Kichcha Sudeep: ರಮ್ಯಾ ಅಥವಾ ರಕ್ಷಿತಾ? ಈ ಪ್ರಶ್ನೆಗೆ ಸುದೀಪ್ ಕೊಟ್ಟ ಉತ್ತರ ಏನು?  

ಕಿಚ್ಚ ಸುದೀಪ್ ಅವರು ಹಲವು ಹೀರೋಯಿನ್​ಗಳ ಜೊತೆ ತೆರೆ ಹಂಚಿಕೊಂಡಿದ್ದಾರೆ. ಅವರ ಎಲ್ಲರ ಜೊತೆಯೂ ಒಳ್ಳೆಯ ಗೆಳೆತನ ಹೊಂದಿದ್ದಾರೆ. ಅದರಲ್ಲೂ ರಮ್ಯಾ ಅಥವಾ ರಕ್ಷಿತಾ ಮಧ್ಯೆ ಅವರಿಗೆ ಒಳ್ಳೆಯ ಫ್ರೆಂಡ್​ಶಿಪ್ ಇದೆ. ಈಗ ಸುದೀಪ್​ಗೆ ಇಬ್ಬರಲ್ಲಿ ಒಬ್ಬರನ್ನು ಆಯ್ಕೆ ಮಾಡಿಕೊಳ್ಳೋ ಪರಿಸ್ಥಿತಿ ಎದುರಾಗಿದೆ.

Kichcha Sudeep: ರಮ್ಯಾ ಅಥವಾ ರಕ್ಷಿತಾ? ಈ ಪ್ರಶ್ನೆಗೆ ಸುದೀಪ್ ಕೊಟ್ಟ ಉತ್ತರ ಏನು?  
ರಮ್ಯಾ ಅಥವಾ ರಕ್ಷಿತಾ? ಈ ಪ್ರಶ್ನೆಗೆ ಸುದೀಪ್ ಕೊಟ್ಟ ಉತ್ತರ ಏನು?  
Follow us
|

Updated on: Jul 09, 2024 | 7:05 AM

ಕಿಚ್ಚ ಸುದೀಪ್ ಅವರು ಚಿತ್ರರಂಗದಲ್ಲಿ ದೊಡ್ಡ ಮಟ್ಟದ ಹೆಸರು ಮಾಡಿದ್ದಾರೆ. ಅವರು ಚಿತ್ರರಂಗಕ್ಕೆ ಕಾಲಿಟ್ಟು 28 ವರ್ಷಗಳು ಕಳೆದಿವೆ. ಅವರು ಹಲವು ಸಿನಿಮಾಗಳನ್ನು ಒಪ್ಪಿಕೊಂಡು ನಟಿಸುತ್ತಿದ್ದಾರೆ. ಈಗ ಅವರನ್ನು ಸಮರ್ಜಿತ್ ಲಂಕೇಶ್ ಅವರು ಸಂದರ್ಶನ ಮಾಡಿದ್ದಾರೆ. ಈ ವೇಳೆ ಅವರಿಗೆ ಫೇವರಿಟ್ ಯಾವುದು ಎನ್ನುವುದನ್ನು ಹೇಳೋ ಟಾಸ್ಕ್ ನೀಡಲಾಗಿತ್ತು. ಈ ಟಾಸ್ಕ್​ನ ಸುದೀಪ್ ಸಮರ್ಥವಾಗಿ ನಿಭಾಯಿಸಿದ್ದಾರೆ. ರಮ್ಯಾ ಹಾಗೂ ರಕ್ಷಿತಾ ಅವರ ವಿಚಾರದಲ್ಲಿ ಕೇಳಿದ ಪ್ರಶ್ನೆಗೆ ಅವರು ನೀಡಿದ ಉತ್ತರ ಮೆಚ್ಚುಗೆ ಪಡೆದಿದೆ.

ಸಮರ್ಜಿತ್ ನಟನೆಯ ‘ಗೌರಿ’ ಸಿನಿಮಾ ರಿಲೀಸ್​ಗೆ ರೆಡಿ ಇದೆ. ಈ ಚಿತ್ರದಲ್ಲಿ ಸಮರ್ಜಿತ್​ಗೆ ಸನ್ಯಾ ಅಯ್ಯರ್ ನಾಯಕಿ. ಈ ಚಿತ್ರವನ್ನು ಸ್ವತಃ ಸಮರ್ಜಿತ್ ತಂದೆ ಇಂದ್ರಜಿತ್ ಲಂಕೇಶ್ ಅವರು ನಿರ್ದೇಶನ ಮಾಡುತ್ತಿದ್ದಾರೆ. ಈ ಸಿನಿಮಾದ ಪ್ರಚಾರದ ಭಾಗವಾಗಿ ಸಮರ್ಜಿತ್ ಅವರು ಸುದೀಪ್ ಅವರನ್ನು ಸಂದರ್ಶಿಸಿದ್ದಾರೆ. ಈ ಸಂದರ್ಶನ ‘ಕಲಾ ಮಾಧ್ಯಮ’ ಯೂಟ್ಯೂಬ್ ಚಾನೆಲ್ ಮೂಲಕ ಬಿಡುಗಡೆ ಆಗಿದೆ. ಇದರಲ್ಲಿ ರ‍್ಯಾಪಿಡ್ ಫೈರ್ ರೀತಿಯ ಪ್ರಶ್ನೆ ಕೇಳಲಾಗಿದೆ.

ಯಾವುದು ಫೇವರಿಟ್ ಎಂಬುದನ್ನು ಹೇಳಬೇಕಿತ್ತು. ‘ಆಟೋಗ್ರಾಫ್ ಅಥವಾ ಜಸ್ಟ್ ಮಾತ್​ ಮಾತಲ್ಲಿ’ ಎನ್ನುವ ಪ್ರಶ್ನೆಗೆ ಸುದೀಪ್ ಆಟೋಗ್ರಾಫ್ ಆಯ್ಕೆ ಮಾಡಿದ್ದಾರೆ. ‘ನಿರ್ದೇಶನ ಅಥವಾ ನಟನೆ’ ಎನ್ನುವ ಪ್ರಶ್ನೆಗೆ ನಿರ್ದೇಶನ ಎಂದಿದ್ದಾರೆ. ಫೈಟಿಂಗ್ ಅಥವಾ ಡ್ಯಾನ್ಸಿಂಗ್​ ಚಾಯ್ಸ್​ನಲ್ಲಿ ಫೈಟಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ ಅವರು. ಫೇವರಿಟ್ ಹೀರೋಯಿನ್ ರಮ್ಯಾ ಅಥವಾ ರಕ್ಷಿತಾ ಎಂದು ಕೇಳಲಾಗಿದೆ.

ಇದನ್ನೂ ಓದಿ: ‘ನಾನು ಜೀವನದಲ್ಲಿ ಬಾಸ್ ಎಂದು ಕರೆಯೋದು ಇಬ್ಬರಿಗೆ ಮಾತ್ರ’; ಕಿಚ್ಚ ಸುದೀಪ್

ಈ ಪ್ರಶ್ನೆಗೆ ಸುದೀಪ್ ಗೊಂದಲಕ್ಕೆ ಬಿದ್ದರು. ‘ಇಬ್ಬರ ಬಳಿಯೂ ಹೊಡೆಸಿಕೊಳ್ಳುತ್ತೇನೆ’ ಎಂದರು ಸುದೀಪ್. ‘ಅವರಿಬ್ಬರ ಫೇವರಿಟ್ ಹೀರೋ ನಾನು’ ಎಂದರು ಸುದೀಪ್. ಈ ಡೈಲಾಗ್ ಅನೇಕರಿಗೆ ಇಷ್ಟ ಆಗಿದೆ. ಸುದೀಪ್ ಅವರು ಪರಿಸ್ಥಿತಿಯನ್ನು ಮ್ಯಾನೇಜ್ ಮಾಡಿದ ರೀತಿಗೆ ಅನೇಕರು ಮೆಚ್ಚುಗೆ ಸೂಚಿಸಿದ್ದಾರೆ. ಸುದೀಪ್ ಅವರಿಗೆ ರಮ್ಯಾ ಹಾಗೂ ರಕ್ಷಿತಾ ಜೊತೆ ಒಳ್ಳೆಯ ಫ್ರೆಂಡ್​ಶಿಪ್ ಇದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಕುಮಾರಸ್ವಾಮಿ ವಿರುದ್ಧ ಯೋಗೇಶ್ವರ್ ಮಾಡಿದ ಆರೋಪ ಸರಿಯಲ್ಲ: ನಿಖಿಲ್
ಕುಮಾರಸ್ವಾಮಿ ವಿರುದ್ಧ ಯೋಗೇಶ್ವರ್ ಮಾಡಿದ ಆರೋಪ ಸರಿಯಲ್ಲ: ನಿಖಿಲ್
ಕೃಷ್ಣ ಭಜನೆ, ಭಾರತೀಯ ನೃತ್ಯದ ಮೂಲಕ ರಷ್ಯಾದಲ್ಲಿ ಪ್ರಧಾನಿ ಮೋದಿಗೆ ಸ್ವಾಗತ
ಕೃಷ್ಣ ಭಜನೆ, ಭಾರತೀಯ ನೃತ್ಯದ ಮೂಲಕ ರಷ್ಯಾದಲ್ಲಿ ಪ್ರಧಾನಿ ಮೋದಿಗೆ ಸ್ವಾಗತ
ಕಾಂಗ್ರೆಸ್​ನಿಂದ ಸ್ಪರ್ಧಿಸಿ ಗೆದ್ದರೆ ಮಂತ್ರಿಯಾಗಬಹುದೇ ಯೋಗೇಶ್ವರ್?
ಕಾಂಗ್ರೆಸ್​ನಿಂದ ಸ್ಪರ್ಧಿಸಿ ಗೆದ್ದರೆ ಮಂತ್ರಿಯಾಗಬಹುದೇ ಯೋಗೇಶ್ವರ್?
ಊಹಾಪೋಹಗಳಿಗೆ ತೆರೆಹಾಡಿದ ಯೋಗೇಶ್ವರ್ ತಮ್ಮ ಚಿಹ್ನೆ ಇನ್ನೂ ನಿರ್ಧರಿಸಿಲ್ಲ
ಊಹಾಪೋಹಗಳಿಗೆ ತೆರೆಹಾಡಿದ ಯೋಗೇಶ್ವರ್ ತಮ್ಮ ಚಿಹ್ನೆ ಇನ್ನೂ ನಿರ್ಧರಿಸಿಲ್ಲ
ಸುರೇಶ್ ಚುನಾವಣೆ ಸ್ಪರ್ಧೆಯಿಂದ ದೂರವುಳಿಯಲು ನಿರ್ಧರಿಸಿದ್ದಾರೆ: ಬಾಲಕೃಷ್ಣ
ಸುರೇಶ್ ಚುನಾವಣೆ ಸ್ಪರ್ಧೆಯಿಂದ ದೂರವುಳಿಯಲು ನಿರ್ಧರಿಸಿದ್ದಾರೆ: ಬಾಲಕೃಷ್ಣ
ಗಸ್ತು ತಿರುಗುವ ಕುರಿತು ಭಾರತ-ಚೀನಾ ಒಪ್ಪಂದದ ಬಗ್ಗೆ ಸೇನಾ ಮುಖ್ಯಸ್ಥರ ಮಾತು
ಗಸ್ತು ತಿರುಗುವ ಕುರಿತು ಭಾರತ-ಚೀನಾ ಒಪ್ಪಂದದ ಬಗ್ಗೆ ಸೇನಾ ಮುಖ್ಯಸ್ಥರ ಮಾತು
ಯಾವ ಪಕ್ಷದಿಂದ ಸ್ಪರ್ಧಿಸಬೇಕೆನ್ನುವ ಗೊಂದಲದಲ್ಲಿ ಬಿಜೆಪಿ ನಾಯಕ ಯೋಗೇಶ್ವರ್
ಯಾವ ಪಕ್ಷದಿಂದ ಸ್ಪರ್ಧಿಸಬೇಕೆನ್ನುವ ಗೊಂದಲದಲ್ಲಿ ಬಿಜೆಪಿ ನಾಯಕ ಯೋಗೇಶ್ವರ್
ಕೇಕ್​ನಲ್ಲಿ ಮೂಡಿದ ಮರಳು ದಂಧೆಯ ಚಿತ್ರಣ
ಕೇಕ್​ನಲ್ಲಿ ಮೂಡಿದ ಮರಳು ದಂಧೆಯ ಚಿತ್ರಣ
ಬದೋನಿ ಬ್ಯೂಟಿ... ಅತ್ಯುತ್ತಮ ಡೈವಿಂಗ್ ಕ್ಯಾಚ್ ಹಿಡಿದ ಆಯುಷ್
ಬದೋನಿ ಬ್ಯೂಟಿ... ಅತ್ಯುತ್ತಮ ಡೈವಿಂಗ್ ಕ್ಯಾಚ್ ಹಿಡಿದ ಆಯುಷ್
ಭೂಮಾಫಿಯಾ ಜೊತೆ ಬಿಬಿಎಂಪಿ ಅಧಿಕಾರಿಗಳು ಶಾಮೀಲು: ಜಗದೀಶ್, ವಕೀಲ
ಭೂಮಾಫಿಯಾ ಜೊತೆ ಬಿಬಿಎಂಪಿ ಅಧಿಕಾರಿಗಳು ಶಾಮೀಲು: ಜಗದೀಶ್, ವಕೀಲ