Ramya: ಇನ್​ಸ್ಟಾಗ್ರಾಮ್​, ಟ್ವಿಟರ್​ನಲ್ಲಿ ಅಭಿಮಾನಿಗಳಿಗೆ ಸಡನ್​ ಶಾಕ್​ ನೀಡಿದ ರಮ್ಯಾ! ಕಾರಣ ಏನು?

Divya Spandana: ತಮ್ಮ ಈ ನಿರ್ಧಾರಕ್ಕೆ ಕಾರಣ ಏನು ಎಂಬುದನ್ನು ರಮ್ಯಾ ತಿಳಿಸಿಲ್ಲ. ತಾಂತ್ರಿಕ ಅಡೆಚಣೆಯಿಂದ ಈ ರೀತಿ ಆಗಿರಬಹುದಾ ಎಂಬ ಅನುಮಾನ ಕೂಡ ಮೂಡಿದೆ.

Ramya: ಇನ್​ಸ್ಟಾಗ್ರಾಮ್​, ಟ್ವಿಟರ್​ನಲ್ಲಿ ಅಭಿಮಾನಿಗಳಿಗೆ ಸಡನ್​ ಶಾಕ್​ ನೀಡಿದ ರಮ್ಯಾ! ಕಾರಣ ಏನು?
ರಮ್ಯಾ ದಿವ್ಯ ಸ್ಪಂದನಾ
Follow us
|

Updated on:Mar 18, 2021 | 12:19 PM

ಚಿತ್ರರಂಗದಿಂದ ನಟಿ ರಮ್ಯಾ ದೂರ ಆಗಿರಬಹುದು. ಆದರೆ ಅವರ ಚಾರ್ಮ್​ ಇನ್ನೂ ಕಡಿಮೆ ಆಗಿಲ್ಲ. ಲಕ್ಷಾಂತರ ಅಭಿಮಾನಿಗಳ ಪಾಲಿಗೆ ಈಗಲೂ ಅವರೇ ಹಾಟ್​ ಫೇವರಿಟ್​. ಆದರೆ ಅವರು ಏಕಾಏಕಿ ಫ್ಯಾನ್ಸ್​ಗೆಲ್ಲ ಶಾಕ್​ ನೀಡಿದ್ದಾರೆ. ಎಲ್ಲರಿಂದಲೂ ದೂರವಾಗಲು ಪ್ರಯತ್ನಿಸಿದ್ದಾರೆ! ಅಷ್ಟಕ್ಕೂ ರಮ್ಯಾಗೆ ಏನಾಯ್ತು ಎಂದು ಎಲ್ಲರೂ ತಲೆ ಕೆರೆದುಕೊಳ್ಳುತ್ತಿದ್ದಾರೆ.

2016ರಲ್ಲಿ ಬಂದ ‘ನಾಗರಹಾವು’ ಸಿನಿಮಾ ಬಳಿಕ ರಮ್ಯಾ ಬೇರೆ ಯಾವುದೇ ಚಿತ್ರವನ್ನೂ ಒಪ್ಪಿಕೊಂಡಿಲ್ಲ. ರಾಜಕೀಯದಲ್ಲಿಯೂ ಅವರಿಗೆ ಕೊಂಚ ಹಿನ್ನಡೆ ಆಯಿತು. ಆದರೆ ಸೋಶಿಯಲ್​ ಮೀಡಿಯಾದಲ್ಲಿ ಅವರು ಇತ್ತೀಚೆಗೆ ಸಕ್ರಿಯರಾಗಿದ್ದರು. ಹಲವು ವಿಚಾರಗಳ ಬಗ್ಗೆ ತಮ್ಮ ಅನಿಸಿಕೆ ಅಭಿಪ್ರಾಯಗಳನ್ನು ಅವರ ಹಂಚಿಕೊಳ್ಳುತ್ತಿದ್ದರು. ಆದರೆ ಅವರು ಈಗ ಏಕಾಏಕಿ ಇನ್​ಸ್ಟಾಗ್ರಾಮ್​ ಮತ್ತು ಟ್ವಿಟರ್​ ಖಾತೆಗಳನ್ನು ನಿಷ್ಕ್ರಿಯಗೊಳಿಸಿದ್ದಾರೆ!

ರಾಜಕೀಯ ಮಾತ್ರವಲ್ಲದೆ ಅನೇಕ ವಿಚಾರಗಳನ್ನು ರಮ್ಯಾ ಹಂಚಿಕೊಳ್ಳುತ್ತಿದ್ದರು. ಪ್ರಾಣಿಗಳ ಕುರಿತಂತೆ ಕೆಲವು ವಿಡಿಯೋಗಳನ್ನು ಶೇರ್​ ಮಾಡುತ್ತಿದ್ದರು. ದಿಶಾ ರವಿ ಪ್ರಕರಣದ ಬಗ್ಗೆಯೂ ದೀರ್ಘವಾದ ಪೋಸ್ಟ್​ಗಳನ್ನು ಅವರು ಮಾಡಿದ್ದರು. ಆದರೆ ಈಗ ಇದ್ದಕ್ಕಿದ್ದಂತೆಯೇ ಅವರು ತಮ್ಮ ಇನ್​ಸ್ಟಾಗ್ರಾಮ್​ ಮತ್ತು ಟ್ವಿಟರ್​ ಖಾತೆಗಳನ್ನು ನಿಷ್ಕ್ರಿಯಗೊಳಿಸಿರುವುದು ಅಭಿಮಾನಿಗಳಲ್ಲಿ ಅಚ್ಚರಿ ಮೂಡಿಸಿದೆ. ಆದರೆ ಅವರ ಫೇಸ್​ಬುಕ್​ ಖಾತೆ ಇನ್ನೂ ಕಾರ್ಯ ನಿರ್ವಹಿಸುತ್ತಿದೆ.

ತಮ್ಮ ಈ ನಿರ್ಧಾರಕ್ಕೆ ಕಾರಣ ಏನು ಎಂಬುದನ್ನು ಅವರು ತಿಳಿಸಿಲ್ಲ. ತಾಂತ್ರಿಕ ಅಡೆಚಣೆಯಿಂದ ಈ ರೀತಿ ಆಗಿರಬಹುದಾ ಎಂಬ ಅನುಮಾನ ಕೂಡ ಮೂಡಿದೆ. ಅಂದಹಾಗೆ, ರಮ್ಯಾ ಈ ರೀತಿ ಸೋಶಿಯಲ್​ ಮೀಡಿಯಾದಿಂದ ಅಂತರ ಕಾಯ್ದುಕೊಳ್ಳುತ್ತಿರುವುದು ಇದೇ ಮೊದಲೇನಲ್ಲ. ಈ ಹಿಂದೆ 2019ರ ಜೂನ್​ನಿಂದ 2020 ಆಗಸ್ಟ್​ವರೆಗೆ ಸೋಶಿಯಲ್​ ಮೀಡಿಯಾದಲ್ಲಿ ರಮ್ಯಾ ಕಣ್ಮರೆ ಆಗಿದ್ದರು. ಒಂದು ವರ್ಷದ ಆನ್​ಲೈನ್​ ಅಜ್ಞಾತವಾಸ ಮುಗಿಸಿ ಅವರು ಮತ್ತೆ ಆಕ್ಟೀವ್​ ಆಗಿದ್ದರು. ಈಗ ಮತ್ತೆ ಅವರು ಇನ್​ಸ್ಟಾಗ್ರಾಮ್​ ಮತ್ತು ಟ್ವಿಟರ್​ ಖಾತೆಗಳನ್ನು ನಿಷ್ಕ್ರಿಯಗೊಳಿಸಿರುವುದು ಅಭಿಮಾನಿಗಳಿಗೆ ಅಚ್ಚರಿ ಮೂಡಿಸಿದೆ.

ಇದನ್ನೂ ಓದಿ: ರಾಜಕೀಯ-ನಟನೆಯಿಂದ ದೂರ ಉಳಿದಿರುವ ರಮ್ಯಾ ಈಗೇನು ಮಾಡ್ತಿದಾರೆ? ಇಲ್ಲಿದೆ ನೋಡಿ ವಿಡಿಯೋ

ಸಫಾರಿ ಹೋಗೋರ ಮೇಲೆ ಸಿಟ್ಟಾದ ನಟಿ ರಮ್ಯಾ..! ಮಾನವರೇ ನೀವು ಕಾಡಿಗೆ ಹೋಗಬೇಡಿ ಎಂದ ಮೋಹಕತಾರೆ

Published On - 12:18 pm, Thu, 18 March 21

ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ