AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Ramya: ಇನ್​ಸ್ಟಾಗ್ರಾಮ್​, ಟ್ವಿಟರ್​ನಲ್ಲಿ ಅಭಿಮಾನಿಗಳಿಗೆ ಸಡನ್​ ಶಾಕ್​ ನೀಡಿದ ರಮ್ಯಾ! ಕಾರಣ ಏನು?

Divya Spandana: ತಮ್ಮ ಈ ನಿರ್ಧಾರಕ್ಕೆ ಕಾರಣ ಏನು ಎಂಬುದನ್ನು ರಮ್ಯಾ ತಿಳಿಸಿಲ್ಲ. ತಾಂತ್ರಿಕ ಅಡೆಚಣೆಯಿಂದ ಈ ರೀತಿ ಆಗಿರಬಹುದಾ ಎಂಬ ಅನುಮಾನ ಕೂಡ ಮೂಡಿದೆ.

Ramya: ಇನ್​ಸ್ಟಾಗ್ರಾಮ್​, ಟ್ವಿಟರ್​ನಲ್ಲಿ ಅಭಿಮಾನಿಗಳಿಗೆ ಸಡನ್​ ಶಾಕ್​ ನೀಡಿದ ರಮ್ಯಾ! ಕಾರಣ ಏನು?
ರಮ್ಯಾ ದಿವ್ಯ ಸ್ಪಂದನಾ
ಮದನ್​ ಕುಮಾರ್​
|

Updated on:Mar 18, 2021 | 12:19 PM

Share

ಚಿತ್ರರಂಗದಿಂದ ನಟಿ ರಮ್ಯಾ ದೂರ ಆಗಿರಬಹುದು. ಆದರೆ ಅವರ ಚಾರ್ಮ್​ ಇನ್ನೂ ಕಡಿಮೆ ಆಗಿಲ್ಲ. ಲಕ್ಷಾಂತರ ಅಭಿಮಾನಿಗಳ ಪಾಲಿಗೆ ಈಗಲೂ ಅವರೇ ಹಾಟ್​ ಫೇವರಿಟ್​. ಆದರೆ ಅವರು ಏಕಾಏಕಿ ಫ್ಯಾನ್ಸ್​ಗೆಲ್ಲ ಶಾಕ್​ ನೀಡಿದ್ದಾರೆ. ಎಲ್ಲರಿಂದಲೂ ದೂರವಾಗಲು ಪ್ರಯತ್ನಿಸಿದ್ದಾರೆ! ಅಷ್ಟಕ್ಕೂ ರಮ್ಯಾಗೆ ಏನಾಯ್ತು ಎಂದು ಎಲ್ಲರೂ ತಲೆ ಕೆರೆದುಕೊಳ್ಳುತ್ತಿದ್ದಾರೆ.

2016ರಲ್ಲಿ ಬಂದ ‘ನಾಗರಹಾವು’ ಸಿನಿಮಾ ಬಳಿಕ ರಮ್ಯಾ ಬೇರೆ ಯಾವುದೇ ಚಿತ್ರವನ್ನೂ ಒಪ್ಪಿಕೊಂಡಿಲ್ಲ. ರಾಜಕೀಯದಲ್ಲಿಯೂ ಅವರಿಗೆ ಕೊಂಚ ಹಿನ್ನಡೆ ಆಯಿತು. ಆದರೆ ಸೋಶಿಯಲ್​ ಮೀಡಿಯಾದಲ್ಲಿ ಅವರು ಇತ್ತೀಚೆಗೆ ಸಕ್ರಿಯರಾಗಿದ್ದರು. ಹಲವು ವಿಚಾರಗಳ ಬಗ್ಗೆ ತಮ್ಮ ಅನಿಸಿಕೆ ಅಭಿಪ್ರಾಯಗಳನ್ನು ಅವರ ಹಂಚಿಕೊಳ್ಳುತ್ತಿದ್ದರು. ಆದರೆ ಅವರು ಈಗ ಏಕಾಏಕಿ ಇನ್​ಸ್ಟಾಗ್ರಾಮ್​ ಮತ್ತು ಟ್ವಿಟರ್​ ಖಾತೆಗಳನ್ನು ನಿಷ್ಕ್ರಿಯಗೊಳಿಸಿದ್ದಾರೆ!

ರಾಜಕೀಯ ಮಾತ್ರವಲ್ಲದೆ ಅನೇಕ ವಿಚಾರಗಳನ್ನು ರಮ್ಯಾ ಹಂಚಿಕೊಳ್ಳುತ್ತಿದ್ದರು. ಪ್ರಾಣಿಗಳ ಕುರಿತಂತೆ ಕೆಲವು ವಿಡಿಯೋಗಳನ್ನು ಶೇರ್​ ಮಾಡುತ್ತಿದ್ದರು. ದಿಶಾ ರವಿ ಪ್ರಕರಣದ ಬಗ್ಗೆಯೂ ದೀರ್ಘವಾದ ಪೋಸ್ಟ್​ಗಳನ್ನು ಅವರು ಮಾಡಿದ್ದರು. ಆದರೆ ಈಗ ಇದ್ದಕ್ಕಿದ್ದಂತೆಯೇ ಅವರು ತಮ್ಮ ಇನ್​ಸ್ಟಾಗ್ರಾಮ್​ ಮತ್ತು ಟ್ವಿಟರ್​ ಖಾತೆಗಳನ್ನು ನಿಷ್ಕ್ರಿಯಗೊಳಿಸಿರುವುದು ಅಭಿಮಾನಿಗಳಲ್ಲಿ ಅಚ್ಚರಿ ಮೂಡಿಸಿದೆ. ಆದರೆ ಅವರ ಫೇಸ್​ಬುಕ್​ ಖಾತೆ ಇನ್ನೂ ಕಾರ್ಯ ನಿರ್ವಹಿಸುತ್ತಿದೆ.

ತಮ್ಮ ಈ ನಿರ್ಧಾರಕ್ಕೆ ಕಾರಣ ಏನು ಎಂಬುದನ್ನು ಅವರು ತಿಳಿಸಿಲ್ಲ. ತಾಂತ್ರಿಕ ಅಡೆಚಣೆಯಿಂದ ಈ ರೀತಿ ಆಗಿರಬಹುದಾ ಎಂಬ ಅನುಮಾನ ಕೂಡ ಮೂಡಿದೆ. ಅಂದಹಾಗೆ, ರಮ್ಯಾ ಈ ರೀತಿ ಸೋಶಿಯಲ್​ ಮೀಡಿಯಾದಿಂದ ಅಂತರ ಕಾಯ್ದುಕೊಳ್ಳುತ್ತಿರುವುದು ಇದೇ ಮೊದಲೇನಲ್ಲ. ಈ ಹಿಂದೆ 2019ರ ಜೂನ್​ನಿಂದ 2020 ಆಗಸ್ಟ್​ವರೆಗೆ ಸೋಶಿಯಲ್​ ಮೀಡಿಯಾದಲ್ಲಿ ರಮ್ಯಾ ಕಣ್ಮರೆ ಆಗಿದ್ದರು. ಒಂದು ವರ್ಷದ ಆನ್​ಲೈನ್​ ಅಜ್ಞಾತವಾಸ ಮುಗಿಸಿ ಅವರು ಮತ್ತೆ ಆಕ್ಟೀವ್​ ಆಗಿದ್ದರು. ಈಗ ಮತ್ತೆ ಅವರು ಇನ್​ಸ್ಟಾಗ್ರಾಮ್​ ಮತ್ತು ಟ್ವಿಟರ್​ ಖಾತೆಗಳನ್ನು ನಿಷ್ಕ್ರಿಯಗೊಳಿಸಿರುವುದು ಅಭಿಮಾನಿಗಳಿಗೆ ಅಚ್ಚರಿ ಮೂಡಿಸಿದೆ.

ಇದನ್ನೂ ಓದಿ: ರಾಜಕೀಯ-ನಟನೆಯಿಂದ ದೂರ ಉಳಿದಿರುವ ರಮ್ಯಾ ಈಗೇನು ಮಾಡ್ತಿದಾರೆ? ಇಲ್ಲಿದೆ ನೋಡಿ ವಿಡಿಯೋ

ಸಫಾರಿ ಹೋಗೋರ ಮೇಲೆ ಸಿಟ್ಟಾದ ನಟಿ ರಮ್ಯಾ..! ಮಾನವರೇ ನೀವು ಕಾಡಿಗೆ ಹೋಗಬೇಡಿ ಎಂದ ಮೋಹಕತಾರೆ

Published On - 12:18 pm, Thu, 18 March 21

ನೀವೆಲ್ಲರೂ ನನ್ನ ರಕ್ಷಣೆಗೆ ಬರಬೇಕು: ಸದನದಲ್ಲಿ ಪರಿಪರಿಯಾಗಿ ಬೇಡಿಕೊಂಡ ಶಾಸಕ
ನೀವೆಲ್ಲರೂ ನನ್ನ ರಕ್ಷಣೆಗೆ ಬರಬೇಕು: ಸದನದಲ್ಲಿ ಪರಿಪರಿಯಾಗಿ ಬೇಡಿಕೊಂಡ ಶಾಸಕ
ಗರ್ಭಿಣಿ ಸೊಸೆಯನ್ನು ಮಾವ ಹತ್ಯೆ ಮಾಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ SP
ಗರ್ಭಿಣಿ ಸೊಸೆಯನ್ನು ಮಾವ ಹತ್ಯೆ ಮಾಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ SP
ಧಮ್ಕಿ ಕೇಸ್ ಆರೋಪಿ ರಾಜೀವ್ ಗೌಡ ಪತ್ನಿ ವಿಧಾನಸೌಧದಲ್ಲಿ ಪ್ರತ್ಯಕ್ಷ
ಧಮ್ಕಿ ಕೇಸ್ ಆರೋಪಿ ರಾಜೀವ್ ಗೌಡ ಪತ್ನಿ ವಿಧಾನಸೌಧದಲ್ಲಿ ಪ್ರತ್ಯಕ್ಷ
ಸದನದಲ್ಲಿ ಪೆನ್​ಡ್ರೈವ್ ತೋರಿಸಿದ ಆರ್​ ಅಶೋಕ್: ಯಾವ ಮ್ಯಾಟರ್ ಗೊತ್ತಾ?
ಸದನದಲ್ಲಿ ಪೆನ್​ಡ್ರೈವ್ ತೋರಿಸಿದ ಆರ್​ ಅಶೋಕ್: ಯಾವ ಮ್ಯಾಟರ್ ಗೊತ್ತಾ?
ನಿವೃತ್ತಿ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಕೆಎಲ್ ರಾಹುಲ್
ನಿವೃತ್ತಿ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಕೆಎಲ್ ರಾಹುಲ್
‘ದರ್ಶನ್ ‘ಲ್ಯಾಂಡ್​ಲಾರ್ಡ್’ ನೋಡಿದ್ದರೆ ಏನೆನ್ನುತ್ತಿದ್ದರು?’
‘ದರ್ಶನ್ ‘ಲ್ಯಾಂಡ್​ಲಾರ್ಡ್’ ನೋಡಿದ್ದರೆ ಏನೆನ್ನುತ್ತಿದ್ದರು?’
ಅಜಿತ್ ಪವಾರ್ ಅಂತ್ಯಕ್ರಿಯೆಗೆ ಸೇರಿದ್ದ ಜನಸಾಗರ ನೋಡಿ!
ಅಜಿತ್ ಪವಾರ್ ಅಂತ್ಯಕ್ರಿಯೆಗೆ ಸೇರಿದ್ದ ಜನಸಾಗರ ನೋಡಿ!
ಈ ವರ್ಷ ನಟಿ ರಚಿತಾ ರಾಮ್ ಮದುವೆ: ವಿಷಯ ಖಚಿತಪಡಿಸಿದ ಡಿಂಪಲ್ ಕ್ವೀನ್
ಈ ವರ್ಷ ನಟಿ ರಚಿತಾ ರಾಮ್ ಮದುವೆ: ವಿಷಯ ಖಚಿತಪಡಿಸಿದ ಡಿಂಪಲ್ ಕ್ವೀನ್
ಸಚಿವ ಸ್ಥಾನಕ್ಕೆ ರಾಜೀನಾಮೆ ಸುದ್ದಿ: ಈ ಬಗ್ಗೆ ಕೆಜೆ ಜಾರ್ಜ್ ಹೇಳಿದ್ದೇನು?
ಸಚಿವ ಸ್ಥಾನಕ್ಕೆ ರಾಜೀನಾಮೆ ಸುದ್ದಿ: ಈ ಬಗ್ಗೆ ಕೆಜೆ ಜಾರ್ಜ್ ಹೇಳಿದ್ದೇನು?
ಅಜಿತ್ ಪವಾರ್ ಅಂತ್ಯಕ್ರಿಯೆ; ಮಕ್ಕಳಿಂದ ಅಪ್ಪನ ಚಿತೆಗೆ ಅಗ್ನಿಸ್ಪರ್ಶ
ಅಜಿತ್ ಪವಾರ್ ಅಂತ್ಯಕ್ರಿಯೆ; ಮಕ್ಕಳಿಂದ ಅಪ್ಪನ ಚಿತೆಗೆ ಅಗ್ನಿಸ್ಪರ್ಶ