AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಂಗಾಯಣ ರಘು ಮಾತನಾಡಿದ ಕನ್ನಡ ನೋಡಿ ದಂಗಾದ ಫ್ಯಾನ್ಸ್

‘ಮೂರನೇ ಕೃಷ್ಣಪ್ಪ’ ಸಿನಿಮಾ ಆನೇಕಲ್ ಕನ್ನಡ ಶೈಲಿಯಲ್ಲಿ ಮೂಡಿ ಬಂದಿದೆ. ಆಡು ಭಾಷೆಯ ಕನ್ನಡಕ್ಕಿಂತ ಆನೇಕಲ್ ಕನ್ನಡ ಸಖತ್ ಭಿನ್ನವಾಗಿದೆ. ಒಂದು ಸರಳ ವಾಕ್ಯವನ್ನು ಹೇಳಿ ಅದನ್ನು ಆನೇಕಲ್ ಕನ್ನಡದಲ್ಲಿ ಹೇಳಿದ್ದಾರೆ ಅವರು.

ರಂಗಾಯಣ ರಘು ಮಾತನಾಡಿದ ಕನ್ನಡ ನೋಡಿ ದಂಗಾದ ಫ್ಯಾನ್ಸ್
ರಂಗಾಯಣ ರಘು
ರಾಜೇಶ್ ದುಗ್ಗುಮನೆ
|

Updated on: May 24, 2024 | 12:52 PM

Share

ರಂಗಾಯಣ ರಘು (Rangayana Raghu) ಅವರು ಓರ್ವ ಶ್ರೇಷ್ಠ ನಟ. ಅವರ ನಟನೆಯನ್ನು ಎಲ್ಲರೂ ಹೊಗಳುತ್ತಾರೆ. ಯಾವುದೇ ಪಾತ್ರ ಕೊಟ್ಟರೂ ಅವರು ನಟಿಸಿ ತೋರಿಸುತ್ತಾರೆ. ಪ್ರತಿ ಪಾತ್ರಕ್ಕೆ ನ್ಯಾಯ ಒದಗಿಸುತ್ತಾರೆ. ಈಗ ಅವರ ನಟನೆಯ ‘ಮೂರನೇ ಕೃಷ್ಣಪ್ಪ’ ಸಿನಿಮಾ ರಿಲೀಸ್ ಆಗಿದೆ. ಹಾಸ್ಯ ಶೈಲಿಯಲ್ಲಿ ಸಿನಿಮಾ ಮೂಡಿ ಬಂದಿದೆ. ಈ ಸಿನಿಮಾದ ಪ್ರಮೋಷನ್ ಕೂಡ ಫನ್ ರೀತಿಯಲ್ಲೇ ಮೂಡಿ ಬಂದಿದೆ ಅನ್ನೋದು ವಿಶೇಷ.

‘ಮೂರನೇ ಕೃಷ್ಣಪ್ಪ’ ಸಿನಿಮಾದಲ್ಲಿ ಸಂಪತ್ ಮೈತ್ರಿ, ರಂಗಾಯಣ ರಘು, ಶ್ರೀಪ್ರಿಯಾ, ತುಕಾಲಿ ಸಂತೋಷ್, ಉಗ್ರಂ ಮಂಜು ಮೊದಲಾದವರು ನಟಿಸಿದ್ದಾರೆ. ಈ ಚಿತ್ರವನ್ನು ನವೀನ್ ರೆಡ್ಡಿ ನಿರ್ದೇಶನ ಮಾಡಿದ್ದಾರೆ. ಮೋಹನ್ ರೆಡ್ಡಿ ಹಾಗೂ ವೈ. ರವಿ ಶಂಕರ್ ಚಿತ್ರವನ್ನು ನಿರ್ಮಿಸಿದ್ದಾರೆ. ಈ ಚಿತ್ರದ ಪ್ರಚಾರವನ್ನು ರಂಗಾಯಣ ರಘು ಮಾಡಿದ್ದಾರೆ.

‘ಮೂರನೇ ಕೃಷ್ಣಪ್ಪ’ ಸಿನಿಮಾ ಆನೇಕಲ್ ಕನ್ನಡ ಶೈಲಿಯಲ್ಲಿ ಮೂಡಿ ಬಂದಿದೆ. ಆಡು ಭಾಷೆಯ ಕನ್ನಡಕ್ಕಿಂತ ಆನೇಕಲ್ ಕನ್ನಡ ಸಖತ್ ಭಿನ್ನವಾಗಿದೆ. ಒಂದು ಸರಳ ವಾಕ್ಯವನ್ನು ಹೇಳಿ ಅದನ್ನು ಆನೇಕಲ್ ಕನ್ನಡದಲ್ಲಿ ಹೇಳಿದ್ದಾರೆ ಅವರು. ‘ಮೂರನೇ ಕೃಷ್ಣಪ್ಪ’ ಸಿನಿಮಾ ಹಳ್ಳಿಯ ಸೊಗಡಿನಲ್ಲಿ ಮೂಡಿ ಬಂದಿದೆ. ಹಳ್ಳಿಯಲ್ಲಿ ನಡೆಯೋ ರಾಜಕೀಯದ ಬಗ್ಗೆ ಇದೆ. ಈ ಸಿನಿಮಾದಲ್ಲಿ ರಂಗಾಯಣ ರಘು ಅವರ ಕನ್ನಡ ನೋಡಿ ಅನೇಕರು ಅಚ್ಚರಿ ಹೊರಹಾಕಿದ್ದಾರೆ. ಈ ಚಿತ್ರದ ಟ್ರೇಲರ್ ಇತ್ತೀಚೆಗೆ ರಿಲೀಸ್ ಆಗಿ ಮೆಚ್ಚುಗೆ ಪಡೆದಿತ್ತು. ಸಿನಿಮಾ ಯಾವ ರೀತಿಯಲ್ಲಿ ಮೂಡಿ ಬಂದಿದೆ ಅನ್ನೋ ಕುತೂಹಲ ಅಭಿಮಾನಿಗಳಿಗೆ ಇದೆ.

ಇದನ್ನೂ ಓದಿ: ‘ಮೂರನೇ ಕೃಷ್ಣಪ್ಪ’ ಟ್ರೇಲರ್​ನಲ್ಲಿ ರಂಗಾಯಣ ರಘು, ಸಂಪತ್​, ಯೋಗಿ ಕಮಾಲ್​

ರಂಗಾಯಣ ರಘು ಅವರು ಪೋಷಕ ಪಾತ್ರಗಳ ಮೂಲಕ ಗಮನ ಸೆಳೆಯುತ್ತಾರೆ. ಈ ಸಿನಿಮಾದಲ್ಲಿ ಅವರೇ ಮುಖ್ಯಭೂಮಿಕೆ ನಿರ್ವಹಿಸಿದ್ದಾರೆ. ಅವರ ಪಾತ್ರಕ್ಕೆ ಸಾಕಷ್ಟು ಪ್ರಾಮುಖ್ಯತೆ ಇದೆ. ಬೆಂಗಳೂರಲ್ಲಿ ಈ ಚಿತ್ರಕ್ಕೆ 50ಕ್ಕೂ ಅಧಿಕ ಶೋಗಳು ಸಿಕ್ಕಿವೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಬೆಳ್ಳಂಬೆಳಗ್ಗೆ ಭ್ರಷ್ಟರಿಗೆ ಬಿಸಿಮುಟ್ಟಿಸಿದ ಲೋಕಾಯುಕ್ತ: ಹಲವೆಡೆ ದಾಳಿ
ಬೆಳ್ಳಂಬೆಳಗ್ಗೆ ಭ್ರಷ್ಟರಿಗೆ ಬಿಸಿಮುಟ್ಟಿಸಿದ ಲೋಕಾಯುಕ್ತ: ಹಲವೆಡೆ ದಾಳಿ
2 ವರ್ಷ ಹೋಟೆಲ್ ರೂಮ್ ಕೊಟ್ಟಿದ್ದಕ್ಕೆ 3 ಅಡಿಯಷ್ಟು ಕಸ ತುಂಬಿ ಹೋದ ಅತಿಥಿ
2 ವರ್ಷ ಹೋಟೆಲ್ ರೂಮ್ ಕೊಟ್ಟಿದ್ದಕ್ಕೆ 3 ಅಡಿಯಷ್ಟು ಕಸ ತುಂಬಿ ಹೋದ ಅತಿಥಿ
ಉಸಿರಾಟ ಸಮಸ್ಯೆ ಎಂದು ಆಸ್ಪತ್ರೆಗೆ ಬಂದ ರೋಗಿಯ ಮೇಲೆ ವೈದ್ಯನಿಂದ ಹಲ್ಲೆ
ಉಸಿರಾಟ ಸಮಸ್ಯೆ ಎಂದು ಆಸ್ಪತ್ರೆಗೆ ಬಂದ ರೋಗಿಯ ಮೇಲೆ ವೈದ್ಯನಿಂದ ಹಲ್ಲೆ
ರಸ್ತೆ ಅಡ್ಡಗಟ್ಟಿ ಬರ್ತ್‌ಡೇ ಆಚರಣೆ, ಪುಂಡರ ಹಾವಳಿ ವಿಡಿಯೋ ವೈರಲ್
ರಸ್ತೆ ಅಡ್ಡಗಟ್ಟಿ ಬರ್ತ್‌ಡೇ ಆಚರಣೆ, ಪುಂಡರ ಹಾವಳಿ ವಿಡಿಯೋ ವೈರಲ್
ರೈಲಿನ ಶೌಚಾಲಯದ ಪಕ್ಕ ಕುಳಿತು ಪ್ರಯಾಣಿಸಿದ ಕ್ರೀಡಾ ಪಟುಗಳು
ರೈಲಿನ ಶೌಚಾಲಯದ ಪಕ್ಕ ಕುಳಿತು ಪ್ರಯಾಣಿಸಿದ ಕ್ರೀಡಾ ಪಟುಗಳು
ಬೆಂಗಳೂರಲ್ಲಿ ನ್ಯೂ ಇಯರ್ ಸೆಲೆಬ್ರೇಟ್ ಮಾಡ್ತೀರಾ? ಈ ವಿಚಾರಗಳನ್ನು ತಿಳಿದಿರಿ
ಬೆಂಗಳೂರಲ್ಲಿ ನ್ಯೂ ಇಯರ್ ಸೆಲೆಬ್ರೇಟ್ ಮಾಡ್ತೀರಾ? ಈ ವಿಚಾರಗಳನ್ನು ತಿಳಿದಿರಿ
ತಿರುಮಲ ವೆಂಕಟೇಶ್ವರನ ದರ್ಶನಕ್ಕೂ ಮುನ್ನ ಭೂವರಾಹ ಸ್ವಾಮಿ ದರ್ಶನ ಕಡ್ಡಾಯ
ತಿರುಮಲ ವೆಂಕಟೇಶ್ವರನ ದರ್ಶನಕ್ಕೂ ಮುನ್ನ ಭೂವರಾಹ ಸ್ವಾಮಿ ದರ್ಶನ ಕಡ್ಡಾಯ
ಇಂದು ಈ ರಾಶಿಯವರ ವ್ಯವಹಾರಗಳಲ್ಲಿ ಯಶಸ್ಸು ಲಭಿಸಲಿದೆ
ಇಂದು ಈ ರಾಶಿಯವರ ವ್ಯವಹಾರಗಳಲ್ಲಿ ಯಶಸ್ಸು ಲಭಿಸಲಿದೆ
ರೀಲ್ಸ್ ತಂದ ಆಪತ್ತು: ಇನ್ಸ್ಟಾಗ್ರಾಮ್​​​ ಬಳಸುವವರು ಈ ವಿಡಿಯೋನ ಒಮ್ಮೆ ನೋಡಿ
ರೀಲ್ಸ್ ತಂದ ಆಪತ್ತು: ಇನ್ಸ್ಟಾಗ್ರಾಮ್​​​ ಬಳಸುವವರು ಈ ವಿಡಿಯೋನ ಒಮ್ಮೆ ನೋಡಿ
ಆಟೋ ಚಾಲಕನಿಗೆ ಬಿಜೆಪಿ ಶಾಸಕನಿಂದ ಕಪಾಳಮೋಕ್ಷ; ವೈರಲ್ ವಿಡಿಯೋಗೆ ಆಕ್ರೋಶ
ಆಟೋ ಚಾಲಕನಿಗೆ ಬಿಜೆಪಿ ಶಾಸಕನಿಂದ ಕಪಾಳಮೋಕ್ಷ; ವೈರಲ್ ವಿಡಿಯೋಗೆ ಆಕ್ರೋಶ