AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಾಲಯ್ಯ ಶೋನಲ್ಲಿ ರಶ್ಮಿಕಾ ಮಂದಣ್ಣ ಲವ್ ವಿಚಾರ ಲೀಕ್; ಇದೆಲ್ಲ ರಣಬೀರ್ ಕೆಲಸ

ಬಾಲಯ್ಯ ಅವರು ನಡೆಸಿಕೊಡುವ ‘ಅನ್​ಸ್ಟಾಪೆಬಲ್ ವಿತ್ ಎನ್​ಬಿಕೆ’ ಶೋಗೆ ಅನಿಮಲ್ ತಂಡ ಆಗಮಿಸಿದೆ. ರಶ್ಮಿಕಾ ಮಂದಣ್ಣ, ರಣಬೀರ್ ಕಪೂರ್ ಹಾಗೂ ಸಿನಿಮಾ ನಿರ್ದೇಶಕ ಸಂದೀಪ್ ರೆಡ್ಡಿ ವಂಗ ವೇದಿಕೆ ಮೇಲೆ ಇದ್ದರು. ಈ ವೇಳೆ ರಶ್ಮಿಕಾ ಪ್ರೀತಿ ವಿಚಾರ ಲೀಕ್ ಆಗಿದೆ.

ಬಾಲಯ್ಯ ಶೋನಲ್ಲಿ ರಶ್ಮಿಕಾ ಮಂದಣ್ಣ ಲವ್ ವಿಚಾರ ಲೀಕ್; ಇದೆಲ್ಲ ರಣಬೀರ್ ಕೆಲಸ
ರಶ್ಮಿಕಾ ಮಂದಣ್ಣ
ರಾಜೇಶ್ ದುಗ್ಗುಮನೆ
|

Updated on:Nov 24, 2023 | 11:36 AM

Share

ವಿಜಯ್ ದೇವರಕೊಂಡ ಹಾಗೂ ರಶ್ಮಿಕಾ ಮಂದಣ್ಣ (Rashmika Mandanna) ಪ್ರೀತಿಯಲ್ಲಿದ್ದಾರೆ ಎನ್ನುವ ವಿಚಾರ ಈ ಮೊದಲಿನಿಂದಲೂ ಹರಿದಾಡುತ್ತಲೇ ಇದೆ. ಆದರೆ, ಇದಕ್ಕೆ ಅವರ ಕಡೆಯಿಂದ ಉತ್ತರ ಸಿಕ್ಕಿಲ್ಲ. ಈಗ ಬಾಲಯ್ಯ ಅವರು ನಡೆಸಿಕೊಡುವ ‘ಅನ್​ಸ್ಟಾಪೆಬಲ್ ವಿತ್ ಎನ್​ಬಿಕೆ’ ಶೋಗೆ ಅನಿಮಲ್ ತಂಡ ಆಗಮಿಸಿದೆ. ರಶ್ಮಿಕಾ ಮಂದಣ್ಣ, ರಣಬೀರ್ ಕಪೂರ್ ಹಾಗೂ ಸಿನಿಮಾ ನಿರ್ದೇಶಕ ಸಂದೀಪ್ ರೆಡ್ಡಿ ವಂಗ ವೇದಿಕೆ ಮೇಲೆ ಇದ್ದರು. ಈ ವೇಳೆ ರಶ್ಮಿಕಾ ಪ್ರೀತಿ ವಿಚಾರ ಲೀಕ್ ಆಗಿದೆ.

ವಿಜಯ್​ಗೆ ಕರೆ ಮಾಡುವಂತೆ ರಶ್ಮಿಕಾಗೆ ಕೋರಲಾಗಿದೆ. ಕರೆ ಮಾಡಿ ಲೌಡ್ ಸ್ಪೀಕರ್ ಇಡಲಾಗಿದೆ. ರಶ್ಮಿಕಾ ಕರೆ ಮಾಡಿ ಹೆಲೋ ಎಂದಿದ್ದಾರೆ. ಆ ಕಡೆಯಿಂದ ವಿಜಯ್ ದೇವರಕೊಂಡ ‘ವಾಟ್ಸಪ್​ ರೇ’ ಎಂದು ಪ್ರೀತಿಯಿಂದ ಮಾತು ಆರಂಭಿಸಿದ್ದಾರೆ. ಫೋನ್ ಸ್ಪೀಕರ್​ನಲ್ಲಿ ಇಟ್ಟಿರುವುದಾಗಿ ರಶ್ಮಿಕಾ ಹೇಳಿದ್ದಾರೆ. ಇವರ ಮಧ್ಯೆ ಮಾತುಕತೆ ಮುಂದುವರಿದಿದೆ.

ಇದನ್ನೂ ಓದಿ: ರಶ್ಮಿಕಾ ಮಂದಣ್ಣ ನಟಿಸುತ್ತಿರುವ ಹೊಸ ಹಿಂದಿ ಸಿನಿಮಾ ಯಾವುದು ಗೊತ್ತೆ?

‘ಐ ಲವ್ ಬಾಲ ಸರ್’ ಎಂದಿದ್ದಾರೆ ರಶ್ಮಿಕಾ ಮಂದಣ್ಣ. ‘ಹಾಗಾದರೆ ವಿಜಯ್ ಯಾರನ್ನು ಪ್ರೀತಿಸುತ್ತಿದ್ದಾರೆ’ ಎಂದು ಬಾಲಯ್ಯ ಕೇಳಿದರು. ಇದಕ್ಕೆ ‘ಐ ಲವ್ ಸಂದೀಪ್ ರೆಡ್ಡಿ ವಂಗ’ ಎಂದಿದ್ದಾರೆ ವಿಜಯ್. ಅವರ ಮಾತಲ್ಲಿ ಸಖತ್ ಫನ್ ಇತ್ತು.

ಇದನ್ನೂ ಓದಿ:ಪತಿ ರಣಬೀರ್ ಕಪೂರ್​ ಬಗ್ಗೆ ಟಾಕ್ಸಿಕ್​ ಎಂದವರಿಗೆ ತಿರುಗೇಟು ನೀಡಿದ ಆಲಿಯಾ ಭಟ್​

ರಣಬೀರ್ ಕಪೂರ್ ಅವರು ರಶ್ಮಿಕಾ ಮಂದಣ್ಣ ಹಾಗೂ ಸಂದೀಪ್ ರೆಡ್ಡಿ ವಂಗ ಭೇಟಿ ಬಗ್ಗೆ ಮಾತನಾಡಿದ್ದಾರೆ. ‘ಅರ್ಜುನ್ ರೆಡ್ಡಿ ಸಕ್ಸಸ್ ಪಾರ್ಟಿ ವಿಜಯ್ ದೇವರಕೊಂಡ ಮನೆಯಲ್ಲಿ ನಡೆಯಿತು. ವಿಜಯ್ ಮನೆಯ ಟೆರೇಸ್​ನಲ್ಲಿ ರಶ್ಮಿಕಾನ ಸಂದೀಪ್ ಮೊದಲ ಭಾರಿ ಭೇಟಿ ಮಾಡಿದ್ದರು’ ಎಂದು ಅಸಲಿ ವಿಚಾರ ಬಿಚ್ಚಿಟ್ಟಿದ್ದಾರೆ. ‘ಈ ರೀತಿಯ ಮಾಹಿತಿಯನ್ನು ಅವರು ಯಾಕೆ ಲೀಕ್ ಮಾಡುತ್ತಿದ್ದಾರೆ ಎಂಬುದು ನನಗೆ ಗೊತ್ತಿಲ್ಲ’ ಎಂದು ಹೇಳಿದ್ದಾರೆ ರಶ್ಮಿಕಾ. ಈ ವಿಡಿಯೋ ಸಖತ್ ಫನ್ನಿ ಆಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 10:41 am, Fri, 24 November 23

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು