ಬಾಲಯ್ಯ ಶೋನಲ್ಲಿ ರಶ್ಮಿಕಾ ಮಂದಣ್ಣ ಲವ್ ವಿಚಾರ ಲೀಕ್; ಇದೆಲ್ಲ ರಣಬೀರ್ ಕೆಲಸ

ಬಾಲಯ್ಯ ಅವರು ನಡೆಸಿಕೊಡುವ ‘ಅನ್​ಸ್ಟಾಪೆಬಲ್ ವಿತ್ ಎನ್​ಬಿಕೆ’ ಶೋಗೆ ಅನಿಮಲ್ ತಂಡ ಆಗಮಿಸಿದೆ. ರಶ್ಮಿಕಾ ಮಂದಣ್ಣ, ರಣಬೀರ್ ಕಪೂರ್ ಹಾಗೂ ಸಿನಿಮಾ ನಿರ್ದೇಶಕ ಸಂದೀಪ್ ರೆಡ್ಡಿ ವಂಗ ವೇದಿಕೆ ಮೇಲೆ ಇದ್ದರು. ಈ ವೇಳೆ ರಶ್ಮಿಕಾ ಪ್ರೀತಿ ವಿಚಾರ ಲೀಕ್ ಆಗಿದೆ.

ಬಾಲಯ್ಯ ಶೋನಲ್ಲಿ ರಶ್ಮಿಕಾ ಮಂದಣ್ಣ ಲವ್ ವಿಚಾರ ಲೀಕ್; ಇದೆಲ್ಲ ರಣಬೀರ್ ಕೆಲಸ
ರಶ್ಮಿಕಾ ಮಂದಣ್ಣ
Follow us
|

Updated on:Nov 24, 2023 | 11:36 AM

ವಿಜಯ್ ದೇವರಕೊಂಡ ಹಾಗೂ ರಶ್ಮಿಕಾ ಮಂದಣ್ಣ (Rashmika Mandanna) ಪ್ರೀತಿಯಲ್ಲಿದ್ದಾರೆ ಎನ್ನುವ ವಿಚಾರ ಈ ಮೊದಲಿನಿಂದಲೂ ಹರಿದಾಡುತ್ತಲೇ ಇದೆ. ಆದರೆ, ಇದಕ್ಕೆ ಅವರ ಕಡೆಯಿಂದ ಉತ್ತರ ಸಿಕ್ಕಿಲ್ಲ. ಈಗ ಬಾಲಯ್ಯ ಅವರು ನಡೆಸಿಕೊಡುವ ‘ಅನ್​ಸ್ಟಾಪೆಬಲ್ ವಿತ್ ಎನ್​ಬಿಕೆ’ ಶೋಗೆ ಅನಿಮಲ್ ತಂಡ ಆಗಮಿಸಿದೆ. ರಶ್ಮಿಕಾ ಮಂದಣ್ಣ, ರಣಬೀರ್ ಕಪೂರ್ ಹಾಗೂ ಸಿನಿಮಾ ನಿರ್ದೇಶಕ ಸಂದೀಪ್ ರೆಡ್ಡಿ ವಂಗ ವೇದಿಕೆ ಮೇಲೆ ಇದ್ದರು. ಈ ವೇಳೆ ರಶ್ಮಿಕಾ ಪ್ರೀತಿ ವಿಚಾರ ಲೀಕ್ ಆಗಿದೆ.

ವಿಜಯ್​ಗೆ ಕರೆ ಮಾಡುವಂತೆ ರಶ್ಮಿಕಾಗೆ ಕೋರಲಾಗಿದೆ. ಕರೆ ಮಾಡಿ ಲೌಡ್ ಸ್ಪೀಕರ್ ಇಡಲಾಗಿದೆ. ರಶ್ಮಿಕಾ ಕರೆ ಮಾಡಿ ಹೆಲೋ ಎಂದಿದ್ದಾರೆ. ಆ ಕಡೆಯಿಂದ ವಿಜಯ್ ದೇವರಕೊಂಡ ‘ವಾಟ್ಸಪ್​ ರೇ’ ಎಂದು ಪ್ರೀತಿಯಿಂದ ಮಾತು ಆರಂಭಿಸಿದ್ದಾರೆ. ಫೋನ್ ಸ್ಪೀಕರ್​ನಲ್ಲಿ ಇಟ್ಟಿರುವುದಾಗಿ ರಶ್ಮಿಕಾ ಹೇಳಿದ್ದಾರೆ. ಇವರ ಮಧ್ಯೆ ಮಾತುಕತೆ ಮುಂದುವರಿದಿದೆ.

ಇದನ್ನೂ ಓದಿ: ರಶ್ಮಿಕಾ ಮಂದಣ್ಣ ನಟಿಸುತ್ತಿರುವ ಹೊಸ ಹಿಂದಿ ಸಿನಿಮಾ ಯಾವುದು ಗೊತ್ತೆ?

‘ಐ ಲವ್ ಬಾಲ ಸರ್’ ಎಂದಿದ್ದಾರೆ ರಶ್ಮಿಕಾ ಮಂದಣ್ಣ. ‘ಹಾಗಾದರೆ ವಿಜಯ್ ಯಾರನ್ನು ಪ್ರೀತಿಸುತ್ತಿದ್ದಾರೆ’ ಎಂದು ಬಾಲಯ್ಯ ಕೇಳಿದರು. ಇದಕ್ಕೆ ‘ಐ ಲವ್ ಸಂದೀಪ್ ರೆಡ್ಡಿ ವಂಗ’ ಎಂದಿದ್ದಾರೆ ವಿಜಯ್. ಅವರ ಮಾತಲ್ಲಿ ಸಖತ್ ಫನ್ ಇತ್ತು.

ಇದನ್ನೂ ಓದಿ:ಪತಿ ರಣಬೀರ್ ಕಪೂರ್​ ಬಗ್ಗೆ ಟಾಕ್ಸಿಕ್​ ಎಂದವರಿಗೆ ತಿರುಗೇಟು ನೀಡಿದ ಆಲಿಯಾ ಭಟ್​

ರಣಬೀರ್ ಕಪೂರ್ ಅವರು ರಶ್ಮಿಕಾ ಮಂದಣ್ಣ ಹಾಗೂ ಸಂದೀಪ್ ರೆಡ್ಡಿ ವಂಗ ಭೇಟಿ ಬಗ್ಗೆ ಮಾತನಾಡಿದ್ದಾರೆ. ‘ಅರ್ಜುನ್ ರೆಡ್ಡಿ ಸಕ್ಸಸ್ ಪಾರ್ಟಿ ವಿಜಯ್ ದೇವರಕೊಂಡ ಮನೆಯಲ್ಲಿ ನಡೆಯಿತು. ವಿಜಯ್ ಮನೆಯ ಟೆರೇಸ್​ನಲ್ಲಿ ರಶ್ಮಿಕಾನ ಸಂದೀಪ್ ಮೊದಲ ಭಾರಿ ಭೇಟಿ ಮಾಡಿದ್ದರು’ ಎಂದು ಅಸಲಿ ವಿಚಾರ ಬಿಚ್ಚಿಟ್ಟಿದ್ದಾರೆ. ‘ಈ ರೀತಿಯ ಮಾಹಿತಿಯನ್ನು ಅವರು ಯಾಕೆ ಲೀಕ್ ಮಾಡುತ್ತಿದ್ದಾರೆ ಎಂಬುದು ನನಗೆ ಗೊತ್ತಿಲ್ಲ’ ಎಂದು ಹೇಳಿದ್ದಾರೆ ರಶ್ಮಿಕಾ. ಈ ವಿಡಿಯೋ ಸಖತ್ ಫನ್ನಿ ಆಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 10:41 am, Fri, 24 November 23

ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ