AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘777 ಚಾರ್ಲಿ’ ಚಿತ್ರ ನೋಡಿ ಮೊದಲ ವಿಮರ್ಶೆ ತಿಳಿಸಿದ ರಾಣಾ ದಗ್ಗುಬಾಟಿ; ಹೇಗಿದೆ ರಕ್ಷಿತ್​ ಶೆಟ್ಟಿ ಸಿನಿಮಾ?

Rana Daggubati 777 Charlie: ರಕ್ಷಿತ್​ ಶೆಟ್ಟಿ ನಟನೆಯ ‘777 ಚಾರ್ಲಿ’ ಸಿನಿಮಾವನ್ನು ನೋಡಿ ರಾಣಾ ದಗ್ಗುಬಾಟಿ ಮೆಚ್ಚಿಕೊಂಡಿದ್ದಾರೆ. ಸಿನಿಮಾ ಹೇಗಿದೆ ಎಂದು ಅವರು ತಿಳಿಸಿದ್ದಾರೆ.

‘777 ಚಾರ್ಲಿ’ ಚಿತ್ರ ನೋಡಿ ಮೊದಲ ವಿಮರ್ಶೆ ತಿಳಿಸಿದ ರಾಣಾ ದಗ್ಗುಬಾಟಿ; ಹೇಗಿದೆ ರಕ್ಷಿತ್​ ಶೆಟ್ಟಿ ಸಿನಿಮಾ?
ರಾಣಾ ದಗ್ಗುಬಾಟಿ, 777 ಚಾರ್ಲಿ
TV9 Web
| Edited By: |

Updated on: May 01, 2022 | 2:01 PM

Share

ದಕ್ಷಿಣ ಭಾರತದ ಸಿನಿಮಾಗಳು ಈಗ ಸಖತ್​ ಸೌಂಡು ಮಾಡುತ್ತಿವೆ. ಹಾಗಂತ ಎಲ್ಲವೂ ಆ್ಯಕ್ಷನ್​ ಸಿನಿಮಾಗಳೇ ಆಗಿರಬೇಕು ಎಂದೇನಿಲ್ಲ. ಭಿನ್ನ ಕಾನ್ಸೆಪ್ಟ್​ ಇರುವ ಅನೇಕ ಚಿತ್ರಗಳು ಕೂಡ ಪ್ರೇಕ್ಷಕರು ಮನ ಗೆಲ್ಲುತ್ತವೆ. ನಟ ರಕ್ಷಿತ್​ ಶೆಟ್ಟಿ (Rakshit Shetty) ಅವರು ಪ್ರತಿ ಸಿನಿಮಾದಲ್ಲಿಯೂ ಒಂದಿಲ್ಲೊಂದು ಹೊಸ ಪ್ರಯತ್ನ ಮಾಡುತ್ತಾರೆ. ಅವರು ನಟಿಸಿರುವ ‘777 ಚಾರ್ಲಿ’ ಚಿತ್ರ ಅನೇಕ ಕಾರಣಗಳಿಂದ ಹೈಪ್​ ಸೃಷ್ಟಿ ಮಾಡಿದೆ. ಕಿರಣ್​ ರಾಜ್​ ಅವರು ಈ ಸಿನಿಮಾಗೆ ನಿರ್ದೇಶನ ಮಾಡಿದ್ದಾರೆ. ನೋಬಿನ್​ ಪೌಲ್​ ಅವರ ಸಂಗೀತ ನಿರ್ದೇಶನದಲ್ಲಿ ಈ ಚಿತ್ರ ಮೂಡಿಬಂದಿದೆ. ಜೂನ್​ 10ರಂದು ‘777 ಚಾರ್ಲಿ’  (777 Charlie)ಸಿನಿಮಾ ಬಿಡುಗಡೆ ಆಗಲಿದೆ. ಕನ್ನಡ ಮಾತ್ರವಲ್ಲದೇ ಬೇರೆ ಬೇರೆ ಭಾಷೆಗಳಿಗೆ ಡಬ್​ ಆಗಿ ಬಿಡುಗಡೆ ಮಾಡಲಾಗುತ್ತಿದೆ. ವಿಶೇಷ ಏನೆಂದರೆ ತೆಲುಗಿನಲ್ಲಿ ಈ ಸಿನಿಮಾವನ್ನು ಖ್ಯಾತ ನಟ ರಾಣಾ ದಗ್ಗುಬಾಟಿ (Rana Daggubati) ಅವರು ಬಿಡುಗಡೆ ಮಾಡಲಿದ್ದಾರೆ. ‘777 ಚಾರ್ಲಿ’ ಸಿನಿಮಾದ ತೆಲುಗು ವರ್ಷನ್​ ವಿತರಣೆಯ ಜವಾಬ್ದಾರಿಯನ್ನು ಅವರು ವಹಿಸಿಕೊಂಡಿದ್ದಾರೆ. ಆ ಮೂಲಕ ರಕ್ಷಿತ್​ ಶೆಟ್ಟಿ ಮತ್ತು ತಂಡಕ್ಕೆ ಇನ್ನಷ್ಟು ಬಲ ಬಂದಂತಾಗಿದೆ.

ಈಗಾಗಲೇ ಬಿಡುಗಡೆ ಆಗಿರುವ ಟೀಸರ್​, ಪೋಸ್ಟರ್​ ಮತ್ತು ಸಾಂಗ್​ ಮೂಲಕ ‘777 ಚಾರ್ಲಿ’ ಸಿನಿಮಾ ನಿರೀಕ್ಷೆ ಮೂಡಿಸಿದೆ. ರಕ್ಷಿತ್​ ಶೆಟ್ಟಿ ಅವರ ವೃತ್ತಿ ಜೀವನದಲ್ಲಿ ಇದು ಭಿನ್ನ ಸಿನಿಮಾ ಆಗಿರಲಿದೆ ಎಂಬ ಭರವಸೆ ಮೂಡಿದೆ. ನಾಯಿ ಮತ್ತು ಮನುಷ್ಯನ ನಡುವಿನ ಸಂಬಂಧದ ಕಥೆಯನ್ನು ಈ ಚಿತ್ರ ಹೇಳಲಿದೆ. ಸಿನಿಮಾವನ್ನು ಕಣ್ತುಂಬಿಕೊಳ್ಳಲು ರಕ್ಷಿತ್​ ಶೆಟ್ಟಿ ಫ್ಯಾನ್ಸ್​ ಕಾಯುತ್ತಿದ್ದಾರೆ. ಅಷ್ಟರಲ್ಲಾಗಲೇ ರಾಣಾ ದಗ್ಗುಬಾಟಿ ಅವರಿಂದ ಈ ಸಿನಿಮಾಗೆ ಉತ್ತಮ ವಿಮರ್ಶೆ ಸಿಕ್ಕಿದೆ.

ಹೌದು, ರಾಣಾ ದಗ್ಗುಬಾಟಿ ಅವರು ‘777 ಚಾರ್ಲಿ’ ಸಿನಿಮಾವನ್ನು ನೋಡಿದ್ದಾರೆ. ಅವರಿಗೆ ಈ ಚಿತ್ರ ಸಖತ್​ ಇಷ್ಟ ಆಗಿದೆ. ಹಾಗಾಗಿ ವಿತರಣೆ ಮಾಡಲು ಮುಂದೆ ಬಂದಿದ್ದಾರೆ. ಈ ವಿಷಯವನ್ನು ಸೋಶಿಯಲ್​ ಮೀಡಿಯಾದಲ್ಲಿ ಹಂಚಿಕೊಳ್ಳುವುದರ ಜೊತೆಗೆ ಸಿನಿಮಾ ಹೇಗಿದೆ ಎಂಬುದನ್ನು ಕೂಡ ಅವರು ತಿಳಿಸಿದ್ದಾರೆ. ‘777 ಚಾರ್ಲಿ ಚಿತ್ರವನ್ನು ನೋಡುವ ಅವಕಾಶ ಸಿಕ್ಕಿತು. ಎಂಥ ಅದ್ಭುತ ಟ್ರೀಟ್​ ಇದು. ಒಟ್ಟಾರೆ ಹೊಸತನದಿಂದ ಕೂಡಿದೆ. ಈ ಸಿನಿಮಾವನ್ನು ಪ್ರಸ್ತುತ ಪಡಿಸುತ್ತಿದ್ದೇನೆ’ ಎಂದು ರಾಣಾ ದಗ್ಗುಬಾಟಿ ಟ್ವೀಟ್​ ಮಾಡಿದ್ದಾರೆ.

ರಾಣಾ ದಗ್ಗುಬಾಟಿ ಜೊತೆ ಕೈ ಜೋಡಿಸುತ್ತಿರುವುದಕ್ಕೆ ರಕ್ಷಿತ್​ ಶೆಟ್ಟಿ ಖುಷಿ ಆಗಿದ್ದಾರೆ. ‘ಈ ಪಯಣದಲ್ಲಿ ನಾವು ಮುಂದುವರಿಯುತ್ತಿರುವಾಗ ಒಂದು ಸ್ಪಷ್ಟ ಉದ್ದೇಶವೇ ನಮ್ಮನ್ನು ಒಂದಾಗಿಸಿದೆ. 777 ಚಾರ್ಲಿ ಸಿನಿಮಾದ ತೆಲುಗು ವಿತರಣೆಗಾಗಿ ರಾಣಾ ದಗ್ಗುಬಾಟಿ ಮತ್ತು ಸುರೇಶ್​ ಪ್ರೊಡಕ್ಷನ್ಸ್​ ಜೊತೆ ಕೈ ಜೋಡಿಸುತ್ತಿರುವುದು ಖುಷಿಯ ವಿಚಾರ’ ಎಂದು ರಕ್ಷಿತ್​ ಶೆಟ್ಟಿ ಅವರು ಸೋಶಿಯಲ್​ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ.

ಈ ಸಿನಿಮಾ ಬಿಡುಗಡೆಗೂ ಮನ್ನವೇ ಉತ್ತಮ ಬಿಸ್ನೆಸ್​ ಮಾಡಿದೆ. ಚಿತ್ರದ ಕಿರುತೆರೆ ಮತ್ತು ಒಟಿಟಿ ಪ್ರಸಾರ ಹಕ್ಕುಗಳು ‘ಕಲರ್ಸ್​ ಕನ್ನಡ’ ಹಾಗೂ ‘ವೂಟ್​’ ಪಾಲಾಗಿದೆ. ಈ ಸಿನಿಮಾದಲ್ಲಿ ಸಂಗೀತಾ ಶೃಂಗೇರಿ, ದಾನಿಶ್​ ಸೇಠ್​, ರಾಜ್​ ಬಿ. ಶೆಟ್ಟಿ ಮುಂತಾದವರು ಕೂಡ ಅಭಿನಯಿಸಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಇದನ್ನೂ ಓದಿ:

ಲೈಂಗಿಕ ಕಾರ್ಯಕರ್ತೆ ಪಾತ್ರದಲ್ಲಿ ಶ್ರುತಿ ಹರಿಹರನ್​; ಸ್ಟ್ರಾಬೆರಿ ಸಿನಿಮಾಗೆ ರಕ್ಷಿತ್​ ಶೆಟ್ಟಿ ನಿರ್ಮಾಣ

ಉಡುಪಿಯಲ್ಲಿ ರಕ್ಷಿತ್​ ಶೆಟ್ಟಿ ಹುಲಿಕುಣಿತ; ಲೋಬಾನ ಹಾಕುವ ಸಂಪ್ರದಾಯದಲ್ಲಿ ‘ಸಿಂಪಲ್ ಸ್ಟಾರ್’ ಭಾಗಿ

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ