AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ನಿಮ್ಮ ಅಜ್ಞಾನ ನಿಜಕ್ಕೂ ದಿಗ್ಭ್ರಮೆಗೊಳಿಸಿದೆ’; ಕಡ್ಡಿ ಮುರಿದಂತೆ ಹೇಳಿದ ನಟಿ ರಮ್ಯಾ

ದಕ್ಷಿಣದ ಭಾಷೆಗಳ ಸಿನಿಮಾವನ್ನು ಹಿಂದಿಯಲ್ಲಿ ಡಬ್​ ಮಾಡುವುದು ಹಾಗೂ ಹಿಂದಿ ರಾಷ್ಟ್ರ ಭಾಷೆ ಅಲ್ಲ ಎನ್ನುವುದು ಎರಡು ಪ್ರತ್ಯೇಕವಾದ ವಿಚಾರ. ಅದನ್ನು ಅಜಯ್​ ದೇವಗನ್​ ಅವರು ಸರಿಯಾಗಿ ಅರ್ಥ ಮಾಡಿಕೊಂಡಿಲ್ಲ ಎಂದು ಅನೇಕರು ಕಿವಿ ಹಿಂಡುತ್ತಿದ್ದಾರೆ.

‘ನಿಮ್ಮ ಅಜ್ಞಾನ ನಿಜಕ್ಕೂ ದಿಗ್ಭ್ರಮೆಗೊಳಿಸಿದೆ’; ಕಡ್ಡಿ ಮುರಿದಂತೆ ಹೇಳಿದ ನಟಿ ರಮ್ಯಾ
ರಮ್ಯಾ-ಅಜಯ್ ದೇವಗನ್
TV9 Web
| Edited By: |

Updated on: Apr 28, 2022 | 5:36 PM

Share

ಅಜಯ್ ದೇವಗನ್ (Ajay Devgn) ಮಾಡಿರುವ ಒಂದು ಟ್ವೀಟ್ ಸಾಕಷ್ಟು ಚರ್ಚೆ ಹುಟ್ಟು ಹಾಕಿದೆ. ‘ಹಿಂದಿ ರಾಷ್ಟ್ರ ಭಾಷೆ’ ಎಂದು ಹೇಳುವ ಮೂಲಕ ಅವರು ಪೇಚಿಗೆ ಸಿಲುಕಿದ್ದಾರೆ. ಹಿಂದಿ ರಾಷ್ಟ್ರ ಭಾಷೆ ಅಲ್ಲ ಎಂಬುದು ಸತ್ಯ. ಆದರೆ, ಈ ಮೊದಲು ಹಿಂದಿ ನಮ್ಮ ದೇಶದ ರಾಷ್ಟ್ರ ಭಾಷೆ ಎಂಬುದನ್ನು ತಲೆಯಲ್ಲಿ ತುಂಬಲಾಗಿತ್ತು. ಪಠ್ಯಗಳಲ್ಲೂ ಅದನ್ನೇ ಸೇರಿಸಲಾಗಿತ್ತು. ಆದರೆ, ಈಗ ಅನೇಕರಲ್ಲಿ ಜಾಗೃತಿ ಮೂಡಿದೆ. ‘ಹಿಂದಿ ನಮ್ಮ ರಾಷ್ಟ್ರ ಭಾಷೆ’ ಎಂಬ ಸುಳ್ಳನ್ನು ಹೇಳಿದರೆ ಜನರು ನಗುತ್ತಾರೆ. ಆದಾಗ್ಯೂ, ಅಜಯ್​ ದೇವಗನ್ ಈ ಹೇಳಿಕೆಯನ್ನು ನೀಡಿದ್ದರು. ಈ ವಿಚಾರಕ್ಕೆ ಸಂಬಂಧಿಸಿ ನಟಿ ರಮ್ಯಾ (Ramya) ಬೋಲ್ಡ್ ಹೇಳಿಕೆ ನೀಡಿದ್ದಾರೆ.

ಹಿಂದಿ ಬಗ್ಗೆ ಸುದೀಪ್ ಹೇಳಿದ ಮಾತು ಚರ್ಚೆ ಹುಟ್ಟು ಹಾಕಿತ್ತು. ಈ ವಿಚಾರಕ್ಕೆ ಸಂಬಂಧಿಸಿ ಮಾತನಾಡಿದ್ದ ಅಜಯ್ ​ದೇವಗನ್, ‘ನನ್ನ ಸಹೋದರ ಕಿಚ್ಚ ಸುದೀಪ್​ ಅವರೇ.. ನಿಮ್ಮ ಪ್ರಕಾರ ಹಿಂದಿ ರಾಷ್ಟ್ರ ಭಾಷೆ ಅಲ್ಲ ಎಂಬುದಾದರೆ ನಿಮ್ಮ ಮಾತೃಭಾಷೆಯ ಸಿನಿಮಾಗಳನ್ನು ಹಿಂದಿಗೆ ಡಬ್ ಮಾಡಿ ನೀವೇಕೆ ರಿಲೀಸ್​ ಮಾಡುತ್ತೀರಿ? ಅಂದು, ಇಂದು ಎಂದೆಂದಿಗೂ ಹಿಂದಿಯೇ ನಮ್ಮ ರಾಷ್ಟ್ರ ಭಾಷೆ ಆಗಿರಲಿದೆ. ಜನ ಗಣ ಮನ’ ಎಂದಿದ್ದಾರೆ. ಅವರ ಈ ಮಾತಿಗೆ ಅನೇಕರಿಂದ ಖಂಡನೆ ವ್ಯಕ್ತವಾಗುತ್ತಿದೆ.

ರಮ್ಯಾ ಕೂಡ ಈ ವಿಚಾರದ ಬಗ್ಗೆ ಪ್ರತಿಕ್ರಿಯಿಸಿದ್ದಾರೆ. ‘ಹಿಂದಿ ನಮ್ಮ ರಾಷ್ಟ್ರಭಾಷೆಯಾಗಿ ಉಳಿದಿಲ್ಲ. ಅಜಯ್ ದೇವಗನ್ ಅವರೇ ನಿಮ್ಮ ಅಜ್ಞಾನ ನನ್ನನ್ನು ದಿಗ್ಭ್ರಮೆಗೊಳಿಸಿದೆ. ಕೆಜಿಎಫ್, ಪುಷ್ಪ ಹಾಗೂ ಆರ್​ಆರ್​ಆರ್​ ಹಿಂದಿ ಬೆಲ್ಟ್​ನಲ್ಲಿ ಉತ್ತಮ ಪರ್ಫಾರ್ಮೆನ್ಸ್ ಮಾಡಿರುವುದು ನಿಜಕ್ಕೂ ಗ್ರೇಟ್. ಕಲೆಗೆ ಭಾಷೆಯ ತಡೆ ಇಲ್ಲ. ನಿಮ್ಮ ಸಿನಿಮಾಗಳನ್ನು ನಾವು ನೋಡಿ ಆನಂದಿಸಿದಂತೆ ದಯವಿಟ್ಟು ನಮ್ಮ ಸಿನಿಮಾಗಳನ್ನು ನೋಡಿ ನೀವೂ ಆನಂದಿಸಿ’ ಎಂದು ಬರೆದುಕೊಂಡಿರುವ ಅವರು, ‘ಹಿಂದಿ ಹೇರಿಕೆ ನಿಲ್ಲಿಸಿ’ ಎನ್ನುವ ಹ್ಯಾಶ್​ಟ್ಯಾಗ್ ನೀಡಿದ್ದಾರೆ.

ದಕ್ಷಿಣದ ಭಾಷೆಗಳ ಸಿನಿಮಾವನ್ನು ಹಿಂದಿಯಲ್ಲಿ ಡಬ್​ ಮಾಡುವುದು ಹಾಗೂ ಹಿಂದಿ ರಾಷ್ಟ್ರ ಭಾಷೆ ಅಲ್ಲ ಎನ್ನುವುದು ಎರಡು ಪ್ರತ್ಯೇಕವಾದ ವಿಚಾರ. ಅದನ್ನು ಅಜಯ್​ ದೇವಗನ್​ ಅವರು ಸರಿಯಾಗಿ ಅರ್ಥ ಮಾಡಿಕೊಂಡಿಲ್ಲ ಎಂದು ಅನೇಕರು ಕಿವಿ ಹಿಂಡುತ್ತಿದ್ದಾರೆ.

ಇದನ್ನೂ ಓದಿ: ಹಿಂದಿ ವಿವಾದ: ಸುದೀಪ್​ ವರ್ಸಸ್​ ಅಜಯ್​ ದೇವಗನ್​ ಕಾಂಟ್ರವರ್ಸಿ ಶುರು ಆಗಿದ್ದು ಹೇಗೆ? ಇಲ್ಲಿದೆ ವಿವರ..

ಅಜಯ್​ ದೇವಗನ್ ಟ್ವೀಟ್ ಬಗ್ಗೆ ನಿರ್ದೇಶಕ ಯೋಗರಾಜ್ ಭಟ್ ಹೇಳಿದ್ದೇನು?

Follow Us
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್