AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಾರ್ಲಿ ಜತೆ ಫ್ರೆಂಡ್​ಶಿಪ್ ಬೆಳೆಸಿಕೊಂಡ ರಾಣಾ ದಗ್ಗುಬಾಟಿ; ಇಲ್ಲಿದೆ ಕ್ಯೂಟ್ ವಿಡಿಯೋ

ಸುದ್ದಿಗೋಷ್ಠಿಯಲ್ಲಿ ಪಾಲ್ಗೊಳ್ಳಲು ರಕ್ಷಿತ್ ಶೆಟ್ಟಿ, ರಾಣಾ ದಗ್ಗುಬಾಟಿ, ಸಂಗೀತಾ ಶೃಂಗೇರಿ ಸೇರಿ ಅನೇಕರು ಹೋಟೆಲ್​ಗೆ ಆಗಮಿಸಿದ್ದಾರೆ. ಇವರ ಜತೆ ಚಾರ್ಲಿ ಪಾತ್ರದಲ್ಲಿ ಕಾಣಿಸಿಕೊಂಡ ಶ್ವಾನ ಕೂಡ ಬಂದಿತ್ತು.

ಚಾರ್ಲಿ ಜತೆ ಫ್ರೆಂಡ್​ಶಿಪ್ ಬೆಳೆಸಿಕೊಂಡ ರಾಣಾ ದಗ್ಗುಬಾಟಿ; ಇಲ್ಲಿದೆ ಕ್ಯೂಟ್ ವಿಡಿಯೋ
ಚಾರ್ಲಿ ಜತೆ ಫ್ರೆಂಡ್​ಶಿಪ್ ಬೆಳೆಸಿಕೊಂಡ ರಾಣಾ ದಗ್ಗುಬಾಟಿ
TV9 Web
| Edited By: |

Updated on: May 29, 2022 | 9:28 AM

Share

ರಕ್ಷಿತ್ ಶೆಟ್ಟಿ (Rakshit Shetty) ನಟನೆಯ ‘777 ಚಾರ್ಲಿ’ ಸಿನಿಮಾ (777 Chaelie Movie) ತೆರೆಗೆ ಬರೋಕೆ ರೆಡಿ ಆಗಿದೆ. ಜೂನ್ 10ರಂದು ರಿಲೀಸ್ ಆಗುತ್ತಿರುವ ಈ ಚಿತ್ರವನ್ನು ಕಣ್ತುಂಬಿಕೊಳ್ಳಲು ಫ್ಯಾನ್ಸ್ ಕಾದಿದ್ದಾರೆ. ಇದು ಪ್ಯಾನ್ ಇಂಡಿಯಾ ಸಿನಿಮಾ. ಶ್ವಾನ ಮತ್ತು ಮನುಷ್ಯನ ನಡುವಿನ ಬಾಂಧವ್ಯದ ಬಗ್ಗೆ ಸಿನಿಮಾದಲ್ಲಿ ಹೇಳಲಾಗುತ್ತಿದೆ. ತೆಲುಗಿನಲ್ಲಿ ಈ ಚಿತ್ರವನ್ನು ರಾಣಾ ದಗ್ಗುಬಾಟಿ (Rana Daggubati) ಪ್ರೆಸೆಂಟ್ ಮಾಡುತ್ತಿದ್ದಾರೆ. ಈ ಚಿತ್ರದ ಪ್ರಚಾರಕ್ಕಾಗಿ ತಂಡ ಹೈದರಾಬಾದ್​ಗೆ ತೆರಳಿತ್ತು. ಈ ವೇಳೆ ಚಾರ್ಲಿ ಜತೆ ರಾಣಾ ದಗ್ಗುಬಾಟಿ ಫ್ರೆಂಡ್​ಶಿಪ್ ಮಾಡಿಕೊಂಡಿದ್ದಾರೆ. ಈ ಕ್ಯೂಟ್ ವಿಡಿಯೋ ಎಲ್ಲ ಕಡೆಗಳಲ್ಲಿ ವೈರಲ್ ಆಗಿದೆ.

‘777 ಚಾರ್ಲಿ’ ಪ್ಯಾನ್ ಇಂಡಿಯಾ ಸಿನಿಮಾ ಆಗಿರುವುದರಿಂದ ಪರಭಾಷೆಯಲ್ಲಿ ಚಿತ್ರದ ಪ್ರಮೋಷನ್​ ಅತ್ಯಗತ್ಯ. ದೊಡ್ಡ ಮಟ್ಟದಲ್ಲಿ ಚಿತ್ರಕ್ಕೆ ಪ್ರಮೋಷನ್​ ಮಾಡಿದರೆ ಹೆಚ್ಚು ಜನರು ಬಂದು ಸಿನಿಮಾ ನೋಡುತ್ತಾರೆ. ಚಿತ್ರ ಉತ್ತಮವಾಗಿದ್ದರೆ ಚಿತ್ರದ ಕಲೆಕ್ಷನ್ ಹೆಚ್ಚುತ್ತದೆ. ‘777 ಚಾರ್ಲಿ’ ಬಗ್ಗೆ ರಕ್ಷಿತ್ ಶೆಟ್ಟಿ ಸಾಕಷ್ಟು ನಿರೀಕ್ಷೆ ಇಟ್ಟುಕೊಂಡಿದ್ದಾರೆ. ಈ ಕಾರಣಕ್ಕೆ ಚಿತ್ರವನ್ನು ಪ್ಯಾನ್ ಇಂಡಿಯಾ ಮಟ್ಟದಲ್ಲಿ ರಿಲೀಸ್ ಮಾಡುವ ನಿರ್ಧಾರಕ್ಕೆ ಬಂದಿದ್ದಾರೆ. ಇತ್ತೀಚೆಗೆ ಇಡೀ ತಂಡ ಹೈದರಾಬಾದ್​ಗೆ ತೆರಳಿತ್ತು. ಈ ವೇಳೆ ಸೆರೆಹಿಡಿಯಲಾದ ವಿಡಿಯೋವನ್ನು ಪಿಂಕ್​ವಿಲ್ಲಾ ಇನ್​ಸ್ಟಾಗ್ರಾಮ್ ಖಾತೆಯಲ್ಲಿ ಹಂಚಿಕೊಳ್ಳಲಾಗಿದೆ.

ಇದನ್ನೂ ಓದಿ
Image
‘777 ಚಾರ್ಲಿ’ ಟ್ರೇಲರ್​ಗಾಗಿ ರಕ್ಷಿತ್ ಶೆಟ್ಟಿಗೆ ಸಾಯಿ ಪಲ್ಲವಿ ಸಾಥ್​; ಕನ್ನಡಿಗರಿಗೆ ಇನ್ನಷ್ಟು ಹತ್ತಿರವಾದ ‘ಪ್ರೇಮಂ’ ಬ್ಯೂಟಿ
Image
ಹಿಂದಿಯಲ್ಲಿ ‘777 ಚಾರ್ಲಿ’ ಚಿತ್ರಕ್ಕೆ ಸಿಕ್ತು ದೊಡ್ಡ ಬೆಂಬಲ; ರಕ್ಷಿತ್ ಫ್ಯಾನ್ಸ್​ಗೆ ಗುಡ್​ ನ್ಯೂಸ್
Image
‘777 ಚಾರ್ಲಿ’ ಚಿತ್ರ ನೋಡಿ ಮೊದಲ ವಿಮರ್ಶೆ ತಿಳಿಸಿದ ರಾಣಾ ದಗ್ಗುಬಾಟಿ; ಹೇಗಿದೆ ರಕ್ಷಿತ್​ ಶೆಟ್ಟಿ ಸಿನಿಮಾ?
Image
ಜೂ.10ರಂದು ರಿಲೀಸ್​ ಆಗಲಿದೆ ‘777 ಚಾರ್ಲಿ’; ಸಿಹಿ ಸುದ್ದಿ​ ​ ನೀಡಿದ ರಕ್ಷಿತ್​ ಶೆಟ್ಟಿ ಆ್ಯಂಡ್​ ಟೀಮ್​

ಸುದ್ದಿಗೋಷ್ಠಿಯಲ್ಲಿ ಪಾಲ್ಗೊಳ್ಳಲು ರಕ್ಷಿತ್ ಶೆಟ್ಟಿ, ರಾಣಾ ದಗ್ಗುಬಾಟಿ, ಸಂಗೀತಾ ಶೃಂಗೇರಿ ಸೇರಿ ಅನೇಕರು ಹೋಟೆಲ್​ಗೆ ಆಗಮಿಸಿದ್ದಾರೆ. ಇವರ ಜತೆ ಚಾರ್ಲಿ ಪಾತ್ರದಲ್ಲಿ ಕಾಣಿಸಿಕೊಂಡ ಶ್ವಾನ ಕೂಡ ಬಂದಿತ್ತು. ಚಾರ್ಲಿ ಜತೆ ರಾಣಾ ಫ್ರೆಂಡ್​ಶಿಪ್ ಮಾಡಿಕೊಳ್ಳುತ್ತಿರುವ ವಿಡಿಯೋ ವೈರಲ್ ಆಗಿದೆ.

ಇದನ್ನೂ ಓದಿ: ನಂಗೆ ಲವ್ ಫೈಲ್ಯುರ್ ಆಗಿಲ್ಲ: ರವಿಚಂದ್ರನ್ ಮುಂದೆ ಮನಬಿಚ್ಚಿದ ರಕ್ಷಿತ್ ಶೆಟ್ಟಿ

ಕಿರಣ್ ರಾಜ್ ನಿರ್ದೇಶನದ ’777 ಚಾರ್ಲಿ’ ಚಿತ್ರದ ಟ್ರೇಲರ್ ಇತ್ತೀಚೆಗೆ ರಿಲೀಸ್ ಆಗಿತ್ತು. ಹಾಸ್ಯಮಯ ಹಾಗೂ ಭಾವನಾತ್ಮಕವಾಗಿ ಈ ಟ್ರೇಲರ್ ಪ್ರೇಕ್ಷಕರನ್ನು ಗಮನ ಸೆಳೆದಿತ್ತು. ಟ್ರೇಲರ್​ನಿಂದ ಸಿನಿಮಾ ಬಗ್ಗೆ ಇರುವ ಹೈಪ್ ಹೆಚ್ಚಿದೆ. ಪರಭಾಷೆಯವರು ಟ್ರೇಲರ್​ಅನ್ನು ಮೆಚ್ಚಿಕೊಂಡಿದ್ದಾರೆ.

ನಾಯಿ ಕೂಡ ಈ ಸಿನಿಮಾದಲ್ಲಿ ಪ್ರಮುಖ ಪಾತ್ರ ಮಾಡಿದೆ. ಆ ಶ್ವಾನದ ಮೂಡ್​ಗೆ ತಕ್ಕಂತೆ ಚಿತ್ರೀಕರಣವನ್ನು ಮಾಡಬೇಕಿತ್ತು. ಆದ್ದರಿಂದ ಈ ಚಿತ್ರದ ಶೂಟಿಂಗ್​ಗೆ ಹೆಚ್ಚು ಸಮಯ ಹಿಡಿದಿದೆ. ಅದರ ನಡುವೆ ಕೊರೊನಾ ಲಾಕ್​ಡೌನ್​ ಕೂಡ ಬಂದಿದ್ದರಿಂದ ಇನ್ನಷ್ಟ ತಡವಾಗಿತ್ತು. ಈಗ ಅಂತೂ ಈ ಸಿನಿಮಾ ರಿಲೀಸ್​ಗೆ ಸಿದ್ಧವಾಗಿದೆ. ಜೂನ್​ 10ರಂದು ‘777 ಚಾರ್ಲಿ’ ಬಿಡುಗಡೆ ಆಗಲಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Follow Us
ಆರ್​ಎಸ್​ಎಸ್​ನವರು ಪುಕ್ಕಲರು, ಧೈರ್ಯವೇ ಇಲ್ಲ ಎಂದ ಹರಿಪ್ರಸಾದ್!
ಆರ್​ಎಸ್​ಎಸ್​ನವರು ಪುಕ್ಕಲರು, ಧೈರ್ಯವೇ ಇಲ್ಲ ಎಂದ ಹರಿಪ್ರಸಾದ್!
ಇನ್ಮುಂದೆ ನನ್ನನ್ನು ಕೊನೆಯ ಭಾಷಣಕಾರನನ್ನಾಗಿ ಮಾಡಬೇಡಿ ಎಂದ ಸಿದ್ದರಾಮಯ್ಯ
ಇನ್ಮುಂದೆ ನನ್ನನ್ನು ಕೊನೆಯ ಭಾಷಣಕಾರನನ್ನಾಗಿ ಮಾಡಬೇಡಿ ಎಂದ ಸಿದ್ದರಾಮಯ್ಯ
ನೀಟ್ ಪರೀಕ್ಷೆಗೆ ಬಂದ ವಿದ್ಯಾರ್ಥಿಗಳ ಚೈನ್, ಮೂಗುತಿಗೆ ಕತ್ತರಿ
ನೀಟ್ ಪರೀಕ್ಷೆಗೆ ಬಂದ ವಿದ್ಯಾರ್ಥಿಗಳ ಚೈನ್, ಮೂಗುತಿಗೆ ಕತ್ತರಿ
ಅಖಂಡ ಶ್ರೀನಿವಾಸಮೂರ್ತಿ ಘರ್ ವಾಪ್ಸಿ: ಯಾವ ಕ್ಷೇತ್ರದ ಟಿಕೆಟ್ ಆಕಾಂಕ್ಷಿ?
ಅಖಂಡ ಶ್ರೀನಿವಾಸಮೂರ್ತಿ ಘರ್ ವಾಪ್ಸಿ: ಯಾವ ಕ್ಷೇತ್ರದ ಟಿಕೆಟ್ ಆಕಾಂಕ್ಷಿ?
ಹರಿಪ್ರಸಾದ್​​​ಗೆ ಖರ್ಗೆ ಕೊಟ್ಟ ಸಲಹೆಗಳೇನು?
ಹರಿಪ್ರಸಾದ್​​​ಗೆ ಖರ್ಗೆ ಕೊಟ್ಟ ಸಲಹೆಗಳೇನು?
ಗಿಲ್ಲಿ ನಟನ ಮೊದಲ ಸಿನಿಮಾಕ್ಕೆ ಕಾವೂನೇ ನಾಯಕಿ: ಗಿಲ್ಲಿ ಹೇಳಿದ್ದೇನು?
ಗಿಲ್ಲಿ ನಟನ ಮೊದಲ ಸಿನಿಮಾಕ್ಕೆ ಕಾವೂನೇ ನಾಯಕಿ: ಗಿಲ್ಲಿ ಹೇಳಿದ್ದೇನು?
ಕರ್ನಾಟಕ ಕಾಂಗ್ರೆಸ್ ಅಧ್ಯಕ್ಷರಾಗಿ ಬಿಕೆ ಹರಿಪ್ರಸಾದ್​​​ಗೆ ಪಟ್ಟಾಭಿಷೇಕ
ಕರ್ನಾಟಕ ಕಾಂಗ್ರೆಸ್ ಅಧ್ಯಕ್ಷರಾಗಿ ಬಿಕೆ ಹರಿಪ್ರಸಾದ್​​​ಗೆ ಪಟ್ಟಾಭಿಷೇಕ
ಈ ಜನ್ಮದಲ್ಲಿ ಚುನಾವಣೆಗೆ ನಿಲ್ಲಬಾರದು ಹಾಗೇ ಮಾಡ್ತೀವಿ:ಅಶೋಕ್
ಈ ಜನ್ಮದಲ್ಲಿ ಚುನಾವಣೆಗೆ ನಿಲ್ಲಬಾರದು ಹಾಗೇ ಮಾಡ್ತೀವಿ:ಅಶೋಕ್
ಹುಲಿಗೆಮ್ಮ ದೇವಾಲಯದ ಹುಂಡಿ ಎಣಿಕೆ: 1 ಕೋಟಿಗೂ ಅಧಿಕ ದೇಣಿಗೆ ಸಂಗ್ರಹ!
ಹುಲಿಗೆಮ್ಮ ದೇವಾಲಯದ ಹುಂಡಿ ಎಣಿಕೆ: 1 ಕೋಟಿಗೂ ಅಧಿಕ ದೇಣಿಗೆ ಸಂಗ್ರಹ!
ಪರಪ್ಪನ ಅಗ್ರಹಾರ ಜೈಲಿನಲ್ಲಿ ಯೋಗ ದಿನಾಚರಣೆ; ದರ್ಶನ್, ಪವಿತ್ರಾ ಗೌಡ ಭಾಗಿ
ಪರಪ್ಪನ ಅಗ್ರಹಾರ ಜೈಲಿನಲ್ಲಿ ಯೋಗ ದಿನಾಚರಣೆ; ದರ್ಶನ್, ಪವಿತ್ರಾ ಗೌಡ ಭಾಗಿ