ಕೊನೆಗೂ ರಿವೀಲ್ ಆಯ್ತು ರಮ್ಯಾ ನಿರ್ಮಾಣದ ‘ಸ್ವಾತಿ ಮುತ್ತಿನ ಮಳೆ ಹನಿಯೇ’ ಸಿನಿಮಾ ರಿಲೀಸ್​​ ದಿನಾಂಕ

ಸಿನಿಮಾ ರಿಲೀಸ್ ಬಗ್ಗೆ ಆ್ಯಪಲ್ ಬಾಕ್ಸ್ ಸೋಶಿಯಲ್ ಮೀಡಿಯಾ ತಾಣದಲ್ಲಿ ಮಾಹಿತಿ ಹಂಚಿಕೊಳ್ಳಲಾಗಿದೆ. ರಾಜ್ ಬಿ ಶೆಟ್ಟಿ ಹಾಗೂ ಸಿರಿ ರವಿಕುಮಾರ್ ಒಟ್ಟಾಗಿ ಇರುವ ಪೋಸ್ಟರ್ ಹಂಚಿಕೊಳ್ಳಲಾಗಿದೆ. ಇದರಲ್ಲಿ ಬಿಡುಗಡೆ ದಿನಾಂಕ ತಿಳಿಸಲಾಗಿದೆ.

ಕೊನೆಗೂ ರಿವೀಲ್ ಆಯ್ತು ರಮ್ಯಾ ನಿರ್ಮಾಣದ ‘ಸ್ವಾತಿ ಮುತ್ತಿನ ಮಳೆ ಹನಿಯೇ’ ಸಿನಿಮಾ ರಿಲೀಸ್​​ ದಿನಾಂಕ
ರಾಜ್ ಬಿ ಶೆಟ್ಟಿ-ರವಿ ಸಿರಿ ಕುಮಾರ್
Follow us
|

Updated on: Oct 24, 2023 | 12:04 PM

ನಟಿ ರಮ್ಯಾ (Ramya) ಅವರು ನಟನೆಗೆ ಕಂಬ್ಯಾಕ್ ಮಾಡಿದ್ದಾರೆ. ಇದರ ಜೊತೆಗೆ ಅವರು ಸಿನಿಮಾ ನಿರ್ಮಾಣದಲ್ಲೂ ತೊಡಗಿಕೊಂಡಿದ್ದಾರೆ. ತಮ್ಮ ನಿರ್ಮಾಣ ಸಂಸ್ಥೆ ‘ಆ್ಯಪಲ್ ಬಾಕ್ಸ್ ಸ್ಟುಡಿಯೋ’ ಮೂಲಕ ಅವರು ‘ಸ್ವಾತಿ ಮುತ್ತಿನ ಮಳೆ ಹನಿಯೇ’ ಸಿನಿಮಾ ನಿರ್ಮಾಣ ಮಾಡಿದ್ದಾರೆ. ಈ ಚಿತ್ರದ ಶೂಟಿಂಗ್ ಮುಗಿದು ಬಹಳ ಸಮಯ ಕಳೆದಿದೆ. ಈಗ ಸಿನಿಮಾದ ರಿಲೀಸ್ ದಿನಾಂಕದ ಬಗ್ಗೆ ಮಾಹಿತಿ ಸಿಕ್ಕಿದೆ. ನವೆಂಬರ್ 24ರಂದು ಚಿತ್ರ ರಾಜ್ಯಾದ್ಯಂತ ಬಿಡುಗಡೆ ಆಗುತ್ತಿದೆ.

ರಮ್ಯಾ ಅವರು ಈ ಮೊದಲು ರಾಜಕೀಯ ಹಾಗೂ ಸಿನಿಮಾ ಕ್ಷೇತ್ರದಿಂದ ದೂರವೇ ಇದ್ದರು. ಆ ಬಳಿಕ ಅವರು ನಿಧಾನವಾಗಿ ಚಿತ್ರರಂಗದ ಜೊತೆ ಸಂಪರ್ಕ ಬೆಳೆಸಿಕೊಳ್ಳುತ್ತಾ ಬಂದರು. ‘ಸ್ವಾತಿ ಮುತ್ತಿನ ಮಳೆ ಹನಿಯೇ’ ಸಿನಿಮಾನ ನಿರ್ಮಾಣ ಮಾಡುವುದರ ಜೊತೆಗೆ  ಈ ಚಿತ್ರದಲ್ಲಿ ನಟಿಸುವುದಾಗಿ ಅವರು ಮೊದಲು ಹೇಳಿದ್ದರು. ಆದರೆ, ಬಳಿಕ ಮನಸ್ಸು ಬದಲಿಸಿದರು. ಈ ಚಿತ್ರದಲ್ಲಿ ರಾಜ್​ ಬಿ ಶೆಟ್ಟಿಗೆ ಜೊತೆಯಾಗಿ ಸಿರಿ ರವಿಕುಮಾರ್ ನಟಿಸಿದ್ದಾರೆ.

ಸಿನಿಮಾ ರಿಲೀಸ್ ಬಗ್ಗೆ ಆ್ಯಪಲ್ ಬಾಕ್ಸ್ ಸೋಶಿಯಲ್ ಮೀಡಿಯಾ ತಾಣದಲ್ಲಿ ಮಾಹಿತಿ ಹಂಚಿಕೊಳ್ಳಲಾಗಿದೆ. ರಾಜ್ ಬಿ ಶೆಟ್ಟಿ ಹಾಗೂ ಸಿರಿ ರವಿಕುಮಾರ್ ಒಟ್ಟಾಗಿ ಇರುವ ಪೋಸ್ಟರ್ ಹಂಚಿಕೊಳ್ಳಲಾಗಿದೆ. ನವೆಂಬರ್ 24ರಂದು ಚಿತ್ರ ಬಿಡುಗಡೆ ಅಗಲಿದೆ ಎಂದು ತಂಡ ಮಾಹಿತಿ ನೀಡಿದೆ. ‘ಎಲ್ಲರಿಗೂ ವಿಜಯದಶಮಿ ಹಬ್ಬದ ಶುಭಾಶಯಗಳು. ನಮ್ಮ ಚಿತ್ರ ಸ್ವಾತಿ ಮುತ್ತಿನ ಮಳೆ ಹನಿಯೇ ನವೆಂಬರ್ 24ರಂದು ರಾಜ್ಯಾದ್ಯಂತ ಬಿಡುಗಡೆ ಆಗಲಿದೆ’ ಎಂದು ಕ್ಯಾಪ್ಶನ್ ನೀಡಲಾಗಿದೆ.

ಇದನ್ನೂ ಓದಿ: ಪಾಕ್ ವಿರುದ್ಧ ಭಾರತದ ಗೆಲುವಿಗೆ ರಮ್ಯಾ ಸಂಭ್ರಮ: ಆದರೂ ಅವರಿಗೆ ಇದೆ ಒಂದು ಬೇಸರ; ಏನದು?

ಸದ್ಯ ಈ ವಿಚಾರ ರಮ್ಯಾ ಅಭಿಮಾನಿಗಳಿಗೆ ಖುಷಿ ನೀಡಿದೆ. ಎಲ್ಲರೂ ರಮ್ಯಾಗೆ ಆಲ್​ ದಿ ಬೆಸ್ಟ್ ಹೇಳುತ್ತಿದ್ದಾರೆ. ಸಿನಿಮಾ ಗೆಲುವು ಕಾಣಲಿ ಎಂದು ಹಾರೈಸಿದ್ದಾರೆ. ‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಸಿನಿಮಾದಲ್ಲಿ ರಮ್ಯಾ ಅತಿಥಿ ಪಾತ್ರ ಮಾಡಿದ್ದರು. ‘ಉತ್ತರಕಾಂಡ’ ಚಿತ್ರದಲ್ಲಿ ಅವರು ಮುಖ್ಯಭೂಮಿಕೆ ನಿರ್ವಹಿಸುತ್ತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಉಡುಪಿಯ ಹೆಬ್ರಿಯಲ್ಲಿ ಮೇಘಸ್ಫೋಟ; ಭೀಕರ ಪ್ರವಾಹ ಸೃಷ್ಟಿ
ಉಡುಪಿಯ ಹೆಬ್ರಿಯಲ್ಲಿ ಮೇಘಸ್ಫೋಟ; ಭೀಕರ ಪ್ರವಾಹ ಸೃಷ್ಟಿ
ಉತ್ತರ ಕನ್ನಡ: ಮುರುಡೇಶ್ವರ ಕಡಲತೀರಕ್ಕೆ ಪ್ರವಾಸಿಗರಿಗೆ ನಿರ್ಬಂಧ
ಉತ್ತರ ಕನ್ನಡ: ಮುರುಡೇಶ್ವರ ಕಡಲತೀರಕ್ಕೆ ಪ್ರವಾಸಿಗರಿಗೆ ನಿರ್ಬಂಧ
ಬಿಗ್​ಬಾಸ್​ನಲ್ಲಿ ಮನೆಯಲ್ಲಿ ಯಾರು ಹಿಟ್? ಫ್ಲಾಪ್ ಆಗಿದ್ದು ಯಾರು?
ಬಿಗ್​ಬಾಸ್​ನಲ್ಲಿ ಮನೆಯಲ್ಲಿ ಯಾರು ಹಿಟ್? ಫ್ಲಾಪ್ ಆಗಿದ್ದು ಯಾರು?
ಮುಡಾ ಹಗರಣದ ಬಗ್ಗೆ ಪದೇ ಪದೆ ಮಾತಾಡೋದು ಬೇಡ: ಸಚಿವ ವಿ ಸೋಮಣ್ಣ
ಮುಡಾ ಹಗರಣದ ಬಗ್ಗೆ ಪದೇ ಪದೆ ಮಾತಾಡೋದು ಬೇಡ: ಸಚಿವ ವಿ ಸೋಮಣ್ಣ
ಅವರೇ ಹಾರೆ ಹಿಡಿದು ಗುಂಡಿ ಮುಚ್ಚಲು ಹೋಗಿದ್ದರಲ್ಲ ಈಗೇನಾಯ್ತು: ಹೆಚ್​ಡಿಕೆ
ಅವರೇ ಹಾರೆ ಹಿಡಿದು ಗುಂಡಿ ಮುಚ್ಚಲು ಹೋಗಿದ್ದರಲ್ಲ ಈಗೇನಾಯ್ತು: ಹೆಚ್​ಡಿಕೆ
ರಾಮಲೀಲಾ ನಾಟಕ ಪ್ರದರ್ಶನದ ವೇಳೆ ರಾಮ ಪಾತ್ರಧಾರಿ ಹೃದಯಾಘಾತದಿಂದ ಸಾವು
ರಾಮಲೀಲಾ ನಾಟಕ ಪ್ರದರ್ಶನದ ವೇಳೆ ರಾಮ ಪಾತ್ರಧಾರಿ ಹೃದಯಾಘಾತದಿಂದ ಸಾವು
‘ಬಿಗ್​ಬಾಸ್ ಏನು ಅಂಗಡಿಯಲ್ಲಿ ಸಿಗುವ ಒಳ ಉಡುಪಾ ಖರೀದಿ ಮಾಡೋಕೆ’
‘ಬಿಗ್​ಬಾಸ್ ಏನು ಅಂಗಡಿಯಲ್ಲಿ ಸಿಗುವ ಒಳ ಉಡುಪಾ ಖರೀದಿ ಮಾಡೋಕೆ’
ಸಿದ್ದರಾಮಯ್ಯ ವಾಹನಕ್ಕೆ ವಿರುದ್ಧ ದಿಕ್ಕಿನಲ್ಲಿ ಬಂದ ಜನಾರ್ದನ ರೆಡ್ಡಿ ಕಾರು
ಸಿದ್ದರಾಮಯ್ಯ ವಾಹನಕ್ಕೆ ವಿರುದ್ಧ ದಿಕ್ಕಿನಲ್ಲಿ ಬಂದ ಜನಾರ್ದನ ರೆಡ್ಡಿ ಕಾರು
ಅಕ್ಟೋಬರ್ 07 ರಿಂದ 13 ರವರೆಗಿನ ವಾರ ಭವಿಷ್ಯ ತಿಳಿಯಿರಿ
ಅಕ್ಟೋಬರ್ 07 ರಿಂದ 13 ರವರೆಗಿನ ವಾರ ಭವಿಷ್ಯ ತಿಳಿಯಿರಿ
Navratri 2024 4th Day: ನವರಾತ್ರಿ 4ನೇ ದಿನ ಕುಷ್ಮಾಂಡ ದೇವಿಯ ಮಹತ್ವವೇನು?
Navratri 2024 4th Day: ನವರಾತ್ರಿ 4ನೇ ದಿನ ಕುಷ್ಮಾಂಡ ದೇವಿಯ ಮಹತ್ವವೇನು?