AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜಕೀಯ-ನಟನೆಯಿಂದ ದೂರ ಉಳಿದಿರುವ ರಮ್ಯಾ ಈಗೇನು ಮಾಡ್ತಿದಾರೆ? ಇಲ್ಲಿದೆ ನೋಡಿ ವಿಡಿಯೋ

ರಾಜಕೀಯಕ್ಕೆ ಕಾಲಿಟ್ಟ ನಂತರ ರಮ್ಯಾ ಸಿನಿಮಾ ರಂಗದಲ್ಲಿ ಚಾರ್ಮ್​ ಕಳೆದುಕೊಂಡರು ಎನ್ನುವ ವಿಚಾರ ಗುಟ್ಟಾಗಿಯೇನು ಉಳಿದಿಲ್ಲ. ಇವೆಲ್ಲವುಗಳ ಮಧ್ಯೆ ರಮ್ಯಾ ತಮ್ಮದೇ ಲೋಕ ಕಟ್ಟಿಕೊಂಡಿದ್ದಾರೆ!

ರಾಜಕೀಯ-ನಟನೆಯಿಂದ ದೂರ ಉಳಿದಿರುವ ರಮ್ಯಾ ಈಗೇನು ಮಾಡ್ತಿದಾರೆ? ಇಲ್ಲಿದೆ ನೋಡಿ ವಿಡಿಯೋ
ನಟಿ ರಮ್ಯಾ
ರಾಜೇಶ್ ದುಗ್ಗುಮನೆ
| Updated By: ಆಯೇಷಾ ಬಾನು|

Updated on:Feb 22, 2021 | 2:30 PM

Share

ದಶಕಗಳ ಹಿಂದೆ ನಟಿ ರಮ್ಯಾ ಸ್ಯಾಂಡಲ್​ವುಡ್​ನ ಬಹುಬೇಡಿಕೆಯ ನಟಿ ಆಗಿದ್ದರು. ರಮ್ಯಾ ಸಿನಿಮಾದಲ್ಲಿದ್ದಾರೆ ಎಂದರೆ ಅವರನ್ನು ನೋಡಲೆಂದೇ ಚಿತ್ರಮಂದರಕ್ಕೆ ತೆರಳುವವರ ಸಂಖ್ಯೆ ಏನು ಕಡಿಮೆ ಇರಲಿಲ್ಲ. ಹೀಗಾಗಿ, ನಿರ್ಮಾಪಕರ ಪಾಲಿಗೆ ರಮ್ಯಾ ಲಕ್ಷ್ಮಿಯೇ ಆಗಿದ್ದರು. ಆದರೆ, ರಮ್ಯಾ ಸಿನಿಮಾ ರಂಗ ತೊರೆದು ರಾಜಕೀಯ ಸೇರಿದ್ದರು. ಈಗ ರಾಜಕೀಯದಲ್ಲೂ ಅವರು ಆ್ಯಕ್ಟಿವ್​ ಆಗಿಲ್ಲ. ಹಾಗಾದರೆ, ರಮ್ಯಾ ಏನು ಮಾಡುತ್ತಿದ್ದಾರೆ ಎಂಬುದಕ್ಕೆ ಇಲ್ಲಿದೆ ಉತ್ತರ.

ರಮ್ಯಾ ನಟನೆಯಲ್ಲಿ ಉತ್ತುಂಗದಲ್ಲಿರುವಾಗಲೇ ರಾಜಕೀಯಕ್ಕೆ ಸೇರಿದ್ದರು. 2012ರಲ್ಲಿ ರಮ್ಯಾ ಕಾಂಗ್ರೆಸ್​ ಪಾರ್ಟಿ ಸೇರ್ಪಡೆ ಆಗಿದ್ದರು. 2013ರಲ್ಲಿ ನಡೆದ ಮಂಡ್ಯ ಲೋಕಸಭಾ ಉಪ ಚುನಾವಣೆಯಲ್ಲಿ ರಮ್ಯಾ ಗೆಲುವು ಸಾಧಿಸಿದ್ದರು. 2014ರಲ್ಲಿ ನಡೆದ ಲೋಕಸಭಾ ಚುನಾವಣೆಯಲ್ಲಿ ಅವರು ಮತ್ತೆ ಸ್ಪರ್ಧೆ ಮಾಡಿದರೂ ಗೆಲುವು ಅವರಿಗೆ ಒಲಿಯಲಿಲ್ಲ.

2017ರಲ್ಲಿ ಅವರಿಗೆ ಕಾಂಗ್ರೆಸ್​ ಸೋಶಿಯಲ್​ ಮೀಡಿಯಾ ರಾಷ್ಟ್ರೀಯ ಮುಖ್ಯಸ್ಥರನ್ನಾಗಿ ಮಾಡಲಾಯಿತು. 2018ರಲ್ಲಿ ಅವರು ತಮ್ಮ ಸ್ಥಾನದಿಂದ ಕೆಳಗೆ ಇಳಿದಿದ್ದರು. ನಂತರ ರಮ್ಯಾ ರಾಜಕೀಯದಿಂದ ಮಾತ್ರವಲ್ಲದೆ, ಸಾಮಾಜಿಕ ಜಾಲತಾಣದಿಂದಲೂ ದೂರ ಉಳಿದಿದ್ದರು. ನಂತರ ರಮ್ಯಾ ಮತ್ತೆ ಸಾಮಾಜಿಕ ಜಾಲತಾಣಕ್ಕೆ ವಾಪಾಸಾಗಿದ್ದರು.

ರಾಜಕೀಯಕ್ಕೆ ಕಾಲಿಟ್ಟ ನಂತರ ರಮ್ಯಾ ಸಿನಿಮಾ ರಂಗದಲ್ಲಿ ಚಾರ್ಮ್​ ಕಳೆದುಕೊಂಡರು ಎನ್ನುವ ವಿಚಾರ ಗುಟ್ಟಾಗಿಯೇನು ಉಳಿದಿಲ್ಲ. ಈ ಮಧ್ಯೆ ರಮ್ಯಾ ಮದುವೆ ವಿಚಾರ ಹರಿದಾಡಿದ್ದರೂ ಅದರಲ್ಲಿ ಹುರುಳಿಲ್ಲ ಎಂಬುದು ನಂತರ ಗೊತ್ತಾಗಿತ್ತು. ಇವೆಲ್ಲವುಗಳ ಮಧ್ಯೆ ರಮ್ಯಾ ತಮ್ಮದೇ ಲೋಕ ಕಟ್ಟಿಕೊಂಡಿದ್ದಾರೆ!

ಹೌದು, ರಮ್ಯಾ 2-3 ಶ್ವಾನಗಳನ್ನು ಸಾಕಿದ್ದಾರೆ. ಅವುಗಳ ಜತೆ ರಮ್ಯಾ ಸಮಯ ಕಳೆಯುತ್ತಿದ್ದಾರೆ. ಈ ವಿಡಿಯೋವನ್ನು ಅವರು ಫೇಸ್​ಬುಕ್​ನಲ್ಲಿ ಹಾಕಿಕೊಂಡಿದ್ದು, ಇದು ಶುದ್ಧ ಪ್ರೇಮದ ಸ್ವೂರಪ ಎನ್ನುವ ಕ್ಯಾಪ್ಶನ್​ ನೀಡಿದ್ದಾರೆ. ಆ ವಿಡಿಯೋ ನೋಡಲು ಇಲ್ಲಿ ಕ್ಲಿಕ್​ ಮಾಡಿ

ಈ ವಿಡಿಯೋ ನೋಡಿದ ಅಭಿಮಾನಿಗಳು ಖುಷಿಯಾಗಿದ್ದಾರೆ. ಯಾವಾಗಲೂ ನೀವು ನಮ್ಮ ಇಷ್ಟದ ನಟಿ ಎಂದು ಬರೆದುಕೊಂಡಿದ್ದಾರೆ.

ವಿಡಿಯೋ ನೋಡಲು ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ

ಇದನ್ನೂ ಓದಿ: ನಿಜಕ್ಕೂ ‘ನಟಿ’ ರಾಧಿಕಾ ಕುಮಾರಸ್ವಾಮಿ ಸಂಭಾವನೆ ಇಷ್ಟಿದೆಯಾ.. ರಮ್ಯಾ, ರಶ್ಮಿಕಾಗಿಂತಲೂ ಹೆಚ್ಚಾಯ್ತಾ!?

Published On - 1:42 pm, Mon, 22 February 21

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!