AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದರ್ಶನ್ ಅಭಿಮಾನಿಗಳ ವಿರುದ್ಧ ಪೊಲೀಸ್ ಆಯುಕ್ತರಿಗೆ ದೂರು ನೀಡಿದ ರಮ್ಯಾ

ನಟಿ ರಮ್ಯಾ ಅವರು ಬೆಂಗಳೂರು ಪೊಲೀಸ್ ಕಮಿಷನರ್ ಕಚೇರಿಗೆ ಆಗಮಿಸಿದ್ದಾರೆ. ತಮಗೆ ಅಶ್ಲೀಲವಾಗಿ ಮೆಸೇಜ್ ಮಾಡಿರುವ ದರ್ಶನ್ ಅಭಿಮಾನಿಗಳ ವಿರುದ್ಧ ದೂರು ನೀಡಲು ರಮ್ಯಾ ಬಂದಿದ್ದಾರೆ. ಡಿ ಬಾಸ್ ಫ್ಯಾನ್ಸ್ ಮಾಡಿರುವ ಕೆಲವು ಅಸಭ್ಯ ಸಂದೇಶಗಳನ್ನು ಈಗಾಗಲೇ ರಮ್ಯಾ ಅವರು ಜಗಜ್ಜಾಹೀರು ಮಾಡಿದ್ದಾರೆ.

ದರ್ಶನ್ ಅಭಿಮಾನಿಗಳ ವಿರುದ್ಧ ಪೊಲೀಸ್ ಆಯುಕ್ತರಿಗೆ ದೂರು ನೀಡಿದ ರಮ್ಯಾ
Darshan, Ramya
ಮದನ್​ ಕುಮಾರ್​
|

Updated on:Jul 28, 2025 | 10:54 PM

Share

ರೇಣುಕಾಸ್ವಾಮಿ ಕುಟುಂಬಕ್ಕೆ ನ್ಯಾಯ ಸಿಗಲಿ ಎಂದು ಹೇಳಿದ್ದ ರಮ್ಯಾ ವಿರುದ್ಧ ದರ್ಶನ್ ಅಭಿಮಾನಿಗಳು (Darshan Fans) ಟ್ರೋಲ್ ಮಾಡಲು ಆರಂಭಿಸಿದರು. ಸೋಶಿಯಲ್ ಮೀಡಿಯಾದಲ್ಲಿ ರಮ್ಯಾಗೆ ಅಶ್ಲೀಲವಾಗಿ ಕಮೆಂಟ್ ಮಾಡಿ, ಅಸಭ್ಯ ಸಂದೇಶಗಳನ್ನು ಕಳಿಸಲಾಗಿದೆ. ಅಂಥವರಿಗೆ ಕಾನೂನಿನ ಮೂಲಕ ಪಾಠ ಕಲಿಸಲು ರಮ್ಯಾ (Ramya Divya Spandana) ಅವರು ನಿರ್ಧರಿಸಿದ್ದಾರೆ. ದರ್ಶನ್ ಫ್ಯಾನ್ಸ್ ವಿರುದ್ಧ ದೂರು ನೀಡಲು ರಮ್ಯಾ ಅವರು ಬೆಂಗಳೂರು ಪೊಲೀಸ್ ಕಮಿಷನರ್ (Bengaluru Police Commissioner) ಕಚೇರಿಗೆ ಆಗಮಿಸಿದ್ದಾರೆ.

‘ರೇಣುಕಾಸ್ವಾಮಿ ಮಾಡಿದ್ದ ಸಂದೇಶಕ್ಕೂ ದರ್ಶನ್ ಅಭಿಮಾನಿಗಳು ಮಾಡುವ ಸಂದೇಶಕ್ಕೂ ಯಾವುದೇ ವ್ಯತ್ಯಾಸ ಇಲ್ಲ. ಇಂಥ ಸ್ತ್ರೀದ್ವೇಷಿ ಮನಸ್ಥಿತಿಯ ಕಾರಣದಿಂದಲೇ ಸಮಾಜದಲ್ಲಿ ಅತ್ಯಾಚಾರ, ಮಹಿಳೆಯರ ಮೇಲಿನ ದೌರ್ಜನ್ಯಗಳು ಹೆಚ್ಚಾಗುತ್ತಿವೆ’ ಎಂದು ರಮ್ಯಾ ಹೇಳಿದ್ದರು. ಹಾಗಾಗಿ ಕೆಟ್ಟ ಕಮೆಂಟ್ ಮಾಡುವವರಿಗೆ ಪಾಠ ಕಲಿಸಲು ಅವರು ಮುಂದಾಗಿದ್ದಾರೆ.

ತಮ್ಮ ವಕೀಲರ ಜೊತೆ ಚರ್ಚಿಸಿ ರಮ್ಯಾ ಅವರು ಬೆಂಗಳೂರು ಪೊಲೀಸ್ ಆಯುಕ್ತರಿಗೆ ದೂರು ನೀಡಿದ್ದಾರೆ. ಹೆಣ್ಣುಮಕ್ಕಳನ್ನು ಸೋಶಿಯಲ್ ಮೀಡಿಯಾದಲ್ಲಿ ಅಶ್ಲೀಲವಾಗಿ ನಿಂದಿಸುವವರ ವಿರುದ್ಧ ರಮ್ಯಾ ಅವರು ಕಾನೂನಿನ ಸಮರ ಸಾರಿದ್ದಾರೆ. ಅಶ್ಲೀಲ ಕಮೆಂಟ್​​ಗಳ ಬಗ್ಗೆ ಕ್ರಮ ತೆಗೆದುಕೊಳ್ಳುವಂತೆ ರಾಜ್ಯ ಮಹಿಳಾ ಆಯೋಗ ಕೂಡ ಪೊಲೀಸ್ ಆಯುಕ್ತರಿಗೆ ಸೂಚಿಸಿದೆ.

ಇದನ್ನೂ ಓದಿ
Image
ದರ್ಶನ್​ಗೆ ದೇವರ ಮೇಲೆ ಎಷ್ಟು ಭಕ್ತಿ ನೋಡಿ; ಇಲ್ಲಿದೆ ವಿಡಿಯೋ ಸಾಕ್ಷಿ
Image
ಪತ್ನಿಯೊಂದಿಗೆ ಚಾಮುಂಡೇಶ್ವರಿ ತಾಯಿ ದರ್ಶನ ಪಡೆದ ನಟ ದರ್ಶನ್
Image
ಫಾರ್ಮ್​ಹೌಸ್​ನಲ್ಲಿ ಎತ್ತಿನಗಾಡಿ ಓಡಿಸಿದ ನಟ ದರ್ಶನ್; ದಾಸನ ಜಾಲಿ ಮೂಡ್
Image
ಕರ್ನಾಟಕದ ಮುಖ್ಯ ಮಂತ್ರಿಯಾದ ನಟ ದರ್ಶನ್, ಪಕ್ಷ ಯಾವುದು ಗೊತ್ತೆ?

‘ಸೆಲೆಬ್ರಿಟಿಯಾದ ನಮಗೆ ಟ್ರೋಲ್ ಇದ್ದೇ ಇರುತ್ತದೆ. ಆದರೆ ಈ ಮಟ್ಟಕ್ಕೆ ನನಗೆ ಯಾವಾಗಲೂ ಅನುಭವ ಆಗಿರಲಿಲ್ಲ. ರೇಣುಕಾಸ್ವಾಮಿ ಸಂದೇಶ ಕಳಿಸಿದ್ದಕ್ಕೂ ದರ್ಶನ್ ಫ್ಯಾನ್ಸ್ ಸಂದೇಶ ಕಳಿಸಿದ್ದಕ್ಕೂ ಯಾವುದೇ ವ್ಯತ್ಯಾಸ ಇಲ್ಲ ಎನಿಸಿತು. ನನಗೆ ಈ ರೀತಿ ಕಳಿಸಿದ್ದಾರೆ ಎಂದರೆ ಸಾಮಾನ್ಯ ಹೆಣ್ಣು ಮಕ್ಕಳಿಗೆ ಇನ್ನು ಯಾವ ರೀತಿ ಸಂದೇಶ ಕಳಿಸಿರಬಹುದು. ನಮ್ಮ ಸಮಾಜ ಎಷ್ಟು ಕೀಳು ಮಟ್ಟಕ್ಕೆ ಬಂದಿದೆ ಅಂತ ನನಗೆ ಬೇಸರ ಆಯಿತು. ಇದನ್ನು ಸುಮ್ಮನೆ ಬಿಡಬಾರದು ಅಂತ ನನಗೆ ಅನಿಸಿತು. ಹಾಗಾಗಿ ನಾನು ಕಮಿಷನರ್ ಸಾಹೇಬರಿಗೆ ದೂರು ಕೊಟ್ಟಿದ್ದೇನೆ’ ಎಂದು ನಟಿ ರಮ್ಯಾ ಅವರು ಹೇಳಿದ್ದಾರೆ.

ಇದನ್ನೂ ಓದಿ: ರಕ್ಷಿತಾ, ವಿಜಯಲಕ್ಷ್ಮಿ ದರ್ಶನ್ ಪೋಸ್ಟ್ ಬಗ್ಗೆ ನಟಿ ರಮ್ಯಾ ನೇರಮಾತು

ಎಫ್.ಐ.ಆರ್ ದಾಖಲು:

ರಮ್ಯಾ ನೀಡಿದ ದೂರಿನ ಆಧಾರದ ಮೇಲೆ ಎಫ್.ಐ.ಆರ್. ದಾಖಲು ಮಾಡಲಾಗಿದೆ. ಸೈಬರ್ ಕ್ರೈಂ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಪ್ರಮೋದ ಗೌಡ ಎಂಬ ವ್ಯಕ್ತಿ ಸೇರಿ ಒಟ್ಟು 43 ಸೋಶಿಯಲ್ ಮೀಡಿಯಾ ಖಾತೆಗಳ ವಿರುದ್ಧ ಎಫ್.ಐ.ಆರ್ ದಾಖಲಾಗಿದೆ. ಕೇಂದ್ರ ವಿಭಾಗದ ಸೆನ್(ಸೈಬರ್ ಕ್ರೈಂ)ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 5:58 pm, Mon, 28 July 25

Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!