AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಶಾಖಾಹಾರಿ’ ಸಿನಿಮಾಗೆ ರಂಗಾಯಣ ರಘು ಹೀರೋ; ಯೋಗರಾಜ್ ಭಟ್ ರಿಲೀಸ್​ ಮಾಡಿದ ಟೈಟಲ್​ ಪೋಸ್ಟರ್​

ರಂಗಾಯಣ ರಘು ನಟನೆಯ ‘ಶಾಖಾಹಾರಿ’ ಚಿತ್ರದ ಶೀರ್ಷಿಕೆ ಗಮನ ಸೆಳೆಯುತ್ತಿದೆ. ರಂಗಾಯಣ ರಘು ಜೊತೆ ಹಲವು ವರ್ಷಗಳಿಂದ ಒಡನಾಟ ಹೊಂದಿರುವ ಯೋಗರಾಜ್ ಭಟ್ ಅವರು ಈ ಸಿನಿಮಾದ ಶೀರ್ಷಿಕೆ ಪೋಸ್ಟರ್​ ರಿಲೀಸ್​ ಮಾಡಿ ಶುಭ ಹಾರೈಸಿದ್ದಾರೆ. ಇದರ ಚಿತ್ರೀಕರಣ ಮುಗಿದ್ದು, ಸದ್ಯಕ್ಕೆ ಪೋಸ್ಟ್​ ಪ್ರೊಡಕ್ಷನ್​ ಕೆಲಸಗಳು ನಡೆಯುತ್ತಿವೆ.

‘ಶಾಖಾಹಾರಿ’ ಸಿನಿಮಾಗೆ ರಂಗಾಯಣ ರಘು ಹೀರೋ; ಯೋಗರಾಜ್ ಭಟ್ ರಿಲೀಸ್​ ಮಾಡಿದ ಟೈಟಲ್​ ಪೋಸ್ಟರ್​
ರಂಗಾಯಣ ರಘು
ಮದನ್​ ಕುಮಾರ್​
|

Updated on: Aug 30, 2023 | 12:01 PM

Share

ನಟ ರಂಗಾಯಣ ರಘು (Rangayana Raghu) ಅವರು ಕನ್ನಡ ಚಿತ್ರರಂಗದಲ್ಲಿ ತಮ್ಮದೇ ಛಾಪು ಮೂಡಿಸಿದ್ದಾರೆ. ಹಲವು ಬಗೆಯ ಪಾತ್ರಗಳನ್ನು ಮಾಡಿ ಅವರು ಸೈ ಎನಿಸಿಕೊಂಡಿದ್ದಾರೆ. ರಂಗಭೂಮಿಯ ಹಿನ್ನೆಲೆಯಿಂದ ಬಂದಿರುವ ಅವರು ಯಾವ ಪಾತ್ರ ಕೊಟ್ಟರೂ ಅದಕ್ಕೆ ನ್ಯಾಯ ಸಲ್ಲಿಸುತ್ತಾರೆ. ಕಾಮಿಡಿ ಆದರೂ ಸೈ, ಎಮೋಷನಲ್​ ದೃಶ್ಯವಾದರೂ ಸೈ ಎಂಬಂತಹ ಪ್ರತಿಭಾವಂತ ಕಲಾವಿದ ಅವರು. ಪೋಷಕ ಪಾತ್ರಗಳ ಮೂಲಕ ಭಾರಿ ಬೇಡಿಕೆ ಸೃಷ್ಟಿಕೊಂಡಿರುವ ಅವರು ಈಗ ‘ಶಾಖಾಹಾರಿ’ (Shakahari) ಸಿನಿಮಾದಲ್ಲಿ ಮುಖ್ಯ ಭೂಮಿಕೆ ನಿಭಾಯಿಸುತ್ತಿದ್ದಾರೆ. ಈ ಸಿನಿಮಾದ ಟೈಟಲ್​ ಪೋಸ್ಟರ್​ ಅನಾವರಣ ಆಗಿದೆ. ಇದನ್ನು ಯೋಗರಾಜ್​ ಭಟ್​ (Yogaraj Bhat) ಅವರು ಬಿಡುಗಡೆ ಮಾಡಿದ್ದಾರೆ.

ರಾಜೇಶ್ ಕೀಳಂಬಿ ಮತ್ತು ರಂಜಿನಿ ಪ್ರಸನ್ನ ಅವರು ಜೊತೆಗೂಡಿ ‘ಕೀಳಂಬಿ ಮೀಡಿಯಾ ಲ್ಯಾಬ್’ ಸಂಸ್ಥೆಯ ಮೂಲಕ ಮೊದಲ ಬಾರಿಗೆ ನಿರ್ಮಾಣ ಮಾಡುತ್ತಿರುವ ‘ಶಾಖಾಹಾರಿ’ ಚಿತ್ರದ ಶೀರ್ಷಿಕೆ ಗಮನ ಸೆಳೆಯುತ್ತಿದೆ. ರಂಗಾಯಣ ರಘು ಜೊತೆ ಹಲವು ವರ್ಷಗಳಿಂದ ಒಡನಾಟ ಹೊಂದಿರುವ ಯೋಗರಾಜ್ ಭಟ್ ಅವರು ಈ ಸಿನಿಮಾದ ಶೀರ್ಷಿಕೆ ಪೋಸ್ಟರ್​ ಅನ್ನು ರಿಲೀಸ್​ ಮಾಡಿ ಶುಭ ಹಾರೈಸಿದ್ದಾರೆ.

ಇದನ್ನೂ ಓದಿ: ದಳಪತಿ ವಿಜಯ್​ ಮಗ ಜೇಸನ್​ ಸಂಜಯ್​ ಈಗ ಡೈರೆಕ್ಟರ್​; ‘ಲೈಕಾ ಪ್ರೊಡಕ್ಷನ್ಸ್’ ಜೊತೆ ಕೈ ಜೋಡಿಸಿದ ಸ್ಟಾರ್​ ಕಿಡ್​

ಈ ಸಿನಿಮಾದ ಮೋಷನ್​ ಪೋಸ್ಟರ್​ ನೋಡಿ ಸಿನಿಪ್ರಿಯರಲ್ಲಿ ಕೌತುಕ ಮೂಡಿದೆ. ಮಲೆನಾಡಿನ ತೀರ್ಥಹಳ್ಳಿಯ ಒಂದು ಊರಿನಲ್ಲಿ ನಡೆಯುವ ಒಂದಷ್ಟು ನಿಗೂಢ ಘಟನೆಗಳ ಸುತ್ತಮುತ್ತ ಈ ಸಿನಿಮಾದ ಕಥೆ ಸಾಗುತ್ತದೆ. ಹೋಟೆಲ್​ನಲ್ಲಿ ಅಡುಗೆ ಮಾಡುವ ಭಟ್ಟನಾಗಿ ರಂಗಾಯಣ ರಘು ಅವರು ಕಾಣಿಸಿಕೊಳ್ಳುತ್ತಿದ್ದಾರೆ. ಪೊಲೀಸ್​ ಅಧಿಕಾರಿ ಪಾತ್ರದಲ್ಲಿ ಗೋಪಾಲಕೃಷ್ಣ ದೇಶಪಾಂಡೆ ನಟಿಸಿದ್ದಾರೆ. ಸುಜಯ್ ಶಾಸ್ತ್ರಿ ಕೂಡ ಈ ಸಿನಿಮಾದ ಒಂದು ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ. ಪ್ರತಿಮಾ ನಾಯಕ್, ಹರಿಣಿ, ವಿನಯ್ ಯು.ಜೆ., ಶ್ರೀಹರ್ಷ ಗೋಭಟ್ಟ, ನಿಧಿ ಹೆಗ್ಡೆ ಮುಂತಾದವರು ಈ ಸಿನಿಮಾದ ಪಾತ್ರವರ್ಗದಲ್ಲಿ ಇದ್ದಾರೆ.

ಇದನ್ನೂ ಓದಿ: ವರಮಹಾಲಕ್ಷ್ಮಿ ಹಬ್ಬದ ಪ್ರಯಕ್ತ ‘ತುಕ್ರ-ತನಿಯ’ ಪೋಸ್ಟರ್​ ಬಿಡುಗಡೆ; ಏನು ಇದರ ಅರ್ಥ?

ವಿಶ್ವಜಿತ್ ರಾವ್ ಅವರು ‘ಶಾಖಾಹಾರಿ’ ಸಿನಿಮಾಗೆ ಛಾಯಾಗ್ರಹಣ ಮಾಡಿದ್ದಾರೆ, ಶಶಾಂಕ್ ನಾರಾಯಣ ಅವರ ಸಂಕಲನ, ಮಯೂರ್ ಅಂಬೆಕಲ್ಲು ಅವರ ಸಂಗೀತದಲ್ಲಿ ಈ ಸಿನಿಮಾ ಮೂಡಿಬರುತ್ತಿದೆ. ಆಶಿಕ್ ಕುಸುಗೊಳ್ಳಿ ಅವರು ಗ್ರೇಡಿಂಗ್ ಮಾಡುತ್ತಿದ್ದಾರೆ. ಈ ಸಿನಿಮಾದ ಚಿತ್ರೀಕರಣ ಮುಗಿದಿದ್ದು, ಸದ್ಯಕ್ಕೆ ಪೋಸ್ಟ್​ ಪ್ರೊಡಕ್ಷನ್​ ಕೆಲಸಗಳು ನಡೆಯುತ್ತಿವೆ. ಪೂರ್ತಿ ಮಲೆನಾಡಿನಲ್ಲೇ ಚಿತ್ರೀಕರಣ ಆಗಿರುವ ‘ಶಾಖಾಹಾರಿ’ ಸಿನಿಮಾದಲ್ಲಿ ಮಲೆನಾಡಿನ ಅನೇಕರು ಕೆಲಸ ಮಾಡಿದ್ದಾರೆ ಎಂಬುದು ವಿಶೇಷ.

ಇದನ್ನೂ ಓದಿ: ಚಿರಂಜೀವಿ ಜನ್ಮದಿನಕ್ಕೆ ಘೋಷಣೆ ಆಯ್ತು ಹೊಸ ಸಿನಿಮಾ; 157ನೇ ಚಿತ್ರಕ್ಕೆ ನಿರ್ದೇಶಕ ಯಾರು?

ರಂಗಾಯಣ ರಘು ಅವರ ಈ ಹಿಂದಿನ ಸಿನಿಮಾಗಳಿಂದ ‘ಶಾಖಾಹಾರಿ’ ಚಿತ್ರ ಸಖತ್​ ಡಿಫರೆಂಟ್​ ಆಗಿರಲಿದೆ ಎಂದು ಚಿತ್ರತಂಡ ಹೇಳಿಕೊಂಡಿದೆ. ಸಂದೀಪ್ ಸುಂಕದ್ ಅವರು ಈ ಸಿನಿಮಾಗೆ ನಿರ್ದೇಶ ಮಾಡಿದ್ದಾರೆ. ಈಗಾಗಲೇ ಕೆಲವು ಕಿರುಚಿತ್ರಗಳನ್ನು ನಿರ್ದೇಶಿಸಿರುವ ಅನುಭವ ಅವರಿಗೆ ಇದೆ. ಸಹ-ನಿರ್ದೇಶಕನಾಹಗಿ, ಬರಹಗಾರರಾಗಿ ಅವರು ಅನುಭವ ಪಡೆದಿದ್ದಾರೆ. ‘ಶಾಖಾಹಾರಿ’ ಚಿತ್ರಕ್ಕೆ ಸಂದೀಪ್ ಸುಂಕದ್ ಅವರೇ ಕಥೆ ಬರೆದಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ದೆಹಲಿ: ಶಿಕ್ಷಣ ಸಚಿವಾಲಯದ ಕಚೇರಿಯಲ್ಲಿ ಅಗ್ನಿ ಅವಘಡ
ದೆಹಲಿ: ಶಿಕ್ಷಣ ಸಚಿವಾಲಯದ ಕಚೇರಿಯಲ್ಲಿ ಅಗ್ನಿ ಅವಘಡ
ವಾಣಿಜ್ಯ LPG ಸಿಲಿಂಡರ್ ಬೆಲೆ ಏರಿಕೆ: ಹೋಟೆಲ್ ಊಟ-ತಿಂಡಿ ದರ ಹೆಚ್ಚಾಗುತ್ತಾ?
ವಾಣಿಜ್ಯ LPG ಸಿಲಿಂಡರ್ ಬೆಲೆ ಏರಿಕೆ: ಹೋಟೆಲ್ ಊಟ-ತಿಂಡಿ ದರ ಹೆಚ್ಚಾಗುತ್ತಾ?