AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Ramya: ‘ಸ್ವಾತಿ ಮುತ್ತಿನ ಮಳೆ ಹನಿಯೇ’ ಟೈಟಲ್​​ ಕಿರಿಕ್​; ರಮ್ಯಾ ಸಿನಿಮಾದ ವಿರುದ್ಧ ರಾಜೇಂದ್ರ ಸಿಂಗ್​ ಬಾಬು ದೂರು

Swathi Mutthina Male Haniye: ಒಂದೇ ಶೀರ್ಷಿಕೆಯಲ್ಲಿ ಎರಡು ಸಿನಿಮಾ ನಿರ್ಮಾಣ ಆಗುತ್ತಿರುವುದು ಅಚ್ಚರಿ ಮೂಡಿಸಿದೆ. ರಮ್ಯಾ ಅವರು ತಮ್ಮ ಚಿತ್ರದ ಟೈಟಲ್​ ಬದಲಾಯಿಸುತ್ತಾರಾ ಎಂಬ ಪ್ರಶ್ನೆ ಮೂಡಿದೆ.

Ramya: ‘ಸ್ವಾತಿ ಮುತ್ತಿನ ಮಳೆ ಹನಿಯೇ’ ಟೈಟಲ್​​ ಕಿರಿಕ್​; ರಮ್ಯಾ ಸಿನಿಮಾದ ವಿರುದ್ಧ ರಾಜೇಂದ್ರ ಸಿಂಗ್​ ಬಾಬು ದೂರು
ರಾಜೇಂದ್ರ ಸಿಂಗ್ ಬಾಬು, ರಮ್ಯಾ
TV9 Web
| Edited By: |

Updated on:Dec 12, 2022 | 2:32 PM

Share

ನಟಿ ರಮ್ಯಾ (Ramya Divya Spandana) ಅವರು ಬಹಳ ಉತ್ಸಾಹದಲ್ಲಿ ನಿರ್ಮಾಪಕಿ ಆಗಿದ್ದಾರೆ. ಅವರ ನಿರ್ಮಾಣದಲ್ಲಿ ‘ಸ್ವಾತಿ ಮುತ್ತಿನ ಮಳೆ ಹನಿಯೇ’ ಸಿನಿಮಾ ಮೂಡಿಬರುತ್ತಿದೆ. ಈಗಾಗಲೇ ಈ ಚಿತ್ರಕ್ಕೆ ಶೂಟಿಂಗ್​ ಮುಗಿದಿದೆ. ಆದರೆ ಈಗ ಶೀರ್ಷಿಕೆ ವಿಚಾರವಾಗಿ ಕಿರಿಕ್​ ಶುರುವಾಗುವ ಸೂಚನೆ ಸಿಕ್ಕಿದೆ. ‘ಸ್ವಾತಿ ಮುತ್ತಿನ ಮಳೆ ಹನಿಯೇ’ (Swathi Mutthina Male Haniye) ಶೀರ್ಷಿಕೆಯನ್ನು ಬಳಸಬಾರದು ಎಂದು ಹಿರಿಯ ನಿರ್ದೇಶಕ ಎಸ್​.ವಿ. ರಾಜೇಂದ್ರ ಸಿಂಗ್​ ಬಾಬು (S V Rajendra Singh Babu) ಅವರು ಆಕ್ಷೇಪ ಎತ್ತಿದ್ದಾರೆ. ಈ ಕುರಿತು ಅವರು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಗೆ ಪತ್ರ ಬರೆದಿದ್ದಾರೆ. ಈ ಶೀರ್ಷಿಕೆಯನ್ನು ತಾವು ನೋಂದಾಯಿಸಿದ್ದು, ಬೇರೆ ಯಾರಿಗೂ ಇದನ್ನು ಬಳಸಲು ಅವಕಾಶ ನೀಡಬಾರದು ಎಂದು ಅವರು ಪತ್ರದಲ್ಲಿ ಖಡಕ್​ ಆಗಿ ತಿಳಿಸಿದ್ದಾರೆ.

1990ರಲ್ಲಿ ‘ಬಣ್ಣದ ಗೆಜ್ಜೆ’ ಚಿತ್ರ ಬಿಡುಗಡೆ ಆಗಿತ್ತು. ಆ ಸಿನಿಮಾಗೆ ಎಸ್​.ವಿ. ರಾಜೇಂದ್ರ ಸಿಂಗ್​ ಬಾಬು ನಿರ್ದೇಶನ ಮಾಡಿದ್ದರು. ‘ಬಣ್ಣದ ಗೆಜ್ಜೆ’ ಚಿತ್ರದ ‘ಸ್ವಾತಿ ಮುತ್ತಿನ ಮಳೆ ಹನಿಯೇ..’ ಹಾಡು ಇಂದಿಗೂ ಫೇಮಸ್​. ಇದೇ ಶೀರ್ಷಿಕೆಯನ್ನು ಇಟ್ಟುಕೊಂಡು ನಟಿ ರಮ್ಯಾ ಅವರು ಹೊಸ ಸಿನಿಮಾ ನಿರ್ಮಾಣ ಮಾಡುತ್ತಿದ್ದಾರೆ. ಆದರೆ ರಾಜೇಂದ್ರ ಸಿಂಗ್​ ಬಾಬು ಅವರು ಈ ಶೀರ್ಷಿಕೆಯನ್ನು ತಾವು ನೋಂದಾಯಿಸಿರುವುದಾಗಿ ತಿಳಿಸಿದ್ದಾರೆ. ಹಾಗಾಗಿ ತಮ್ಮ ಪರ ವಕೀಲರ ಮೂಲಕ ವಾಣಿಜ್ಯ ಮಂಡಳಿಗೆ ಪತ್ರ ಬರೆದಿದ್ದಾರೆ.

ಎಸ್​.ವಿ. ರಾಜೇಂದ್ರ ಸಿಂಗ್​ ಬಾಬು ಅವರ ನಿರ್ದೇಶನದಲ್ಲಿ ಮೂಡಿಬರಲಿರುವ ಚಿತ್ರಕ್ಕೆ ‘ರೆಬಲ್​ ಸ್ಟಾರ್​’ ಅಂಬರೀಷ್​ ಹಾಗೂ ಸುಹಾಸಿನಿ ಅವರು ಜೋಡಿ ಎಂಬುದು ವಿಶೇಷ. ಈ ಚಿತ್ರಕ್ಕೆ ಶೇಕಡ 80ರಷ್ಟು ಶೂಟಿಂಗ್​ ಮುಗಿದಿತ್ತು. ಆದರೆ ಅಂಬರೀಷ್​ ನಿಧನರಾದ ಬಳಿಕ ಕೆಲವು ದೃಶ್ಯಗಳ ಚಿತ್ರೀಕರಣ ಬಾಕಿ ಉಳಿದುಕೊಂಡಿತು ಎಂದು ಪತ್ರದಲ್ಲಿ ರಾಜೇಂದ್ರ ಸಿಂಗ್​ ಬಾಬು ತಿಳಿಸಿದ್ದಾರೆ.

ಇದನ್ನೂ ಓದಿ
Image
Ramya: 18ನೇ ಪ್ರಾಯದಲ್ಲಿ ರಮ್ಯಾ ಹೇಗಿದ್ದರು ನೋಡಿ; ವೈರಲ್​ ಆಗಿದೆ ಹಳೇ ಐಡಿ ಕಾರ್ಡ್​​ ಫೋಟೋ
Image
ಕನ್ನಡದ ಪ್ರಸಿದ್ಧ ನಟಿಯರ ಪಟ್ಟಿಯಲ್ಲಿ ರಮ್ಯಾಗೆ 4ನೇ ಸ್ಥಾನ; ರಚಿತಾ, ಆಶಿಕಾ, ರಶ್ಮಿಕಾ, ರಾಧಿಕಾ ನಡುವೆ ನಂ.1 ಯಾರು?
Image
Ramya: ತಮ್ಮನ್ನು ತಾವೇ ‘ಡ್ರಾಮಾ ಕ್ವೀನ್​’ ಎಂದು ಕರೆದುಕೊಂಡ ನಟಿ ರಮ್ಯಾ; ಕಾರಣ ಏನು?
Image
Ramya: ಕಡೆಗೂ ಶೂಟಿಂಗ್​ ಸೆಟ್​ಗೆ ಬಂದ ರಮ್ಯಾ: ಡಾಲಿ ಜತೆ ಇರುವ ವಿಡಿಯೋ ವೈರಲ್​; ಏನಿದು ಸಮಾಚಾರ?

ಇದನ್ನೂ ಓದಿ:  ಬೆರಳೆಣಿಕೆ ದಿನಗಳಲ್ಲಿ ಸಿನಿಮಾ ಶೂಟಿಂಗ್​ ಪೂರ್ಣಗೊಳಿಸಿದ ‘ಸ್ವಾತಿ ಮುತ್ತಿನ ಮಳೆ ಹನಿಯೇ’ ತಂಡ

ರಮ್ಯಾ ಅವರು ‘ಆಪಲ್​ ಬಾಕ್ಸ್​’ ಹೆಸರಲಿನಲ್ಲಿ ನಿರ್ಮಾಣ ಸಂಸ್ಥೆ ಆರಂಭಿಸಿದ್ದಾರೆ. ಅದರ ಮೂಲಕ ನಿರ್ಮಾಣ ಆಗುತ್ತಿರುವ ಮೊದಲ ಚಿತ್ರ ‘ಸ್ವಾತಿ ಮುತ್ತಿನ ಮಳೆ ಹನಿಯೇ’. ರಾಜ್​ ಬಿ. ಶೆಟ್ಟಿ ಅವರು ಈ ಸಿನಿಮಾಗೆ ನಿರ್ದೇಶನ ಮಾಡುತ್ತಿದ್ದಾರೆ. ಸಿರಿ ರವಿಕುಮಾರ್​ ಅವರು ನಾಯಕಿ ಆಗಿದ್ದಾರೆ. ಆದರೆ ಈಗ ಈ ಚಿತ್ರಕ್ಕೆ ಶೀರ್ಷಿಕೆ ವಿವಾದ ಎದುರಾಗಿದೆ.

ಇದನ್ನೂ ಓದಿ: Actress Ramya: ‘ನಾನು ಆ ಚಿತ್ರದಲ್ಲಿ ನಟಿಸುತ್ತಿಲ್ಲ’; ಸ್ಪಷ್ಟನೆ ನೀಡಿದ ನಟಿ ರಮ್ಯಾ

ಒಂದೇ ಶೀರ್ಷಿಕೆಯಲ್ಲಿ ಎರಡು ಸಿನಿಮಾ ನಿರ್ಮಾಣ ಆಗುತ್ತಿರುವುದು ಅಚ್ಚರಿ ಮೂಡಿಸಿದೆ. ರಮ್ಯಾ ಅವರು ತಮ್ಮ ಚಿತ್ರದ ಶೀರ್ಷಿಕೆ ಬದಲಾಯಿಸುತ್ತಾರಾ ಎಂಬ ಪ್ರಶ್ನೆ ಮೂಡಿದೆ. ಈ ಕುರಿತು ಅವರು ಯಾವ ರೀತಿ ಪ್ರತಿಕ್ರಿಯೆ ನೀಡಲಿದ್ದಾರೆ ಎಂಬುದನ್ನು ಕಾದು ನೋಡಬೇಕಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 2:32 pm, Mon, 12 December 22

ತಮ್ಮ ಬಟ್ಟೆ ಬಗ್ಗೆ ಅಶ್ಲೀಲ ಕಾಮೆಂಟ್​ ಮಾಡಿದವರಿಗೆ ತಿರುಗೇಟು ಕೊಟ್ಟ ಶಾಸಕಿ
ತಮ್ಮ ಬಟ್ಟೆ ಬಗ್ಗೆ ಅಶ್ಲೀಲ ಕಾಮೆಂಟ್​ ಮಾಡಿದವರಿಗೆ ತಿರುಗೇಟು ಕೊಟ್ಟ ಶಾಸಕಿ
'ಐದನೇ ಒಂದು ಭಾಗದಷ್ಟು ನಿಧಿ ಕುಟುಂಬಕ್ಕೆ ಕೊಡ್ತೀವಿ'
'ಐದನೇ ಒಂದು ಭಾಗದಷ್ಟು ನಿಧಿ ಕುಟುಂಬಕ್ಕೆ ಕೊಡ್ತೀವಿ'
ಅರ್ಧ ಕೆಜಿ ಚಿನ್ನ ಸರ್ಕಾರಕ್ಕೆ ಕೊಟ್ಟಾಕೆಗೆ ಇರಲು ಮನೆಯೂ ಇಲ್ಲ: ಸಹೋದರ ಅಳಲು
ಅರ್ಧ ಕೆಜಿ ಚಿನ್ನ ಸರ್ಕಾರಕ್ಕೆ ಕೊಟ್ಟಾಕೆಗೆ ಇರಲು ಮನೆಯೂ ಇಲ್ಲ: ಸಹೋದರ ಅಳಲು
ತಮಿಳು ಮಾತನಾಡಿದ ರಾಹುಲ್: ಪಂದ್ಯದ ನಡುವೆ 'ರಾಷ್ಟ್ರಭಾಷೆ'ಯ ಚರ್ಚೆ!
ತಮಿಳು ಮಾತನಾಡಿದ ರಾಹುಲ್: ಪಂದ್ಯದ ನಡುವೆ 'ರಾಷ್ಟ್ರಭಾಷೆ'ಯ ಚರ್ಚೆ!
ಸಿದ್ದರಾಮಯ್ಯಗೆ ಶಕ್ತಿ ಇದೆ, ಡಿಕೆಶಿಗೆ ಏನಿದೆ? ಸಿಎಂ ಪರ ಯತ್ನಾಳ್ ಬ್ಯಾಟ್
ಸಿದ್ದರಾಮಯ್ಯಗೆ ಶಕ್ತಿ ಇದೆ, ಡಿಕೆಶಿಗೆ ಏನಿದೆ? ಸಿಎಂ ಪರ ಯತ್ನಾಳ್ ಬ್ಯಾಟ್
ರಾಜ್ಯ ಕಾಂಗ್ರೆಸ್​ನಲ್ಲಿ ಸಂಚಲನ: ದಿಢೀರ್​ ಖರ್ಗೆ ಭೇಟಿಯಾಗಿದ್ದೇಕೆ ಡಿಕೆಶಿ?
ರಾಜ್ಯ ಕಾಂಗ್ರೆಸ್​ನಲ್ಲಿ ಸಂಚಲನ: ದಿಢೀರ್​ ಖರ್ಗೆ ಭೇಟಿಯಾಗಿದ್ದೇಕೆ ಡಿಕೆಶಿ?
ಈ ಚಿನ್ನದ ನಿಧಿ ಸರ್ಕಾರಕ್ಕೆ ಸೇರಿದ್ದು, ಇದರ ಮೇಲೆ ಯಾರಿಗೂ ಹಕ್ಕಿಲ್ಲ
ಈ ಚಿನ್ನದ ನಿಧಿ ಸರ್ಕಾರಕ್ಕೆ ಸೇರಿದ್ದು, ಇದರ ಮೇಲೆ ಯಾರಿಗೂ ಹಕ್ಕಿಲ್ಲ
ಲಕ್ಕುಂಡಿಯಲ್ಲಿ ಸಿಕ್ಕ ಬಂಗಾರ ನಿಧಿಯೋ? ಪೂರ್ವಜರ ಆಸ್ತಿಯೋ?
ಲಕ್ಕುಂಡಿಯಲ್ಲಿ ಸಿಕ್ಕ ಬಂಗಾರ ನಿಧಿಯೋ? ಪೂರ್ವಜರ ಆಸ್ತಿಯೋ?
ಇಸ್ರೋದ ಪಿಎಸ್​ಎಲ್​ವಿ-ಸಿ62 ರಾಕೆಟ್​ನಲ್ಲಿ ತಾಂತ್ರಿಕ ದೋಷ
ಇಸ್ರೋದ ಪಿಎಸ್​ಎಲ್​ವಿ-ಸಿ62 ರಾಕೆಟ್​ನಲ್ಲಿ ತಾಂತ್ರಿಕ ದೋಷ
ಜರ್ಮನ್ ಚಾನ್ಸೆಲರ್ ಜತೆ ಸಬರಮತಿ ಆಶ್ರಮದಲ್ಲಿ ಗಾಳಿಪಟ ಹಾರಿಸಿದ ಮೋದಿ
ಜರ್ಮನ್ ಚಾನ್ಸೆಲರ್ ಜತೆ ಸಬರಮತಿ ಆಶ್ರಮದಲ್ಲಿ ಗಾಳಿಪಟ ಹಾರಿಸಿದ ಮೋದಿ