AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Actress Ramya: ರಮ್ಯಾಗೆ ಹೃದಯಾಘಾತ ಆಗಿದೆ ಎಂಬ ಸುದ್ದಿ ಸುಳ್ಳು; ಈ ಫೇಕ್​ ನ್ಯೂಸ್ ಹುಟ್ಟಿದ್ದು ಹೇಗೆ?

ರಮ್ಯಾ ಅವರು ಹಲವು ವರ್ಷಗಳಿಂದ ಚಿತ್ರರಂಗದಲ್ಲಿ ಆ್ಯಕ್ಟೀವ್ ಆಗಿದ್ದರು. ರಾಜಕೀಯಕ್ಕೆ ತೆರಳಿದ ಬಳಿಕ ಅವರು ಸಿನಿಮಾ ರಂಗದಿಂದ ದೂರವೇ ಉಳಿದುಕೊಂಡರು. ರಾಜಕೀಯವನ್ನೂ ತೊರೆದ ಬಳಿಕ ಅವರು ಯಾರ ಕೈಗೂ ಸಿಕ್ಕಿರಲಿಲ್ಲ. ಈಗ ಅವರು ಸೋಶಿಯಲ್ ಮೀಡಿಯಾ ಹಾಗೂ ಚಿತ್ರರಂಗಕ್ಕೆ ಮರಳಿದ್ದಾರೆ.

Actress Ramya: ರಮ್ಯಾಗೆ ಹೃದಯಾಘಾತ ಆಗಿದೆ ಎಂಬ ಸುದ್ದಿ ಸುಳ್ಳು; ಈ ಫೇಕ್​ ನ್ಯೂಸ್ ಹುಟ್ಟಿದ್ದು ಹೇಗೆ?
ರಮ್ಯಾ
ರಾಜೇಶ್ ದುಗ್ಗುಮನೆ
| Updated By: Digi Tech Desk|

Updated on:Sep 06, 2023 | 1:01 PM

Share

‘ನಟಿ ರಮ್ಯಾ ಹೃದಯಾಘಾತದಿಂದ ಮೃತಪಟ್ಟಿದ್ದಾರೆ’ ಎನ್ನುವ ಸುದ್ದಿ ಇಂದು (ಸೆಪ್ಟೆಂಬರ್ 6) ವೈರಲ್ ಆಯಿತು. ತಮಿಳು ಮಾಧ್ಯಮಗಳು ಸೋಶಿಯಲ್ ಮೀಡಿಯಾದಲ್ಲಿ ಈ ಬಗ್ಗೆ ವರದಿ ಮಾಡಿದ್ದವು. ಆದರೆ, ಇದು ಸುಳ್ಳು ಸುದ್ದಿ ಅನ್ನೋ ಬಗ್ಗೆ ಸ್ಪಷ್ಟನೆ ಸಿಕ್ಕಿದೆ. ‘ರಮ್ಯಾ ಆರೋಗ್ಯವಾಗಿದ್ದಾರೆ’ ಎಂದು ಅವರ ಆಪ್ತರು ಸ್ಪಷ್ಟಪಡಿಸಿದ್ದಾರೆ. ಈ ವಿಚಾರ ಕೇಳಿ ಅವರ ಅಭಿಮಾನಿಗಳು ಖುಷಿಪಟ್ಟಿದ್ದಾರೆ. ರಮ್ಯಾ (Ramya Divya Spandana) ಅವರು ಈ ಬಗ್ಗೆ ಇನ್ನಷ್ಟೇ ಸ್ಪಷ್ಟನೆ ನೀಡಬೇಕಿದೆ.

ರಮ್ಯಾ ಅವರು ಹಲವು ವರ್ಷಗಳಿಂದ ಚಿತ್ರರಂಗದಲ್ಲಿ ಆ್ಯಕ್ಟೀವ್ ಆಗಿದ್ದರು. ರಾಜಕೀಯಕ್ಕೆ ತೆರಳಿದ ಬಳಿಕ ಅವರು ಸಿನಿಮಾ ರಂಗದಿಂದ ದೂರವೇ ಉಳಿದುಕೊಂಡರು. ರಾಜಕೀಯವನ್ನೂ ತೊರೆದ ಬಳಿಕ ಅವರು ಯಾರ ಕೈಗೂ ಸಿಕ್ಕಿರಲಿಲ್ಲ. ಈಗ ಅವರು ಸೋಶಿಯಲ್ ಮೀಡಿಯಾ ಹಾಗೂ ಚಿತ್ರರಂಗಕ್ಕೆ ಮರಳಿದ್ದಾರೆ. ಈ ಸಂದರ್ಭದಲ್ಲೇ ಅವರಿಗೆ ಹೃದಯಾಘಾತ ಆಗಿದೆ ಎನ್ನುವ ಸುಳ್ಳು ಸುದ್ದಿ ಹರಿದಾಡಿತ್ತು.

ರಮ್ಯ ಹೆಸರಿನ ತಮಿಳು ಕಿರುತೆರೆ ನಟಿ ಮೃತಪಟ್ಟಿದ್ದರು ಎನ್ನಲಾಗಿದೆ. ಈ ವಿಚಾರ ಹೇಳುವಾಗ ತಮಿಳುನಾಡಿನ ಕೆಲವರು ರಮ್ಯಾ ದಿವ್ಯಾ ಸ್ಪಂದನಾ  ಫೋಟೋ ಹಂಚಿಕೊಂಡಿದ್ದಾರೆ. ಆ ಬಳಿಕ ಈ ಸುದ್ದಿ ಕಾಡ್ಗಿಚ್ಚಿನಂತೆ ಹಬ್ಬಿದೆ. ಈಗ ರಮ್ಯಾ ಅವರು ಆರಾಮಾಗಿದ್ದಾರೆ ಎನ್ನುವ ಸುದ್ದಿ ತಿಳಿದು ಅಭಿಮಾನಿಗಳು ಖುಷಿಪಟ್ಟಿದ್ದಾರೆ.

ಇದನ್ನೂ ಓದಿ: Ramya Divya Spandana: ವಿದೇಶ ಪ್ರವಾಸದಲ್ಲಿ ನಟಿ ರಮ್ಯಾ ಮೋಜು-ಮಸ್ತಿ; ಇಲ್ಲಿದೆ ವಿಡಿಯೋ

ಸದ್ಯ ರಮ್ಯಾ ಯೂರೋಪ್ ಪ್ರವಾಸದಲ್ಲಿದ್ದಾರೆ. ಅಲ್ಲಿ ಸುತ್ತಾಡುತ್ತಾ, ಹಲವರನ್ನು ಭೇಟಿ ಮಾಡುತ್ತಿದ್ದಾರೆ. ಈ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಅವರು ಹಲವು ಪೋಸ್ಟ್​ಗಳನ್ನು ಹಾಕುತ್ತಿದ್ದಾರೆ.

ರಮ್ಯಾ ಅವರು ‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಸಿನಿಮಾದಲ್ಲಿ ಅತಿಥಿ ಪಾತ್ರ ಮಾಡಿದ್ದರು. ಚಿತ್ರತಂಡದ ವಿರುದ್ಧ ಅವರು ಕೇಸ್ ಕೂಡ ದಾಖಲು ಮಾಡಿದ್ದರು. ಈಗ ಧನಂಜಯ್ ನಟನೆಯ ‘ಉತ್ತರಕಾಂಡ’ ಚಿತ್ರದಲ್ಲಿ ರಮ್ಯಾ ಪ್ರಮುಖ ಪಾತ್ರ ಮಾಡುತ್ತಿದ್ದಾರೆ. ಈ ಚಿತ್ರದ ರಿಲೀಸ್​ಗಾಗಿ ಅಭಿಮಾನಿಗಳು ಕಾದಿದ್ದಾರೆ. ಈ ಸಿನಿಮಾದ ಶೂಟಿಂಗ್ ಸದ್ಯ ಪ್ರಗತಿಯಲ್ಲಿದೆ. ಕೆಆರ್​ಜಿ ಸ್ಟುಡಿಯೋ ಈ ಚಿತ್ರವನ್ನು ನಿರ್ಮಾಣ ಮಾಡುತ್ತಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 12:24 pm, Wed, 6 September 23

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ