AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Ramya: ಇನ್​ಸ್ಟಾಗ್ರಾಮ್​, ಟ್ವಿಟರ್​ನಲ್ಲಿ ಅಭಿಮಾನಿಗಳಿಗೆ ಸಡನ್​ ಶಾಕ್​ ನೀಡಿದ ರಮ್ಯಾ! ಕಾರಣ ಏನು?

Divya Spandana: ತಮ್ಮ ಈ ನಿರ್ಧಾರಕ್ಕೆ ಕಾರಣ ಏನು ಎಂಬುದನ್ನು ರಮ್ಯಾ ತಿಳಿಸಿಲ್ಲ. ತಾಂತ್ರಿಕ ಅಡೆಚಣೆಯಿಂದ ಈ ರೀತಿ ಆಗಿರಬಹುದಾ ಎಂಬ ಅನುಮಾನ ಕೂಡ ಮೂಡಿದೆ.

Ramya: ಇನ್​ಸ್ಟಾಗ್ರಾಮ್​, ಟ್ವಿಟರ್​ನಲ್ಲಿ ಅಭಿಮಾನಿಗಳಿಗೆ ಸಡನ್​ ಶಾಕ್​ ನೀಡಿದ ರಮ್ಯಾ! ಕಾರಣ ಏನು?
ರಮ್ಯಾ ದಿವ್ಯ ಸ್ಪಂದನಾ
Follow us
ಮದನ್​ ಕುಮಾರ್​
|

Updated on:Mar 18, 2021 | 12:19 PM

ಚಿತ್ರರಂಗದಿಂದ ನಟಿ ರಮ್ಯಾ ದೂರ ಆಗಿರಬಹುದು. ಆದರೆ ಅವರ ಚಾರ್ಮ್​ ಇನ್ನೂ ಕಡಿಮೆ ಆಗಿಲ್ಲ. ಲಕ್ಷಾಂತರ ಅಭಿಮಾನಿಗಳ ಪಾಲಿಗೆ ಈಗಲೂ ಅವರೇ ಹಾಟ್​ ಫೇವರಿಟ್​. ಆದರೆ ಅವರು ಏಕಾಏಕಿ ಫ್ಯಾನ್ಸ್​ಗೆಲ್ಲ ಶಾಕ್​ ನೀಡಿದ್ದಾರೆ. ಎಲ್ಲರಿಂದಲೂ ದೂರವಾಗಲು ಪ್ರಯತ್ನಿಸಿದ್ದಾರೆ! ಅಷ್ಟಕ್ಕೂ ರಮ್ಯಾಗೆ ಏನಾಯ್ತು ಎಂದು ಎಲ್ಲರೂ ತಲೆ ಕೆರೆದುಕೊಳ್ಳುತ್ತಿದ್ದಾರೆ.

2016ರಲ್ಲಿ ಬಂದ ‘ನಾಗರಹಾವು’ ಸಿನಿಮಾ ಬಳಿಕ ರಮ್ಯಾ ಬೇರೆ ಯಾವುದೇ ಚಿತ್ರವನ್ನೂ ಒಪ್ಪಿಕೊಂಡಿಲ್ಲ. ರಾಜಕೀಯದಲ್ಲಿಯೂ ಅವರಿಗೆ ಕೊಂಚ ಹಿನ್ನಡೆ ಆಯಿತು. ಆದರೆ ಸೋಶಿಯಲ್​ ಮೀಡಿಯಾದಲ್ಲಿ ಅವರು ಇತ್ತೀಚೆಗೆ ಸಕ್ರಿಯರಾಗಿದ್ದರು. ಹಲವು ವಿಚಾರಗಳ ಬಗ್ಗೆ ತಮ್ಮ ಅನಿಸಿಕೆ ಅಭಿಪ್ರಾಯಗಳನ್ನು ಅವರ ಹಂಚಿಕೊಳ್ಳುತ್ತಿದ್ದರು. ಆದರೆ ಅವರು ಈಗ ಏಕಾಏಕಿ ಇನ್​ಸ್ಟಾಗ್ರಾಮ್​ ಮತ್ತು ಟ್ವಿಟರ್​ ಖಾತೆಗಳನ್ನು ನಿಷ್ಕ್ರಿಯಗೊಳಿಸಿದ್ದಾರೆ!

ರಾಜಕೀಯ ಮಾತ್ರವಲ್ಲದೆ ಅನೇಕ ವಿಚಾರಗಳನ್ನು ರಮ್ಯಾ ಹಂಚಿಕೊಳ್ಳುತ್ತಿದ್ದರು. ಪ್ರಾಣಿಗಳ ಕುರಿತಂತೆ ಕೆಲವು ವಿಡಿಯೋಗಳನ್ನು ಶೇರ್​ ಮಾಡುತ್ತಿದ್ದರು. ದಿಶಾ ರವಿ ಪ್ರಕರಣದ ಬಗ್ಗೆಯೂ ದೀರ್ಘವಾದ ಪೋಸ್ಟ್​ಗಳನ್ನು ಅವರು ಮಾಡಿದ್ದರು. ಆದರೆ ಈಗ ಇದ್ದಕ್ಕಿದ್ದಂತೆಯೇ ಅವರು ತಮ್ಮ ಇನ್​ಸ್ಟಾಗ್ರಾಮ್​ ಮತ್ತು ಟ್ವಿಟರ್​ ಖಾತೆಗಳನ್ನು ನಿಷ್ಕ್ರಿಯಗೊಳಿಸಿರುವುದು ಅಭಿಮಾನಿಗಳಲ್ಲಿ ಅಚ್ಚರಿ ಮೂಡಿಸಿದೆ. ಆದರೆ ಅವರ ಫೇಸ್​ಬುಕ್​ ಖಾತೆ ಇನ್ನೂ ಕಾರ್ಯ ನಿರ್ವಹಿಸುತ್ತಿದೆ.

ತಮ್ಮ ಈ ನಿರ್ಧಾರಕ್ಕೆ ಕಾರಣ ಏನು ಎಂಬುದನ್ನು ಅವರು ತಿಳಿಸಿಲ್ಲ. ತಾಂತ್ರಿಕ ಅಡೆಚಣೆಯಿಂದ ಈ ರೀತಿ ಆಗಿರಬಹುದಾ ಎಂಬ ಅನುಮಾನ ಕೂಡ ಮೂಡಿದೆ. ಅಂದಹಾಗೆ, ರಮ್ಯಾ ಈ ರೀತಿ ಸೋಶಿಯಲ್​ ಮೀಡಿಯಾದಿಂದ ಅಂತರ ಕಾಯ್ದುಕೊಳ್ಳುತ್ತಿರುವುದು ಇದೇ ಮೊದಲೇನಲ್ಲ. ಈ ಹಿಂದೆ 2019ರ ಜೂನ್​ನಿಂದ 2020 ಆಗಸ್ಟ್​ವರೆಗೆ ಸೋಶಿಯಲ್​ ಮೀಡಿಯಾದಲ್ಲಿ ರಮ್ಯಾ ಕಣ್ಮರೆ ಆಗಿದ್ದರು. ಒಂದು ವರ್ಷದ ಆನ್​ಲೈನ್​ ಅಜ್ಞಾತವಾಸ ಮುಗಿಸಿ ಅವರು ಮತ್ತೆ ಆಕ್ಟೀವ್​ ಆಗಿದ್ದರು. ಈಗ ಮತ್ತೆ ಅವರು ಇನ್​ಸ್ಟಾಗ್ರಾಮ್​ ಮತ್ತು ಟ್ವಿಟರ್​ ಖಾತೆಗಳನ್ನು ನಿಷ್ಕ್ರಿಯಗೊಳಿಸಿರುವುದು ಅಭಿಮಾನಿಗಳಿಗೆ ಅಚ್ಚರಿ ಮೂಡಿಸಿದೆ.

ಇದನ್ನೂ ಓದಿ: ರಾಜಕೀಯ-ನಟನೆಯಿಂದ ದೂರ ಉಳಿದಿರುವ ರಮ್ಯಾ ಈಗೇನು ಮಾಡ್ತಿದಾರೆ? ಇಲ್ಲಿದೆ ನೋಡಿ ವಿಡಿಯೋ

ಸಫಾರಿ ಹೋಗೋರ ಮೇಲೆ ಸಿಟ್ಟಾದ ನಟಿ ರಮ್ಯಾ..! ಮಾನವರೇ ನೀವು ಕಾಡಿಗೆ ಹೋಗಬೇಡಿ ಎಂದ ಮೋಹಕತಾರೆ

Published On - 12:18 pm, Thu, 18 March 21

ಲೆಫ್ಟಿನೆಂಟ್ ವಿನಯ್ ಅಸ್ತಿ ವಿಸರ್ಜನೆ ಮಾಡಿ ಬಿಕ್ಕಿ ಬಿಕ್ಕಿ ಅತ್ತ ತಂದೆ
ಲೆಫ್ಟಿನೆಂಟ್ ವಿನಯ್ ಅಸ್ತಿ ವಿಸರ್ಜನೆ ಮಾಡಿ ಬಿಕ್ಕಿ ಬಿಕ್ಕಿ ಅತ್ತ ತಂದೆ
ಸಹಾಯ ಮಾಡಿ; ಸರ್ಕಾರಕ್ಕೆ ಪಹಲ್ಗಾಮ್ ದಾಳಿಯಲ್ಲಿ ಮಡಿದ ಸಂತೋಷ್ ಪತ್ನಿ ಮನವಿ
ಸಹಾಯ ಮಾಡಿ; ಸರ್ಕಾರಕ್ಕೆ ಪಹಲ್ಗಾಮ್ ದಾಳಿಯಲ್ಲಿ ಮಡಿದ ಸಂತೋಷ್ ಪತ್ನಿ ಮನವಿ
ಉಗ್ರರ ದಾಳಿಗೆ ಬಲಿಯಾದ ಮಂಜುನಾಥ್ ಪಹಲ್ಗಾಮ್​ನಲ್ಲಿ ಕಳೆದ ಕೊನೆಯ ಕ್ಷಣಗಳು
ಉಗ್ರರ ದಾಳಿಗೆ ಬಲಿಯಾದ ಮಂಜುನಾಥ್ ಪಹಲ್ಗಾಮ್​ನಲ್ಲಿ ಕಳೆದ ಕೊನೆಯ ಕ್ಷಣಗಳು
ಕೆಆರ್​ಎಸ್ ಕ್ರೆಸ್ಟ್​ ಗೇಟ್ ಬದಲಿಸಬೇಕಿದೆಯೇ? ರಿಪೋರ್ಟ್ ಕೇಳಿದ ಶಿವಕುಮಾರ್
ಕೆಆರ್​ಎಸ್ ಕ್ರೆಸ್ಟ್​ ಗೇಟ್ ಬದಲಿಸಬೇಕಿದೆಯೇ? ರಿಪೋರ್ಟ್ ಕೇಳಿದ ಶಿವಕುಮಾರ್
ಕಾಂಗ್ರೆಸ್ ನಾಯಕರಿಗೆ ಮಾನವೀಯತೆ ಮತ್ತು ರಾಷ್ಟ್ರವಾದ ಬೇಕಾಗಿಲ್ಲ: ಚಲವಾದಿ
ಕಾಂಗ್ರೆಸ್ ನಾಯಕರಿಗೆ ಮಾನವೀಯತೆ ಮತ್ತು ರಾಷ್ಟ್ರವಾದ ಬೇಕಾಗಿಲ್ಲ: ಚಲವಾದಿ
ಪಹಲ್ಗಾಮ್ ಉಗ್ರರ ದಾಳಿಯನ್ನು ಪ್ರತಿಯೊಬ್ಬ ಕಾಶ್ಮೀರಿ ಖಂಡಿಸಿದ್ದಾನೆ: ರಾಹುಲ್
ಪಹಲ್ಗಾಮ್ ಉಗ್ರರ ದಾಳಿಯನ್ನು ಪ್ರತಿಯೊಬ್ಬ ಕಾಶ್ಮೀರಿ ಖಂಡಿಸಿದ್ದಾನೆ: ರಾಹುಲ್
ಕಾಂಗ್ರೆಸ್ ಸರ್ಕಾರದ ಯೋಗ್ಯತೆ ಏನು ಅಂತ ನಮಗೆ ಗೊತ್ತು; ಅಶೋಕ
ಕಾಂಗ್ರೆಸ್ ಸರ್ಕಾರದ ಯೋಗ್ಯತೆ ಏನು ಅಂತ ನಮಗೆ ಗೊತ್ತು; ಅಶೋಕ
ಬಿಜೆಪಿ ಶಾಸಕರ ಅಮಾನತು ಅಸಂವಿಧಾನಿಕವಾದದ್ದು: ಅಶೋಕ
ಬಿಜೆಪಿ ಶಾಸಕರ ಅಮಾನತು ಅಸಂವಿಧಾನಿಕವಾದದ್ದು: ಅಶೋಕ
ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನಿಲುವು ಅಭಿನಂದನಾರ್ಹ: ಈಶ್ವರಪ್ಪ
ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನಿಲುವು ಅಭಿನಂದನಾರ್ಹ: ಈಶ್ವರಪ್ಪ
ಶಾಸಕ ಚನ್ನಬಸಪ್ಪ ಹೇಳಿಕೆಗೆ ನಾನು ಪ್ರತಿಕ್ರಿಯೆ ನೀಡಲಾಗದು: ಪರಮೇಶ್ವರ್
ಶಾಸಕ ಚನ್ನಬಸಪ್ಪ ಹೇಳಿಕೆಗೆ ನಾನು ಪ್ರತಿಕ್ರಿಯೆ ನೀಡಲಾಗದು: ಪರಮೇಶ್ವರ್