Hostel Hudugaru Bekagiddare: ‘ಹಾಸ್ಟೆಲ್​ ಹುಡುಗರು ಬೇಕಾಗಿದ್ದಾರೆ’ ಬಿಡುಗಡೆಗೆ ಕೋರ್ಟ್​ ಅನುಮತಿ; ರಮ್ಯಾ ಹಾಕಿದ ಕೇಸ್​ನಲ್ಲಿ ನಿಟ್ಟುಸಿರು ಬಿಟ್ಟ ಚಿತ್ರತಂಡ

|

Updated on: Jul 20, 2023 | 4:10 PM

Ramya Divya Spandana: ಜುಲೈ 21ರಂದು ಸಿನಿಮಾ ಬಿಡುಗಡೆ ಆಗತ್ತೋ ಇಲ್ಲವೋ ಎಂಬ ಅನುಮಾನ ಮೂಡಿತ್ತು. ಆದರೆ ಕೋರ್ಟ್​ನಲ್ಲಿ ರಮ್ಯಾ ಅವರ ಅರ್ಜಿ ವಜಾ ಆಗಿದ್ದು, ಸಿನಿಮಾ ಬಿಡುಗಡೆಗೆ ಅನುಮತಿ ಸಿಕ್ಕಿದೆ.

Hostel Hudugaru Bekagiddare: ‘ಹಾಸ್ಟೆಲ್​ ಹುಡುಗರು ಬೇಕಾಗಿದ್ದಾರೆ’ ಬಿಡುಗಡೆಗೆ ಕೋರ್ಟ್​ ಅನುಮತಿ; ರಮ್ಯಾ ಹಾಕಿದ ಕೇಸ್​ನಲ್ಲಿ ನಿಟ್ಟುಸಿರು ಬಿಟ್ಟ ಚಿತ್ರತಂಡ
ರಮ್ಯಾ, ‘ಹಾಸ್ಟೆಲ್​ ಹುಡುಗರು ಬೇಕಾಗಿದ್ದಾರೆ’ ಪೋಸ್ಟರ್​
Follow us on

ಭಾರಿ ನಿರೀಕ್ಷೆ ಮೂಡಿಸಿರುವ ‘ಹಾಸ್ಟೆಲ್​ ಹುಡುಗರು ಬೇಕಾಗಿದ್ದಾರೆ’ (Hostel Hudugaru Bekagiddare) ಸಿನಿಮಾ ತಂಡದ ಬಿಡುಗಡೆಗೆ ಎದುರಾಗಿದ್ದ ವಿಘ್ನ ನಿವಾರಣೆ ಆಗಿದೆ. ಈ ಸಿನಿಮಾದಲ್ಲಿ ತಮ್ಮ ವಿಡಿಯೋಗಳನ್ನು ಅನುಮತಿ ಇಲ್ಲದೇ ಬಳಸಿಕೊಳ್ಳಲಾಗಿದೆ ಎಂದು ನಟಿ ರಮ್ಯಾ ದಿವ್ಯ ಸ್ಪಂದನಾ (Ramya Divya Spandana) ಅವರು ಆರೋಪಿಸಿದ್ದರು. ಹಾಗಾಗಿ ಚಿತ್ರದಲ್ಲಿನ ತಮ್ಮ ದೃಶಗಳನ್ನು ತೆಗೆದುಹಾಕುವಂತೆ ಒತ್ತಾಯಿಸಿದ್ದರು. ಅಲ್ಲದೇ ಚಿತ್ರತಂಡಕ್ಕೆ ಲೀಗಲ್​ ನೋಟೀಸ್​ ಕಳಿಸಿದ್ದರು. ಇದರಿಂದ ಜುಲೈ 21ರಂದು ಸಿನಿಮಾ ಬಿಡುಗಡೆ ಆಗತ್ತೋ ಇಲ್ಲವೋ ಎಂಬ ಅನುಮಾನ ಮೂಡಿತ್ತು. ಆದರೆ ಕೋರ್ಟ್​ನಲ್ಲಿ ರಮ್ಯಾ (Ramya) ಅವರ ಅರ್ಜಿ ವಜಾ ಆಗಿದೆ. ‘ಹಾಸ್ಟೆಲ್​ ಹುಡುಗರು ಬೇಕಾಗಿದ್ದಾರೆ’ ಸಿನಿಮಾದ ಬಿಡುಗಡೆಗೆ ನ್ಯಾಯಾಲಯ ಅನುಮತಿ ನೀಡಿದೆ.

ಕೆಲವೇ ದಿನಗಳ ಹಿಂದೆ ‘ಹಾಸ್ಟೆಲ್​ ಹುಡುಗರು ಬೇಕಾಗಿದ್ದಾರೆ’ ಚಿತ್ರದ ಟ್ರೇಲರ್​ ಬಿಡುಗಡೆ ಆಗಿತ್ತು. ಅದರಲ್ಲಿ ರಮ್ಯಾ, ದಿಗಂತ್​, ರಿಷಬ್​ ಶೆಟ್ಟಿ, ಪವನ್​ ಕುಮಾರ್ ಕಾಣಿಸಿಕೊಂಡಿದ್ದಾರೆ. ಟ್ರೇಲರ್​ನಲ್ಲಿ ರಮ್ಯಾ ಅವರನ್ನು ನೋಡಿ ಫ್ಯಾನ್ಸ್​ ಖುಷಿಪಟ್ಟರು. ಚಿತ್ರದ ಮೇಲೆ ನಿರೀಕ್ಷೆ ಹೆಚ್ಚಲು ಇದು ಕೂಡ ಕಾರಣ ಆಯಿತು. ಆದರೆ ಇದರಲ್ಲಿ ಬಳಕೆ ಆಗಿರುವ ತಮ್ಮ ದೃಶ್ಯಗಳಿಗೆ ಚಿತ್ರತಂಡದವರು ಅನುಮತಿ ಪಡೆದಿಲ್ಲ ಎಂದು ರಮ್ಯಾ ತಕಾರು ತೆಗೆದಿದ್ದರು. ಅದಕ್ಕಾಗಿ ಅವರು ಕೋರ್ಟ್​ ಮೊರೆ ಹೋಗಿದ್ದರು.

Hostel Hudugaru Bekagiddare Trailer: ಮಿತಿ ಮೀರಿದೆ ಹಾಸ್ಟೆಲ್​ ಹುಡುಗರ ಹಾವಳಿ; ಏನೆಲ್ಲ ಮಾಡವ್ರೆ ನೀವೇ ನೋಡಿ

ನಿತಿನ್​ ಕೃಷ್ಣಮೂರ್ತಿ ಅವರ ನಿರ್ದೇಶನದಲ್ಲಿ ‘ಹಾಸ್ಟೆಲ್​ ಹುಡುಗರು ಬೇಕಾಗಿದ್ದಾರೆ’ ಸಿನಿಮಾ ಮೂಡಿಬಂದಿದೆ. ಅಜನೀಶ್​ ಬಿ. ಲೋಕನಾಥ್​ ಅವರು ಸಂಗೀತ ನೀಡಿರುವ ಹಾಡುಗಳು ಗಮನ ಸೆಳೆದಿವೆ. ಅರವಿಂದ್​ ಎಸ್​. ಕಶ್ಯಪ್​ ಅವರು ಈ ಸಿನಿಮಾಗೆ ಛಾಯಾಗ್ರಹಣ ಮಾಡಿದ್ದಾರೆ. ರಕ್ಷಿತ್​ ಶೆಟ್ಟಿ ಒಡೆತನದ ‘ಪರಂವಾ ಪಿಕ್ಚರ್ಸ್​’ ಮೂಲಕ ‘ಹಾಸ್ಟೆಲ್​ ಹುಡುಗರು ಬೇಕಾಗಿದ್ದಾರೆ’ ಸಿನಿಮಾ ಬಿಡುಗಡೆ ಆಗುತ್ತಿದೆ.

ಕೋರ್ಟ್​​ನಲ್ಲಿ ತಮ್ಮ ಪರವಾಗಿ ತೀರ್ಪು ಬಂದಿರುವುದಕ್ಕೆ ‘ಹಾಸ್ಟೆಲ್​ ಹುಡುಗರು ಬೇಕಾಗಿದ್ದಾರೆ’ ಸಿನಿಮಾತಂಡದವರು ನಿಟ್ಟುಸಿರು ಬಿಟ್ಟಿದ್ದಾರೆ. ನರ್ತಕಿ ಚಿತ್ರಮಂದಿರದ ಎದುರಿನಲ್ಲಿ ಪಟಾಕಿ ಸಿಡಿಸಿ ಸಂಭ್ರಮಿಸಿದ್ದಾರೆ. ಈ ಸಿನಿಮಾದಲ್ಲಿ ಅನೇಕ ಹೊಸ ಕಲಾವಿದರು ನಟಿಸಿದ್ದಾರೆ. ವಿಶೇಷವಾದ ಪ್ರಮೋಷನ್​ ವಿಡಿಯೋಗಳ ಮೂಲಕ ಈ ಸಿನಿಮಾ ಹೈಪ್​ ಸೃಷ್ಟಿ ಮಾಡಿದೆ. ಈ ಮೊದಲು ಪುನೀತ್​ ರಾಜ್​ಕುಮಾರ್​ ಕೂಡ ಈ ಚಿತ್ರದ ಪ್ರಮೋಷನಲ್​ ವಿಡಿಯೋದಲ್ಲಿ ಕಾಣಿಸಿಕೊಂಡು ಚಿತ್ರತಂಡಕ್ಕೆ ಬೆಂಬಲ ಸೂಚಿಸಿದ್ದರು.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 3:55 pm, Thu, 20 July 23