AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಹುಲ್​ ಗಾಂಧಿ ಜನ್ಮದಿನಕ್ಕೆ ಒಂದೇ ವಾಕ್ಯದಲ್ಲಿ ರಮ್ಯಾ ವಿಶ್​; ಆ ಮಾತು ನೀವು ಒಪ್ಪುತ್ತೀರಾ?

Ramya Divya Spandana: ‘ಜಗತ್ತನ್ನು ಉತ್ತಮವಾಗಿಸುವ ಅದ್ಭುತ ವ್ಯಕ್ತಿಗೆ ಹುಟ್ಟುಹಬ್ಬದ ಶುಭಾಶಯಗಳು. ನಿಮ್ಮ ರೀತಿ ಬೇರೆ ಯಾರೂ ಇಲ್ಲ’ ಎಂದು ರಾಹುಲ್​ ಗಾಂಧಿ ಜನ್ಮದಿನಕ್ಕೆ ರಮ್ಯಾ ಶುಭಾಶಯ ಕೋರಿದ್ದಾರೆ.

ರಾಹುಲ್​ ಗಾಂಧಿ ಜನ್ಮದಿನಕ್ಕೆ ಒಂದೇ ವಾಕ್ಯದಲ್ಲಿ ರಮ್ಯಾ ವಿಶ್​; ಆ ಮಾತು ನೀವು ಒಪ್ಪುತ್ತೀರಾ?
ರಮ್ಯಾ, ರಾಹುಲ್​ ಗಾಂಧಿ
Follow us
TV9 Web
| Updated By: ಮದನ್​ ಕುಮಾರ್​

Updated on: Jun 19, 2021 | 3:39 PM

ನಟಿ ರಮ್ಯಾ ಈಗ ಸ್ಯಾಂಡಲ್​ವುಡ್​ನಲ್ಲೂ ಇಲ್ಲ, ರಾಜಕೀಯದಲ್ಲೂ ಇಲ್ಲ. ಹಾಗಿದ್ದರೂ ಕೂಡ ಅವರು ಅಭಿಮಾನಿಗಳ ಜೊತೆ ಸಂಪರ್ಕದಲ್ಲಿ ಇದ್ದಾರೆ. ಸೋಶಿಯಲ್​ ಮೀಡಿಯಾ ಮೂಲಕ ಸದಾ ಕಾಲ ಆ್ಯಕ್ಟೀವ್​ ಆಗಿರುತ್ತಾರೆ. ರಾಜಕೀಯ ಮತ್ತು ಸಿನಿಮಾ ಕ್ಷೇತ್ರದಲ್ಲಿನ ತಮ್ಮ ಆತ್ಮೀಯರ ಹುಟ್ಟುಹಬ್ಬಕ್ಕೆ ವಿಶ್​ ಮಾಡುತ್ತಾರೆ. ಇಂದು (ಜೂ.19) ರಾಹುಲ್​ ಗಾಂಧಿ ಜನ್ಮದಿನಕ್ಕೆ ರಮ್ಯಾ ಶುಭ ಕೋರಿದ್ದಾರೆ. ಅದು ಅನೇಕರ ಗಮನ ಸೆಳೆಯುತ್ತಿದೆ.

ಇನ್​ಸ್ಟಾಗ್ರಾಮ್​ ಸ್ಟೋರಿ ಮೂಲಕ ರಾಹುಲ್​ ಗಾಂಧಿಗೆ ರಮ್ಯಾ ವಿಶ್​ ಮಾಡಿದ್ದಾರೆ. ರಾಹುಲ್​ ಗಾಂಧಿಯ ಒಂದು ಫೋಟೋವನ್ನು ಅವರು ಶೇರ್​ ಮಾಡಿಕೊಂಡಿದ್ದಾರೆ. ಅದರ ಜೊತೆ ಅವರು ಬರೆದಿರುವ ವಾಕ್ಯ ಈಗ ಸೋಶಿಯಲ್​ ಮೀಡಿಯಾದಲ್ಲಿ ಗಮನ ಸೆಳೆಯುತ್ತಿದೆ. ‘ಜಗತ್ತನ್ನು ಉತ್ತಮವಾಗಿಸುವ ಅದ್ಭುತ ವ್ಯಕ್ತಿಗೆ ಹುಟ್ಟುಹಬ್ಬದ ಶುಭಾಶಯಗಳು. ನಿಮ್ಮ ರೀತಿ ಬೇರೆ ಯಾರೂ ಇಲ್ಲ’ ಎಂದು ರಮ್ಯಾ ಕ್ಯಾಪ್ಷನ್​ ನೀಡಿದ್ದಾರೆ.

Ramya wishes Rahul Gandhi Happy Birthday

ರಾಹುಲ್​ ಗಾಂಧಿ ಅವರು ಆಗಾಗ ಸೋಶಿಯಲ್​ ಮೀಡಿಯಾದಲ್ಲಿ ಟ್ರೋಲ್​ ಆಗುತ್ತಿರುತ್ತಾರೆ. ಅವರ ಮಾತು ಮತ್ತು ವರ್ತನೆಗಳನ್ನು ಇಟ್ಟುಕೊಂಡು ಅನೇಕ ಮೀಮ್​ಗಳನ್ನು ಮಾಡಿ ಹರಿಬಿಡಲಾಗುತ್ತದೆ. ಆದರೆ ಅವರ ಬಗ್ಗೆ ರಮ್ಯಾ ಅಪಾರ ಗೌರವ ಹೊಂದಿದ್ದಾರೆ. ಹಾಗಾಗಿ ಅವರು ರಾಹುಲ್​ ಗಾಂಧಿಯನ್ನು ಈ ಪರಿ ಬಣ್ಣಿಸಿದ್ದಾರೆ. ಸಿನಿಮಾದಿಂದ ದೂರ ಆದ ಬಳಿಕ ರಮ್ಯಾ ಕಾಂಗ್ರೆಸ್​ ಪಕ್ಷ ಸೇರಿಕೊಂಡಿದ್ದರು. ರಾಹುಲ್ ಗಾಂಧಿ ಆಪ್ತ ವಯಲದಲ್ಲಿ ಅವರು ಗುರುತಿಸಿಕೊಂಡಿದ್ದರು.

ಕೆಲವು ದಿನಗಳ ಹಿಂದೆ ರಮ್ಯಾ ಅವರು ಅಭಿಮಾನಿಗಳ ಜೊತೆ ಪ್ರಶ್ನೋತ್ತರ ನಡೆಸಿದ್ದರು. ಆಗ ಅವರಿಗೆ ಹಲವು ಬಗೆಯ ಪ್ರಶ್ನೆಗಳು ಎದುರಾಗಿದ್ದರು. ಮದುವೆ, ಸಿನಿಮಾ ಮತ್ತು ರಾಜಕೀಯದ ಬಗ್ಗೆ ಅಭಿಮಾನಿಗಳು ಪ್ರಶ್ನೆ ಕೇಳಿದ್ದರು. ಚಿತ್ರರಂಗಕ್ಕೆ ಯಾವಾಗ ಮರಳುತ್ತೀರಿ ಎಂದು ಕೇಳಲಾಗಿತ್ತು. ಅದಕ್ಕೆ ಉತ್ತರಿಸಿದ್ದ ರಮ್ಯಾ, ‘ನಿಮ್ಮನ್ನು ನಿರಾಸೆಗೊಳಿಸುತ್ತಿರುವುದಕ್ಕೆ ಕ್ಷಮೆ ಇರಲಿ. ನಾನು ಆಸಕ್ತಿ ಕಳೆದುಕೊಂಡಿದ್ದೇನೆ. ಸಿನಿಮಾ ಮತ್ತು ರಾಜಕೀಯದಲ್ಲಿ ನನ್ನ ಕಾಲ ಯಾವಾಗಲೋ ಮುಗಿಯಿತು’ ಎಂದು ಅವರು ಉತ್ತರಿಸಿದ್ದರು.

ಇದನ್ನೂ ಓದಿ:

ಅಭಿ ಚಿತ್ರ ರಿಲೀಸ್​ ಆದ ದಿನಾಂಕದಲ್ಲೇ ಅಭಿಮಾನಿಗಳ ಆಸೆಗೆ ತಣ್ಣೀರು ಎರಚಿದ ರಮ್ಯಾ

Ramya Divya Spandana: ರಕ್ಷಿತ್​ ಶೆಟ್ಟಿ ಜೊತೆ ರಮ್ಯಾ ಮದುವೆ ಆಗ್ಬೇಕು; ಫ್ಯಾನ್ಸ್​ ಬಯಕೆಗೆ ಉತ್ತರ ಕೊಟ್ಟ ಸ್ಯಾಂಡಲ್​ವುಡ್​ ಕ್ವೀನ್​

ಉಗ್ರರ ದಾಳಿ ನಡುವೆಯೂ ಕಾಶ್ಮೀರದಲ್ಲಿ ನಿಲ್ಲದ ಪ್ರವಾಸಿಗರ ಭೇಟಿ
ಉಗ್ರರ ದಾಳಿ ನಡುವೆಯೂ ಕಾಶ್ಮೀರದಲ್ಲಿ ನಿಲ್ಲದ ಪ್ರವಾಸಿಗರ ಭೇಟಿ
ಶಾಸಕಾಂಗ, ಕಾರ್ಯಾಂಗ ಮತ್ತು ನ್ಯಾಯಾಂಗ ಸಮನ್ವಯತೆಯಿಂದ ಕೆಲಸ ಮಾಡಬೇಕು: ಸಿಎಂ
ಶಾಸಕಾಂಗ, ಕಾರ್ಯಾಂಗ ಮತ್ತು ನ್ಯಾಯಾಂಗ ಸಮನ್ವಯತೆಯಿಂದ ಕೆಲಸ ಮಾಡಬೇಕು: ಸಿಎಂ
ನನ್ನ ಆಯುಷ್ಯವನ್ನೂ ದೇವರು ನಮ್ಮ ಸೈನಿಕರಿಗೆ ನೀಡಲಿ: ಪಲ್ಲವಿ ರಾವ್
ನನ್ನ ಆಯುಷ್ಯವನ್ನೂ ದೇವರು ನಮ್ಮ ಸೈನಿಕರಿಗೆ ನೀಡಲಿ: ಪಲ್ಲವಿ ರಾವ್
ಬಾಗಲಕೋಟೆ: NWKRTC ಬಸ್​ ಚಾಲಕ, ಕಂಡಕ್ಟರ್​ ಮೇಲೆ ಕಟ್ಟಿಗೆಯಿಂದ ಹಲ್ಲೆ​
ಬಾಗಲಕೋಟೆ: NWKRTC ಬಸ್​ ಚಾಲಕ, ಕಂಡಕ್ಟರ್​ ಮೇಲೆ ಕಟ್ಟಿಗೆಯಿಂದ ಹಲ್ಲೆ​
ಕೆನಡ ಚುನಾವಣೆಯಲ್ಲಿ ಸೋತಿದ್ದಕ್ಕೆ ಭಾವುಕರಾದ ಖಲಿಸ್ತಾನ್ ಪರ ಜಗ್ಮೀತ್ ಸಿಂಗ್
ಕೆನಡ ಚುನಾವಣೆಯಲ್ಲಿ ಸೋತಿದ್ದಕ್ಕೆ ಭಾವುಕರಾದ ಖಲಿಸ್ತಾನ್ ಪರ ಜಗ್ಮೀತ್ ಸಿಂಗ್
ಸುದೀಪ್ ಮತ್ತು ಶಿವಣ್ಣನ ಜೊತೆಗಿನ ಗೆಳೆತನದ ಬಗ್ಗೆ ನಾನಿ ಮಾತು
ಸುದೀಪ್ ಮತ್ತು ಶಿವಣ್ಣನ ಜೊತೆಗಿನ ಗೆಳೆತನದ ಬಗ್ಗೆ ನಾನಿ ಮಾತು
ನಿನ್ನೆ ಶಿವಕುಮಾರ್ ಹೇಳಿದ್ದನ್ನೇ ಇಂದು ಪ್ರದೀಪ್ ಈಶ್ವರ್ ಪುನರುಚ್ಛರಿಸಿದರು
ನಿನ್ನೆ ಶಿವಕುಮಾರ್ ಹೇಳಿದ್ದನ್ನೇ ಇಂದು ಪ್ರದೀಪ್ ಈಶ್ವರ್ ಪುನರುಚ್ಛರಿಸಿದರು
ಮೋದಿ ನಿವಾಸದಲ್ಲಿ ಮಹತ್ವದ ಸಭೆ; ಸೇನಾ ಮುಖ್ಯಸ್ಥರು, ರಾಜನಾಥ್ ಸಿಂಗ್ ಭಾಗಿ
ಮೋದಿ ನಿವಾಸದಲ್ಲಿ ಮಹತ್ವದ ಸಭೆ; ಸೇನಾ ಮುಖ್ಯಸ್ಥರು, ರಾಜನಾಥ್ ಸಿಂಗ್ ಭಾಗಿ
ದೇವೇಗೌಡರಂತೆ ಮಂಜುನಾಥ್ ಸಹ ಪಹಲ್ಗಾಮ್ ಬಗ್ಗೆ ಅನಾವಶ್ಯಕ ಮಾತಾಡಲಿಲ್ಲ
ದೇವೇಗೌಡರಂತೆ ಮಂಜುನಾಥ್ ಸಹ ಪಹಲ್ಗಾಮ್ ಬಗ್ಗೆ ಅನಾವಶ್ಯಕ ಮಾತಾಡಲಿಲ್ಲ
ಅಧಿಕಾರದಿಂದ ಕೆಳಗಿಳಿಯುವ ಫ್ರಸ್ಟ್ರೇಶನ್ ಸಿಎಂರನ್ನು ಕಾಡುತ್ತಿದೆ: ಅಶೋಕ
ಅಧಿಕಾರದಿಂದ ಕೆಳಗಿಳಿಯುವ ಫ್ರಸ್ಟ್ರೇಶನ್ ಸಿಎಂರನ್ನು ಕಾಡುತ್ತಿದೆ: ಅಶೋಕ