AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಣಾ ಆರೋಗ್ಯ ಈಗ ಹೇಗಿದೆ? ರಾಣಾಗೆ ಖುಷಿ ಕೊಟ್ಟ ಆ ಸಂಗತಿ ಯಾವುದು!?

ಬಾಹುಬಲಿ ಚಿತ್ರದಲ್ಲಿ ಬಲ್ಲಾಳದೇವನಾಗಿ ಮಿಂಚಿದ್ದ ನಟ ರಾಣಾ ದಗ್ಗುಬಾಟಿ ಕಳೆದ ವರ್ಷ ಕಿಡ್ನಿ ವೈಫಲ್ಯದಿಂದ ಬಳಲುತ್ತಿದ್ದರು. ಆಗ ರಾಣಾಗೆ ಕಿಡ್ನಿ ಕಸಿ ಅಗತ್ಯವಿತ್ತು. ತನ್ನ ಮಗನಿಗಾಗಿ ಕಿಡ್ನಿಯನ್ನು ದಾನ ಮಾಡಲು ತಾಯಿ ಲಕ್ಷ್ಮೀ ಮುಂದಾಗಿದ್ದರು. ಅಮೆರಿಕದ ಚಿಕಾಗೋದ ಆಸ್ಪತ್ರೆಯಲ್ಲಿ ರಾಣಾ ಅವರು ಶಸ್ತ್ರ ಚಿಕಿತ್ಸೆ ಯಶಸ್ವಿಯಾಗಿ, ಅಪಾಯದಿಂದ ಪಾರಾಗಿದ್ದರು. ಕಿಡ್ನಿ ಶಸ್ತ್ರ ಚಿಕಿತ್ಸೆ ಬಳಿಕ ರಾಣಾ ದಗ್ಗುಬಾಟಿ ಅವರ ಆರೋಗ್ಯ ಸುಸ್ಥಿರವಾಗಿದೆ. ಇದರಿಂದ ತಮ್ಮ ಸಿನಿಮಾ ಶೂಟಿಂಗ್ ಕಾರ್ಯಗಳಲ್ಲಿ ರಾಣಾ ಸಕ್ರಿಯವಾಗಿ ಭಾಗಿಯಾಗುತ್ತಿದ್ದಾರೆ. ದೇಹಾರೋಗ್ಯ ಮರಳಿ ಗಳಿಸಿರುವ […]

ರಾಣಾ ಆರೋಗ್ಯ ಈಗ ಹೇಗಿದೆ? ರಾಣಾಗೆ ಖುಷಿ ಕೊಟ್ಟ ಆ ಸಂಗತಿ ಯಾವುದು!?
ರಾನಾ ದಗ್ಗುಬಾಟಿ
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:May 13, 2020 | 2:10 PM

Share

ಬಾಹುಬಲಿ ಚಿತ್ರದಲ್ಲಿ ಬಲ್ಲಾಳದೇವನಾಗಿ ಮಿಂಚಿದ್ದ ನಟ ರಾಣಾ ದಗ್ಗುಬಾಟಿ ಕಳೆದ ವರ್ಷ ಕಿಡ್ನಿ ವೈಫಲ್ಯದಿಂದ ಬಳಲುತ್ತಿದ್ದರು. ಆಗ ರಾಣಾಗೆ ಕಿಡ್ನಿ ಕಸಿ ಅಗತ್ಯವಿತ್ತು. ತನ್ನ ಮಗನಿಗಾಗಿ ಕಿಡ್ನಿಯನ್ನು ದಾನ ಮಾಡಲು ತಾಯಿ ಲಕ್ಷ್ಮೀ ಮುಂದಾಗಿದ್ದರು. ಅಮೆರಿಕದ ಚಿಕಾಗೋದ ಆಸ್ಪತ್ರೆಯಲ್ಲಿ ರಾಣಾ ಅವರು ಶಸ್ತ್ರ ಚಿಕಿತ್ಸೆ ಯಶಸ್ವಿಯಾಗಿ, ಅಪಾಯದಿಂದ ಪಾರಾಗಿದ್ದರು.

ಕಿಡ್ನಿ ಶಸ್ತ್ರ ಚಿಕಿತ್ಸೆ ಬಳಿಕ ರಾಣಾ ದಗ್ಗುಬಾಟಿ ಅವರ ಆರೋಗ್ಯ ಸುಸ್ಥಿರವಾಗಿದೆ. ಇದರಿಂದ ತಮ್ಮ ಸಿನಿಮಾ ಶೂಟಿಂಗ್ ಕಾರ್ಯಗಳಲ್ಲಿ ರಾಣಾ ಸಕ್ರಿಯವಾಗಿ ಭಾಗಿಯಾಗುತ್ತಿದ್ದಾರೆ. ದೇಹಾರೋಗ್ಯ ಮರಳಿ ಗಳಿಸಿರುವ ರಾಣಾ ಮುಂದುವರಿದ ಭಾಗವಾಗಿ ಈಗ ತಮ್ಮ ವೈಯಕ್ತಿಕ ಜೀವನದಲ್ಲಿ ಮಹತ್ತರ ಘಟ್ಟ ಪ್ರವೇಶಿಸಿದ್ದಾರೆ.

Lockdown to Wedlock ಈಗ ಲಾಕ್​ಡೌನ್ ಸಂದರ್ಭದಲ್ಲಿ ನಟ ರಾಣಾ ದಗ್ಗುಬಾಟಿ ಖುಷಿಯ ಸಂಗತಿಯೊಂದನ್ನು ಹಂಚಿಕೊಂಡಿದ್ದಾರೆ. ತಮ್ಮ ಮನದರಸಿ ಯಾರೆಂದು ಸಾಮಾಜಿಕ ಜಾಲತಾಣಗಳ ಮೂಲಕ ಬಹಿರಂಗಪಡಿಸಿದ್ದಾರೆ. ಪ್ರೀತಿಸಿದ ಹುಡುಗಿ ತನಗೆ ಓಕೆ ಹೇಳಿದ್ದಾಳೆಂದು ಸಾಮಾಜಿಕ ಜಾಲತಾಣಗಳಲ್ಲಿ ಫೋಟೋ ಶೇರ್ ಮಾಡಿ ಬರೆದುಕೊಂಡಿದ್ದಾರೆ. ಸ್ನೇಹಿತೆ ಮಿಹೀಕಾ ಬಜಾಜ್ ಜೊತೆ ಶೀಘ್ರದಲ್ಲೇ ದಾಂಪತ್ಯ ಜೀವನಕ್ಕೆ ಕಾಲಿಡಲು ರಾಣಾ ಸಜ್ಜಾಗಿದ್ದಾರೆ.

ಯಾರಿದು ಜೂನಿಯರ್ ಬಂಟಿ? ಹೈದರಾಬಾದ್ ಮೂಲದ ಮಿಹೀಕಾ ಮುಂಬೈನಲ್ಲಿ ಇಂಟೀರಿಯರ್ ಡಿಸೈನರ್ ಆಗಿ ಕೆಲಸ ಮಾಡುತ್ತಿದ್ದಾರೆ. ಮಿಹೀಕಾಗೆ ಭಾರತೀಯ ಸಂಪ್ರದಾಯ ಹಾಗೂ ಸಂಸ್ಕೃತಿ ಮೇಲೆ ಹೆಚ್ಚು ಆಸಕ್ತಿಯಿದೆ. ಮುಂಬೈನಲ್ಲಿ ಇಂಟೀರಿಯರ್ ಡಿಸೈನ್​ನಲ್ಲಿ ಡಿಪ್ಲೊಮಾ ಮಾಡಿದ್ದಾರೆ. ಬಳಿಕ ಲಂಡನ್​ನಲ್ಲಿ ಮಿಹೀಕಾ ಎಂಎ ಮಾಡಿದ್ದಾರೆ.

ಮಿಹೀತಾ ಖ್ಯಾತ ಮಹಿಳಾ ಉದ್ಯಮಿ ಬಂಟಿ ಬಜಾಜ್ ಪುತ್ರಿ. ಚಿನ್ನಾಭರಣ ಉದ್ಯಮದಲ್ಲಿ ಬಂಟಿದು ದೊಡ್ಡ ಹೆಸರು. ಈ ಕುಟುಂಬದವರು ಟಾಲಿವುಡ್​ಗೆ ಹೊಸಬರೇನೂ ಅಲ್ಲ. ಸಿನಿತಾರೆಯರ ಜೊತೆ ನಿಕಟ ಸಂಪರ್ಕ ಇದೆ. ಕೊರೊನಾ ಸಂಕಷ್ಟ ದೂರವಾದ ಮೇಲೆ ಎರಡೂ ಕುಟುಂಬದವರು ಮುದುವೆ ದಿನಾಂಕ ನಿಶ್ಚಯಿಸಲಿದ್ದಾರೆ ಎಂದು ತಿಳಿದುಬಂದಿದೆ.

https://www.instagram.com/p/CAFfh1tDzoW/?utm_source=ig_web_copy_link

Published On - 12:13 pm, Wed, 13 May 20

Follow Us
sadhu srinath
sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

ದಿಢೀರ್​​ ಜಮೀರ್​ ಅಹ್ಮದ್​​ ಭೇಟಿಯಾದ ಡಿ.ಕೆ. ಸುರೇಶ್
ದಿಢೀರ್​​ ಜಮೀರ್​ ಅಹ್ಮದ್​​ ಭೇಟಿಯಾದ ಡಿ.ಕೆ. ಸುರೇಶ್
ಸಿದ್ದರಾಮಯ್ಯ ಹಾಗೂ ವಿದೇಶಾಂಗ ಸಚಿವ ಎಸ್ ಜೈಶಂಕರ್ ಆಕಸ್ಮಿಕ ಭೇಟಿ!
ಸಿದ್ದರಾಮಯ್ಯ ಹಾಗೂ ವಿದೇಶಾಂಗ ಸಚಿವ ಎಸ್ ಜೈಶಂಕರ್ ಆಕಸ್ಮಿಕ ಭೇಟಿ!
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್