AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಪ್ಪು ನಟಿಸಬೇಕಿದ್ದ ‘ರಂಗ ಸಮುದ್ರ’ ಸಿನಿಮಾ ಬಿಡುಗಡೆ ದಿನಾಂಕ ನಿಗದಿ

Rangasamudra: ಟ್ರೈಲರ್, ಹಾಡು, ಸಂದೇಶದ ಕಾರಣಕ್ಕೆ ಗಮನ ಸೆಳೆದಿರುವ ‘ರಂಗಸಮುದ್ರ’ ಸಿನಿಮಾದ ಬಿಡುಗಡೆ ದಿನಾಂಕ ಘೋಷಿಸಲಾಗಿದೆ.

ಅಪ್ಪು ನಟಿಸಬೇಕಿದ್ದ ‘ರಂಗ ಸಮುದ್ರ’ ಸಿನಿಮಾ ಬಿಡುಗಡೆ ದಿನಾಂಕ ನಿಗದಿ
ಮಂಜುನಾಥ ಸಿ.
|

Updated on: Jan 07, 2024 | 9:42 PM

Share

ಪುನೀತ್ ರಾಜ್​ಕುಮಾರ್ (Puneeth Rajkumar) ನಟಿಸಬೇಕಿದ್ದ ‘ರಂಗಸಮುದ್ರ’ ಸಿನಿಮಾ ತಮ್ಮ ಕಥಾವಸ್ತು, ಟ್ರೈಲರ್, ನಟರು ಹಾಡುಗಳ ಕಾರಣದಿಂದ ಸದ್ದಾಗುತ್ತಿದೆ. ಸಿನಿಮಾದ ಕುರಿತು ನಿರೀಕ್ಷೆ ಹೆಚ್ಚಾಗಿರುವ ಬೆನ್ನಲ್ಲೆ ಚಿತ್ರತಂಡವು ಸಿನಿಮಾದ ಬಿಡುಗಡೆ ದಿನಾಂಕ ಘೋಷಣೆ ಮಾಡಿದೆ. ಸಂಕ್ರಾಂತಿ ಬಳಿಕ ‘ರಂಗಸಮುದ್ರ’ ಚಿತ್ರಮಂದಿರಗಳಲ್ಲಿ ತೆರೆಗೆ ಬರಲಿದೆ.

ಹೊಯ್ಸಳ ಕ್ರಿಯೇಷನ್ಸ್ ಲಾಂಛನದಲ್ಲಿ ಹೊಯ್ಸಳ ಕೋಣನೂರು ನಿರ್ಮಿಸಿರುವ, ರಾಜಕುಮಾರ್ ಅಸ್ಕಿ ನಿರ್ದೇಶಿಸಿ, ರಂಗಾಯಣ ರಘು ಹಾಗೂ ದಕ್ಷಿಣ ಭಾರತದ ಖ್ಯಾತ ನಟ ಸಂಪತ್ ರಾಜ್ ಇನ್ನಿತರರು ಪ್ರಮುಖಪಾತ್ರದಲ್ಲಿ ನಟಿಸಿರಯವ ‘ರಂಗ ಸಮುದ್ರ’ ಸಿನಿಮಾ ಜನವರಿ 19ರಂದು ಬಿಡುಗಡೆ ಆಗಲಿದೆ. ಜಂಕಾರ್ ಮ್ಯೂಸಿಕ್ ಮೂಲಕ ಬಿಡುಗಡೆಯಾಗಿರುವ ಚಿತ್ರದ ಹಾಡುಗಳು ಹಾಗೂ ಟ್ರೇಲರ್ ಮೂಲಕ “ರಂಗ ಸಮುದ್ರ” ಈಗಾಗಲೇ ಜನರ ಮನ ಗೆದ್ದಿದೆ. ಜಾನಪದ ಸೊಗಡಿನ ಹಾಗೂ ಕೌಟುಂಬಿಕ ಮನರಂಜನೆಯ ಕಥಾಹಂದರ ಹೊಂದಿರುವ ಈ ಚಿತ್ರದ ಬಗ್ಗೆ ಸಾಕಷ್ಟು ನಿರೀಕ್ಷೆಯಿದೆ.

ಇದನ್ನೂ ಓದಿ:ಪುನೀತ್ ರಾಜ್​ಕುಮಾರ್ ಎರಡನೇ ಪುಣ್ಯ ಸ್ಮರಣೆ, ಭರದಿಂದ ನಡೆದಿದೆ ತಯಾರಿ

ವಾಗೀಶ್ ಚನ್ನಗಿರಿ ಈ ಚಿತ್ರದ ಹಾಡುಗಳನ್ನು ಬರೆದಿದ್ದು, ದೇಸಿ ಮೋಹನ್ ಸಂಗೀತ ನೀಡಿದ್ದಾರೆ. ಆಸ್ಕರ್ ವಿಜೇತ ಕೀರವಾಣಿ, ಕೈಲಾಶ್ ಖೇರ್, ವಿಜಯ ಪ್ರಕಾಶ್, ನವೀನ್ ಸಜ್ಜು ಮುಂತಾದ ಖ್ಯಾತ ಗಾಯಕರು ಹಾಡುಗಳನ್ನು ಹಾಡಿದ್ದಾರೆ. ಆರ್ ಗಿರಿ ಛಾಯಾಗ್ರಹಣ, ಶ್ರೀಕಾಂತ್ ಸಂಕಲನ ಹಾಗೂ ಧನಂಜಯ ಅವರ ನೃತ್ಯ ನಿರ್ದೇಶನ ಈ ಚಿತ್ರಕ್ಕಿದೆ. ರಾಘವೇಂದ್ರ ರಾಜಕುಮಾರ್ ಅವರು ಈ ಚಿತ್ರದ ವಿಶೇಷ ಪಾತ್ರದಲ್ಲಿ ಅಭಿನಯಿಸಿದ್ದಾರೆ. ರಂಗಾಯಣ ರಘು, ಸಂಪತ್ ರಾಜ್, ಕೆವಿಆರ್, ದಿವ್ಯ ಗೌಡ, ಮೂಗುರು ಸುರೇಶ್, ಉಗ್ರಂ ಮಂಜು, ಸ್ಕಂದ ಮುಂತಾದವರು ತಾರಾಬಳಗದಲ್ಲಿದ್ದಾರೆ.

ಈ ಸಿನಿಮಾದಲ್ಲಿ ಪುನೀತ್ ರಾಜ್​ಕುಮಾರ್ ಅವರು ಪ್ರಮುಖ ಪಾತ್ರವೊಂದಕ್ಕೆ ಬಣ್ಣ ಹಚ್ಚಬೇಕಿತ್ತು. ಕೋವಿಡ್​ಗೆ ಮುನ್ನವೇ ಸಿನಿಮಾದ ಕತೆ ಕೇಳಿ ನಟಿಸಲು ಒಪ್ಪಿಗೆ ಸಹ ಸೂಚಿಸಿದ್ದರು. ಆದರೆ ದುರಾದೃಷ್ಟವಶಾತ್ ಸಿನಿಮಾದ ಚಿತ್ರೀಕರಣ ಪ್ರಾರಂಭವಾಗುವ ಮುನ್ನವೇ ಇಹಲೋಕ ತ್ಯಜಿಸಿದರು. ಪುನೀತ್ ನಟಿಸಬೇಕಿದ್ದ ಈ ಸಿನಿಮಾದಲ್ಲಿ ಇದೀಗ ರಾಘವೇಂದ್ರ ರಾಜ್​ಕುಮಾರ್ ನಟಿಸಿದ್ದಾರೆ. ಶಿಕ್ಷಣ, ಬಡತನ, ಅಸಮಾನತೆ, ಜನಪದ, ದಬ್ಬಾಳಿಕೆ ಇನ್ನೂ ಹಲವು ವಿಷಯಗಳ ಮೇಲೆ ಸಿನಿಮಾದ ಕತೆ ಹೆಣೆಯಲಾಗಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!