AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊನೆಗೂ ರಿವೀಲ್ ಆಯ್ತು ರಮ್ಯಾ ನಿರ್ಮಾಣದ ‘ಸ್ವಾತಿ ಮುತ್ತಿನ ಮಳೆ ಹನಿಯೇ’ ಸಿನಿಮಾ ರಿಲೀಸ್​​ ದಿನಾಂಕ

ಸಿನಿಮಾ ರಿಲೀಸ್ ಬಗ್ಗೆ ಆ್ಯಪಲ್ ಬಾಕ್ಸ್ ಸೋಶಿಯಲ್ ಮೀಡಿಯಾ ತಾಣದಲ್ಲಿ ಮಾಹಿತಿ ಹಂಚಿಕೊಳ್ಳಲಾಗಿದೆ. ರಾಜ್ ಬಿ ಶೆಟ್ಟಿ ಹಾಗೂ ಸಿರಿ ರವಿಕುಮಾರ್ ಒಟ್ಟಾಗಿ ಇರುವ ಪೋಸ್ಟರ್ ಹಂಚಿಕೊಳ್ಳಲಾಗಿದೆ. ಇದರಲ್ಲಿ ಬಿಡುಗಡೆ ದಿನಾಂಕ ತಿಳಿಸಲಾಗಿದೆ.

ಕೊನೆಗೂ ರಿವೀಲ್ ಆಯ್ತು ರಮ್ಯಾ ನಿರ್ಮಾಣದ ‘ಸ್ವಾತಿ ಮುತ್ತಿನ ಮಳೆ ಹನಿಯೇ’ ಸಿನಿಮಾ ರಿಲೀಸ್​​ ದಿನಾಂಕ
ರಾಜ್ ಬಿ ಶೆಟ್ಟಿ-ರವಿ ಸಿರಿ ಕುಮಾರ್
ರಾಜೇಶ್ ದುಗ್ಗುಮನೆ
|

Updated on: Oct 24, 2023 | 12:04 PM

Share

ನಟಿ ರಮ್ಯಾ (Ramya) ಅವರು ನಟನೆಗೆ ಕಂಬ್ಯಾಕ್ ಮಾಡಿದ್ದಾರೆ. ಇದರ ಜೊತೆಗೆ ಅವರು ಸಿನಿಮಾ ನಿರ್ಮಾಣದಲ್ಲೂ ತೊಡಗಿಕೊಂಡಿದ್ದಾರೆ. ತಮ್ಮ ನಿರ್ಮಾಣ ಸಂಸ್ಥೆ ‘ಆ್ಯಪಲ್ ಬಾಕ್ಸ್ ಸ್ಟುಡಿಯೋ’ ಮೂಲಕ ಅವರು ‘ಸ್ವಾತಿ ಮುತ್ತಿನ ಮಳೆ ಹನಿಯೇ’ ಸಿನಿಮಾ ನಿರ್ಮಾಣ ಮಾಡಿದ್ದಾರೆ. ಈ ಚಿತ್ರದ ಶೂಟಿಂಗ್ ಮುಗಿದು ಬಹಳ ಸಮಯ ಕಳೆದಿದೆ. ಈಗ ಸಿನಿಮಾದ ರಿಲೀಸ್ ದಿನಾಂಕದ ಬಗ್ಗೆ ಮಾಹಿತಿ ಸಿಕ್ಕಿದೆ. ನವೆಂಬರ್ 24ರಂದು ಚಿತ್ರ ರಾಜ್ಯಾದ್ಯಂತ ಬಿಡುಗಡೆ ಆಗುತ್ತಿದೆ.

ರಮ್ಯಾ ಅವರು ಈ ಮೊದಲು ರಾಜಕೀಯ ಹಾಗೂ ಸಿನಿಮಾ ಕ್ಷೇತ್ರದಿಂದ ದೂರವೇ ಇದ್ದರು. ಆ ಬಳಿಕ ಅವರು ನಿಧಾನವಾಗಿ ಚಿತ್ರರಂಗದ ಜೊತೆ ಸಂಪರ್ಕ ಬೆಳೆಸಿಕೊಳ್ಳುತ್ತಾ ಬಂದರು. ‘ಸ್ವಾತಿ ಮುತ್ತಿನ ಮಳೆ ಹನಿಯೇ’ ಸಿನಿಮಾನ ನಿರ್ಮಾಣ ಮಾಡುವುದರ ಜೊತೆಗೆ  ಈ ಚಿತ್ರದಲ್ಲಿ ನಟಿಸುವುದಾಗಿ ಅವರು ಮೊದಲು ಹೇಳಿದ್ದರು. ಆದರೆ, ಬಳಿಕ ಮನಸ್ಸು ಬದಲಿಸಿದರು. ಈ ಚಿತ್ರದಲ್ಲಿ ರಾಜ್​ ಬಿ ಶೆಟ್ಟಿಗೆ ಜೊತೆಯಾಗಿ ಸಿರಿ ರವಿಕುಮಾರ್ ನಟಿಸಿದ್ದಾರೆ.

ಸಿನಿಮಾ ರಿಲೀಸ್ ಬಗ್ಗೆ ಆ್ಯಪಲ್ ಬಾಕ್ಸ್ ಸೋಶಿಯಲ್ ಮೀಡಿಯಾ ತಾಣದಲ್ಲಿ ಮಾಹಿತಿ ಹಂಚಿಕೊಳ್ಳಲಾಗಿದೆ. ರಾಜ್ ಬಿ ಶೆಟ್ಟಿ ಹಾಗೂ ಸಿರಿ ರವಿಕುಮಾರ್ ಒಟ್ಟಾಗಿ ಇರುವ ಪೋಸ್ಟರ್ ಹಂಚಿಕೊಳ್ಳಲಾಗಿದೆ. ನವೆಂಬರ್ 24ರಂದು ಚಿತ್ರ ಬಿಡುಗಡೆ ಅಗಲಿದೆ ಎಂದು ತಂಡ ಮಾಹಿತಿ ನೀಡಿದೆ. ‘ಎಲ್ಲರಿಗೂ ವಿಜಯದಶಮಿ ಹಬ್ಬದ ಶುಭಾಶಯಗಳು. ನಮ್ಮ ಚಿತ್ರ ಸ್ವಾತಿ ಮುತ್ತಿನ ಮಳೆ ಹನಿಯೇ ನವೆಂಬರ್ 24ರಂದು ರಾಜ್ಯಾದ್ಯಂತ ಬಿಡುಗಡೆ ಆಗಲಿದೆ’ ಎಂದು ಕ್ಯಾಪ್ಶನ್ ನೀಡಲಾಗಿದೆ.

ಇದನ್ನೂ ಓದಿ: ಪಾಕ್ ವಿರುದ್ಧ ಭಾರತದ ಗೆಲುವಿಗೆ ರಮ್ಯಾ ಸಂಭ್ರಮ: ಆದರೂ ಅವರಿಗೆ ಇದೆ ಒಂದು ಬೇಸರ; ಏನದು?

ಸದ್ಯ ಈ ವಿಚಾರ ರಮ್ಯಾ ಅಭಿಮಾನಿಗಳಿಗೆ ಖುಷಿ ನೀಡಿದೆ. ಎಲ್ಲರೂ ರಮ್ಯಾಗೆ ಆಲ್​ ದಿ ಬೆಸ್ಟ್ ಹೇಳುತ್ತಿದ್ದಾರೆ. ಸಿನಿಮಾ ಗೆಲುವು ಕಾಣಲಿ ಎಂದು ಹಾರೈಸಿದ್ದಾರೆ. ‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಸಿನಿಮಾದಲ್ಲಿ ರಮ್ಯಾ ಅತಿಥಿ ಪಾತ್ರ ಮಾಡಿದ್ದರು. ‘ಉತ್ತರಕಾಂಡ’ ಚಿತ್ರದಲ್ಲಿ ಅವರು ಮುಖ್ಯಭೂಮಿಕೆ ನಿರ್ವಹಿಸುತ್ತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ