ಚಿತ್ರರಂಗದಲ್ಲಿ ರಂಗಾಯಣ ರಘು ‘ಹೊಸ ಜೀವನ’; 400ನೇ ಸಿನಿಮಾ ಒಪ್ಪಿಕೊಂಡ ನಟ

ರಂಗಭೂಮಿಯಿಂದ ಬಂದು ಚಿತ್ರರಂಗದಲ್ಲಿ ನೆಲೆಕಂಡುಕೊಂಡಿರುವ ಖ್ಯಾತ ನಟ ರಂಗಾಯಣ ರಘು ಅವರ ಸಿನಿಪಯಣದಲ್ಲಿ ಈಗ ‘ಹೊಸ ಜೀವನ’ ಶುರುವಾಗಿದೆ. ಅದಕ್ಕೆ ನಟ ಡಾಲಿ ಧನಂಜಯ ಅವರು ಶುಭ ಹಾರೈಸಿದ್ದಾರೆ. ‘ಹೊಸ ಜೀವನ’ದ ಬಗ್ಗೆ ರಂಗಾಯಣ ರಘು ಅವರ ಅಭಿಮಾನಿಗಳಿಗೆ ಭಾರಿ ನಿರೀಕ್ಷೆ ಮೂಡಿದೆ.

ಚಿತ್ರರಂಗದಲ್ಲಿ ರಂಗಾಯಣ ರಘು ‘ಹೊಸ ಜೀವನ’; 400ನೇ ಸಿನಿಮಾ ಒಪ್ಪಿಕೊಂಡ ನಟ
Rangayana Raghu

Updated on: Jun 14, 2026 | 2:46 PM

ಕನ್ನಡ ಚಿತ್ರರಂಗದಲ್ಲಿ ನಟ ರಂಗಾಯಣ ರಘು (Rangayana Raghu) ಅವರು ತಮ್ಮದೇ ಛಾಪು ಮೂಡಿಸಿದ್ದಾರೆ. ಅವರ ನಟನೆ, ಡೈಲಾಗ್ ಡೆಲಿವರಿಗೆ ಅಭಿಮಾನಿಗಳು ಫುಲ್ ಮಾರ್ಕ್ಸ್ ನೀಡುತ್ತಾರೆ. ಸ್ಯಾಂಡಲ್​ವುಡ್​ನ ಬಹುಬೇಡಿಕೆಯ ನಟ ಅವರು. ಯಾವುದೇ ಪಾತ್ರ ಕೊಟ್ಟರೂ ಅದನ್ನು ಸಲೀಸಾಗಿ ನಿಭಾಯಿಸುವಂತಹ ಪ್ರತಿಭಾವಂತ ಕಲಾವಿದ ರಂಗಾಯಣ ರಘು. ಈಗ ಅವರು ತಮ್ಮ ವೃತ್ತಿಬದುಕಿನಲ್ಲಿ ‘ಹೊಸ ಜೀವನ’ (Hosa Jeevana) ಆರಂಭಿಸುತ್ತಿದ್ದಾರೆ. ಏನಿದು ಹೊಸ ಜೀವನ? ಮುಂದೆ ಓದಿ..

ಈವರೆಗೂ ರಂಗಾಯಣ ರಘು ಅವರು ನೂರಾರು ಪಾತ್ರಗಳನ್ನು ಮಾಡಿ ಸೈ ಎನಿಸಿಕೊಂಡಿದ್ದಾರೆ. ಇಷ್ಟು ವರ್ಷಗಳ ವೃತ್ತಿಜೀವನದಲ್ಲಿ ಅವರು ಬರೋಬ್ಬರಿ 399 ಸಿನಿಮಾಗಳಲ್ಲಿ ನಟಿಸಿದ್ದಾರೆ. ಈಗ ಅವರು 400ನೇ ಸಿನಿಮಾ ಒಪ್ಪಿಕೊಂಡಿದ್ದಾರೆ. ಈ ಮೈಲಿಗಲ್ಲಿನ ಸಿನಿಮಾ ಬಗ್ಗೆ ಮಾಹಿತಿ ಹೊರಬಿದ್ದಿದೆ. ಈ ಸಿನಿಮಾದ ಹೆಸರೇ ‘ಹೊಸ ಜೀವನ’ ಎಂಬುದು ವಿಶೇಷ.

ರಂಗಾಯಣ ರಘು ಅವರ 400ನೇ ಸಿನಿಮಾ ಎಂಬ ಕಾರಣದಿಂದಲೇ ‘ಹೊಸ ಜೀವನ’ ಕೌತುಕ ಮೂಡಿಸಿದೆ. ಈ ಆಕರ್ಷಕ ಶೀರ್ಷಿಕೆಯ ಸಿನಿಮಾಗೆ ಡಾಲಿ ಧನಂಜಯ ಅವರು ಸಾಥ್ ನೀಡಿದ್ದಾರೆ. ಡಾಲಿ ಧನಂಜಯ ಅವರು ‘ಹೊಸ ಜೀವನ’ ಸಿನಿಮಾದ ಟೈಟಲ್ ಲಾಂಚ್ ಮಾಡಿ ಇಡೀ ತಂಡಕ್ಕೆ ಶುಭಾಶಯ ತಿಳಿಸಿದ್ದಾರೆ. ಚಿತ್ರತಂಡದ ಬಗ್ಗೆ ವಿವರ ಸಿಕ್ಕಿದೆ. ಇದು ಸ್ನೇಹ, ಪ್ರೀತಿ, ಜೀವನದ ಹೋರಾಟ ಮತ್ತು ಮೌಲ್ಯಗಳ ಕಥೆ ಇರುವ ಸಿನಿಮಾ ಎಂದು ಚಿತ್ರತಂಡ ಹೇಳಿದೆ.

ಹಲವು ಕಿರುಚಿತ್ರಗಳನ್ನು ನಿರ್ದೇಶಿಸಿ ಅನುಭವ ಪಡೆದಿರುವ ಮೋಹನ್ ಕುಮಾರ್ ಹನುಮಯ್ಯ ಅವರು ‘ಹೊಸ ಜೀವನ’ ಸಿನಿಮಾ ಮೂಲಕ ಪೂರ್ಣ ಪ್ರಮಾಣದ ನಿರ್ದೇಶಕರಾಗಿ ಬಡ್ತಿ ಪಡೆದಿದ್ದಾರೆ. ಅವರ ನಿರ್ದೇಶನದಲ್ಲಿ ಮೂಡಿ ಬರುತ್ತಿರುವ ಈ ಸಿನಿಮಾದಲ್ಲಿ ‌ರಂಗಾಯಣ ರಘು ಮಾತ್ರವಲ್ಲದೇ ಪ್ರಭು ಮುಂಡ್ಕೂರ್, ಸ್ವಾತಿ ಮುಪ್ಪಾಲ, ಶಿವರಾಜ್ ಕೆ.ಆರ್. ಪೇಟೆ, ಅಚ್ಯುತ್ ಕುಮಾರ್, ಸುಹಾಸ್ ಅತ್ರೆಯಸ್, ಉದಯ್ ಆಚಾರ್, ಅಭಿ ಸಾಮ್ರಾಟ್ ಮುಂತಾದವರು ನಟಿಸುತ್ತಿದ್ದಾರೆ.

ಇದನ್ನೂ ಓದಿ: ಒರಿಜಿನಲ್ ರಂಗಾಯಣ ರಘುವಿಗೆ ಡುಪ್ಲಿಕೇಟ್ ರಂಗಾಯಣ ರಘು ಸಿಕ್ಕಾಗ

ಈ ಸಿನಿಮಾಗೆ ಜಿ.ಎಸ್. ಸಂಜೀವ್ ಪ್ರಸಾದ್ ಅವರು ಬಂಡವಾಳ ಹೂಡಿದ್ದಾರೆ. ಮೋಹನ್ ಕುಮಾರ್ ಹನುಮಯ್ಯ ಅವರು ನಿರ್ದೇಶನದ ಜೊತೆಗೆ ನಿರ್ಮಾಣದಲ್ಲೂ ಸಾಥ್ ನೀಡಿದ್ದಾರೆ. ‘ಅರ್ಜುನ್ ಪ್ರೊಡಕ್ಷನ್’ ಮತ್ತು ‘ಚಿರು ಪ್ರೊಡಕ್ಷನ್’ ಜಂಟಿಯಾಗಿ ‘ಹೊಸ ಜೀವನ’ ಸಿನಿಮಾವನ್ನು ನಿರ್ಮಾಣ ಮಾಡುತ್ತಿವೆ. ಸುಮುಖ ರಾವ್ ಅವರ ಸಂಗೀತ ನಿರ್ದೇಶನ, ಸುನಾದ್ ಗೌತಮ್ ಅವರ ಹಿನ್ನೆಲೆ ಸಂಗೀತ, ಶಶಿಧರ್ ಗೌಡ ಅವರ ಸಂಕಲನ, ರಾಜ್ ಕಾಂತ್ ಎಸ್. ಅವರ ಛಾಯಾಗ್ರಹಣ, ಪ್ರತಾಪ್ ಎಂ.ಆರ್. ಅವರ ಸಂಭಾಷಣೆ ಈ ಸಿನಿಮಾಗೆ ಇರಲಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಮದನ್​ ಕುಮಾರ್​

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
Follow Us