AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿದೇಶಕ್ಕೆ ಹೋದಾಗ ರಾಹುಲ್​ ಗಾಂಧಿ ವಿಚಾರದಲ್ಲಿ ಮಾಡಿದ್ದ ದೊಡ್ಡ ತಪ್ಪಿನ ಬಗ್ಗೆ ಬಾಯ್ಬಿಟ್ಟ ರಮ್ಯಾ

Ramya: ರಮ್ಯಾ ಮಾಡಿದ ಆ ಒಂದು ತಪ್ಪಿನಿಂದಾಗಿ ರಾಹುಲ್​ ಗಾಂಧಿ ಸಿಕ್ಕಾಪಟ್ಟೆ ಟ್ರೋಲ್​ಗೆ ಒಳಗಾಗಿದ್ದರು. ಹಾಗಾಗಿ ರಮ್ಯಾ ರಾಜೀನಾಮೆ ನೀಡಲು ಮುಂದಾಗಿದ್ದರು. ಆ ಬಗ್ಗೆ ಇಲ್ಲಿದೆ ವಿವರ...

ವಿದೇಶಕ್ಕೆ ಹೋದಾಗ ರಾಹುಲ್​ ಗಾಂಧಿ ವಿಚಾರದಲ್ಲಿ ಮಾಡಿದ್ದ ದೊಡ್ಡ ತಪ್ಪಿನ ಬಗ್ಗೆ ಬಾಯ್ಬಿಟ್ಟ ರಮ್ಯಾ
ರಾಹುಲ್​ ಗಾಂಧಿ, ರಮ್ಯಾ
TV9 Web
| Edited By: |

Updated on: Jun 29, 2021 | 1:45 PM

Share

ನಟಿ ರಮ್ಯಾ ಈಗ ಸಿನಿಮಾದಲ್ಲೂ ಇಲ್ಲ, ರಾಜಕೀಯದಲ್ಲೂ ಇಲ್ಲ. ಆದರೂ ಅವರು ಸೋಶಿಯಲ್ ಮೀಡಿಯಾ ಮೂಲಕ ಅಭಿಮಾನಿಗಳ ಜೊತೆ ಸಂಪರ್ಕದಲ್ಲಿ ಇದ್ದಾರೆ. ತಮ್ಮ ಸಿನಿಮಾ ಮತ್ತು ರಾಜಕೀಯ ಬದುಕಿನ ಹಲವು ವಿಚಾರಗಳನ್ನು ಆಗಾಗ ಶೇರ್​ ಮಾಡಿಕೊಳ್ಳುತ್ತ ಇರುತ್ತಾರೆ. ಈಗ ಅವರು ತಾವು ಮಾಡಿದ ಒಂದು ದೊಡ್ಡ ತಪ್ಪಿನ ಬಗ್ಗೆ ಬಾಯಿ ಬಿಟ್ಟಿದ್ದಾರೆ. ರಾಹುಲ್​ ಗಾಂಧಿ ವಿಚಾರದಲ್ಲಿ ತಮ್ಮಿಂದ ಆದ ಒಂದು ಅಚಾತುರ್ಯವನ್ನು ಜಗಜ್ಜಾಹೀರು ಮಾಡಿದ್ದಾರೆ. ಆ ತಪ್ಪಿನಿಂದಾಗಿ ಜಗತ್ತಿನ ಎದುರು ರಾಹುಲ್​ ಗಾಂಧಿ ಟ್ರೋಲ್​ ಆಗಿದ್ದರು.

ಬಹಳ ಹಿಂದೆ ನಡೆದ ಘಟನೆಯನ್ನೀಗ ರಮ್ಯಾ ನೆನಪಿಸಿಕೊಂಡಿದ್ದಾರೆ. ತಮ್ಮ ಇನ್​ಸ್ಟಾಗ್ರಾಮ್​ ಸ್ಟೋರಿಯಲ್ಲಿ ಈ ಬಗ್ಗೆ ವಿವರವಾಗಿ ಬರೆದುಕೊಂಡಿದ್ದಾರೆ. ‘ಆಗ ನಾನು ಕಾಂಗ್ರೆಸ್​ ಸೋಷಿಯಲ್​ ಮೀಡಿಯಾ ವಿಭಾಗದ ಮುಖ್ಯಸ್ಥಳಾಗಿದ್ದೆ. ಆಗ ನಡೆದ ಘಟನೆಯನ್ನು ನೀವು ನೆನಪಿಸಿಕೊಳ್ಳಬಹುದು. ಆದರೆ ಅದರ ಹಿಂದೆ ಇರುವ ಸತ್ಯದ ಬಗ್ಗೆ ನಿಮಗೆ ಗೊತ್ತಿಲ್ಲ. ಆ ಬಗ್ಗೆ ಇಲ್ಲಿದೆ ಪೂರ್ಣ ವಿವರ’ ಎಂದು ರಮ್ಯಾ ಬರಹ ಆರಂಭಿಸಿದ್ದಾರೆ.

‘ಕಾಂಗ್ರೆಸ್​ನ ಕೆಲವು ಮಾಜಿ ಸಂಸದರು, ಅಂದಿನ ಕಾಂಗ್ರೆಸ್ ಅಧ್ಯಕ್ಷ ರಾಹುಲ್​ ಗಾಂಧಿ ಜೊತೆ ಜರ್ಮನಿ ಪ್ರವಾಸಕ್ಕೆ ತೆರಳಿದ್ದರು. ಅಂಥ ಪ್ರವಾಸಗಳು ತುಂಬ ಗಡಿಬಿಡಿಯಿಂದ ಕೂಡಿರುತ್ತಿದ್ದವು. ಒಂದು ದಿನ ಪ್ಲ್ಯಾನ್​ ಪ್ರಕಾರ, ಬರ್ಲಿನ್​ನ ಒಂದು ಮ್ಯೂಸಿಯಂಗೆ ಭೇಟಿ ನೀಡಿದೆವು. ಅಲ್ಲಿನ ರಾಜಕಾರಣಿಗಳು ನಮಗೆ ಅವರ ಸಂಸ್ಕೃತಿ ಮತ್ತು ಇತಿಹಾಸದ ಬಗ್ಗೆ ತೋರಿಸುತ್ತಿದ್ದರು. ಆಗ ನಾನು ರಾಹುಲ್​ ಗಾಂಧಿಯವರ ಕೆಲವು ಫೋಟೋಗಳನ್ನು ಕ್ಲಿಕ್​ ಮಾಡಿ, ಇಂಡಿಯಾದಲ್ಲಿರುವ ನನ್ನ ಟೀಮ್​ಗೆ ಕಳಿಸಿದೆ. ಬೇಡದ ಕಾರಣಕ್ಕಾಗಿ ಆ ಫೋಟೋಗಳು ವೈರಲ್​ ಆಗಿಬಿಟ್ಟವು’ ಎಂದು ರಮ್ಯಾ ಬರೆದುಕೊಂಡಿದ್ದಾರೆ.

ರಮ್ಯಾ ಕಳಿಸಿದ ಆ ಫೋಟೋಗಳು ಟ್ರೋಲ್​ಗೆ ಒಳಗಾದವು. ಆ ಫೋಟೋಗಳನ್ನೇ ಇಟ್ಟುಕೊಂಡು ರಾಹುಲ್​ ಗಾಂಧಿ ಮತ್ತು ಕಾಂಗ್ರೆಸ್​ ಪಕ್ಷವನ್ನು ಟೀಕಿಸುವಂತಹ ನೂರಾರು ಮೀಮ್​ಗಳು ತಯಾರಾದವು. ಇದರಿಂದ ರಮ್ಯಾ ಅವರಿಗೆ ತೀವ್ರ ಬೇಸರ ಆಗಿತ್ತು. ‘ನಾನು ರಾಹುಲ್​ ಗಾಂಧಿ ಬಳಿ ಹೋಗಿ ಕ್ಷಮೆ ಕೇಳಿದೆ. ರಾಜೀನಾಮೆ ಕೂಡ ನೀಡಿದೆ. ಅವರು ಸ್ವೀಕರಿಸಲಿಲ್ಲ. ಪರವಾಗಿಲ್ಲ, ಮುಂದಿನ ಬಾರಿ ಪೋಸ್ಟ್​ ಮಾಡುವಾಗ ಎಚ್ಚರದಿಂದಿರಿ ಎಂದಷ್ಟೇ ಹೇಳಿದರು. ನಾನು ಅಳುತ್ತಿದ್ದೆ’ ಎನ್ನುವ ಮೂಲಕ ರಾಹುಲ್​ ಗಾಂಧಿ ಅವರ ಗುಣವನ್ನು ರಮ್ಯಾ ಹೊಗಳಿದ್ದಾರೆ.

ಇದನ್ನೂ ಓದಿ:

Pranitha Marriage: ಪ್ರಣಿತಾ ಮದುವೆ ಬಳಿಕ ರಮ್ಯಾ ಕಡೆಗೆ ಪ್ರಶ್ನೆ ಎಸೆದ ಅಭಿಮಾನಿಗಳು​; ಏನಿದು ಲಿಂಕ್​?

Ramya Divya Spandana: ರಕ್ಷಿತ್​ ಶೆಟ್ಟಿ ಜೊತೆ ರಮ್ಯಾ ಮದುವೆ ಆಗ್ಬೇಕು; ಫ್ಯಾನ್ಸ್​ ಬಯಕೆಗೆ ಉತ್ತರ ಕೊಟ್ಟ ಸ್ಯಾಂಡಲ್​ವುಡ್​ ಕ್ವೀನ್​

Follow Us
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ