Rangi Taranga Remake: ಹಿಂದಿಗೆ ರಿಮೇಕ್​ ಆಗಲಿದೆ ಕನ್ನಡದ ‘ರಂಗಿತರಂಗ’; ಬಿ-ಟೌನ್​ ಸ್ಟಾರ್​ ನಟನಿಗೆ ಅನೂಪ್​ ಭಂಡಾರಿ ನಿರ್ದೇಶನ?

Rangi Taranga | Anup Bhandari: ಖ್ಯಾತ ನಿರ್ಮಾಣ ಸಂಸ್ಥೆಯೊಂದು ‘ರಂಗಿತರಂಗ’ ​ಚಿತ್ರವನ್ನು ಹಿಂದಿಯಲ್ಲಿ ರಿಮೇಕ್​ ಮಾಡಲು ಮುಂದೆ ಬಂದಿದೆ. ಇದರಲ್ಲಿ ಅಕ್ಷಯ್​ ಕುಮಾರ್​​ ಅಥವಾ ಶಾಹಿದ್​ ಕಪೂರ್​ ಬಣ್ಣ ಹಚ್ಚುವ ಸಾಧ್ಯತೆ ಇದೆ ಎಂಬ ಸುದ್ದಿ ಹರಿದಾಡುತ್ತಿದೆ.

Rangi Taranga Remake: ಹಿಂದಿಗೆ ರಿಮೇಕ್​ ಆಗಲಿದೆ ಕನ್ನಡದ ‘ರಂಗಿತರಂಗ’; ಬಿ-ಟೌನ್​ ಸ್ಟಾರ್​ ನಟನಿಗೆ ಅನೂಪ್​ ಭಂಡಾರಿ ನಿರ್ದೇಶನ?
ರಂಗಿತರಂಗ ಪೋಸ್ಟರ್​, ಅನೂಪ್ ಭಂಡಾರಿ
Follow us
| Updated By: ಮದನ್​ ಕುಮಾರ್​

Updated on: Jul 06, 2022 | 11:23 AM

ನಿರ್ದೇಶಕ ಅನೂಪ್​ ಭಂಡಾರಿ (Anup Bhandari) ಅವರು ಸದ್ಯ ‘ವಿಕ್ರಾಂತ್​ ರೋಣ’ ಸಿನಿಮಾದ ಬಿಡುಗಡೆ ಬಗ್ಗೆ ಗಮನ ಹರಿಸಿದ್ದಾರೆ. ಅವರ ಬಗ್ಗೆ ಈಗಾಗಲೇ ಎಲ್ಲ ಕಡೆ ಟಾಕ್​ ಶುರುವಾಗಿದೆ. ಟ್ರೇಲರ್​ ನೋಡಿದ ಪರಭಾಷೆ ಮಂದಿ ಕೂಡ ಅನೂಪ್​ ಕೆಲಸಕ್ಕೆ ಭೇಷ್​ ಎನ್ನುತ್ತಿದ್ದಾರೆ. ಅಂದಹಾಗೆ, ಅನೂಪ್​ ಭಂಡಾರಿ ಅವರ ಪ್ರತಿಭೆಗೆ ಈ ಪರಿ ಮೆಚ್ಚುಗೆ ಸಿಕ್ಕಿದ್ದು ಇದೇ ಮೊದಲೇನಲ್ಲ. ಈ ಹಿಂದೆ ಅವರು ‘ರಂಗಿತರಂಗ’ (Rangi Taranga) ಚಿತ್ರ ನಿರ್ದೇಶಿಸಿದಾಗಲೂ ಇದೇ ರೀತಿ ಹವಾ ಸೃಷ್ಟಿ ಆಗಿತ್ತು. ‘ಬಾಹುಬಲಿ’ ಸಿನಿಮಾದ ಎದುರು ರಿಲೀಸ್​ ಆದ ಆ ಚಿತ್ರ ದೊಡ್ಡ ಮಟ್ಟದಲ್ಲಿ ಯಶಸ್ಸು ಕಂಡಿತ್ತು. ಸತತ ಒಂದು ವರ್ಷ ಪ್ರದರ್ಶನ ಕಂಡು ನಿರ್ಮಾಪಕರಿಗೆ ಲಾಭ ಮಾಡಿಕೊಟ್ಟಿತ್ತು. ಈಗ ಅದೇ ಸಿನಿಮಾ ಬಾಲಿವುಡ್​ಗೆ ರಿಮೇಕ್​ (Remake) ಆಗಲಿದೆ.

ಕನ್ನಡದಲ್ಲಿ ಸೂಪರ್​ ಹಿಟ್​ ಆಗಿದ್ದ ‘ರಂಗಿತರಂಗ’ ಚಿತ್ರವನ್ನು ಹಿಂದಿಯಲ್ಲಿ ರಿಮೇಕ್​ ಮಾಡುವ ಬಗ್ಗೆ ಅನೇಕ ದಿನಗಳಿಂದಲೂ ಗುಸುಗುಸು ಕೇಳಿಬರುತ್ತಿತ್ತು. ಈಗ ಅದಕ್ಕೆ ಇನ್ನಷ್ಟು ರೆಕ್ಕೆ ಪುಕ್ಕ ಸೇರಿಕೊಂಡಿದೆ. ಬಾಲಿವುಡ್​ನ ಸ್ಟಾರ್​ ನಟರೊಬ್ಬರು ಹಿಂದಿ ರಿಮೇಕ್​ನಲ್ಲಿ ಅಭಿನಯಿಸಲಿದ್ದಾರೆ ಎನ್ನಲಾಗುತ್ತಿದೆ. ಅಕ್ಷಯ್​ ಕುಮಾರ್​​ ಅಥವಾ ಶಾಹಿದ್​ ಕಪೂರ್​ ಬಣ್ಣ ಹಚ್ಚುವ ಸಾಧ್ಯತೆ ಇದೆ ಎಂಬ ಸುದ್ದಿ ಹರಿದಾಡುತ್ತಿದೆ. ಹಿಂದಿ ಚಿತ್ರರಂಗದ ಖ್ಯಾತ ನಿರ್ಮಾಣ ಸಂಸ್ಥೆಯೊಂದು ‘ರಂಗಿತರಂಗ’ ಚಿತ್ರವನ್ನು ರಿಮೇಕ್​ ಮಾಡಲು ಮುಂದೆ ಬಂದಿದೆ. ಈ ಕುರಿತು ಸ್ಪಷ್ಟ ಮಾಹಿತಿ ಇನ್ನಷ್ಟೇ ಸಿಗಬೇಕಿದೆ.

‘ರಂಗಿತರಂಗ’ ಚಿತ್ರದಲ್ಲಿ ನಿರೂಪ್​ ಭಂಡಾರಿ ನಾಯಕನಾಗಿ ನಟಿಸಿದ್ದರು. ರಾಧಿಕಾ ನಾರಾಯಣ್​ ಹಾಗೂ ಆವಂತಿಕಾ ಶೆಟ್ಟಿ ನಾಯಕಿಯರಾಗಿದ್ದರು. ನಿರ್ದೇಶನದ ಜೊತೆ ಹಾಡುಗಳಿಗೆ ಸಂಗೀತ ಸಂಯೋಜನೆಯನ್ನೂ ಅನೂಪ್​ ಭಂಡಾರಿ ಮಾಡಿದ್ದರು. ಬಿ. ಅಜನೀಶ್​ ಲೋಕನಾಥ್​ ಅವರ ಹಿನ್ನೆಲೆ ಸಂಗೀತದಲ್ಲಿ ಚಿತ್ರದ ರೋಚಕತೆ ಹೆಚ್ಚಿತ್ತು. ವಿಲಿಯಮ್​ ಡೇವಿಡ್​ ಅವರ ಛಾಯಾಗ್ರಹಣ ಕೂಡ ಹೈಲೈಟ್​ ಆಗಿತ್ತು.

ಇದನ್ನೂ ಓದಿ
Image
‘ಹೃದಯಂ’ ರಿಮೇಕ್​ನಲ್ಲಿ ಸೈಫ್​ ಅಲಿ ಖಾನ್​ ಮಗ ಇಬ್ರಾಹಿಂ? ಲಾಂಚ್​ ಮಾಡ್ತಾರೆ ಕರಣ್​ ಜೋಹರ್​
Image
ಶಿವಣ್ಣ ಮಾಡಿದ್ದ ಪಾತ್ರದಲ್ಲಿ ಸಿಂಬು; ಹೇಗಿದೆ ನೋಡಿ ‘ಮಫ್ತಿ’ ಸಿನಿಮಾದ ತಮಿಳು ರಿಮೇಕ್​ ಟೀಸರ್​
Image
ಮೊಬೈಲ್​ನಲ್ಲಿ ಮುಳುಗಿದವರ ಮನೆ ಹೇಗಿರುತ್ತೆ ಅಂತ ವಿವರಿಸುವ ‘ಹೋಮ್​’ ಚಿತ್ರಕ್ಕೀಗ ರಿಮೇಕ್​ ಭಾಗ್ಯ
Image
ಹಿಂದಿಗೆ ಹೊರಟ ಕನ್ನಡದ ಸಿನಿಮಾ; ಬಾಲಿವುಡ್​ಗೆ ರಿಮೇಕ್​ ಆಗುತ್ತಿದೆ ‘ಸಂಕಷ್ಟಕರ ಗಣಪತಿ’

‘ರಂಗಿತರಂಗ’ ಚಿತ್ರಕ್ಕೆ ಕೆಲಸ ಮಾಡಿದ್ದ ಅನೂಪ್​ ಭಂಡಾರಿ, ಅಜನೀಶ್​ ಲೋಕನಾಥ್​, ವಿಲಿಯಮ್​ ಡೇವಿಡ್​ ಅವರು ಈಗ ‘ವಿಕ್ರಾಂತ್​ ರೋಣ’ ಚಿತ್ರದಲ್ಲೂ ಒಂದಾಗಿರುವುದು ವಿಶೇಷ. ತಾಂತ್ರಿಕವಾಗಿ ಅದ್ದೂರಿತನದಿಂದ ಕೂಡಿರುವ ಈ ಚಿತ್ರದ ಬಗ್ಗೆ ಕಿಚ್ಚ ಸುದೀಪ್​ ಅಭಿಮಾನಿಗಳಲ್ಲಿ ಹೆಚ್ಚು ನಿರೀಕ್ಷೆ ಇದೆ. ಜುಲೈ 28ರಂದು ‘ವಿಕ್ರಾಂತ್​ ರೋಣ’ ರಿಲೀಸ್​ ಆಗಲಿದೆ.

ಇದನ್ನೂ ಓದಿ: ಹಿಂದಿಗೆ ಡಬ್, ಮರಾಠಿಗೆ ರಿಮೇಕ್​ ಆದ ‘ಕನ್ನಡತಿ’: ಈ ಧಾರಾವಾಹಿಗೆ ಹೇಗಿದೆ ರೆಸ್ಪಾನ್ಸ್? ಇಲ್ಲಿದೆ ಉತ್ತರ

Jersey Movie: ರಿಮೇಕ್​ ಮಾಡಿ ಕೈ ಸುಟ್ಟುಕೊಂಡ ಬಳಿಕ ಶಾಹಿದ್ ಕಪೂರ್​ಗೆ ಜ್ಞಾನೋದಯ; ಸ್ಟಾರ್ ನಟ ಈಗ ಹೇಳಿದ್ದೇನು?

ತಾಜಾ ಸುದ್ದಿ
ಸತತ ಮಳೆ; ಜಿಗಣೆ ಕಾಟಕ್ಕೆ ಹೈರಾಣಾದ ಪ್ರವಾಹ ತಂಡದ ಅಧಿಕಾರಿಗಳು
ಸತತ ಮಳೆ; ಜಿಗಣೆ ಕಾಟಕ್ಕೆ ಹೈರಾಣಾದ ಪ್ರವಾಹ ತಂಡದ ಅಧಿಕಾರಿಗಳು
ಸುಧಾಕರ್ ಅಭಿನಂದನಾ ಕಾರ್ಯಕ್ರಮದಲ್ಲಿ ಬಾಡೂಟ: ಡ್ರಿಂಕ್ಸ್​​ಗೆ ಮುಗಿಬಿದ್ದ ಜನ
ಸುಧಾಕರ್ ಅಭಿನಂದನಾ ಕಾರ್ಯಕ್ರಮದಲ್ಲಿ ಬಾಡೂಟ: ಡ್ರಿಂಕ್ಸ್​​ಗೆ ಮುಗಿಬಿದ್ದ ಜನ
ಜಲಾವೃತವಾದ ಸೇತುವೆ ಮೇಲೆ ಸಂಚಾರ;ನೀರು ರಭಸವಾಗಿ ಹರಿಯುತ್ತಿದ್ದರೂ ಡೋಂಟ್​ಕೇರ
ಜಲಾವೃತವಾದ ಸೇತುವೆ ಮೇಲೆ ಸಂಚಾರ;ನೀರು ರಭಸವಾಗಿ ಹರಿಯುತ್ತಿದ್ದರೂ ಡೋಂಟ್​ಕೇರ
ಗೋಕಾಕ್ ಜಲಪಾತದಲ್ಲಿ ಪ್ರವಾಸಿಗರ ಹುಚ್ಚಾಟ; ಸ್ವಲ್ಪ ಯಾಮಾರಿದ್ರು ಅಪಾಯ ಖಚಿತ
ಗೋಕಾಕ್ ಜಲಪಾತದಲ್ಲಿ ಪ್ರವಾಸಿಗರ ಹುಚ್ಚಾಟ; ಸ್ವಲ್ಪ ಯಾಮಾರಿದ್ರು ಅಪಾಯ ಖಚಿತ
ಸಂಸದ ಡಾ.ಕೆ ಸುಧಾಕರ್​ ಕಾರ್ಯಕ್ರಮದಲ್ಲಿ ಭರ್ಜರಿ ಬಾಡೂಟ ಜೊತೆ ಮದ್ಯ ಆಯೋಜನೆ
ಸಂಸದ ಡಾ.ಕೆ ಸುಧಾಕರ್​ ಕಾರ್ಯಕ್ರಮದಲ್ಲಿ ಭರ್ಜರಿ ಬಾಡೂಟ ಜೊತೆ ಮದ್ಯ ಆಯೋಜನೆ
ಕಿರಿದಾದ ಸೇತುವೆ ಮೇಲೆ ಹೆಣ ಹೊತ್ತು ಸಾಗಿದ ಗ್ರಾಮಸ್ಥರು, ವಿಡಿಯೋ ವೈರಲ್
ಕಿರಿದಾದ ಸೇತುವೆ ಮೇಲೆ ಹೆಣ ಹೊತ್ತು ಸಾಗಿದ ಗ್ರಾಮಸ್ಥರು, ವಿಡಿಯೋ ವೈರಲ್
ಧೋನಿ ಹುಟ್ದಬ್ಬ... ಬರೋಬ್ಬರಿ 100 ಅಡಿ ಕಟೌಟ್ ನಿಲ್ಲಿಸಿದ ಫ್ಯಾನ್ಸ್
ಧೋನಿ ಹುಟ್ದಬ್ಬ... ಬರೋಬ್ಬರಿ 100 ಅಡಿ ಕಟೌಟ್ ನಿಲ್ಲಿಸಿದ ಫ್ಯಾನ್ಸ್
ಅಕ್ಕಿ ಮೂಟೆ ಹೊತ್ತು ಗಂಗಾವತಿಯಿಂದ ಮಂತ್ರಾಲಯದವರೆಗೆ ಭಕ್ತನ ಪಾದಯಾತ್ರೆ
ಅಕ್ಕಿ ಮೂಟೆ ಹೊತ್ತು ಗಂಗಾವತಿಯಿಂದ ಮಂತ್ರಾಲಯದವರೆಗೆ ಭಕ್ತನ ಪಾದಯಾತ್ರೆ
ಧೋನಿಯ ಪಾದ ಮುಟ್ಟಿ ನಮಸ್ಕರಿಸಿದ ಸಾಕ್ಷಿ: ವಿಡಿಯೋ ನೋಡಿ
ಧೋನಿಯ ಪಾದ ಮುಟ್ಟಿ ನಮಸ್ಕರಿಸಿದ ಸಾಕ್ಷಿ: ವಿಡಿಯೋ ನೋಡಿ
ಎದುರಗಡೆ ಆನೆ​, ಪಕ್ಕದಲ್ಲಿ ಎರಡೆರಡು ಹುಲಿ: ಸಫಾರಿಗರ ಪಾಡು ಏನಾಯ್ತು ನೋಡಿ
ಎದುರಗಡೆ ಆನೆ​, ಪಕ್ಕದಲ್ಲಿ ಎರಡೆರಡು ಹುಲಿ: ಸಫಾರಿಗರ ಪಾಡು ಏನಾಯ್ತು ನೋಡಿ