AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Ramya: ‘ಸ್ವಾತಿ ಮುತ್ತಿನ ಮಳೆ ಹನಿಯೇ’ ಟೈಟಲ್​​ ಕಿರಿಕ್​; ರಮ್ಯಾ ಸಿನಿಮಾದ ವಿರುದ್ಧ ರಾಜೇಂದ್ರ ಸಿಂಗ್​ ಬಾಬು ದೂರು

Swathi Mutthina Male Haniye: ಒಂದೇ ಶೀರ್ಷಿಕೆಯಲ್ಲಿ ಎರಡು ಸಿನಿಮಾ ನಿರ್ಮಾಣ ಆಗುತ್ತಿರುವುದು ಅಚ್ಚರಿ ಮೂಡಿಸಿದೆ. ರಮ್ಯಾ ಅವರು ತಮ್ಮ ಚಿತ್ರದ ಟೈಟಲ್​ ಬದಲಾಯಿಸುತ್ತಾರಾ ಎಂಬ ಪ್ರಶ್ನೆ ಮೂಡಿದೆ.

Ramya: ‘ಸ್ವಾತಿ ಮುತ್ತಿನ ಮಳೆ ಹನಿಯೇ’ ಟೈಟಲ್​​ ಕಿರಿಕ್​; ರಮ್ಯಾ ಸಿನಿಮಾದ ವಿರುದ್ಧ ರಾಜೇಂದ್ರ ಸಿಂಗ್​ ಬಾಬು ದೂರು
ರಾಜೇಂದ್ರ ಸಿಂಗ್ ಬಾಬು, ರಮ್ಯಾ
Follow us
TV9 Web
| Updated By: ಮದನ್​ ಕುಮಾರ್​

Updated on:Dec 12, 2022 | 2:32 PM

ನಟಿ ರಮ್ಯಾ (Ramya Divya Spandana) ಅವರು ಬಹಳ ಉತ್ಸಾಹದಲ್ಲಿ ನಿರ್ಮಾಪಕಿ ಆಗಿದ್ದಾರೆ. ಅವರ ನಿರ್ಮಾಣದಲ್ಲಿ ‘ಸ್ವಾತಿ ಮುತ್ತಿನ ಮಳೆ ಹನಿಯೇ’ ಸಿನಿಮಾ ಮೂಡಿಬರುತ್ತಿದೆ. ಈಗಾಗಲೇ ಈ ಚಿತ್ರಕ್ಕೆ ಶೂಟಿಂಗ್​ ಮುಗಿದಿದೆ. ಆದರೆ ಈಗ ಶೀರ್ಷಿಕೆ ವಿಚಾರವಾಗಿ ಕಿರಿಕ್​ ಶುರುವಾಗುವ ಸೂಚನೆ ಸಿಕ್ಕಿದೆ. ‘ಸ್ವಾತಿ ಮುತ್ತಿನ ಮಳೆ ಹನಿಯೇ’ (Swathi Mutthina Male Haniye) ಶೀರ್ಷಿಕೆಯನ್ನು ಬಳಸಬಾರದು ಎಂದು ಹಿರಿಯ ನಿರ್ದೇಶಕ ಎಸ್​.ವಿ. ರಾಜೇಂದ್ರ ಸಿಂಗ್​ ಬಾಬು (S V Rajendra Singh Babu) ಅವರು ಆಕ್ಷೇಪ ಎತ್ತಿದ್ದಾರೆ. ಈ ಕುರಿತು ಅವರು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಗೆ ಪತ್ರ ಬರೆದಿದ್ದಾರೆ. ಈ ಶೀರ್ಷಿಕೆಯನ್ನು ತಾವು ನೋಂದಾಯಿಸಿದ್ದು, ಬೇರೆ ಯಾರಿಗೂ ಇದನ್ನು ಬಳಸಲು ಅವಕಾಶ ನೀಡಬಾರದು ಎಂದು ಅವರು ಪತ್ರದಲ್ಲಿ ಖಡಕ್​ ಆಗಿ ತಿಳಿಸಿದ್ದಾರೆ.

1990ರಲ್ಲಿ ‘ಬಣ್ಣದ ಗೆಜ್ಜೆ’ ಚಿತ್ರ ಬಿಡುಗಡೆ ಆಗಿತ್ತು. ಆ ಸಿನಿಮಾಗೆ ಎಸ್​.ವಿ. ರಾಜೇಂದ್ರ ಸಿಂಗ್​ ಬಾಬು ನಿರ್ದೇಶನ ಮಾಡಿದ್ದರು. ‘ಬಣ್ಣದ ಗೆಜ್ಜೆ’ ಚಿತ್ರದ ‘ಸ್ವಾತಿ ಮುತ್ತಿನ ಮಳೆ ಹನಿಯೇ..’ ಹಾಡು ಇಂದಿಗೂ ಫೇಮಸ್​. ಇದೇ ಶೀರ್ಷಿಕೆಯನ್ನು ಇಟ್ಟುಕೊಂಡು ನಟಿ ರಮ್ಯಾ ಅವರು ಹೊಸ ಸಿನಿಮಾ ನಿರ್ಮಾಣ ಮಾಡುತ್ತಿದ್ದಾರೆ. ಆದರೆ ರಾಜೇಂದ್ರ ಸಿಂಗ್​ ಬಾಬು ಅವರು ಈ ಶೀರ್ಷಿಕೆಯನ್ನು ತಾವು ನೋಂದಾಯಿಸಿರುವುದಾಗಿ ತಿಳಿಸಿದ್ದಾರೆ. ಹಾಗಾಗಿ ತಮ್ಮ ಪರ ವಕೀಲರ ಮೂಲಕ ವಾಣಿಜ್ಯ ಮಂಡಳಿಗೆ ಪತ್ರ ಬರೆದಿದ್ದಾರೆ.

ಎಸ್​.ವಿ. ರಾಜೇಂದ್ರ ಸಿಂಗ್​ ಬಾಬು ಅವರ ನಿರ್ದೇಶನದಲ್ಲಿ ಮೂಡಿಬರಲಿರುವ ಚಿತ್ರಕ್ಕೆ ‘ರೆಬಲ್​ ಸ್ಟಾರ್​’ ಅಂಬರೀಷ್​ ಹಾಗೂ ಸುಹಾಸಿನಿ ಅವರು ಜೋಡಿ ಎಂಬುದು ವಿಶೇಷ. ಈ ಚಿತ್ರಕ್ಕೆ ಶೇಕಡ 80ರಷ್ಟು ಶೂಟಿಂಗ್​ ಮುಗಿದಿತ್ತು. ಆದರೆ ಅಂಬರೀಷ್​ ನಿಧನರಾದ ಬಳಿಕ ಕೆಲವು ದೃಶ್ಯಗಳ ಚಿತ್ರೀಕರಣ ಬಾಕಿ ಉಳಿದುಕೊಂಡಿತು ಎಂದು ಪತ್ರದಲ್ಲಿ ರಾಜೇಂದ್ರ ಸಿಂಗ್​ ಬಾಬು ತಿಳಿಸಿದ್ದಾರೆ.

ಇದನ್ನೂ ಓದಿ
Image
Ramya: 18ನೇ ಪ್ರಾಯದಲ್ಲಿ ರಮ್ಯಾ ಹೇಗಿದ್ದರು ನೋಡಿ; ವೈರಲ್​ ಆಗಿದೆ ಹಳೇ ಐಡಿ ಕಾರ್ಡ್​​ ಫೋಟೋ
Image
ಕನ್ನಡದ ಪ್ರಸಿದ್ಧ ನಟಿಯರ ಪಟ್ಟಿಯಲ್ಲಿ ರಮ್ಯಾಗೆ 4ನೇ ಸ್ಥಾನ; ರಚಿತಾ, ಆಶಿಕಾ, ರಶ್ಮಿಕಾ, ರಾಧಿಕಾ ನಡುವೆ ನಂ.1 ಯಾರು?
Image
Ramya: ತಮ್ಮನ್ನು ತಾವೇ ‘ಡ್ರಾಮಾ ಕ್ವೀನ್​’ ಎಂದು ಕರೆದುಕೊಂಡ ನಟಿ ರಮ್ಯಾ; ಕಾರಣ ಏನು?
Image
Ramya: ಕಡೆಗೂ ಶೂಟಿಂಗ್​ ಸೆಟ್​ಗೆ ಬಂದ ರಮ್ಯಾ: ಡಾಲಿ ಜತೆ ಇರುವ ವಿಡಿಯೋ ವೈರಲ್​; ಏನಿದು ಸಮಾಚಾರ?

ಇದನ್ನೂ ಓದಿ:  ಬೆರಳೆಣಿಕೆ ದಿನಗಳಲ್ಲಿ ಸಿನಿಮಾ ಶೂಟಿಂಗ್​ ಪೂರ್ಣಗೊಳಿಸಿದ ‘ಸ್ವಾತಿ ಮುತ್ತಿನ ಮಳೆ ಹನಿಯೇ’ ತಂಡ

ರಮ್ಯಾ ಅವರು ‘ಆಪಲ್​ ಬಾಕ್ಸ್​’ ಹೆಸರಲಿನಲ್ಲಿ ನಿರ್ಮಾಣ ಸಂಸ್ಥೆ ಆರಂಭಿಸಿದ್ದಾರೆ. ಅದರ ಮೂಲಕ ನಿರ್ಮಾಣ ಆಗುತ್ತಿರುವ ಮೊದಲ ಚಿತ್ರ ‘ಸ್ವಾತಿ ಮುತ್ತಿನ ಮಳೆ ಹನಿಯೇ’. ರಾಜ್​ ಬಿ. ಶೆಟ್ಟಿ ಅವರು ಈ ಸಿನಿಮಾಗೆ ನಿರ್ದೇಶನ ಮಾಡುತ್ತಿದ್ದಾರೆ. ಸಿರಿ ರವಿಕುಮಾರ್​ ಅವರು ನಾಯಕಿ ಆಗಿದ್ದಾರೆ. ಆದರೆ ಈಗ ಈ ಚಿತ್ರಕ್ಕೆ ಶೀರ್ಷಿಕೆ ವಿವಾದ ಎದುರಾಗಿದೆ.

ಇದನ್ನೂ ಓದಿ: Actress Ramya: ‘ನಾನು ಆ ಚಿತ್ರದಲ್ಲಿ ನಟಿಸುತ್ತಿಲ್ಲ’; ಸ್ಪಷ್ಟನೆ ನೀಡಿದ ನಟಿ ರಮ್ಯಾ

ಒಂದೇ ಶೀರ್ಷಿಕೆಯಲ್ಲಿ ಎರಡು ಸಿನಿಮಾ ನಿರ್ಮಾಣ ಆಗುತ್ತಿರುವುದು ಅಚ್ಚರಿ ಮೂಡಿಸಿದೆ. ರಮ್ಯಾ ಅವರು ತಮ್ಮ ಚಿತ್ರದ ಶೀರ್ಷಿಕೆ ಬದಲಾಯಿಸುತ್ತಾರಾ ಎಂಬ ಪ್ರಶ್ನೆ ಮೂಡಿದೆ. ಈ ಕುರಿತು ಅವರು ಯಾವ ರೀತಿ ಪ್ರತಿಕ್ರಿಯೆ ನೀಡಲಿದ್ದಾರೆ ಎಂಬುದನ್ನು ಕಾದು ನೋಡಬೇಕಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 2:32 pm, Mon, 12 December 22

ಟೇಕಾಫ್​​ನಿಂದ ಪತನದವರೆಗೆ; ಏರ್ ಇಂಡಿಯಾ ವಿಮಾನದ ಕೊನೆಯ ಕ್ಷಣಗಳಿವು
ಟೇಕಾಫ್​​ನಿಂದ ಪತನದವರೆಗೆ; ಏರ್ ಇಂಡಿಯಾ ವಿಮಾನದ ಕೊನೆಯ ಕ್ಷಣಗಳಿವು
ಊಟಕ್ಕೆ ಕುಳಿತ ವೈದ್ಯಕೀಯ ವಿದ್ಯಾರ್ಥಿಗಳ ಪ್ರಾಣವನ್ನೇ ಬಲಿ ಪಡೆದ ವಿಮಾನ
ಊಟಕ್ಕೆ ಕುಳಿತ ವೈದ್ಯಕೀಯ ವಿದ್ಯಾರ್ಥಿಗಳ ಪ್ರಾಣವನ್ನೇ ಬಲಿ ಪಡೆದ ವಿಮಾನ
ವಿಮಾನ ಅಪಘಾತದಲ್ಲಿ ಪವಾಡದಂತೆ ಬದುಕುಳಿದ ಒಬ್ಬ ವ್ಯಕ್ತಿ!
ವಿಮಾನ ಅಪಘಾತದಲ್ಲಿ ಪವಾಡದಂತೆ ಬದುಕುಳಿದ ಒಬ್ಬ ವ್ಯಕ್ತಿ!
ಕಲ್ಯಾಣ ಕರ್ನಾಟಕಕ್ಕೆ ನಿಮ್ಮ ಕೊಡುಗೆಯೇನು ಅಂದಾಗ ಶೆಟ್ಟರ್ ಅವಕ್ಕಾದರು!
ಕಲ್ಯಾಣ ಕರ್ನಾಟಕಕ್ಕೆ ನಿಮ್ಮ ಕೊಡುಗೆಯೇನು ಅಂದಾಗ ಶೆಟ್ಟರ್ ಅವಕ್ಕಾದರು!
ಅಹಮದಾಬಾದ್​ನಲ್ಲಿ ವಿಮಾನ ಅಪಘಾತದ ಸ್ಥಳಕ್ಕೆ ಭೇಟಿ ನೀಡಿದ ಅಮಿತ್ ಶಾ
ಅಹಮದಾಬಾದ್​ನಲ್ಲಿ ವಿಮಾನ ಅಪಘಾತದ ಸ್ಥಳಕ್ಕೆ ಭೇಟಿ ನೀಡಿದ ಅಮಿತ್ ಶಾ
ಅಂಜನಾದ್ರಿ ಹನುಮನ ಕೃಪೆಯಿಂದ ಶಾಸಕ ಸ್ಥಾನ ಅಭಾದಿತವಾಗಿದೆ: ಜನಾರ್ಧನ ರೆಡ್ಡಿ
ಅಂಜನಾದ್ರಿ ಹನುಮನ ಕೃಪೆಯಿಂದ ಶಾಸಕ ಸ್ಥಾನ ಅಭಾದಿತವಾಗಿದೆ: ಜನಾರ್ಧನ ರೆಡ್ಡಿ
ಕಿರಣ್ ರಾಜ್ ಜೀವನದ ‘ಕರ್ಣ’ ಯಾರು? ಅವರೇ ಕೊಟ್ಟಿದ್ದಾರೆ ಉತ್ತರ
ಕಿರಣ್ ರಾಜ್ ಜೀವನದ ‘ಕರ್ಣ’ ಯಾರು? ಅವರೇ ಕೊಟ್ಟಿದ್ದಾರೆ ಉತ್ತರ
ವಿಮಾನದಲ್ಲಿ ಪ್ರಯಾಣಿಸುತ್ತಿದ್ದವರೆಲ್ಲ ಸತ್ತಿರುವ ಶಂಕೆಯಿದೆ: ಪರಮೇಶ್ವರ್
ವಿಮಾನದಲ್ಲಿ ಪ್ರಯಾಣಿಸುತ್ತಿದ್ದವರೆಲ್ಲ ಸತ್ತಿರುವ ಶಂಕೆಯಿದೆ: ಪರಮೇಶ್ವರ್
ದುರಂತದಲ್ಲಿ ಮಡಿದವರು ಭಾರತೀಯರು; ಕನ್ನಡ, ತೆಲುಗು ತಾರತಮ್ಯ ಬೇಡ: ಶಿವಕುಮಾರ್
ದುರಂತದಲ್ಲಿ ಮಡಿದವರು ಭಾರತೀಯರು; ಕನ್ನಡ, ತೆಲುಗು ತಾರತಮ್ಯ ಬೇಡ: ಶಿವಕುಮಾರ್
ಏರ್ ಇಂಡಿಯಾ ವಿಮಾನ ಪತನವಾದ ಜಾಗದಲ್ಲಿ ಬಿದ್ದ ಪ್ರಯಾಣಿಕರ ಲಗೇಜ್ ರಾಶಿ
ಏರ್ ಇಂಡಿಯಾ ವಿಮಾನ ಪತನವಾದ ಜಾಗದಲ್ಲಿ ಬಿದ್ದ ಪ್ರಯಾಣಿಕರ ಲಗೇಜ್ ರಾಶಿ