AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ರೈಡರ್​’, ‘ಬಡವ ರಾಸ್ಕಲ್​’ ಚಿತ್ರಗಳ ಬಗ್ಗೆ ರಮ್ಯಾ ನಿರೀಕ್ಷೆ; ಡಾಲಿ ಧನಂಜಯಗೆ ಮತ್ತೆ ಮತ್ತೆ ಪ್ರೀತಿ-ಪ್ರೋತ್ಸಾಹ

Ramya Divya Spandana: ‘ಈ ತಿಂಗಳು ಅನೇಕ ಕನ್ನಡ ಸಿನಿಮಾಗಳು ಬಿಡುಗಡೆ ಆಗುತ್ತಿವೆ. ಯಾವುದನ್ನು ನೋಡೋದು ಅಂತ ಯೋಚಿಸಬೇಡಿ. ಎಲ್ಲ ಸಿನಿಮಾಗಳನ್ನೂ ನೋಡಿ’ ಎಂದು ರಮ್ಯಾ ಹೇಳಿದ್ದಾರೆ.

‘ರೈಡರ್​’, ‘ಬಡವ ರಾಸ್ಕಲ್​’ ಚಿತ್ರಗಳ ಬಗ್ಗೆ ರಮ್ಯಾ ನಿರೀಕ್ಷೆ; ಡಾಲಿ ಧನಂಜಯಗೆ ಮತ್ತೆ ಮತ್ತೆ ಪ್ರೀತಿ-ಪ್ರೋತ್ಸಾಹ
ಡಾಲಿ ಧನಂಜಯ, ರಮ್ಯಾ, ನಿಖಿಲ್​ ಕುಮಾರಸ್ವಾಮಿ
TV9 Web
| Edited By: |

Updated on: Dec 22, 2021 | 2:06 PM

Share

‘ಸ್ಯಾಂಡಲ್​ವುಡ್​ ಕ್ವೀನ್​’ ರಮ್ಯಾ (Ramya Divya Spandana) ಅವರು ಸಿನಿಮಾಗಳಲ್ಲಿ ನಟಿಸದೇ ಹಲವು ವರ್ಷ ಆಗಿದೆ. ಆದರೆ ಅವರು ಚಿತ್ರರಂಗದ ಜೊತೆ ಸಂಪರ್ಕದಲ್ಲಿ ಇದ್ದಾರೆ. ಸ್ಯಾಂಡಲ್​​ವುಡ್​ನಲ್ಲಿ ಆಗುವ ಬೆಳವಣಿಗೆಗಳನ್ನು ಅವರು ಗಮನಿಸುತ್ತಿದ್ದಾರೆ. ಹೆಚ್ಚು ಕಾಲ ವಿದೇಶದಲ್ಲೇ ಕಾಲ ಕಳೆದರೂ ಕೂಡ ಅವರು ಕನ್ನಡ ಸಿನಿಮಾಗಳನ್ನು ಗಮನಿಸುತ್ತಾ ಇರುತ್ತಾರೆ. ಅದಕ್ಕೆ ಮತ್ತೆ ಮತ್ತೆ ಸಾಕ್ಷಿ ಸಿಗುತ್ತಲೇ ಇದೆ. ಕನ್ನಡದಲ್ಲಿ ರಿಲೀಸ್​ ಆಗುತ್ತಿರುವ ಚಿತ್ರಗಳ ಬಗ್ಗೆ ರಮ್ಯಾ ಅವರು ತಮ್ಮ ಅಭಿಪ್ರಾಯ ಹಂಚಿಕೊಳ್ಳುತ್ತಿದ್ದಾರೆ. ಈ ವಾರ (ಡಿ.24) ನಿಖಿಲ್​ ಕುಮಾರಸ್ವಾಮಿ (Nikhil Kumaraswamy) ನಟನೆಯ ‘ರೈಡರ್​’ (Rider Movie) ಮತ್ತು ಡಾಲಿ ಧನಂಜಯ (Daali Dhananjay) ಅಭಿನಯದ ‘ಬಡವ ರಾಸ್ಕಲ್​’ (Badava Rascal) ಚಿತ್ರಗಳು ತೆರೆಕಾಣುತ್ತಿವೆ. ಆ ಸಿನಿಮಾಗಳಿಗೆ ರಮ್ಯಾ ಶುಭ ಕೋರಿದ್ದಾರೆ.

ಸೋಶಿಯಲ್​ ಮೀಡಿಯಾದಲ್ಲಿ ರಮ್ಯಾ ಆಕ್ಟೀವ್​ ಆಗಿದ್ದಾರೆ. ಇನ್​ಸ್ಟಾಗ್ರಾಮ್​ ಮೂಲಕ ಅವರು ಅವರು ಅಭಿಮಾನಿಗಳಿಗೆ ಆಗಾಗ ಅಪ್​ಡೇಟ್​ ನೀಡುತ್ತ ಇರುತ್ತಾರೆ. ಈಗ ಅವರು ಇನ್​ಸ್ಟಾಗ್ರಾಮ್ ಸ್ಟೋರಿ ಮೂಲಕ ‘ರೈಡರ್​’ ಮತ್ತು ‘ಬಡವ ರಾಸ್ಕಲ್​’ ಚಿತ್ರಗಳ ಮೇಲೆ ತಮಗೆ ಎಷ್ಟು ನಿರೀಕ್ಷೆ ಇದೆ ಎಂಬುದನ್ನು ತಿಳಿಸಿದ್ದಾರೆ. ‘ರೈಡರ್’​ ಚಿತ್ರದ ಟೀಸರ್​ ಹಂಚಿಕೊಂಡು ನಿಖಿಲ್​ ಕುಮಾರಸ್ವಾಮಿ ಅವರಿಗೆ ರಮ್ಯಾ ಶುಭ ಕೋರಿದ್ದಾರೆ.

‘ಈ ತಿಂಗಳು ಅನೇಕ ಕನ್ನಡ ಸಿನಿಮಾಗಳು ಬಿಡುಗಡೆ ಆಗುತ್ತಿವೆ. ಯಾವುದನ್ನು ನೋಡೋದು ಅಂತ ಯೋಚಿಸಬೇಡಿ. ಎಲ್ಲ ಸಿನಿಮಾಗಳನ್ನೂ ನೋಡಿ’ ಎಂದು ರಮ್ಯಾ ಹೇಳಿದ್ದಾರೆ. ‘ಬಡವ ರಾಸ್ಕಲ್​’ ಚಿತ್ರದ ಪೋಸ್ಟರ್​ ಶೇರ್​ ಮಾಡಿಕೊಂಡಿರುವ ಅವರು ಇಡೀ ತಂಡಕ್ಕೆ ಆಲ್​ ದಿ ಬೆಸ್ಟ್​ ಹೇಳಿದ್ದಾರೆ. ಧನಂಜಯ ಅವರಿಗೆ ರಮ್ಯಾ ಕಡೆಯಿಂದ ಈ ರೀತಿ ಪ್ರೋತ್ಸಾಹ ಮತ್ತು ಮೆಚ್ಚುಗೆಯ ಮಾತುಗಳು ಸಿಗುತ್ತಿರುವುದು ಇದೇ ಮೊದಲೇನಲ್ಲ. ಈ ಹಿಂದೆ ‘ರತ್ನನ್​ ಪ್ರಪಂಚ’ ಸಿನಿಮಾ ಬಿಡುಗಡೆ ಆದಾಗಲೂ ಅವರು ಪ್ರೀತಿ ತೋರಿಸಿದ್ದರು.

‘ರತ್ನನ್​ ಪ್ರಪಂಚ’ ಚಿತ್ರವನ್ನು ನೋಡಿ ರಮ್ಯಾ ಮೆಚ್ಚಿಕೊಂಡಿದ್ದರು. ಬಳಿಕ ಅವರು ಇನ್​ಸ್ಟಾಗ್ರಾಮ್​ ಮೂಲಕ ತಮ್ಮ ಅನಿಸಿಕೆಯನ್ನು ಹಂಚಿಕೊಂಡಿದ್ದರು. ‘ಕಲಾವಿದರಾದ ಡಾಲಿ ಧನಂಜಯ, ಉಮಾಶ್ರೀ, ಪ್ರಮೋದ್​, ಶ್ರುತಿ, ವೈನಿಧಿ, ಅಚ್ಯುತ್​ ಕುಮಾರ್​, ಅನು ಪ್ರಭಾಕರ್​, ರವಿಶಂಕರ್​ ಎಲ್ಲರೂ ಬ್ರಿಲಿಯಂಟ್​. ರೆಬಾ ಮೋನಿಕಾ ಅವರೇ, ನಾನು ನಿಮಗಿಂತಲೂ ಉತ್ತಮವಾಗಿ ನಟಿಸುತ್ತಿರಲಿಲ್ಲ. ಕಾರ್ತಿಕ್​ ಗೌಡ ಮತ್ತು ಯೋಗಿ ಜಿ. ರಾಜ್​ ಮುಡಿಗೆ ಇನ್ನೊಂದು ಗರಿ ಸೇರಿದೆ. ನಿರ್ದೇಶಕ ರೋಹಿತ್​ ಪದಕಿ ಅವರ ಇಡೀ ತಂಡಕ್ಕೆ ಅಭಿನಂದನೆಗಳು’ ಎಂದು ರಮ್ಯಾ ಪೋಸ್ಟ್​ ಮಾಡಿದ್ದರು.

ಇದನ್ನೂ ಓದಿ:

ನಿಖಿಲ್​ ಕುಮಾರಸ್ವಾಮಿ ನಟನೆಯ ‘ರೈಡರ್​’ ಡಿ.24ಕ್ಕೆ ರಿಲೀಸ್​; ಸುದ್ದಿಗೋಷ್ಠಿ ನೋಡಲು ಇಲ್ಲಿ ಕ್ಲಿಕ್​ ಮಾಡಿ

ಧನಂಜಯ​ ನಟನೆಯ ‘ಬಡವ ರಾಸ್ಕಲ್​’ ಪ್ರೀ-ರಿಲೀಸ್​ ಕಾರ್ಯಕ್ರಮ​ ಲೈವ್​ ನೋಡಿ

Follow Us
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಗದಗ: ಬಸ್ ನಿಲ್ಲಿಸದಿರುವುದನ್ನ ಪ್ರಶ್ನಿಸಿದ ವಿದ್ಯಾರ್ಥಿ ಮೇಲೆ ದರ್ಪ
ಗದಗ: ಬಸ್ ನಿಲ್ಲಿಸದಿರುವುದನ್ನ ಪ್ರಶ್ನಿಸಿದ ವಿದ್ಯಾರ್ಥಿ ಮೇಲೆ ದರ್ಪ