AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಮ್ಯಾ ಬರೆದ ಚಿತ್ರ ನೋಡಿ ತಲೆ ಕೆರೆದುಕೊಂಡ ಫ್ಯಾನ್ಸ್​; ಜೀವನದ ಅರ್ಥ ವಿವರಿಸಿದ ಗೆರೆಗಳು​

ರಮ್ಯಾ ಹಂಚಿಕೊಂಡಿರುವ ಈ ಚಿತ್ರ ನೋಡಿ ಅನೇಕ ಅಭಿಮಾನಿಗಳು ಕಮೆಂಟ್​ ಮಾಡುತ್ತಿದ್ದಾರೆ. ಯೋಗದಿಂದ ತಮ್ಮ ಬದುಕಿನಲ್ಲಿ ಆದ ಬದಲಾವಣೆಗಳೇನು ಎಂಬುದನ್ನು ಹಲವರು ಹಂಚಿಕೊಳ್ಳುತ್ತಿದ್ದಾರೆ.

ರಮ್ಯಾ ಬರೆದ ಚಿತ್ರ ನೋಡಿ ತಲೆ ಕೆರೆದುಕೊಂಡ ಫ್ಯಾನ್ಸ್​; ಜೀವನದ ಅರ್ಥ ವಿವರಿಸಿದ ಗೆರೆಗಳು​
ನಟಿ ರಮ್ಯಾ ಈ ಚಿತ್ರ ಹಂಚಿಕೊಂಡಿದ್ದು, ಇದನ್ನು ನೋಡಿದ ಅಭಿಮಾನಿಗಳ ತಲೆಯಲ್ಲಿ ಹುಳ ಬಿಟ್ಟಂತಾಗಿದೆ.
TV9 Web
| Edited By: |

Updated on:Oct 10, 2021 | 10:07 AM

Share

ನಟಿ ರಮ್ಯಾ ಅವರು ಚಿತ್ರರಂಗದಿಂದ ದೂರಾಗಿದ್ದರೂ ಕೂಡ ಸೋಶಿಯಲ್​ ಮೀಡಿಯಾ ಮೂಲಕ ತಮ್ಮ ಅಭಿಮಾನಿಗಳ ಜೊತೆ ಸದಾ ಸಂಪರ್ಕದಲ್ಲಿ ಇರುತ್ತಾರೆ. ಸಮಾಜದ ಅನೇಕ ಆಗುಹೋಗುಗಳಿಗೆ ಇನ್​ಸ್ಟಾಗ್ರಾಮ್​​ ಮೂಲಕ ಅವರು ಸ್ಪಂದಿಸುತ್ತಾರೆ. ಈಗ ಅವರೊಂದು ಚಿತ್ರ ಹಂಚಿಕೊಂಡಿದ್ದು, ಅದನ್ನು ನೋಡಿದ ಅಭಿಮಾನಿಗಳ ತಲೆಯಲ್ಲಿ ಹುಳ ಬಿಟ್ಟಂತಾಗಿದೆ. ಹಾಗಂತ ಹೆಚ್ಚು ತಲೆ ಕೆಡಿಸಿಕೊಳ್ಳಬೇಕಾಗಿಲ್ಲ. ಈ ಚಿತ್ರದ ಅರ್ಥ ಏನು ಎಂಬುದನ್ನು ಸ್ವತಃ ರಮ್ಯಾ ಅವರೇ ವಿವರಿಸಿದ್ದಾರೆ.

‘ಇದು ಏನೆಂದು ನೀವು ಆಶ್ಚರ್ಯ ಪಡುತ್ತಿದೀರಾ? ಇದು ಸೂರ್ಯ ನಮಸ್ಕಾರದ ದೃಷ್ಟಾಂತ. ಬೆಳಗ್ಗೆ ಸೂರ್ಯ ನಮಸ್ಕಾರ ಮಾಡುವಾಗ ಇದು ಜೀವನಕ್ಕೆ ಎಷ್ಟು ಹತ್ತಿರ ಎನಿಸಿತು. ಈ ಆಸನದಂತೆ ಜೀವನವೂ ಏರು ಇಳಿತದಿಂದ ಹಾಗೂ ಸ್ಥಿರತೆಯಿಂದ ಕೂಡಿದೆ. ನಾನು ಯೋಗಾಭ್ಯಾಸ ಪ್ರಾರಂಭಿಸಿ ಕೆಲವು ದಿನಗಳು ಕಳೆದಿವೆ. ಯೋಗದಿಂದ ನೀವೇನಾದರು ಜೀವನ ಪಾಠಗಳನ್ನು ಕಲಿತಿದ್ದಲ್ಲಿ ದಯಮಾಡಿ ಹಂಚಿಕೊಳ್ಳಿ’ ಎಂದು ರಮ್ಯಾ ಪೋಸ್ಟ್​ ಮಾಡಿದ್ದಾರೆ.

ಈ ಚಿತ್ರ ನೋಡಿ ಅನೇಕ ಅಭಿಮಾನಿಗಳು ಕಮೆಂಟ್​ ಮಡುತ್ತಿದ್ದಾರೆ. ಯೋಗದಿಂದ ತಮ್ಮ ಬದುಕಿನಲ್ಲಿ ಆದ ಬದಲಾವಣೆಗಳೇನು ಎಂಬುದನ್ನು ಹಲವರು ಹಂಚಿಕೊಳ್ಳುತ್ತಿದ್ದಾರೆ. ರಮ್ಯಾ ಆದಷ್ಟು ಬೇಗ ಚಿತ್ರರಂಗಕ್ಕೆ ಕಮ್​ಬ್ಯಾಕ್​ ಮಾಡಲಿ ಎಂಬುದು ಅಭಿಮಾನಿಗಳ ಆಸೆ. ಅದು ಯಾವಾಗ ಈಡೇರತ್ತೋ ಗೊತ್ತಿಲ್ಲ. ಇತ್ತೀಚೆಗೆ ಅವರು ಅನೇಕ ಸಿನಿಮಾತಂಡಗಳ ಬೆನ್ನು ತಟ್ಟುತ್ತಿದ್ದಾರೆ. ‘ಕೋಟಿಗೊಬ್ಬ 3’ ಟ್ರೇಲರ್​ ನೋಡಿ ಮೆಚ್ಚುಗೆ ಸೂಚಿಸಿದ್ದಾರೆ.

ಅ.14ರಂದು ಅದ್ದೂರಿಯಾಗಿ ‘ಕೋಟಿಗೊಬ್ಬ 3’ ಚಿತ್ರ ಬಿಡುಗಡೆ ಆಗಲಿದೆ. ಈ ಸಿನಿಮಾ ಬಗ್ಗೆ ಅಭಿಮಾನಿಗಳಿಗೆ ದೊಡ್ಡ ಮಟ್ಟದ ಕ್ರೇಜ್​ ಇದೆ. ಅ.7ರಂದು ಟ್ರೇಲರ್​ ರಿಲೀಸ್​ ಆಗಿದ್ದು, ಅದನ್ನು ನೋಡಿ ರಮ್ಯಾ ಕೂಡ ಮೆಚ್ಚಿಕೊಂಡಿದ್ದಾರೆ. ಈ ಟ್ರೇಲರ್​ನಲ್ಲಿ ಸುದೀಪ್​ ಹಲವು ಗೆಟಪ್​ಗಳಲ್ಲಿ ಕಾಣಿಸಿಕೊಂಡಿದ್ದಾರೆ. ಅವರ ಎನರ್ಜಿ ನೋಡಿ ಫಿದಾ ಆಗದವರೇ ಇಲ್ಲ. ಕೆಲವು ದೃಶ್ಯಗಳಲ್ಲಿ ಸುದೀಪ್​ ಹದಿಹರೆಯದ ತರುಣನಂತೆ ಕಾಣುತ್ತಾರೆ. ಅದು ಅಭಿಮಾನಿಗಳಿಗೆ ಮಾತ್ರವಲ್ಲದೆ, ರಮ್ಯಾಗೂ ಅಚ್ಚರಿ ಮೂಡಿಸಿದೆ.

‘ಟ್ರೇಲರ್​ ಅದ್ಭುತವಾಗಿದೆ. ಕಿಚ್ಚ ಸುದೀಪ್​ ಅವರೇ, ನಿಮಗೆ ವಯಸ್ಸು ಆಗುವುದೇ ಇಲ್ಲವಾ?’ ಎಂದು ರಮ್ಯಾ ಬರೆದುಕೊಂಡಿದ್ದಾರೆ. ದಿನದಿಂದ ದಿನಕ್ಕೆ ಸುದೀಪ್​ ವಯಸ್ಸು ಕಮ್ಮಿ ಆಗುತ್ತಿದೆ ಎಂಬರ್ಥದಲ್ಲಿ ಅವರು ಪ್ರಶಂಸೆ ವ್ಯಕ್ತಪಡಿಸಿದ್ದಾರೆ. ‘ರಂಗ ಎಸ್​ಎಸ್​ಎಲ್​ಸಿ’, ‘ಜಸ್ಟ್​ ಮಾತ್​ ಮಾತಲ್ಲಿ’, ‘ಮುಸ್ಸಂಜೆ ಮಾತು’ ಸಿನಿಮಾಗಳಲ್ಲಿ ರಮ್ಯಾ ಮತ್ತು ಸುದೀಪ್​ ನಟಿಸಿದ್ದರು. ಮತ್ತೆ ಅವರು ತೆರೆಮೇಲೆ ಜೋಡಿಯಾಗಿ ಕಾಣಿಸಿಕೊಳ್ಳಲಿ ಎಂದು ಅಭಿಮಾನಿಗಳು ಬಯಸುತ್ತಿದ್ದಾರೆ.

ಇದನ್ನೂ ಓದಿ:

ಆರ್ಯನ್​ ಖಾನ್​ ಬಂಧನದ ವಿಚಾರದಲ್ಲಿ ಅನುಮಾನ ಹೊರಹಾಕಿದ ನಟಿ ರಮ್ಯಾ

‘ನಾನು ಸಿನಿಮಾ ಮಾಡಲ್ಲ ಅಂದ್ರೆ ಅನೇಕರಿಗೆ ಬೇಸರ ಆಗತ್ತೆ’; ಚಿತ್ರರಂಗಕ್ಕೆ ಬರುವ ಸೂಚನೆ ನೀಡಿದ ರಮ್ಯಾ?

Published On - 9:40 am, Sun, 10 October 21

Follow Us
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ