AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊನೆಗೂ ರಿವೀಲ್ ಆಯ್ತು ರಮ್ಯಾ ನಿರ್ಮಾಣದ ‘ಸ್ವಾತಿ ಮುತ್ತಿನ ಮಳೆ ಹನಿಯೇ’ ಸಿನಿಮಾ ರಿಲೀಸ್​​ ದಿನಾಂಕ

ಸಿನಿಮಾ ರಿಲೀಸ್ ಬಗ್ಗೆ ಆ್ಯಪಲ್ ಬಾಕ್ಸ್ ಸೋಶಿಯಲ್ ಮೀಡಿಯಾ ತಾಣದಲ್ಲಿ ಮಾಹಿತಿ ಹಂಚಿಕೊಳ್ಳಲಾಗಿದೆ. ರಾಜ್ ಬಿ ಶೆಟ್ಟಿ ಹಾಗೂ ಸಿರಿ ರವಿಕುಮಾರ್ ಒಟ್ಟಾಗಿ ಇರುವ ಪೋಸ್ಟರ್ ಹಂಚಿಕೊಳ್ಳಲಾಗಿದೆ. ಇದರಲ್ಲಿ ಬಿಡುಗಡೆ ದಿನಾಂಕ ತಿಳಿಸಲಾಗಿದೆ.

ಕೊನೆಗೂ ರಿವೀಲ್ ಆಯ್ತು ರಮ್ಯಾ ನಿರ್ಮಾಣದ ‘ಸ್ವಾತಿ ಮುತ್ತಿನ ಮಳೆ ಹನಿಯೇ’ ಸಿನಿಮಾ ರಿಲೀಸ್​​ ದಿನಾಂಕ
ರಾಜ್ ಬಿ ಶೆಟ್ಟಿ-ರವಿ ಸಿರಿ ಕುಮಾರ್
ರಾಜೇಶ್ ದುಗ್ಗುಮನೆ
|

Updated on: Oct 24, 2023 | 12:04 PM

Share

ನಟಿ ರಮ್ಯಾ (Ramya) ಅವರು ನಟನೆಗೆ ಕಂಬ್ಯಾಕ್ ಮಾಡಿದ್ದಾರೆ. ಇದರ ಜೊತೆಗೆ ಅವರು ಸಿನಿಮಾ ನಿರ್ಮಾಣದಲ್ಲೂ ತೊಡಗಿಕೊಂಡಿದ್ದಾರೆ. ತಮ್ಮ ನಿರ್ಮಾಣ ಸಂಸ್ಥೆ ‘ಆ್ಯಪಲ್ ಬಾಕ್ಸ್ ಸ್ಟುಡಿಯೋ’ ಮೂಲಕ ಅವರು ‘ಸ್ವಾತಿ ಮುತ್ತಿನ ಮಳೆ ಹನಿಯೇ’ ಸಿನಿಮಾ ನಿರ್ಮಾಣ ಮಾಡಿದ್ದಾರೆ. ಈ ಚಿತ್ರದ ಶೂಟಿಂಗ್ ಮುಗಿದು ಬಹಳ ಸಮಯ ಕಳೆದಿದೆ. ಈಗ ಸಿನಿಮಾದ ರಿಲೀಸ್ ದಿನಾಂಕದ ಬಗ್ಗೆ ಮಾಹಿತಿ ಸಿಕ್ಕಿದೆ. ನವೆಂಬರ್ 24ರಂದು ಚಿತ್ರ ರಾಜ್ಯಾದ್ಯಂತ ಬಿಡುಗಡೆ ಆಗುತ್ತಿದೆ.

ರಮ್ಯಾ ಅವರು ಈ ಮೊದಲು ರಾಜಕೀಯ ಹಾಗೂ ಸಿನಿಮಾ ಕ್ಷೇತ್ರದಿಂದ ದೂರವೇ ಇದ್ದರು. ಆ ಬಳಿಕ ಅವರು ನಿಧಾನವಾಗಿ ಚಿತ್ರರಂಗದ ಜೊತೆ ಸಂಪರ್ಕ ಬೆಳೆಸಿಕೊಳ್ಳುತ್ತಾ ಬಂದರು. ‘ಸ್ವಾತಿ ಮುತ್ತಿನ ಮಳೆ ಹನಿಯೇ’ ಸಿನಿಮಾನ ನಿರ್ಮಾಣ ಮಾಡುವುದರ ಜೊತೆಗೆ  ಈ ಚಿತ್ರದಲ್ಲಿ ನಟಿಸುವುದಾಗಿ ಅವರು ಮೊದಲು ಹೇಳಿದ್ದರು. ಆದರೆ, ಬಳಿಕ ಮನಸ್ಸು ಬದಲಿಸಿದರು. ಈ ಚಿತ್ರದಲ್ಲಿ ರಾಜ್​ ಬಿ ಶೆಟ್ಟಿಗೆ ಜೊತೆಯಾಗಿ ಸಿರಿ ರವಿಕುಮಾರ್ ನಟಿಸಿದ್ದಾರೆ.

ಸಿನಿಮಾ ರಿಲೀಸ್ ಬಗ್ಗೆ ಆ್ಯಪಲ್ ಬಾಕ್ಸ್ ಸೋಶಿಯಲ್ ಮೀಡಿಯಾ ತಾಣದಲ್ಲಿ ಮಾಹಿತಿ ಹಂಚಿಕೊಳ್ಳಲಾಗಿದೆ. ರಾಜ್ ಬಿ ಶೆಟ್ಟಿ ಹಾಗೂ ಸಿರಿ ರವಿಕುಮಾರ್ ಒಟ್ಟಾಗಿ ಇರುವ ಪೋಸ್ಟರ್ ಹಂಚಿಕೊಳ್ಳಲಾಗಿದೆ. ನವೆಂಬರ್ 24ರಂದು ಚಿತ್ರ ಬಿಡುಗಡೆ ಅಗಲಿದೆ ಎಂದು ತಂಡ ಮಾಹಿತಿ ನೀಡಿದೆ. ‘ಎಲ್ಲರಿಗೂ ವಿಜಯದಶಮಿ ಹಬ್ಬದ ಶುಭಾಶಯಗಳು. ನಮ್ಮ ಚಿತ್ರ ಸ್ವಾತಿ ಮುತ್ತಿನ ಮಳೆ ಹನಿಯೇ ನವೆಂಬರ್ 24ರಂದು ರಾಜ್ಯಾದ್ಯಂತ ಬಿಡುಗಡೆ ಆಗಲಿದೆ’ ಎಂದು ಕ್ಯಾಪ್ಶನ್ ನೀಡಲಾಗಿದೆ.

ಇದನ್ನೂ ಓದಿ: ಪಾಕ್ ವಿರುದ್ಧ ಭಾರತದ ಗೆಲುವಿಗೆ ರಮ್ಯಾ ಸಂಭ್ರಮ: ಆದರೂ ಅವರಿಗೆ ಇದೆ ಒಂದು ಬೇಸರ; ಏನದು?

ಸದ್ಯ ಈ ವಿಚಾರ ರಮ್ಯಾ ಅಭಿಮಾನಿಗಳಿಗೆ ಖುಷಿ ನೀಡಿದೆ. ಎಲ್ಲರೂ ರಮ್ಯಾಗೆ ಆಲ್​ ದಿ ಬೆಸ್ಟ್ ಹೇಳುತ್ತಿದ್ದಾರೆ. ಸಿನಿಮಾ ಗೆಲುವು ಕಾಣಲಿ ಎಂದು ಹಾರೈಸಿದ್ದಾರೆ. ‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಸಿನಿಮಾದಲ್ಲಿ ರಮ್ಯಾ ಅತಿಥಿ ಪಾತ್ರ ಮಾಡಿದ್ದರು. ‘ಉತ್ತರಕಾಂಡ’ ಚಿತ್ರದಲ್ಲಿ ಅವರು ಮುಖ್ಯಭೂಮಿಕೆ ನಿರ್ವಹಿಸುತ್ತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ಸಾವಿನ ಕೊನೆ ಗಳಿಗೆಯಲ್ಲಿ ಬಾಯಿಗೆ ಗಂಗಾಜಲ ಯಾಕೆ ಬಿಡ್ತಾರೆ ಗೊತ್ತಾ?
ಸಾವಿನ ಕೊನೆ ಗಳಿಗೆಯಲ್ಲಿ ಬಾಯಿಗೆ ಗಂಗಾಜಲ ಯಾಕೆ ಬಿಡ್ತಾರೆ ಗೊತ್ತಾ?
ಇಂದು ಈ ರಾಶಿಯವರಿಗೆ ಜವಾಬ್ದಾರಿಗಳು ಹೆಚ್ಚಾಗಲಿವೆ
ಇಂದು ಈ ರಾಶಿಯವರಿಗೆ ಜವಾಬ್ದಾರಿಗಳು ಹೆಚ್ಚಾಗಲಿವೆ
ಪ್ರಮಾಣವಚನಕ್ಕೂ ಮುನ್ನವೇ ಡಿಕೆಶಿ​​​ ನಿವಾಸಕ್ಕೆ ಭದ್ರತೆ ಹೇಗಿದೆ ನೋಡಿ
ಪ್ರಮಾಣವಚನಕ್ಕೂ ಮುನ್ನವೇ ಡಿಕೆಶಿ​​​ ನಿವಾಸಕ್ಕೆ ಭದ್ರತೆ ಹೇಗಿದೆ ನೋಡಿ
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ