AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ನಾವು ಭಾರತೀಯರು, ಹಾಗೆಯೇ ಕನ್ನಡಿಗರೂ ಕೂಡ’; ಅದ್ನಾನ್ ಸಮಿ ಹೇಳಿಕೆಗೆ ರಮ್ಯಾ ತಿರುಗೇಟು

ಆಂಧ್ರ ಪ್ರದೇಶ ಮುಖ್ಯಮಂತ್ರಿ ವೈಎಸ್​ ಜಗನ್​ ಮೋಹನ್ ರೆಡ್ಡಿ, ‘ತೆಲುಗು ಬಾವುಟ ಬಾನೆತ್ತರಕ್ಕೆ ಹಾರುವಂತೆ ಮಾಡಿದ್ದೀರಿ’ ಎಂದು ಸಂತಸ ವ್ಯಕ್ತಪಡಿಸಿದ್ದರು. ಇದನ್ನು ಅದ್ನಾನ್ ಸಮಿ ಖಂಡಿಸಿದ್ದರು.

‘ನಾವು ಭಾರತೀಯರು, ಹಾಗೆಯೇ ಕನ್ನಡಿಗರೂ ಕೂಡ’; ಅದ್ನಾನ್ ಸಮಿ ಹೇಳಿಕೆಗೆ ರಮ್ಯಾ ತಿರುಗೇಟು
ರಮ್ಯಾ
TV9 Web
| Updated By: ರಾಜೇಶ್ ದುಗ್ಗುಮನೆ|

Updated on: Jan 13, 2023 | 12:32 PM

Share

ನಟಿ ರಮ್ಯಾ (Actress Ramya) ಅವರು ಹಲವು ವರ್ಷಗಳ ಬಳಿಕ ಚಿತ್ರರಂಗಕ್ಕೆ ಮರಳಿದ್ದಾರೆ. ಡಾಲಿ ಧನಂಜಯ್ ನಟನೆಯ ‘ಉತ್ತರಕಾಂಡ’ ಚಿತ್ರದ ಮೂಲಕ ಕಂಬ್ಯಾಕ್ ಆಗುತ್ತಿದ್ದಾರೆ. ಇದರ ಜತೆಗೆ ನಿರ್ಮಾಣ ಸಂಸ್ಥೆ ಆರಂಭಿಸಿ ಚಿತ್ರಕ್ಕೆ ಬಂಡವಾಳ ಹೂಡುತ್ತಿದ್ದಾರೆ. ಅವರ ನಿರ್ಮಾಣದ ಮೊದಲ ಸಿನಿಮಾ ‘ಸ್ವಾತಿ ಮುತ್ತಿನ ಮಳೆ ಹನಿಯೇ’ (Swathi Mutthina Male Haniye) ಪೋಸ್ಟ್ ಪ್ರೊಡಕ್ಷನ್ ಕೆಲಸಗಳು ಭರದಿಂದ ಸಾಗಿವೆ. ರಮ್ಯಾ ಸೋಶಿಯಲ್ ಮೀಡಿಯಾದಲ್ಲೂ ಆ್ಯಕ್ಟೀವ್ ಆಗಿದ್ದಾರೆ. ಹಲವು ಚರ್ಚೆಗಳಲ್ಲಿ ಅವರು ಭಾಗಿ ಆಗುತ್ತಿದ್ದಾರೆ. ಈಗ ಖ್ಯಾತ ಗಾಯಕ ಅದ್ನಾನ್ ಸಮಿ ನೀಡಿದ ಹೇಳಿಕೆ ಬಗ್ಗೆ ರಮ್ಯಾ ತಮ್ಮ ಅಭಿಪ್ರಾಯ ಹಂಚಿಕೊಂಡಿದ್ದಾರೆ.

ಇತ್ತೀಚೆಗೆ ‘ಆರ್​ಆರ್​ಆರ್​’ ಸಿನಿಮಾದ ‘ನಾಟು ನಾಟು..’ ಹಾಡು ಗೋಲ್ಡನ್ ಗ್ಲೋಬ್ ಅವಾರ್ಡ್ಸ್​ ಕಾರ್ಯಕ್ರಮದಲ್ಲಿ ಪ್ರಶಸ್ತಿ ಬಾಚಿಕೊಂಡಿತ್ತು. ಈ ಟ್ವೀಟ್​ನ ಶೇರ್ ಮಾಡಿಕೊಂಡಿದ್ದ ಆಂಧ್ರ ಪ್ರದೇಶ ಮುಖ್ಯಮಂತ್ರಿ ವೈಎಸ್​ ಜಗನ್​ ಮೋಹನ್ ರೆಡ್ಡಿ, ‘ತೆಲುಗು ಬಾವುಟ ಬಾನೆತ್ತರಕ್ಕೆ ಹಾರುವಂತೆ ಮಾಡಿದ್ದೀರಿ’ ಎಂದು ಸಂತಸ ವ್ಯಕ್ತಪಡಿಸಿದ್ದರು. ಇದನ್ನು ಅದ್ನಾನ್ ಸಮಿ ಖಂಡಿಸಿದ್ದರು.

ಇದನ್ನೂ ಓದಿ
Image
Ramya: 18ನೇ ಪ್ರಾಯದಲ್ಲಿ ರಮ್ಯಾ ಹೇಗಿದ್ದರು ನೋಡಿ; ವೈರಲ್​ ಆಗಿದೆ ಹಳೇ ಐಡಿ ಕಾರ್ಡ್​​ ಫೋಟೋ
Image
ಕನ್ನಡದ ಪ್ರಸಿದ್ಧ ನಟಿಯರ ಪಟ್ಟಿಯಲ್ಲಿ ರಮ್ಯಾಗೆ 4ನೇ ಸ್ಥಾನ; ರಚಿತಾ, ಆಶಿಕಾ, ರಶ್ಮಿಕಾ, ರಾಧಿಕಾ ನಡುವೆ ನಂ.1 ಯಾರು?
Image
Ramya: ತಮ್ಮನ್ನು ತಾವೇ ‘ಡ್ರಾಮಾ ಕ್ವೀನ್​’ ಎಂದು ಕರೆದುಕೊಂಡ ನಟಿ ರಮ್ಯಾ; ಕಾರಣ ಏನು?
Image
Ramya: ಕಡೆಗೂ ಶೂಟಿಂಗ್​ ಸೆಟ್​ಗೆ ಬಂದ ರಮ್ಯಾ: ಡಾಲಿ ಜತೆ ಇರುವ ವಿಡಿಯೋ ವೈರಲ್​; ಏನಿದು ಸಮಾಚಾರ?

‘ತೆಲುಗು ಧ್ವಜ? ಭಾರತದ ಧ್ವಜ ಅಲ್ಲವೇ? ನಾವು ಮೊದಲು ಭಾರತೀಯರು. ನಿಮ್ಮನ್ನು ನೀವು ಪ್ರತ್ಯೇಕಿಸಿಕೊಳ್ಳುವುದನ್ನು ನಿಲ್ಲಿಸಿ. ಅದರಲ್ಲೂ ಮುಖ್ಯವಾಗಿ ಅಂತರಾಷ್ಟ್ರೀಯವಾಗಿ ನಾವು ಒಂದು ದೇಶ. 1947ರಲ್ಲಿ ನೋಡಿದಂತೆ ಪ್ರತ್ಯೇಕತಾವಾದಿ ವರ್ತನೆಯು ಅತ್ಯಂತ ಅನಾರೋಗ್ಯಕರ. ಧನ್ಯವಾದಗಳು. ಜೈ ಹಿಂದ್’ ಎಂದು ಗಾಯಕ ಅದ್ನಾನ್ ಸಮಿ ಬರೆದುಕೊಂಡಿದ್ದರು.

ಇದನ್ನು ರಮ್ಯಾ ರೀಟ್ವೀಟ್ ಮಾಡಿ ತಮ್ಮ ಅಭಿಪ್ರಾಯ ತಿಳಿಸಿದ್ದಾರೆ. ‘ಹೌದು, ನಾವು ಭಾರತೀಯರು. ಅದೇ ರೀತಿ ನಾವು ಕನ್ನಡಿಗರು, ತಮಿಳರು, ಬೆಂಗಾಲಿಗಳು etc… ಕೂಡ ಹೌದು. ನಮ್ಮದೇ ಆದ ಭಾಷೆ ಇರುವಂತೆಯೇ ನಾವೆಲ್ಲರೂ ನಮ್ಮ ಧ್ವಜಗಳನ್ನು ಹೊಂದಿದ್ದೇವೆ. ನಮಗೆ ಭಾರತೀಯರಾಗಿ ಹೇಗೆ ಹೆಮ್ಮೆ ಇದೆಯೋ ಅದೇ ರೀತಿ ನಮ್ಮ ಸಂಸ್ಕೃತಿ, ಭಾಷೆ, ಧ್ವಜದ ಬಗ್ಗೆಯೂ ಹೆಮ್ಮೆ ಇದೆ’ ಎಂದಿದ್ದಾರೆ ರಮ್ಯಾ. ಅವರ ಟ್ವೀಟ್​ಗೆ ಅನೇಕರು ಮೆಚ್ಚುಗೆ ಸೂಚಿಸಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!