AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಮ್ಯಾ ಬರೆದ ಚಿತ್ರ ನೋಡಿ ತಲೆ ಕೆರೆದುಕೊಂಡ ಫ್ಯಾನ್ಸ್​; ಜೀವನದ ಅರ್ಥ ವಿವರಿಸಿದ ಗೆರೆಗಳು​

ರಮ್ಯಾ ಹಂಚಿಕೊಂಡಿರುವ ಈ ಚಿತ್ರ ನೋಡಿ ಅನೇಕ ಅಭಿಮಾನಿಗಳು ಕಮೆಂಟ್​ ಮಾಡುತ್ತಿದ್ದಾರೆ. ಯೋಗದಿಂದ ತಮ್ಮ ಬದುಕಿನಲ್ಲಿ ಆದ ಬದಲಾವಣೆಗಳೇನು ಎಂಬುದನ್ನು ಹಲವರು ಹಂಚಿಕೊಳ್ಳುತ್ತಿದ್ದಾರೆ.

ರಮ್ಯಾ ಬರೆದ ಚಿತ್ರ ನೋಡಿ ತಲೆ ಕೆರೆದುಕೊಂಡ ಫ್ಯಾನ್ಸ್​; ಜೀವನದ ಅರ್ಥ ವಿವರಿಸಿದ ಗೆರೆಗಳು​
ನಟಿ ರಮ್ಯಾ ಈ ಚಿತ್ರ ಹಂಚಿಕೊಂಡಿದ್ದು, ಇದನ್ನು ನೋಡಿದ ಅಭಿಮಾನಿಗಳ ತಲೆಯಲ್ಲಿ ಹುಳ ಬಿಟ್ಟಂತಾಗಿದೆ.
Follow us
TV9 Web
| Updated By: ಮದನ್​ ಕುಮಾರ್​

Updated on:Oct 10, 2021 | 10:07 AM

ನಟಿ ರಮ್ಯಾ ಅವರು ಚಿತ್ರರಂಗದಿಂದ ದೂರಾಗಿದ್ದರೂ ಕೂಡ ಸೋಶಿಯಲ್​ ಮೀಡಿಯಾ ಮೂಲಕ ತಮ್ಮ ಅಭಿಮಾನಿಗಳ ಜೊತೆ ಸದಾ ಸಂಪರ್ಕದಲ್ಲಿ ಇರುತ್ತಾರೆ. ಸಮಾಜದ ಅನೇಕ ಆಗುಹೋಗುಗಳಿಗೆ ಇನ್​ಸ್ಟಾಗ್ರಾಮ್​​ ಮೂಲಕ ಅವರು ಸ್ಪಂದಿಸುತ್ತಾರೆ. ಈಗ ಅವರೊಂದು ಚಿತ್ರ ಹಂಚಿಕೊಂಡಿದ್ದು, ಅದನ್ನು ನೋಡಿದ ಅಭಿಮಾನಿಗಳ ತಲೆಯಲ್ಲಿ ಹುಳ ಬಿಟ್ಟಂತಾಗಿದೆ. ಹಾಗಂತ ಹೆಚ್ಚು ತಲೆ ಕೆಡಿಸಿಕೊಳ್ಳಬೇಕಾಗಿಲ್ಲ. ಈ ಚಿತ್ರದ ಅರ್ಥ ಏನು ಎಂಬುದನ್ನು ಸ್ವತಃ ರಮ್ಯಾ ಅವರೇ ವಿವರಿಸಿದ್ದಾರೆ.

‘ಇದು ಏನೆಂದು ನೀವು ಆಶ್ಚರ್ಯ ಪಡುತ್ತಿದೀರಾ? ಇದು ಸೂರ್ಯ ನಮಸ್ಕಾರದ ದೃಷ್ಟಾಂತ. ಬೆಳಗ್ಗೆ ಸೂರ್ಯ ನಮಸ್ಕಾರ ಮಾಡುವಾಗ ಇದು ಜೀವನಕ್ಕೆ ಎಷ್ಟು ಹತ್ತಿರ ಎನಿಸಿತು. ಈ ಆಸನದಂತೆ ಜೀವನವೂ ಏರು ಇಳಿತದಿಂದ ಹಾಗೂ ಸ್ಥಿರತೆಯಿಂದ ಕೂಡಿದೆ. ನಾನು ಯೋಗಾಭ್ಯಾಸ ಪ್ರಾರಂಭಿಸಿ ಕೆಲವು ದಿನಗಳು ಕಳೆದಿವೆ. ಯೋಗದಿಂದ ನೀವೇನಾದರು ಜೀವನ ಪಾಠಗಳನ್ನು ಕಲಿತಿದ್ದಲ್ಲಿ ದಯಮಾಡಿ ಹಂಚಿಕೊಳ್ಳಿ’ ಎಂದು ರಮ್ಯಾ ಪೋಸ್ಟ್​ ಮಾಡಿದ್ದಾರೆ.

ಈ ಚಿತ್ರ ನೋಡಿ ಅನೇಕ ಅಭಿಮಾನಿಗಳು ಕಮೆಂಟ್​ ಮಡುತ್ತಿದ್ದಾರೆ. ಯೋಗದಿಂದ ತಮ್ಮ ಬದುಕಿನಲ್ಲಿ ಆದ ಬದಲಾವಣೆಗಳೇನು ಎಂಬುದನ್ನು ಹಲವರು ಹಂಚಿಕೊಳ್ಳುತ್ತಿದ್ದಾರೆ. ರಮ್ಯಾ ಆದಷ್ಟು ಬೇಗ ಚಿತ್ರರಂಗಕ್ಕೆ ಕಮ್​ಬ್ಯಾಕ್​ ಮಾಡಲಿ ಎಂಬುದು ಅಭಿಮಾನಿಗಳ ಆಸೆ. ಅದು ಯಾವಾಗ ಈಡೇರತ್ತೋ ಗೊತ್ತಿಲ್ಲ. ಇತ್ತೀಚೆಗೆ ಅವರು ಅನೇಕ ಸಿನಿಮಾತಂಡಗಳ ಬೆನ್ನು ತಟ್ಟುತ್ತಿದ್ದಾರೆ. ‘ಕೋಟಿಗೊಬ್ಬ 3’ ಟ್ರೇಲರ್​ ನೋಡಿ ಮೆಚ್ಚುಗೆ ಸೂಚಿಸಿದ್ದಾರೆ.

ಅ.14ರಂದು ಅದ್ದೂರಿಯಾಗಿ ‘ಕೋಟಿಗೊಬ್ಬ 3’ ಚಿತ್ರ ಬಿಡುಗಡೆ ಆಗಲಿದೆ. ಈ ಸಿನಿಮಾ ಬಗ್ಗೆ ಅಭಿಮಾನಿಗಳಿಗೆ ದೊಡ್ಡ ಮಟ್ಟದ ಕ್ರೇಜ್​ ಇದೆ. ಅ.7ರಂದು ಟ್ರೇಲರ್​ ರಿಲೀಸ್​ ಆಗಿದ್ದು, ಅದನ್ನು ನೋಡಿ ರಮ್ಯಾ ಕೂಡ ಮೆಚ್ಚಿಕೊಂಡಿದ್ದಾರೆ. ಈ ಟ್ರೇಲರ್​ನಲ್ಲಿ ಸುದೀಪ್​ ಹಲವು ಗೆಟಪ್​ಗಳಲ್ಲಿ ಕಾಣಿಸಿಕೊಂಡಿದ್ದಾರೆ. ಅವರ ಎನರ್ಜಿ ನೋಡಿ ಫಿದಾ ಆಗದವರೇ ಇಲ್ಲ. ಕೆಲವು ದೃಶ್ಯಗಳಲ್ಲಿ ಸುದೀಪ್​ ಹದಿಹರೆಯದ ತರುಣನಂತೆ ಕಾಣುತ್ತಾರೆ. ಅದು ಅಭಿಮಾನಿಗಳಿಗೆ ಮಾತ್ರವಲ್ಲದೆ, ರಮ್ಯಾಗೂ ಅಚ್ಚರಿ ಮೂಡಿಸಿದೆ.

‘ಟ್ರೇಲರ್​ ಅದ್ಭುತವಾಗಿದೆ. ಕಿಚ್ಚ ಸುದೀಪ್​ ಅವರೇ, ನಿಮಗೆ ವಯಸ್ಸು ಆಗುವುದೇ ಇಲ್ಲವಾ?’ ಎಂದು ರಮ್ಯಾ ಬರೆದುಕೊಂಡಿದ್ದಾರೆ. ದಿನದಿಂದ ದಿನಕ್ಕೆ ಸುದೀಪ್​ ವಯಸ್ಸು ಕಮ್ಮಿ ಆಗುತ್ತಿದೆ ಎಂಬರ್ಥದಲ್ಲಿ ಅವರು ಪ್ರಶಂಸೆ ವ್ಯಕ್ತಪಡಿಸಿದ್ದಾರೆ. ‘ರಂಗ ಎಸ್​ಎಸ್​ಎಲ್​ಸಿ’, ‘ಜಸ್ಟ್​ ಮಾತ್​ ಮಾತಲ್ಲಿ’, ‘ಮುಸ್ಸಂಜೆ ಮಾತು’ ಸಿನಿಮಾಗಳಲ್ಲಿ ರಮ್ಯಾ ಮತ್ತು ಸುದೀಪ್​ ನಟಿಸಿದ್ದರು. ಮತ್ತೆ ಅವರು ತೆರೆಮೇಲೆ ಜೋಡಿಯಾಗಿ ಕಾಣಿಸಿಕೊಳ್ಳಲಿ ಎಂದು ಅಭಿಮಾನಿಗಳು ಬಯಸುತ್ತಿದ್ದಾರೆ.

ಇದನ್ನೂ ಓದಿ:

ಆರ್ಯನ್​ ಖಾನ್​ ಬಂಧನದ ವಿಚಾರದಲ್ಲಿ ಅನುಮಾನ ಹೊರಹಾಕಿದ ನಟಿ ರಮ್ಯಾ

‘ನಾನು ಸಿನಿಮಾ ಮಾಡಲ್ಲ ಅಂದ್ರೆ ಅನೇಕರಿಗೆ ಬೇಸರ ಆಗತ್ತೆ’; ಚಿತ್ರರಂಗಕ್ಕೆ ಬರುವ ಸೂಚನೆ ನೀಡಿದ ರಮ್ಯಾ?

Published On - 9:40 am, Sun, 10 October 21

ಯುದ್ಧದ ಭೀತಿ; ಎಲ್​ಒಸಿಗೆ ಪಾಕ್ ಸೇನಾ ಮುಖ್ಯಸ್ಥ ಅಸಿಮ್ ಮುನೀರ್ ಭೇಟಿ?
ಯುದ್ಧದ ಭೀತಿ; ಎಲ್​ಒಸಿಗೆ ಪಾಕ್ ಸೇನಾ ಮುಖ್ಯಸ್ಥ ಅಸಿಮ್ ಮುನೀರ್ ಭೇಟಿ?
ಧೋನಿ ಸೇರಿದಂತೆ ಒಂದೇ ಓವರ್​ನಲ್ಲಿ 4 ವಿಕೆಟ್ ಉರುಳಿಸಿದ ಚಾಹಲ್
ಧೋನಿ ಸೇರಿದಂತೆ ಒಂದೇ ಓವರ್​ನಲ್ಲಿ 4 ವಿಕೆಟ್ ಉರುಳಿಸಿದ ಚಾಹಲ್
ಯುದ್ಧ ನಡೆದರೆ ಪಾಕಿಸ್ತಾನಕ್ಕೆ ಉಳಿಗಾಲವಿಲ್ಲ ಅನ್ನೋದು ಮೇಲ್ನೋಟಕ್ಕೆ ಸ್ಪಷ್ಟ
ಯುದ್ಧ ನಡೆದರೆ ಪಾಕಿಸ್ತಾನಕ್ಕೆ ಉಳಿಗಾಲವಿಲ್ಲ ಅನ್ನೋದು ಮೇಲ್ನೋಟಕ್ಕೆ ಸ್ಪಷ್ಟ
ಪ್ರಧಾನಿ ಮೋದಿ ಉಗ್ರರಿಗೆ ತಕ್ಕ ಪಾಠ ಕಲಿಸದೆ ಬಿಡೋದಿಲ್ಲ: ರಾಜೇಶ್ವರಿ
ಪ್ರಧಾನಿ ಮೋದಿ ಉಗ್ರರಿಗೆ ತಕ್ಕ ಪಾಠ ಕಲಿಸದೆ ಬಿಡೋದಿಲ್ಲ: ರಾಜೇಶ್ವರಿ
ತಾನು ಯುದ್ಧ ಬೇಡ ಅನ್ನಲ್ಲ ಅಂತ ಮತ್ತೊಮ್ಮೆ ಹೇಳಿದ ಸಿದ್ದರಾಮಯ್ಯ
ತಾನು ಯುದ್ಧ ಬೇಡ ಅನ್ನಲ್ಲ ಅಂತ ಮತ್ತೊಮ್ಮೆ ಹೇಳಿದ ಸಿದ್ದರಾಮಯ್ಯ
ಉಗ್ರರು ಮತ್ತು ಅವರ ಸಂಘಟನೆಗಳಿಂದ ಅಂತರ ಕಾಯ್ದುಕೊಳ್ಳಲು ಸೂಚನೆ
ಉಗ್ರರು ಮತ್ತು ಅವರ ಸಂಘಟನೆಗಳಿಂದ ಅಂತರ ಕಾಯ್ದುಕೊಳ್ಳಲು ಸೂಚನೆ
ಬಸ್​ ನಿಲ್ಲಿಸಿ ನಮಾಜ್​ ಮಾಡಿದ ಕೆಎಸ್​ಆರ್​ಟಿಸಿ ಚಾಲಕ, ವಿಡಿಯೋ ವೈರಲ್
ಬಸ್​ ನಿಲ್ಲಿಸಿ ನಮಾಜ್​ ಮಾಡಿದ ಕೆಎಸ್​ಆರ್​ಟಿಸಿ ಚಾಲಕ, ವಿಡಿಯೋ ವೈರಲ್
ಶಿಲ್ಲಾಂಗ್-ಶಿಲಚರ್ ನಡುವೆ 22,864 ಕೋಟಿ ವೆಚ್ಚದಲ್ಲಿ ಹೈ ಸ್ಪೀಡ್ ಕಾರಿಡಾರ್
ಶಿಲ್ಲಾಂಗ್-ಶಿಲಚರ್ ನಡುವೆ 22,864 ಕೋಟಿ ವೆಚ್ಚದಲ್ಲಿ ಹೈ ಸ್ಪೀಡ್ ಕಾರಿಡಾರ್
‘ಕರುಣೆಯೇ ಬೇಡ ಹಿಡಿ, ಹೊಡಿ, ಕಡಿ ಅಷ್ಟೇ ಬೇಕಿರೋದು’
‘ಕರುಣೆಯೇ ಬೇಡ ಹಿಡಿ, ಹೊಡಿ, ಕಡಿ ಅಷ್ಟೇ ಬೇಕಿರೋದು’
ಸೆಕೆಯಿಂದ ಕಂಗೆಟ್ಟಿದ್ದ ಬೆಂಗಳೂರಿಗರಿಗೆ ತಂಪೆರೆದ ಮಳೆರಾಯ
ಸೆಕೆಯಿಂದ ಕಂಗೆಟ್ಟಿದ್ದ ಬೆಂಗಳೂರಿಗರಿಗೆ ತಂಪೆರೆದ ಮಳೆರಾಯ