AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಶಕದ ಸಂಭ್ರಮದಲ್ಲಿ ‘ರಂಗಿತರಂಗ’ ಸಿನಿಮಾ ರೀ-ರಿಲೀಸ್; ಅಪ್​ಡೇಟ್ ಕೊಟ್ಟ ಅನೂಪ್ ಭಂಡಾರಿ

10 Years of Rangi Taranga: ಅನೂಪ್ ಭಂಡಾರಿ ನಿರ್ದೇಶನದ ರಂಗಿತರಂಗ ಚಿತ್ರವು ತನ್ನ 10ನೇ ವಾರ್ಷಿಕೋತ್ಸವವನ್ನು ಆಚರಿಸುತ್ತಿದೆ. 2015ರಲ್ಲಿ ಬಿಡುಗಡೆಯಾದ ಈ ಚಿತ್ರವು ದೊಡ್ಡ ಯಶಸ್ಸು ಕಂಡಿತ್ತು. ಈಗ ಸಿನಿಮಾ ಮತ್ತೆ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗುತ್ತಿದೆ. ಈ ಚಿತ್ರವು ಕರಾವಳಿ ಪ್ರದೇಶದ ಸಂಸ್ಕೃತಿ ಮತ್ತು ದೈವಾರಾಧನೆಯನ್ನು ಚಿತ್ರಿಸುತ್ತದೆ.

ದಶಕದ ಸಂಭ್ರಮದಲ್ಲಿ ‘ರಂಗಿತರಂಗ’ ಸಿನಿಮಾ ರೀ-ರಿಲೀಸ್; ಅಪ್​ಡೇಟ್ ಕೊಟ್ಟ ಅನೂಪ್ ಭಂಡಾರಿ
ರಂಗಿತರಂಗ
ರಾಜೇಶ್ ದುಗ್ಗುಮನೆ
|

Updated on: Jun 25, 2025 | 10:36 AM

Share

ಅನೂಪ್ ಭಂಡಾರಿ ಅವರು ‘ರಂಗಿತರಂಗ’ ಸಿನಿಮಾ (Rangitaranga) ಮೂಲಕ ನಿರ್ದೇಶಕನಾಗಿ ಬಡ್ತಿ ಪಡೆದರು. ಮೊದಲ ಚಿತ್ರದಲ್ಲೇ ಅವರಿಗೆ ದೊಡ್ಡ ಗೆಲುವು ಸಿಕ್ಕಿತು. ಈ ಚಿತ್ರ ರಿಲೀಸ್ ಆಗಿದ್ದು 2015ರ ಜುಲೈ 3ರಂದು. ಈ ಸಿನಿಮಾ ರಾಜಮೌಳಿ ನಿರ್ದೇಶನದ ‘ಬಾಹುಬಲಿ’ ಚಿತ್ರಕ್ಕೆ ಸ್ಪರ್ಧೆ ಒಡ್ಡಿತ್ತು. ಈ ಸಿನಿಮಾಗೆ ಈಗ ದಶಕದ ಸಂಭ್ರಮ. ಈ ವಿಶೇಷ ಸಂದರ್ಭದಲ್ಲಿ ಅನೂಪ್ ಭಂಡಾರಿ ಅವರು ಈ ಚಿತ್ರವನ್ನು ರೀ-ರಿಲೀಸ್ ಮಾಡಲು ನಿರ್ಧರಿಸಿದ್ದಾರೆ.

ಪ್ರತಿ ಚಿತ್ರವನ್ನು ವಿಶೇಷ ದಿನದಂದು ರೀ-ರಿಲೀಸ್ ಮಾಡುವ ಸಂಪ್ರದಾಯ ಮೊದಲಿನಿಂದಲೂ ನಡೆದುಕೊಂಡು ಬಂದಿದೆ. ಈಗ ‘ರಂಗಿತರಂಗ’ ಕೂಡ ಇದೇ ಪ್ಯಾಟರ್ನ್​ ಫಾಲೋ ಮಾಡುತ್ತಿದೆ. ಸಿನಿಮಾಗೆ ದಶಕ ತುಂಬಿದ ಖುಷಿಯಲ್ಲಿ ಜುಲೈ 4ರಂದು ಸಿನಿಮಾ ಮತ್ತೆ ದೊಡ್ಡ ಪರದೆಮೇಲೆ ಬರಲಿದೆ. ಈ ವೇಳೆ ಚಿತ್ರ ಜನರಿಂದ ಮೆಚ್ಚುಗೆ ಪಡೆಯೋ ಸಾಧ್ಯತೆ ಇದೆ.

ಇದನ್ನೂ ಓದಿ
Image
‘ಆರ್ಯನ್ ಯಾವಾಗಲೂ ನಾನು ಮುಸ್ಲಿಂ ಎಂದೇ ಹೇಳುತ್ತಾನೆ’; ಗೌರಿ ಖಾನ್
Image
‘ಆನಂದ್’ ಸಿನಿಮಾದ ಸಾಂಗ್ ಶೂಟಿಂಗ್ ವೇಳೆ ನಡೆದಿತ್ತು ಫನ್ನಿ ಘಟನೆ
Image
‘ಅದು ನಡೆದಿಲ್ಲ’; ಹಾರ್ದಿಕ್ ಜೊತೆಗಿನ ಲವ್ವಿ-ಡವ್ವಿ ಬಗ್ಗೆ ಇಶಾ ಮಾತು
Image
ಕನ್ನಡದ ಪ್ರಶಾಂತ್ ನೀಲ್ ಜೊತೆ ಕೈ ಜೋಡಿಸಿದ ಅಲ್ಲು ಅರ್ಜುನ್? ಖಡಕ್ ಟೈಟಲ್

‘10 ವರ್ಷ ತುಂಬಿದ ಖುಷಿಯಲ್ಲಿ ರಂಗಿತರಂಗ ಸಿನಿಮಾ ಜುಲೈ 10ರಂದು ಮತ್ತೆ ರಿಲೀಸ್ ಆಗುತ್ತಿದೆ.  ಯಾರು ಈ ಚಿತ್ರವನ್ನು ಇನ್ನೂ ವೀಕ್ಷಿಸಿಲ್ಲವೋ ಅಥವಾ ಮತ್ತೊಮ್ಮೆ ಈ ಚಿತ್ರವನ್ನು ನೋಡಬೇಕು ಎಂದು ಯಾರು ಬಯಸಿದ್ದೀರೋ ಅವರು ವೀಕ್ಷಿಸಬಹುದು. ನಮ್ಮ ಚಿತ್ರಕ್ಕೆ ಐತಿಹಾಸಿಕ ಗೆಲುವನ್ನು ತಂದುಕೊಟ್ಟ ಪ್ರತಿಯೊಬ್ಬರಿಗೂ ಮತ್ತೊಮ್ಮೆ ಧನ್ಯವಾದಗಳು. ಥಿಯೇಟರ್​ನಲ್ಲಿ ಸಿಗೋಣ’ ಎಂದು ಅನೂಪ್ ಭಂಡಾರಿ ಬರೆದುಕೊಂಡಿದ್ದಾರೆ.

ಇದನ್ನೂ ಓದಿ: ‘ಬಾಹುಬಲಿ’ ರೀ-ರಿಲೀಸ್; ಒಂದೇ ಪಾರ್ಟ್​ನಲ್ಲಿ ಎರಡು ಭಾಗ

‘ರಂಗಿತರಂಗ’ ಸಿನಿಮಾದ ಕಥೆ ಕರಾವಳಿಯಲ್ಲಿ ಸಾಗುತ್ತದೆ. ಅಲ್ಲಿನ ಮಂದಿ ಆರಾಧಿಸುವ ದೈವದ ವಿಚಾರವನ್ನು ಇದರಲ್ಲಿ ಹೇಳಲಾಗಿದೆ. ಈ ಸಿನಿಮಾದಲ್ಲಿ ನಿರೂಫ್ ಭಂಡಾರಿ, ರಾಧಿಕಾ ಚೇತನ್, ಅವಂತಿಕಾ ಶೆಟ್ಟಿ, ಸಾಯಿಕುಮಾರ್ ನಟಿಸಿದ್ದಾರೆ. ಅನೂಪ್ ಭಂಡಾರಿ ಸಂಗೀತ ಸಂಯೋಜನೆ ಮಾಡಿದರೆ, ಅಜನೀಶ್ ಲೋಕನಾಥ್ ಹಿನ್ನೆಲೆ ಸಂಗೀತ ಕೊಟ್ಟಿದ್ದಾರೆ. ಒಂದೂವರೆ ಕೋಟಿ ರೂಪಾಯಿ ಬಜೆಟ್​ನಲ್ಲಿ ಸಿದ್ಧವಾದ ಚಿತ್ರ 43 ಕೋಟಿ ರೂಪಾಯಿ ಕಲೆಕ್ಷನ್ ಮಾಡಿತ್ತು. ಈ ಚಿತ್ರ ‘ಗುಡ್ಡದ ಭೂತ’ ಧಾರಾವಾಹಿಯನ್ನಾಧರಿಸಿದೆ. ಸದ್ಯ ಅನೂಪ್ ಭಂಡಾರಿ ಅವರು ಸುದೀಪ್ ಜೊತೆ ‘ಬಿಲ್ಲ ರಂಗ ಭಾಷ’ ಚಿತ್ರವನ್ನು ಮಾಡುತ್ತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಅರಣ್ಯ ಇಲಾಖೆ ಸಿಬ್ಬಂದಿಯನ್ನೇ ಅಟ್ಟಾಡಿಸಿದ ಆನೆ, ಭಯಾನಕ ವಿಡಿಯೋ ನೋಡಿ
ಅರಣ್ಯ ಇಲಾಖೆ ಸಿಬ್ಬಂದಿಯನ್ನೇ ಅಟ್ಟಾಡಿಸಿದ ಆನೆ, ಭಯಾನಕ ವಿಡಿಯೋ ನೋಡಿ