀ-ಪ್ರೊಡಕ್ಷನ್​ ಕೆಲಸಗಳು ನಡೆಯುತ್ತಿವೆ. ಶೀಘ್ರದಲ್ಲೇ ಶೂಟಿಂಗ್​ ಆರಂಭ ಆಗಲಿದೆ. ‘ಗರುಡ ಗಮನ ವೃಷಭ ವಾಹನ’ ಚಿತ್ರದಲ್ಲಿ ಕೆಲಸ ಮಾಡಿದ ಹಲವು ತಂತ್ರಜ್ಞರು ‘ಸ್ವಾತಿ ಮುತ್ತಿನ ಮಳೆ ಹನಿಯೇ’ ಸಿನಿಮಾದಲ್ಲೂ ಮುಂದುವರಿಯಲಿದ್ದಾರೆ. ವಿಧುನ್​ ಮುಕುಂದನ್​ ಸಂಗೀತ ನಿರ್ದೇಶನ, ಪ್ರವೀಣ್​ ಶ್ರಿಯಾನ್​ ಛಾಯಾಗ್ರಹಣ ಮಾಡಲಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 10:57 am, Wed, 5 October 22

Follow Us
ಇಂದು ಕೇತುಗ್ರಸ್ತ ಚಂದ್ರಗ್ರಹಣ ಏನೇನು ಮಾಡಬೇಕು ಗೊತ್ತಾ?
ಇಂದು ಕೇತುಗ್ರಸ್ತ ಚಂದ್ರಗ್ರಹಣ ಏನೇನು ಮಾಡಬೇಕು ಗೊತ್ತಾ?
ಅವಳಿ ಮಕ್ಕಳನ್ನ ಕೊಂದು ತಾಯಿ ಆತ್ಮಹತ್ಯೆಗೆ ಯತ್ನಿಸಿದ್ಯಾಕೆ?
ಅವಳಿ ಮಕ್ಕಳನ್ನ ಕೊಂದು ತಾಯಿ ಆತ್ಮಹತ್ಯೆಗೆ ಯತ್ನಿಸಿದ್ಯಾಕೆ?
ಸಚಿವರ ಬರ್ತ್​​ಡೇ: ಸರ್ಕಾರಿ ಶಾಲೆ ಮಕ್ಕಳಿಗೆ, ಪೋಷಕರಿಗೆ ವಿಮಾನಯಾನ ಭಾಗ್ಯ
ಸಚಿವರ ಬರ್ತ್​​ಡೇ: ಸರ್ಕಾರಿ ಶಾಲೆ ಮಕ್ಕಳಿಗೆ, ಪೋಷಕರಿಗೆ ವಿಮಾನಯಾನ ಭಾಗ್ಯ
ಬಹ್ರೇನ್​​ನ ಗಗನಚುಂಬಿ ಕಟ್ಟಡಗಳ ಮೇಲೆ ಇರಾನ್ ದಾಳಿ
ಬಹ್ರೇನ್​​ನ ಗಗನಚುಂಬಿ ಕಟ್ಟಡಗಳ ಮೇಲೆ ಇರಾನ್ ದಾಳಿ
ಸಚಿವ ಮಂಕಾಳು ವೈದ್ಯ ಮಾತಿಗೆ ಸಿಟ್ಟಾಗಿ ಸಭೆಯಿಂದ ಹೊರನಡೆದ ಸತೀಶ್ ಸೈಲ್
ಸಚಿವ ಮಂಕಾಳು ವೈದ್ಯ ಮಾತಿಗೆ ಸಿಟ್ಟಾಗಿ ಸಭೆಯಿಂದ ಹೊರನಡೆದ ಸತೀಶ್ ಸೈಲ್
ಮಿಸ್ ಆಗಿ ಅಮೆರಿಕದ 3 ಫೈಟರ್​​ ಜೆಟ್​​ಗಳನ್ನು ಹೊಡೆದುರುಳಿಸಿದ ಕುವೈತ್​​
ಮಿಸ್ ಆಗಿ ಅಮೆರಿಕದ 3 ಫೈಟರ್​​ ಜೆಟ್​​ಗಳನ್ನು ಹೊಡೆದುರುಳಿಸಿದ ಕುವೈತ್​​
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾ ಬೆಂಬಲಕ್ಕೆ ನಿಂತ ಭಕ್ತ ಸಮೂಹ
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾ ಬೆಂಬಲಕ್ಕೆ ನಿಂತ ಭಕ್ತ ಸಮೂಹ
ಎಲ್ಲಾ ಸರ್ಕಾರದಲ್ಲೂ ಫೋನ್ ಟ್ಯಾಪಿಂಗ್ ಇತ್ತು, ಈಗಲೂ ಇದೆ: HDK ಸ್ಫೋಟಕ ಮಾತು
ಎಲ್ಲಾ ಸರ್ಕಾರದಲ್ಲೂ ಫೋನ್ ಟ್ಯಾಪಿಂಗ್ ಇತ್ತು, ಈಗಲೂ ಇದೆ: HDK ಸ್ಫೋಟಕ ಮಾತು
ಸ್ವಾಮಿ ವಿವೇಕಾನಂದರ ಕೆನಡಾ ಭೇಟಿಯನ್ನು ಉಲ್ಲೇಖಿಸಿದ ಪ್ರಧಾನಿ ಕಾರ್ನಿ
ಸ್ವಾಮಿ ವಿವೇಕಾನಂದರ ಕೆನಡಾ ಭೇಟಿಯನ್ನು ಉಲ್ಲೇಖಿಸಿದ ಪ್ರಧಾನಿ ಕಾರ್ನಿ
Lunar Eclipse 2026: ಚಂದ್ರ ಗ್ರಹಣ ಯಾರಿಗೆ ಶುಭ ಸುದ್ದಿ ತರುತ್ತೆ?
Lunar Eclipse 2026: ಚಂದ್ರ ಗ್ರಹಣ ಯಾರಿಗೆ ಶುಭ ಸುದ್ದಿ ತರುತ್ತೆ?