ಕಲಾವಿದರಿಗೆ ಬೆದರಿಕೆ ಹಾಕಬಾರದು: ಡಿಕೆಶಿ ಮಾತಿಗೆ ರಮ್ಯಾ ಪ್ರತಿಕ್ರಿಯೆ

ನಟಿ ರಮ್ಯಾ ಅವರು ಸಿನಿಮಾಗಳಿಂದ ದೂರ ಇದ್ದರೂ ಕೂಡ ಚಿತ್ರರಂಗದ ಹಲವು ವಿಷಯಗಳಿಗೆ ಪ್ರತಿಕ್ರಿಯೆ ನೀಡುತ್ತಾರೆ. ಈಗ ಅವರು ಡಿಕೆ ಶಿವಕುಮಾರ್​ ಹೇಳಿಕೆಗೆ ಸಂಬಂಧಿಸಿದಂತೆ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಸೋಶಿಯಲ್ ಮೀಡಿಯಾ ಮೂಲಕ ತಮ್ಮ ನಿಲುವು ಏನು ಎಂಬುದನ್ನು ರಮ್ಯಾ ಅವರು ವಿವರಿಸಿದ್ದಾರೆ.

ಕಲಾವಿದರಿಗೆ ಬೆದರಿಕೆ ಹಾಕಬಾರದು: ಡಿಕೆಶಿ ಮಾತಿಗೆ ರಮ್ಯಾ ಪ್ರತಿಕ್ರಿಯೆ
Ramya, Dk Shivakumar

Updated on: Mar 03, 2025 | 9:26 PM

ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಚಿತ್ರರಂಗದವರಿಗೆ ಬೆದರಿಕೆ ಹಾಕುವ ರೀತಿಯಲ್ಲಿ ಮಾತನಾಡಿರುವುದಕ್ಕೆ ಅನೇಕರಿಂದ ಖಂಡನೆ ವ್ಯಕ್ತವಾಗುತ್ತಿದೆ. ಇದರ ಬಗ್ಗೆ ಚಿತ್ರರಂಗದ ಹಲವರು ಪ್ರತಿಕ್ರಿಯೆ ನೀಡಿದ್ದಾರೆ. ಇತ್ತೀಚೆಗೆ ನಟಿ ರಮ್ಯಾ ದಿವ್ಯ ಸ್ಪಂದನಾ ಕೂಡ ಮಾತನಾಡಿದ್ದರು. ಹಂಪಿ ಉತ್ಸವದಲ್ಲಿ ಮಾತನಾಡಿದ್ದ ಅವರು ಡಿಕೆ ಶಿವಕುಮಾರ್​ ಹೇಳಿಕೆಯನ್ನು ಬೆಂಬಲಿಸಿದ್ದರು. ಆದರೆ ಈಗ ರಮ್ಯಾ ಇನ್ನೊಂದು ರೀತಿಯಲ್ಲಿ ಪ್ರತಿಕ್ರಿಯಿಸಿದ್ದಾರೆ. ಕಲಾವಿದರಿಗೆ ಬೆದರಿಕೆ ಹಾಕುವುದು ಸರಿಯಲ್ಲ ಎಂದು ರಮ್ಯಾ ಹೇಳಿದ್ದಾರೆ. ಇನ್​ಸ್ಟಾಗ್ರಾಮ್ ಸ್ಟೋರಿಯಲ್ಲಿ ಅವರು ತಮ್ಮ ಅನಿಸಿಕೆಯನ್ನು ಹಂಚಿಕೊಂಡಿದ್ದಾರೆ.

‘ಡಿಕೆ ಶಿವಕುಮಾರ್ ಅವರು ಹೇಳಿದ್ದು ಸಂಪೂರ್ಣ ತಪ್ಪೇನೂ ಅಲ್ಲ. ಸಾರ್ವಜನಿಕರ ಮೇಲೆ ಮತ್ತು ಜನರ ವೈಯಕ್ತಿಕ ಅಭಿಪ್ರಾಯದ ಮೇಲೆ ಕಲಾವಿದರಾದ ನಾವು ಪ್ರಭಾವ ಬೀರುತ್ತೇವೆ. ಹಾಗಾಗಿ ನಮಗೆ ಸರಿ ಎನಿಸಿದ ವಿಷಯಗಳ ಬಗ್ಗೆ ನಾವು ಮಾತನಾಡುವುದು ಮುಖ್ಯ. ನಿಮ್ಮ ಅನಿಸಿಕೆ ಯಾವುದರ ಪರ ಅಥವಾ ವಿರೋಧವಾಗಿ ಇರಬಹುದು. ಪ್ರಜಾಪ್ರಭುತ್ವಕ್ಕೆ ಸಂವಾದ ಅಗತ್ಯ’ ಎಂದು ರಮ್ಯಾ ಪೋಸ್ಟ್ ಮಾಡಿದ್ದಾರೆ.

‘ಗೋಕಾಕ್ ಚಳುವಳಿಗೆ ಡಾ. ರಾಜ್​ಕುಮಾರ್​ ಅವರು ಹೇಗೆ ಬೆಂಬಲ ನೀಡಿದರು ಎಂಬುದೇ ದೊಡ್ಡ ಉದಾಹರಣೆ ಆಗಿದೆ. ಒಂದು ವಿಷಯಕ್ಕೆ ಬೆಂಬಲ ನೀಡಬೇಕೋ ಅಥವಾ ನೀಡಬಾರದೋ ಎಂಬುದು ಕಲಾವಿದರ ಆಯ್ಕೆಗೆ ಬಿಟ್ಟಿದ್ದು. ಆದರೆ ಅವರಿಗೆ ಯಾವುದೇ ಕಾರಣಕ್ಕೂ ಬೆದರಿಕೆ ಹಾಕಬಾರದು’ ಎಂದಿದ್ದಾರೆ ರಮ್ಯಾ.

ಇದನ್ನೂ ಓದಿ
‘ಸ್ಯಾಂಡಲ್​​ವುಡ್ ಸಣ್ಣ ಇಂಡಸ್ಟ್ರಿ ಆಗಿತ್ತು, ಈಗ ಹೇಗೆ ಬೆಳೆದಿದೆ ನೋಡಿ’
ಸಿನಿಮಾ ರಂಗದವರಿಗೆ ಡಿಕೆ ಶಿವಕುಮಾರ್ ಎಚ್ಚರಿಕೆ ಉಮಾಪತಿ ಹೇಳಿದ್ದೇನು?
4 ಚಿತ್ರಮಂದಿರ, 23 ಸಿನಿಮಾ ಸ್ಕ್ರೀನ್​, ಡಿಸಿಎಂ ಡಿಕೆಶಿಯ ಸಿನಿಮಾ ನಂಟು
‘ನೆಟ್ಟು, ಬೋಲ್ಟ್ ಟೈಟ್ ಮಾಡುವೆ’: ನಟರಿಗೆ ನೇರ ಎಚ್ಚರಿಕೆ ಕೊಟ್ಟ ಡಿಕೆಶಿ

ಇದನ್ನೂ ನೋಡಿ: ನಟಿ ರಮ್ಯಾ ಅಂದ ಚಂದಕ್ಕೆ ಸರಿಸಾಟಿ ಯಾರಿಲ್ಲ..

‘ವೈಯಕ್ತಿಕವಾಗಿ ಚಿತ್ರರಂಗದ ಬಹುತೇಕರು ತಮ್ಮ ಅಭಿಪ್ರಾಯ ತಿಳಿಸುತ್ತಾರೆ. ಆದರೆ ಸಾರ್ವಜನಿಕವಾಗಿ ಹೇಳಿಕೆ ನೀಡಲು ಅಂಜುತ್ತಾರೆ. ಯಾಕೆಂದರೆ ಅವರನ್ನು ಟ್ರೋಲ್ ಮಾಡಲಾಗುತ್ತದೆ. ಅವರ ಸಿನಿಮಾ ಹಾಗೂ ಕೆಲಸಕ್ಕೂ ಪೆಟ್ಟು ಬೀಳುತ್ತದೆ. ರಾಜಕೀಯದವರಿಗೆ ಕಲಾವಿದರು ಅದರಲ್ಲೂ, ನಟಿಯರು ಸುಲಭದ ಟಾರ್ಗೆಟ್ ಆಗಿದ್ದಾರೆ. ನಮ್ಮ ನಾಯಕರು ಬೆದರಿಕೆ ಹಾಕಬಾರದು. ಅದಕ್ಕಾಗಿಯೇ ಕಲಾವಿದರು ಮಾತನಾಡುವುದಿಲ್ಲ’ ಎಂದು ರಮ್ಯಾ ಅವರು ಇನ್​ಸ್ಟಾಗ್ರಾಮ್ ಸ್ಟೋರಿಯಲ್ಲಿ ಬರೆದುಕೊಂಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
Follow Us