‘777 ಚಾರ್ಲಿ’ ಚಿತ್ರ ನೋಡಿ ಮೊದಲ ವಿಮರ್ಶೆ ತಿಳಿಸಿದ ರಾಣಾ ದಗ್ಗುಬಾಟಿ; ಹೇಗಿದೆ ರಕ್ಷಿತ್​ ಶೆಟ್ಟಿ ಸಿನಿಮಾ?

Rana Daggubati 777 Charlie: ರಕ್ಷಿತ್​ ಶೆಟ್ಟಿ ನಟನೆಯ ‘777 ಚಾರ್ಲಿ’ ಸಿನಿಮಾವನ್ನು ನೋಡಿ ರಾಣಾ ದಗ್ಗುಬಾಟಿ ಮೆಚ್ಚಿಕೊಂಡಿದ್ದಾರೆ. ಸಿನಿಮಾ ಹೇಗಿದೆ ಎಂದು ಅವರು ತಿಳಿಸಿದ್ದಾರೆ.

‘777 ಚಾರ್ಲಿ’ ಚಿತ್ರ ನೋಡಿ ಮೊದಲ ವಿಮರ್ಶೆ ತಿಳಿಸಿದ ರಾಣಾ ದಗ್ಗುಬಾಟಿ; ಹೇಗಿದೆ ರಕ್ಷಿತ್​ ಶೆಟ್ಟಿ ಸಿನಿಮಾ?
ರಾಣಾ ದಗ್ಗುಬಾಟಿ, 777 ಚಾರ್ಲಿ
Follow us
| Updated By: ಮದನ್​ ಕುಮಾರ್​

Updated on: May 01, 2022 | 2:01 PM

ದಕ್ಷಿಣ ಭಾರತದ ಸಿನಿಮಾಗಳು ಈಗ ಸಖತ್​ ಸೌಂಡು ಮಾಡುತ್ತಿವೆ. ಹಾಗಂತ ಎಲ್ಲವೂ ಆ್ಯಕ್ಷನ್​ ಸಿನಿಮಾಗಳೇ ಆಗಿರಬೇಕು ಎಂದೇನಿಲ್ಲ. ಭಿನ್ನ ಕಾನ್ಸೆಪ್ಟ್​ ಇರುವ ಅನೇಕ ಚಿತ್ರಗಳು ಕೂಡ ಪ್ರೇಕ್ಷಕರು ಮನ ಗೆಲ್ಲುತ್ತವೆ. ನಟ ರಕ್ಷಿತ್​ ಶೆಟ್ಟಿ (Rakshit Shetty) ಅವರು ಪ್ರತಿ ಸಿನಿಮಾದಲ್ಲಿಯೂ ಒಂದಿಲ್ಲೊಂದು ಹೊಸ ಪ್ರಯತ್ನ ಮಾಡುತ್ತಾರೆ. ಅವರು ನಟಿಸಿರುವ ‘777 ಚಾರ್ಲಿ’ ಚಿತ್ರ ಅನೇಕ ಕಾರಣಗಳಿಂದ ಹೈಪ್​ ಸೃಷ್ಟಿ ಮಾಡಿದೆ. ಕಿರಣ್​ ರಾಜ್​ ಅವರು ಈ ಸಿನಿಮಾಗೆ ನಿರ್ದೇಶನ ಮಾಡಿದ್ದಾರೆ. ನೋಬಿನ್​ ಪೌಲ್​ ಅವರ ಸಂಗೀತ ನಿರ್ದೇಶನದಲ್ಲಿ ಈ ಚಿತ್ರ ಮೂಡಿಬಂದಿದೆ. ಜೂನ್​ 10ರಂದು ‘777 ಚಾರ್ಲಿ’  (777 Charlie)ಸಿನಿಮಾ ಬಿಡುಗಡೆ ಆಗಲಿದೆ. ಕನ್ನಡ ಮಾತ್ರವಲ್ಲದೇ ಬೇರೆ ಬೇರೆ ಭಾಷೆಗಳಿಗೆ ಡಬ್​ ಆಗಿ ಬಿಡುಗಡೆ ಮಾಡಲಾಗುತ್ತಿದೆ. ವಿಶೇಷ ಏನೆಂದರೆ ತೆಲುಗಿನಲ್ಲಿ ಈ ಸಿನಿಮಾವನ್ನು ಖ್ಯಾತ ನಟ ರಾಣಾ ದಗ್ಗುಬಾಟಿ (Rana Daggubati) ಅವರು ಬಿಡುಗಡೆ ಮಾಡಲಿದ್ದಾರೆ. ‘777 ಚಾರ್ಲಿ’ ಸಿನಿಮಾದ ತೆಲುಗು ವರ್ಷನ್​ ವಿತರಣೆಯ ಜವಾಬ್ದಾರಿಯನ್ನು ಅವರು ವಹಿಸಿಕೊಂಡಿದ್ದಾರೆ. ಆ ಮೂಲಕ ರಕ್ಷಿತ್​ ಶೆಟ್ಟಿ ಮತ್ತು ತಂಡಕ್ಕೆ ಇನ್ನಷ್ಟು ಬಲ ಬಂದಂತಾಗಿದೆ.

ಈಗಾಗಲೇ ಬಿಡುಗಡೆ ಆಗಿರುವ ಟೀಸರ್​, ಪೋಸ್ಟರ್​ ಮತ್ತು ಸಾಂಗ್​ ಮೂಲಕ ‘777 ಚಾರ್ಲಿ’ ಸಿನಿಮಾ ನಿರೀಕ್ಷೆ ಮೂಡಿಸಿದೆ. ರಕ್ಷಿತ್​ ಶೆಟ್ಟಿ ಅವರ ವೃತ್ತಿ ಜೀವನದಲ್ಲಿ ಇದು ಭಿನ್ನ ಸಿನಿಮಾ ಆಗಿರಲಿದೆ ಎಂಬ ಭರವಸೆ ಮೂಡಿದೆ. ನಾಯಿ ಮತ್ತು ಮನುಷ್ಯನ ನಡುವಿನ ಸಂಬಂಧದ ಕಥೆಯನ್ನು ಈ ಚಿತ್ರ ಹೇಳಲಿದೆ. ಸಿನಿಮಾವನ್ನು ಕಣ್ತುಂಬಿಕೊಳ್ಳಲು ರಕ್ಷಿತ್​ ಶೆಟ್ಟಿ ಫ್ಯಾನ್ಸ್​ ಕಾಯುತ್ತಿದ್ದಾರೆ. ಅಷ್ಟರಲ್ಲಾಗಲೇ ರಾಣಾ ದಗ್ಗುಬಾಟಿ ಅವರಿಂದ ಈ ಸಿನಿಮಾಗೆ ಉತ್ತಮ ವಿಮರ್ಶೆ ಸಿಕ್ಕಿದೆ.

ಹೌದು, ರಾಣಾ ದಗ್ಗುಬಾಟಿ ಅವರು ‘777 ಚಾರ್ಲಿ’ ಸಿನಿಮಾವನ್ನು ನೋಡಿದ್ದಾರೆ. ಅವರಿಗೆ ಈ ಚಿತ್ರ ಸಖತ್​ ಇಷ್ಟ ಆಗಿದೆ. ಹಾಗಾಗಿ ವಿತರಣೆ ಮಾಡಲು ಮುಂದೆ ಬಂದಿದ್ದಾರೆ. ಈ ವಿಷಯವನ್ನು ಸೋಶಿಯಲ್​ ಮೀಡಿಯಾದಲ್ಲಿ ಹಂಚಿಕೊಳ್ಳುವುದರ ಜೊತೆಗೆ ಸಿನಿಮಾ ಹೇಗಿದೆ ಎಂಬುದನ್ನು ಕೂಡ ಅವರು ತಿಳಿಸಿದ್ದಾರೆ. ‘777 ಚಾರ್ಲಿ ಚಿತ್ರವನ್ನು ನೋಡುವ ಅವಕಾಶ ಸಿಕ್ಕಿತು. ಎಂಥ ಅದ್ಭುತ ಟ್ರೀಟ್​ ಇದು. ಒಟ್ಟಾರೆ ಹೊಸತನದಿಂದ ಕೂಡಿದೆ. ಈ ಸಿನಿಮಾವನ್ನು ಪ್ರಸ್ತುತ ಪಡಿಸುತ್ತಿದ್ದೇನೆ’ ಎಂದು ರಾಣಾ ದಗ್ಗುಬಾಟಿ ಟ್ವೀಟ್​ ಮಾಡಿದ್ದಾರೆ.

ರಾಣಾ ದಗ್ಗುಬಾಟಿ ಜೊತೆ ಕೈ ಜೋಡಿಸುತ್ತಿರುವುದಕ್ಕೆ ರಕ್ಷಿತ್​ ಶೆಟ್ಟಿ ಖುಷಿ ಆಗಿದ್ದಾರೆ. ‘ಈ ಪಯಣದಲ್ಲಿ ನಾವು ಮುಂದುವರಿಯುತ್ತಿರುವಾಗ ಒಂದು ಸ್ಪಷ್ಟ ಉದ್ದೇಶವೇ ನಮ್ಮನ್ನು ಒಂದಾಗಿಸಿದೆ. 777 ಚಾರ್ಲಿ ಸಿನಿಮಾದ ತೆಲುಗು ವಿತರಣೆಗಾಗಿ ರಾಣಾ ದಗ್ಗುಬಾಟಿ ಮತ್ತು ಸುರೇಶ್​ ಪ್ರೊಡಕ್ಷನ್ಸ್​ ಜೊತೆ ಕೈ ಜೋಡಿಸುತ್ತಿರುವುದು ಖುಷಿಯ ವಿಚಾರ’ ಎಂದು ರಕ್ಷಿತ್​ ಶೆಟ್ಟಿ ಅವರು ಸೋಶಿಯಲ್​ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ.

ಈ ಸಿನಿಮಾ ಬಿಡುಗಡೆಗೂ ಮನ್ನವೇ ಉತ್ತಮ ಬಿಸ್ನೆಸ್​ ಮಾಡಿದೆ. ಚಿತ್ರದ ಕಿರುತೆರೆ ಮತ್ತು ಒಟಿಟಿ ಪ್ರಸಾರ ಹಕ್ಕುಗಳು ‘ಕಲರ್ಸ್​ ಕನ್ನಡ’ ಹಾಗೂ ‘ವೂಟ್​’ ಪಾಲಾಗಿದೆ. ಈ ಸಿನಿಮಾದಲ್ಲಿ ಸಂಗೀತಾ ಶೃಂಗೇರಿ, ದಾನಿಶ್​ ಸೇಠ್​, ರಾಜ್​ ಬಿ. ಶೆಟ್ಟಿ ಮುಂತಾದವರು ಕೂಡ ಅಭಿನಯಿಸಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಇದನ್ನೂ ಓದಿ:

ಲೈಂಗಿಕ ಕಾರ್ಯಕರ್ತೆ ಪಾತ್ರದಲ್ಲಿ ಶ್ರುತಿ ಹರಿಹರನ್​; ಸ್ಟ್ರಾಬೆರಿ ಸಿನಿಮಾಗೆ ರಕ್ಷಿತ್​ ಶೆಟ್ಟಿ ನಿರ್ಮಾಣ

ಉಡುಪಿಯಲ್ಲಿ ರಕ್ಷಿತ್​ ಶೆಟ್ಟಿ ಹುಲಿಕುಣಿತ; ಲೋಬಾನ ಹಾಕುವ ಸಂಪ್ರದಾಯದಲ್ಲಿ ‘ಸಿಂಪಲ್ ಸ್ಟಾರ್’ ಭಾಗಿ

ತಾಜಾ ಸುದ್ದಿ
ಅಸ್ಸಾಂನಲ್ಲಿ ಭೀಕರ ಪ್ರವಾಹ; ಪ್ರಾಣ ಒತ್ತೆಯಿಟ್ಟು ಕರುವನ್ನು ಕಾಪಾಡಿದ ಜನ
ಅಸ್ಸಾಂನಲ್ಲಿ ಭೀಕರ ಪ್ರವಾಹ; ಪ್ರಾಣ ಒತ್ತೆಯಿಟ್ಟು ಕರುವನ್ನು ಕಾಪಾಡಿದ ಜನ
ರಾತ್ರಿ ಆದ್ರೂ ಜನಸಾಗರ ಕಂಡು ಕೈ ಎತ್ತಿ ಮುಗಿದ ರೋಹಿತ್, ಕೊಹ್ಲಿ
ರಾತ್ರಿ ಆದ್ರೂ ಜನಸಾಗರ ಕಂಡು ಕೈ ಎತ್ತಿ ಮುಗಿದ ರೋಹಿತ್, ಕೊಹ್ಲಿ
ಟೀಂ ಇಂಡಿಯಾ ವಿಜಯೋತ್ಸವದಲ್ಲಿ ಅಂಬ್ಯುಲೆನ್ಸ್‌ಗೆ ದಾರಿ ಮಾಡಿಕೊಟ್ಟ ಫ್ಯಾನ್ಸ್
ಟೀಂ ಇಂಡಿಯಾ ವಿಜಯೋತ್ಸವದಲ್ಲಿ ಅಂಬ್ಯುಲೆನ್ಸ್‌ಗೆ ದಾರಿ ಮಾಡಿಕೊಟ್ಟ ಫ್ಯಾನ್ಸ್
ಮುಂಬೈನಲ್ಲಿ ಜನಸಾಗರ ಮಧ್ಯೆ ಕಪ್ ಹಿಡಿದು ಕುಣಿದ ಬ್ಯೂ ಬಾಯ್ಸ್: ವಿಡಿಯೋ ನೋಡಿ
ಮುಂಬೈನಲ್ಲಿ ಜನಸಾಗರ ಮಧ್ಯೆ ಕಪ್ ಹಿಡಿದು ಕುಣಿದ ಬ್ಯೂ ಬಾಯ್ಸ್: ವಿಡಿಯೋ ನೋಡಿ
ಬ್ರಹ್ಮಾವರ ತಾಲ್ಲೂಕಿನ ಮಡಿಸಾಲು ಹಳ್ಳ ಉಕ್ಕಿ ತಗ್ಗುಪ್ರದೇಶಗಳು ಜಲಾವೃತ
ಬ್ರಹ್ಮಾವರ ತಾಲ್ಲೂಕಿನ ಮಡಿಸಾಲು ಹಳ್ಳ ಉಕ್ಕಿ ತಗ್ಗುಪ್ರದೇಶಗಳು ಜಲಾವೃತ
ಮುಂಬೈ ಏರ್‌ಪೋರ್ಟ್‌ನಲ್ಲಿ ಟೀಂ ಇಂಡಿಯಾದ ಆಟಗಾರರಿಗೆ ವಾಟರ್ ಸೆಲ್ಯೂಟ್‌
ಮುಂಬೈ ಏರ್‌ಪೋರ್ಟ್‌ನಲ್ಲಿ ಟೀಂ ಇಂಡಿಯಾದ ಆಟಗಾರರಿಗೆ ವಾಟರ್ ಸೆಲ್ಯೂಟ್‌
ದರ್ಶನ್ ಹಾಗೆ ಮಾಡಿರಲು ಸಾಧ್ಯವಿಲ್ಲ: ಸುಮಲತಾ ಅಂಬರೀಶ್
ದರ್ಶನ್ ಹಾಗೆ ಮಾಡಿರಲು ಸಾಧ್ಯವಿಲ್ಲ: ಸುಮಲತಾ ಅಂಬರೀಶ್
ಪ್ರಧಾನಿ ಮೋದಿಯವರನ್ನು ಭೇಟಿಯಾಗಿ ಮುಂಬೈ ಬಂದ ಟೀಮ್ ಇಂಡಿಯಾಗೆ ಭವ್ಯ ಸ್ವಾಗತ
ಪ್ರಧಾನಿ ಮೋದಿಯವರನ್ನು ಭೇಟಿಯಾಗಿ ಮುಂಬೈ ಬಂದ ಟೀಮ್ ಇಂಡಿಯಾಗೆ ಭವ್ಯ ಸ್ವಾಗತ
ಟೀಂ ಇಂಡಿಯಾ ವಿಜಯೋತ್ಸವಕ್ಕೆ ಕಡಲ ಕಿನಾರೆಯಲ್ಲಿ ಜನ ಸಾಗರ: ವಿಹಂಗಮ ನೋಟ
ಟೀಂ ಇಂಡಿಯಾ ವಿಜಯೋತ್ಸವಕ್ಕೆ ಕಡಲ ಕಿನಾರೆಯಲ್ಲಿ ಜನ ಸಾಗರ: ವಿಹಂಗಮ ನೋಟ
ದರ್ಶನ್ ಕುಟುಂಬ  ಜೊತೆ ನಿರಂತರವಾಗಿ ಸಂಪರ್ಕದಲ್ಲಿರುವೆ: ಸುಮಲತಾ ಅಂಬರೀಶ್
ದರ್ಶನ್ ಕುಟುಂಬ  ಜೊತೆ ನಿರಂತರವಾಗಿ ಸಂಪರ್ಕದಲ್ಲಿರುವೆ: ಸುಮಲತಾ ಅಂಬರೀಶ್