AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಂಗಾಯಣ ರಘು ಮಾತನಾಡಿದ ಕನ್ನಡ ನೋಡಿ ದಂಗಾದ ಫ್ಯಾನ್ಸ್

‘ಮೂರನೇ ಕೃಷ್ಣಪ್ಪ’ ಸಿನಿಮಾ ಆನೇಕಲ್ ಕನ್ನಡ ಶೈಲಿಯಲ್ಲಿ ಮೂಡಿ ಬಂದಿದೆ. ಆಡು ಭಾಷೆಯ ಕನ್ನಡಕ್ಕಿಂತ ಆನೇಕಲ್ ಕನ್ನಡ ಸಖತ್ ಭಿನ್ನವಾಗಿದೆ. ಒಂದು ಸರಳ ವಾಕ್ಯವನ್ನು ಹೇಳಿ ಅದನ್ನು ಆನೇಕಲ್ ಕನ್ನಡದಲ್ಲಿ ಹೇಳಿದ್ದಾರೆ ಅವರು.

ರಂಗಾಯಣ ರಘು ಮಾತನಾಡಿದ ಕನ್ನಡ ನೋಡಿ ದಂಗಾದ ಫ್ಯಾನ್ಸ್
ರಂಗಾಯಣ ರಘು
Follow us
ರಾಜೇಶ್ ದುಗ್ಗುಮನೆ
|

Updated on: May 24, 2024 | 12:52 PM

ರಂಗಾಯಣ ರಘು (Rangayana Raghu) ಅವರು ಓರ್ವ ಶ್ರೇಷ್ಠ ನಟ. ಅವರ ನಟನೆಯನ್ನು ಎಲ್ಲರೂ ಹೊಗಳುತ್ತಾರೆ. ಯಾವುದೇ ಪಾತ್ರ ಕೊಟ್ಟರೂ ಅವರು ನಟಿಸಿ ತೋರಿಸುತ್ತಾರೆ. ಪ್ರತಿ ಪಾತ್ರಕ್ಕೆ ನ್ಯಾಯ ಒದಗಿಸುತ್ತಾರೆ. ಈಗ ಅವರ ನಟನೆಯ ‘ಮೂರನೇ ಕೃಷ್ಣಪ್ಪ’ ಸಿನಿಮಾ ರಿಲೀಸ್ ಆಗಿದೆ. ಹಾಸ್ಯ ಶೈಲಿಯಲ್ಲಿ ಸಿನಿಮಾ ಮೂಡಿ ಬಂದಿದೆ. ಈ ಸಿನಿಮಾದ ಪ್ರಮೋಷನ್ ಕೂಡ ಫನ್ ರೀತಿಯಲ್ಲೇ ಮೂಡಿ ಬಂದಿದೆ ಅನ್ನೋದು ವಿಶೇಷ.

‘ಮೂರನೇ ಕೃಷ್ಣಪ್ಪ’ ಸಿನಿಮಾದಲ್ಲಿ ಸಂಪತ್ ಮೈತ್ರಿ, ರಂಗಾಯಣ ರಘು, ಶ್ರೀಪ್ರಿಯಾ, ತುಕಾಲಿ ಸಂತೋಷ್, ಉಗ್ರಂ ಮಂಜು ಮೊದಲಾದವರು ನಟಿಸಿದ್ದಾರೆ. ಈ ಚಿತ್ರವನ್ನು ನವೀನ್ ರೆಡ್ಡಿ ನಿರ್ದೇಶನ ಮಾಡಿದ್ದಾರೆ. ಮೋಹನ್ ರೆಡ್ಡಿ ಹಾಗೂ ವೈ. ರವಿ ಶಂಕರ್ ಚಿತ್ರವನ್ನು ನಿರ್ಮಿಸಿದ್ದಾರೆ. ಈ ಚಿತ್ರದ ಪ್ರಚಾರವನ್ನು ರಂಗಾಯಣ ರಘು ಮಾಡಿದ್ದಾರೆ.

‘ಮೂರನೇ ಕೃಷ್ಣಪ್ಪ’ ಸಿನಿಮಾ ಆನೇಕಲ್ ಕನ್ನಡ ಶೈಲಿಯಲ್ಲಿ ಮೂಡಿ ಬಂದಿದೆ. ಆಡು ಭಾಷೆಯ ಕನ್ನಡಕ್ಕಿಂತ ಆನೇಕಲ್ ಕನ್ನಡ ಸಖತ್ ಭಿನ್ನವಾಗಿದೆ. ಒಂದು ಸರಳ ವಾಕ್ಯವನ್ನು ಹೇಳಿ ಅದನ್ನು ಆನೇಕಲ್ ಕನ್ನಡದಲ್ಲಿ ಹೇಳಿದ್ದಾರೆ ಅವರು. ‘ಮೂರನೇ ಕೃಷ್ಣಪ್ಪ’ ಸಿನಿಮಾ ಹಳ್ಳಿಯ ಸೊಗಡಿನಲ್ಲಿ ಮೂಡಿ ಬಂದಿದೆ. ಹಳ್ಳಿಯಲ್ಲಿ ನಡೆಯೋ ರಾಜಕೀಯದ ಬಗ್ಗೆ ಇದೆ. ಈ ಸಿನಿಮಾದಲ್ಲಿ ರಂಗಾಯಣ ರಘು ಅವರ ಕನ್ನಡ ನೋಡಿ ಅನೇಕರು ಅಚ್ಚರಿ ಹೊರಹಾಕಿದ್ದಾರೆ. ಈ ಚಿತ್ರದ ಟ್ರೇಲರ್ ಇತ್ತೀಚೆಗೆ ರಿಲೀಸ್ ಆಗಿ ಮೆಚ್ಚುಗೆ ಪಡೆದಿತ್ತು. ಸಿನಿಮಾ ಯಾವ ರೀತಿಯಲ್ಲಿ ಮೂಡಿ ಬಂದಿದೆ ಅನ್ನೋ ಕುತೂಹಲ ಅಭಿಮಾನಿಗಳಿಗೆ ಇದೆ.

ಇದನ್ನೂ ಓದಿ: ‘ಮೂರನೇ ಕೃಷ್ಣಪ್ಪ’ ಟ್ರೇಲರ್​ನಲ್ಲಿ ರಂಗಾಯಣ ರಘು, ಸಂಪತ್​, ಯೋಗಿ ಕಮಾಲ್​

ರಂಗಾಯಣ ರಘು ಅವರು ಪೋಷಕ ಪಾತ್ರಗಳ ಮೂಲಕ ಗಮನ ಸೆಳೆಯುತ್ತಾರೆ. ಈ ಸಿನಿಮಾದಲ್ಲಿ ಅವರೇ ಮುಖ್ಯಭೂಮಿಕೆ ನಿರ್ವಹಿಸಿದ್ದಾರೆ. ಅವರ ಪಾತ್ರಕ್ಕೆ ಸಾಕಷ್ಟು ಪ್ರಾಮುಖ್ಯತೆ ಇದೆ. ಬೆಂಗಳೂರಲ್ಲಿ ಈ ಚಿತ್ರಕ್ಕೆ 50ಕ್ಕೂ ಅಧಿಕ ಶೋಗಳು ಸಿಕ್ಕಿವೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಬುಮ್ರಾ ಬೌಲಿಂಗ್​ನಲ್ಲಿ ಸಿಕ್ಸರ್ ಬಾರಿಸಿದ ರವಿ ಬಿಷ್ಣೋಯ್; ವಿಡಿಯೋ
ಬುಮ್ರಾ ಬೌಲಿಂಗ್​ನಲ್ಲಿ ಸಿಕ್ಸರ್ ಬಾರಿಸಿದ ರವಿ ಬಿಷ್ಣೋಯ್; ವಿಡಿಯೋ
ಭಾರತ-ಪಾಕ್​ ಗಡಿಯಿಂದ Tv9 ಗ್ರೌಂಡ್​ ರಿಪೋರ್ಟ್​: ಸನ್ನದ್ಧವಾಗಿರುವ BSF ಯೋಧ
ಭಾರತ-ಪಾಕ್​ ಗಡಿಯಿಂದ Tv9 ಗ್ರೌಂಡ್​ ರಿಪೋರ್ಟ್​: ಸನ್ನದ್ಧವಾಗಿರುವ BSF ಯೋಧ
ಐಪಿಎಲ್​ನಲ್ಲಿ ವಿಶೇಷ ಮೈಲಿಗಲ್ಲು ಸ್ಥಾಪಿಸಿದ ಸೂರ್ಯ
ಐಪಿಎಲ್​ನಲ್ಲಿ ವಿಶೇಷ ಮೈಲಿಗಲ್ಲು ಸ್ಥಾಪಿಸಿದ ಸೂರ್ಯ
ಡಾ.ರಾಜ್ ಕುಟುಂಬದ ಜೊತೆ ನಾವು ಸದಾ ಇರುತ್ತೇವೆ: ಡಿಕೆ ಶಿವಕುಮಾರ್
ಡಾ.ರಾಜ್ ಕುಟುಂಬದ ಜೊತೆ ನಾವು ಸದಾ ಇರುತ್ತೇವೆ: ಡಿಕೆ ಶಿವಕುಮಾರ್
ನಮ್ಮ ರಕ್ತ ಕುದಿಯುತ್ತಿದೆ: ಪಹಲ್ಗಾಮ್​ ದಾಳಿಗೆ ಶ್ರೀಮುರಳಿ ಪ್ರತಿಕ್ರಿಯೆ
ನಮ್ಮ ರಕ್ತ ಕುದಿಯುತ್ತಿದೆ: ಪಹಲ್ಗಾಮ್​ ದಾಳಿಗೆ ಶ್ರೀಮುರಳಿ ಪ್ರತಿಕ್ರಿಯೆ
ಕರ್ನಾಟಕದಲ್ಲಿ ನೆಲೆಸಿರುವ ಪಾಕ್​ ಪ್ರಜೆಗಳನ್ನು ಹೊರಗೆ ಹಾಕಲು ದಿಟ್ಟ ಹೆಜ್ಜೆ
ಕರ್ನಾಟಕದಲ್ಲಿ ನೆಲೆಸಿರುವ ಪಾಕ್​ ಪ್ರಜೆಗಳನ್ನು ಹೊರಗೆ ಹಾಕಲು ದಿಟ್ಟ ಹೆಜ್ಜೆ
ಕೆನಡಾದ ರಸ್ತೆಯಲ್ಲಿ ಜನರ ಮೇಲೆ ನುಗ್ಗಿದ ಕಾರು, ಹಲವು ಮಂದಿ ಸಾವು
ಕೆನಡಾದ ರಸ್ತೆಯಲ್ಲಿ ಜನರ ಮೇಲೆ ನುಗ್ಗಿದ ಕಾರು, ಹಲವು ಮಂದಿ ಸಾವು
ಪಾಕಿಸ್ತಾನದ ಮೇಲೆ ಯುದ್ಧ: ವರಸೆ ಬದಲಿಸಿದ ಸಿದ್ದರಾಮಯ್ಯ
ಪಾಕಿಸ್ತಾನದ ಮೇಲೆ ಯುದ್ಧ: ವರಸೆ ಬದಲಿಸಿದ ಸಿದ್ದರಾಮಯ್ಯ
ಈ ತಪ್ಪು ತಿದ್ದಿಕೊಳ್ಳದಿದ್ದರೇ ದಕ್ಷಿಣ ಕನ್ನಡಕ್ಕೆ ಅನಾಹುತ: ದೈವರಾಧಕ ಎಚ್ಚರ
ಈ ತಪ್ಪು ತಿದ್ದಿಕೊಳ್ಳದಿದ್ದರೇ ದಕ್ಷಿಣ ಕನ್ನಡಕ್ಕೆ ಅನಾಹುತ: ದೈವರಾಧಕ ಎಚ್ಚರ
ಕೆಲವರು ಚಿಲ್ಲರೆ ಹೇಳಿಕೆ ಕೊಡುತ್ತಿದ್ದಾರೆ: ಮತ್ತೆ ಗುಡುಗಿದ ಡಿಕೆಶಿ
ಕೆಲವರು ಚಿಲ್ಲರೆ ಹೇಳಿಕೆ ಕೊಡುತ್ತಿದ್ದಾರೆ: ಮತ್ತೆ ಗುಡುಗಿದ ಡಿಕೆಶಿ