AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಗರುಡ ಗಮನ..’ ಚಿತ್ರಕ್ಕೆ ರಾಣಾ ದಗ್ಗುಬಾಟಿ ಫಿದಾ; ಕನ್ನಡ ಸಿನಿಮಾ ಬಗ್ಗೆ ಒಂದೇ ಮಾತಲ್ಲಿ ಅವರು ಹೇಳಿದ್ದೇನು?

GGVV Movie: ‘ಗರುಡ ಗಮನ ವೃಷಭ ವಾಹನ’ ಸಿನಿಮಾ ನೋಡಿ ಎಂದು ಟ್ವಿಟರ್​ನಲ್ಲಿ ಸಿನಿಪ್ರಿಯರೊಬ್ಬರು ರಾಣಾ ದಗ್ಗುಬಾಟಿಗೆ ಸಲಹೆ ನೀಡಿದರು. ಅದಕ್ಕೆ ರಾಣಾ ಪ್ರತಿಕ್ರಿಯಿಸಿದ್ದಾರೆ.

‘ಗರುಡ ಗಮನ..’ ಚಿತ್ರಕ್ಕೆ ರಾಣಾ ದಗ್ಗುಬಾಟಿ ಫಿದಾ; ಕನ್ನಡ ಸಿನಿಮಾ ಬಗ್ಗೆ ಒಂದೇ ಮಾತಲ್ಲಿ ಅವರು ಹೇಳಿದ್ದೇನು?
ಗರುಡ ಗಮನ ವೃಷಭ ವಾಹನ ಪೋಸ್ಟರ್​, ರಾಣಾ ದಗ್ಗುಬಾಟಿ
TV9 Web
| Edited By: |

Updated on: Jan 20, 2022 | 3:14 PM

Share

ರಾಜ್​ ಬಿ. ಶೆಟ್ಟಿ (Raj B Shetty) ಅವರು ತಮ್ಮ ನಟನೆ ಮತ್ತು ನಿರ್ದೇಶನದ ಮೂಲಕ ಮೋಡಿ ಮಾಡಿದ್ದಾರೆ. ಕಳೆದ ವರ್ಷ ತೆರೆಕಂಡ ‘ಗರುಡ ಗಮನ ವೃಷಭ ವಾಹನ’ (Garuda Gamana Vrishabha Vahana) ಸಿನಿಮಾದಿಂದ ಅವರಿಗೆ ದೇಶಾದ್ಯಂತ ಜನಪ್ರಿಯತೆ ಸಿಗುತ್ತಿದೆ. ಅನೇಕ ಕಾರಣಗಳಿಗಾಗಿ ಈ ಸಿನಿಮಾವನ್ನು ಪ್ರೇಕ್ಷಕರು ಮೆಚ್ಚಿಕೊಂಡಿದ್ದಾರೆ. ಥಿಯೇಟರ್​ನಲ್ಲಿ ಭರ್ಜರಿ ಪ್ರದರ್ಶನ ಕಂಡ ಬಳಿಕ ಒಟಿಟಿ ಪ್ಲಾಟ್​ಫಾರ್ಮ್​ ಮೂಲಕ ಈ ಸಿನಿಮಾ ಧೂಳೆಬ್ಬಿಸಿದೆ. ಜೀ5ನಲ್ಲಿ ಬಿಡುಗಡೆಯಾದ ‘ಗರುಡ ಗಮನ ವೃಷಭ ವಾಹನ’ ಚಿತ್ರವನ್ನು ಈಗ ಪರಭಾಷೆ ಮಂದಿ ಕೂಡ ಹೊಗಳುತ್ತಿದ್ದಾರೆ. ಇತ್ತೀಚೆಗೆಷ್ಟೇ ಈ ಚಿತ್ರಕ್ಕೆ ಖ್ಯಾತ ನಿರ್ದೇಶಕ ರಾಮ್​ ಗೋಪಾಲ್​ ವರ್ಮಾ ಮೆಚ್ಚುಗೆ ಸೂಚಿಸಿದ್ದರು. ಈಗ ಟಾಲಿವುಡ್​ ನಟ ರಾಣಾ ದಗ್ಗುಬಾಟಿ (Rana Daggubati) ಅವರು ಕೂಡ ಪ್ರಶಂಸೆ ವ್ಯಕ್ತಪಡಿಸಿದ್ದಾರೆ. ಆ ಮೂಲಕ ಕನ್ನಡ ಚಿತ್ರರಂಗದತ್ತ ಪರಭಾಷೆ ಪ್ರೇಕ್ಷಕರ ಆಸಕ್ತಿ ಹೆಚ್ಚುವಂತಾಗಿದೆ.

ಜೀ5ನಲ್ಲಿ ಬಿಡುಗಡೆಯಾದ ಬಳಿಕ ‘ಗರುಡ ಗಮನ ವೃಷಭ ವಾಹನ’ ಚಿತ್ರವನ್ನು ಪರರಾಜ್ಯಗಳ ಜನರು ನೋಡಿದ್ದಾರೆ. ಯೂಟ್ಯೂಬ್​ನಲ್ಲಿ ಅನೇಕರು ಇದರ ವಿಮರ್ಶೆ ಹಂಚಿಕೊಂಡಿದ್ದಾರೆ. ಡಿಫರೆಂಟ್​ ಆಗಿ ಮೂಡಿಬಂದಿರುವ ಈ ಚಿತ್ರದ ಬಗ್ಗೆ ಸೋಶಿಯಲ್​ ಮೀಡಿಯಾದಲ್ಲಿ ಚರ್ಚೆ ನಡೆಯುತ್ತಿದೆ. ಈ ಸಿನಿಮಾ ನೋಡಿ ಎಂದು ಟ್ವಿಟರ್​ನಲ್ಲಿ ಸಿನಿಪ್ರಿಯರೊಬ್ಬರು ರಾಣಾ ದಗ್ಗುಬಾಟಿಗೆ ಸಲಹೆ ನೀಡಿದರು. ಅದಕ್ಕೆ ರಾಣಾ ಪ್ರತಿಕ್ರಿಯಿಸಿದ್ದಾರೆ.

‘ರಾಣಾ ದಗ್ಗುಬಾಟಿ ಅವರೇ, ದಯವಿಟ್ಟು ನೀವು ಸ್ವಲ್ಪ ಬಿಡುವು ಮಾಡಿಕೊಂಡು ಈ ಸಿನಿಮಾ ನೋಡಿ. ನಿಮ್ಮ ಅಭಿಪ್ರಾಯ ತಿಳಿಸಬೇಕೆಂದು ಬಯಸುತ್ತೇನೆ’ ಎಂದು ಅಭಿಮಾನಿಯೊಬ್ಬರು ಮಾಡಿದ ಟ್ವೀಟ್​ಗೆ ರಾಣಾ ಉತ್ತರ ನೀಡಿದ್ದಾರೆ. ‘ಇದು ಅದ್ಭುತವಾಗಿದೆ. ತುಂಬ ಇಷ್ಟಪಟ್ಟಿದ್ದೇನೆ’ ಎಂದು ಅವರು ಟ್ವೀಟ್​ ಮಾಡಿದ್ದಾರೆ.

ಈ ಸಿನಿಮಾದಲ್ಲಿ ರಾಜ್​ ಬಿ. ಶೆಟ್ಟಿ ಮತ್ತು ರಿಷಬ್​ ಶೆಟ್ಟಿ ಅವರು ಪ್ರಮುಖ ಪಾತ್ರಗಳನ್ನು ನಿಭಾಯಿಸಿದ್ದಾರೆ. ಮಿಥುನ್​ ಮುಕುಂದನ್​ ಅವರ ಸಂಗೀತಕ್ಕೂ ಭರ್ಜರಿ ಮೆಚ್ಚುಗೆ ವ್ಯಕ್ತವಾಗಿದೆ. ಕೆಲವೇ ದಿನಗಳ ಹಿಂದೆ ರಾಮ್​ ಗೋಪಾಲ್​ ವರ್ಮಾ ಮತ್ತು ಅನುರಾಗ್​ ಕಶ್ಯಪ್​ ಅವರು ಈ ಚಿತ್ರದ ಬಗ್ಗೆ ಅನಿಸಿಕೆ ಹಂಚಿಕೊಂಡಿದ್ದರು.

ಜನವರಿ 13ರಂದು ಒಟಿಟಿಯಲ್ಲಿ ‘ಗರುಡ ಗಮನ ವೃಷಭ ವಾಹನ’ ಸಿನಿಮಾ ರಿಲೀಸ್​ ಆಯಿತು. ಕೇವಲ ಮೂರು ದಿನಗಳಲ್ಲಿ ಬರೋಬ್ಬರಿ 8 ಕೋಟಿ ನಿಮಿಷಗಳ ವೀಕ್ಷಣೆ ಕಾಣುವ ಮೂಲಕ ಒಟಿಟಿ ಪ್ರೇಕ್ಷಕರಿಂದ ಭೇಷ್​ ಎನಿಸಿಕೊಂಡಿತು. ಈ ಸಿನಿಮಾದ ಹಾಡುಗಳು ಸಹ ಸೂಪರ್ ಹಿಟ್​ ಆಗಿವೆ. ‘ಮಾದೇವ..’ ಹಾಡು ಹೊಸ ಸೆನ್ಸೇಷನ್​ ಸೃಷ್ಟಿ ಮಾಡಿದೆ.

ಇದನ್ನೂ ಓದಿ:

ರೌಡಿಸಂ ದೃಶ್ಯಕ್ಕೆ ಮಾದೇಶ್ವರನ ಹಾಡು; ‘ಗರುಡ ಗಮನ..’ ಬಗ್ಗೆ ಶಾಂತಮಲ್ಲಿಕಾರ್ಜುನ ಸ್ವಾಮಿ ಬಹಿರಂಗ ಪತ್ರ

GGVV Review: ಹೀಗೂ ಇರಬಹುದಾ ಕ್ರೈಮ್​ ಲೋಕ? ಇದು ರಾಜ್​ ಬಿ. ಶೆಟ್ಟಿ ಇನ್ನೊಂದು ಮುಖ

ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ
ಬಾಲಕನನ್ನು ಫುಟ್ಬಾಲ್​​ನಂತೆ ಒದ್ದ ಜಿಮ್ ಟ್ರೈನರ್​​ನ ಮತ್ತಷ್ಟು ಕೃತ್ಯಗಳು
ಬಾಲಕನನ್ನು ಫುಟ್ಬಾಲ್​​ನಂತೆ ಒದ್ದ ಜಿಮ್ ಟ್ರೈನರ್​​ನ ಮತ್ತಷ್ಟು ಕೃತ್ಯಗಳು
ವಕ್ಫ್ ಆಸ್ತಿಗಾಗಿ ಸಂಘರ್ಷ: 11 ಎಕರೆ ಜಮೀನಿಗಾಗಿ ಕುಟುಂಬಗಳ‌ ಮಧ್ಯೆ ಬಡಿದಾಟ
ವಕ್ಫ್ ಆಸ್ತಿಗಾಗಿ ಸಂಘರ್ಷ: 11 ಎಕರೆ ಜಮೀನಿಗಾಗಿ ಕುಟುಂಬಗಳ‌ ಮಧ್ಯೆ ಬಡಿದಾಟ
ದೇವಿ ದರ್ಶನ ಬಳಿಕ ಡಿಸಿಎಂ ಸ್ಫೋಟಕ ಹೇಳಿಕೆ: ಸಂಚಲನ ಮೂಡಿಸಿದ ಡಿಕೆಶಿ ಸಂದೇಶ
ದೇವಿ ದರ್ಶನ ಬಳಿಕ ಡಿಸಿಎಂ ಸ್ಫೋಟಕ ಹೇಳಿಕೆ: ಸಂಚಲನ ಮೂಡಿಸಿದ ಡಿಕೆಶಿ ಸಂದೇಶ