AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎಸ್​ಎಂ ಕೃಷ್ಣ ಕುರಿತು ರಮ್ಯಾ ಭಾವುಕ ಪೋಸ್ಟ್

Ramya: ಮಾಜಿ ಸಿಎಂ ಎಸ್​ಎಂ ಕೃಷ್ಣ ನಿನ್ನೆ ನಿಧನ ಹೊಂದಿದ್ದಾರೆ. ನಟಿ ರಮ್ಯಾ ಸಹ ಕೃಷ್ಣ ಅವರ ಆಪ್ತ ವಲಯದಲ್ಲಿದ್ದರು. ಕೃಷ್ಣ ಅವರ ನಿಧನದಿಂದ ತೀವ್ರ ದುಃಖತಪ್ತವಾಗಿರುವ ನಟಿ ರಮ್ಯಾ, ಇನ್​ಸ್ಟಾಗ್ರಾಂನಲ್ಲಿ ಕೃಷ್ಣ ಅವರ ಬಗ್ಗೆ ಭಾವುಕ ಪೋಸ್ಟ್ ಬರೆದುಕೊಂಡಿದ್ದಾರೆ. ಕೃಷ್ಣ ಅವರ ಅಂತ್ಯಕ್ರಿಯೆ ಇಂದು ಸೋಮನಹಳ್ಳಿಯಲ್ಲಿ ನಡೆಯಲಿದೆ.

ಎಸ್​ಎಂ ಕೃಷ್ಣ ಕುರಿತು ರಮ್ಯಾ ಭಾವುಕ ಪೋಸ್ಟ್
ಕೃಷ್ಣ-ರಮ್ಯಾ
ಮಂಜುನಾಥ ಸಿ.
|

Updated on:Dec 11, 2024 | 11:49 AM

Share

ಮಾಜಿ ಸಿಎಂ ಎಸ್​ಎಂ ಕೃಷ್ಣ ನಿನ್ನೆ ನಿಧನ ಹೊಂದಿದ್ದಾರೆ. ಕುಟುಂಬ ಸದಸ್ಯರು, ಅಪಾರ ಅಭಿಮಾನಿ ವರ್ಗವನ್ನು ಕೃಷ್ಣ ಅಗಲಿದ್ದಾರೆ. ಕೃಷ್ಣ ಅವರ ಅಗಲಿಕೆಗೆ ಹಲವರು ಕಂಬನಿ ಮಿಡಿದಿದ್ದಾರೆ. ಚಿತ್ರರಂಗದವರೊಟ್ಟಿಗೂ ಕೃಷ್ಣ ಆತ್ಮೀಯ ಬಂಧ ಹೊಂದಿದ್ದರು. ಹಲವು ಯುವ ರಾಜಕಾರಣಿಗಳಿಗೆ ಮಾರ್ಗದರ್ಶಕರೂ ಆಗಿದ್ದರು. ನಟಿ ರಮ್ಯಾ ಸಹ ಕೃಷ್ಣ ಅವರ ಆಪ್ತ ವಲಯದಲ್ಲಿದ್ದರು. ರಮ್ಯಾ ಅವರು ರಾಜಕೀಯ ಪ್ರವೇಶ ಮಾಡಿದಾಗ ಅವರಿಗೂ ಮಾರ್ಗದರ್ಶನವನ್ನು ಕೃಷ್ಣ ಅವರು ಮಾಡಿದ್ದರು. ಇದೀಗ ಅಗಲಿದ ಹಿರಿಯ ಮುತ್ಸಧಿ ಬಗ್ಗೆ ರಮ್ಯಾ ಭಾವುಕ ಪೋಸ್ಟ್ ಹಂಚಿಕೊಂಡಿದ್ದಾರೆ.

ನಿನ್ನೆ ಕೃಷ್ಣ ನಿಧನರಾಗುತ್ತಿದ್ದಂತೆ ಅವರ ನಿವಾಸಕ್ಕೆ ಆಗಮಿಸಿದ್ದ ನಟಿ ರಮ್ಯಾ, ಕಣ್ಣೀರು ಹಾಕಿದ್ದರು. ತೀವ್ರ ದುಖಃದಲ್ಲಿದ್ದ ನಟಿ ರಮ್ಯಾ ಮಾಧ್ಯಮಗಳ ಬಳಿಯೂ ಮಾತನಾಡಲಾಗದೆ ತೆರಳಿದ್ದರು. ಇದೀಗ ಸಾಮಾಜಿಕ ಜಾಲತಾಣದಲ್ಲಿ ಭಾವುಕ ಪೋಸ್ಟ್ ಒಂದನ್ನು ಕೃಷ್ಣ ಅವರ ಬಗ್ಗೆ ಹಂಚಿಕೊಂಡಿದ್ದರು.

‘ಎಲ್ಲ ರೀತಿಯಿಂದಲೂ ಒಬ್ಬ ಅದ್ಭುತ ರಾಜನೀತಿಜ್ಞ ಆಗಿದ್ದರು, ಎಂದಿಗೂ ಅವರ ‘ರಾಜಕಾರಣಿ’ ರೀತಿ ವರ್ತಿಸಿದವರಲ್ಲ. ಎಂದಿಗೂ ಸಹ ಯಾರ ಬಗ್ಗೆಯೂ ಕೀಳಾಗಿ ಅವರು ಮಾತನಾಡಿದ್ದಿಲ್ಲ, ಅವರ ಎದುರಾಳಿಗಳಿಗೂ ಅದೇ ಗೌರವವನ್ನು ಅವರು ನೀಡುತ್ತಿದ್ದರು. ದೂರದೃಷ್ಟಿಯುಳ್ಳ, ಮಾನವೀಯತೆ ಹೊಂದಿದ್ದ ಸಿಹಿ ಮಾತುಗಳ ಕೃಷ್ಣ ಅವರು ಚೆನ್ನಾಗಿ ಓದಿಕೊಂಡಿದ್ದ, ಹಾಸ್ಯಪ್ರಜ್ಞೆ ಹೊಂದಿದ್ದ ವ್ಯಕ್ತಿ. ಅವರಂಥಹಾ ಸುಂದರ ವ್ಯಕ್ತಿತ್ವ ಹೊಂದಿರುವ ಮತ್ತೊಬ್ಬ ವ್ಯಕ್ತಿ ಸಿಗಲಾರರು. ನೀವು ನೀಡಿರುವ ಎಲ್ಲದಕ್ಕೂ ಧನ್ಯವಾದ. ನೀವು ಈಗ ನಿಮ್ಮ ಆತ್ಮೀಯ ಗೆಳೆಯನನ್ನು ಸೇರಿಕೊಂಡಿದ್ದೀರಿ’ ಎಂದಿದ್ದಾರೆ ರಮ್ಯಾ.

ಇದನ್ನೂ ಓದಿ:ಭಾವುಕರಾಗಿ ಎಸ್​ಎಂ ಕೃಷ್ಣ ಅಂತಿಮ ದರ್ಶನ ಪಡೆದ ನಟಿ ರಮ್ಯಾ

ರಮ್ಯಾ ಅವರ ಸಾಕು ತಂದೆ ಆರ್​ಟಿ ನಾರಾಯಣ್ ಅವರು ಎಸ್​ಎಂ ಕೃಷ್ಣ ಅವರ ಆತ್ಮೀಯ ಗೆಳೆಯರಾಗಿದ್ದರು. ಹಲವು ವರ್ಷಗಳಿಂದಲೂ ಕೃಷ್ಣ ಹಾಗೂ ನಾರಾಯಣ್ ಗೆಳೆಯರಾಗಿದ್ದರು ಹಲವು ವರ್ಷಗಳ ಕಾಲ ಇಬ್ಬರೂ ಒಟ್ಟಿಗೆ ಟೆನ್ನಿಸ್ ಆಡುತ್ತಿದ್ದರು. ಇದೇ ಕಾರಣಕ್ಕೆ ರಮ್ಯಾ, ಅವರು ‘ನೀವೀಗ ನಿಮ್ಮ ಆತ್ಮೀಯ ಗೆಳೆಯನೊಟ್ಟಿಗೆ ಇರಲಿದ್ದೀರಿ’ ಎಂದು ತಮ್ಮ ಪೋಸ್ಟ್​ನಲ್ಲಿ ಬರೆದುಕೊಂಡಿದ್ದಾರೆ.

ವಯೋಸಹಜ ಅನಾರೋಗ್ಯದಿಂದ ಕೃಷ್ಣ ಅವರು ನಿಧನ ಹೊಂದಿದ್ದಾರೆ. ನಿನ್ನೆ ರಾಜ್ಯ ಮತ್ತು ರಾಷ್ಟ್ರಕಾರಣದ ಹಲವು ಗಣ್ಯರು ಅವರ ಅಂತಿಮ ದರ್ಶನ ಪಡೆದರು. ಇಂದು (ಡಿಸೆಂಬರ್ 11) ಕೃಷ್ಣ ಅವರ ಪಾರ್ಥಿವ ಶರೀರವನ್ನು ಅವರ ಹುಟ್ಟೂರಾದ ಮಂಡ್ಯದ ಸೋಮನಹಳ್ಳಿಗೆ ಕೊಂಡೊಯ್ದಿದ್ದು ಅಲ್ಲಿಯೇ ಅಂತಿಮ ಸಂಸ್ಕಾರ ನಡೆಯಲಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 11:42 am, Wed, 11 December 24

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್