AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Ranjani Raghavan: ನಿಸರ್ಗ ನೋಡಿ ತಾಳ್ಮೆ ಕಲಿತ ನಟಿ ರಂಜನಿ ರಾಘವನ್

ನಟಿ ರಂಜನಿ ರಾಘವನ್ ಅವರದ್ದು ಭಿನ್ನ ವ್ಯಕ್ತಿತ್ವ. ಅವರು ನಟನೆಯ ಜೊತೆಗೆ ಕಾದಂಬರಿ ಹಾಗೂ ಕಥೆಗಳನ್ನು ಕೂಡ ಬರೆಯುತ್ತಾರೆ. ಈಗ ಅವರು ಸಿನಿಮಾ ಕೆಲಸಗಳಿಂದ ಬ್ರೇಕ್ ಪಡೆದು ಸುತ್ತಾಡುತ್ತಿದ್ದಾರೆ.

Ranjani Raghavan: ನಿಸರ್ಗ ನೋಡಿ ತಾಳ್ಮೆ ಕಲಿತ ನಟಿ ರಂಜನಿ ರಾಘವನ್
ರಂಜನಿ
ರಾಜೇಶ್ ದುಗ್ಗುಮನೆ
|

Updated on:Jul 28, 2023 | 2:44 PM

Share

ನಟಿ ರಂಜನಿ ರಾಘವನ್ (Ranjani Raghavan) ಅವರು ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಆಗಿದ್ದಾರೆ. ಹಲವು ವಿಡಿಯೋ ಹಾಗೂ ಫೋಟೋಗಳನ್ನು ಅವರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಳ್ಳುತ್ತಾರೆ. ಈಗ ರಂಜನಿ ಅವರು ಕೇರಳದ ವಯನಾಡಿನಲ್ಲಿ ಸಮಯ ಕಳೆಯುತ್ತಿದ್ದಾರೆ. ಇದರ ಫೋಟೋಗಳನ್ನು ಅವರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಪ್ರಕೃತಿಯನ್ನು ಅವರು ಆರಾಧಿಸುತ್ತಿದ್ದಾರೆ ಎಂಬುದು ಈ ಪೋಸ್ಟ್​ನಲ್ಲಿ ಗೊತ್ತಾಗಿದೆ. ಸದ್ಯ ಅವರು ಕಿರುತೆರೆ ಬಿಟ್ಟು ಹಿರಿತೆರೆಯಲ್ಲಿ ಬ್ಯುಸಿ ಆಗಿದ್ದಾರೆ.

ನಟಿ ರಂಜನಿ ರಾಘವನ್ ಅವರದ್ದು ಭಿನ್ನ ವ್ಯಕ್ತಿತ್ವ. ಅವರು ನಟನೆಯ ಜೊತೆಗೆ ಕಾದಂಬರಿ ಹಾಗೂ ಕಥೆಗಳನ್ನು ಕೂಡ ಬರೆಯುತ್ತಾರೆ. ‘ಕನ್ನಡತಿ’ ಧಾರಾವಾಹಿ ಮೂಲಕ ಸಾಕಷ್ಟು ಜನಪ್ರಿಯತೆ ಪಡೆದ ಅವರು ಈಗ ಸಿನಿಮಾ ಕೆಲಸಗಳಲ್ಲಿ ತೊಡಗಿಕೊಂಡಿದ್ದಾರೆ. ಈಗ ಅವರು ಸಿನಿಮಾ ಕೆಲಸಗಳಿಂದ ಬ್ರೇಕ್ ಪಡೆದು ಸುತ್ತಾಡುತ್ತಿದ್ದಾರೆ. ಕೇರಳದ ವಯನಾಡಿನ ರೆಸಾರ್ಟ್ ಒಂದರಲ್ಲಿ ಸಮಯ ಕಳೆಯುತ್ತಿದ್ದಾರೆ.

ಪ್ರಕೃತಿ ಮಧ್ಯೆ ಇರುವ ರೆಸಾರ್ಟ್​​ನಲ್ಲಿ ರಂಜನಿ ರಾಘವನ್ ನಿಂತಿದ್ದಾರೆ. ಈ ವಿಡಿಯೋಗೆ ಅವರು, ‘ನಿಸರ್ಗ ನೋಡು.. ಆಕೆಯ ತಾಳ್ಮೆಯ ಕಲಿ’ ಎಂದು ಕ್ಯಾಪ್ಶನ್ ನೀಡಿದ್ದಾರೆ. ರಂಜನಿ ರಾಘವನ್ ಅವರು ಹೇಳಿದ ಮಾತನ್ನು ಅನೇಕರು ಒಪ್ಪಿಕೊಂಡಿದ್ದಾರೆ. ಇನ್ನೂ ಕೆಲವರು ರಂಜನಿ ಅವರನ್ನು ಸುಂದರಿ ಎಂದು ಕರೆದಿದ್ದಾರೆ. ‘ಸುಂದರ ಲೋಕದಲ್ಲೊಬ್ಬಳು ಸುಂದರಿ’ ಎಂದು ಕಮೆಂಟ್ ಮಾಡಿದ್ದಾರೆ.

ಇದನ್ನೂ ಓದಿ: ವಯನಾಡು ಪ್ರವಾಸದ ಫೋಟೋ ಹಂಚಿಕೊಂಡ ರಂಜನಿ ರಾಘವನ್

ಇತ್ತೀಚೆಗೆ ರಂಜನಿ ಅವರ ಹೊಸ ಸಿನಿಮಾ ಘೋಷಣೆ ಆಗಿದೆ. ‘ಡೆಡ್ಲಿ ಸೋಮ’ ಖ್ಯಾತಿಯ ಆದಿತ್ಯ ಅವರು ಈ ಚಿತ್ರಕ್ಕೆ ಹೀರೋ. ಈ ಸಿನಿಮಾಗೆ ಕಿಶೋರ್ ಮೇಗಳಮನೆ ಅವರು ನಿರ್ದೇಶನ ಮಾಡುತ್ತಿದ್ದಾರೆ‌‌. ಕಿಶೋರ್ ಮೇಗಳಮನೆ ಅವರೇ ಕಥೆ, ಚಿತ್ರಕಥೆ ಹಾಗೂ ಸಂಭಾಷಣೆಯ ಜವಾಬ್ದಾರಿ ಹೊತ್ತಿದ್ದಾರೆ. ಈ ಸಿನಿಮಾಗೆ ಟೈಟಲ್ ಇನ್ನೂ ಫೈನಲ್ ಆಗಿಲ್ಲ. ಅಶ್ವಿನ್ ಹಾಸನ್, ಕರಿಸುಬ್ಬು, ಶಿವಮಣಿ ಮುಂತಾದವರು ಈ ಸಿನಿಮಾದಲ್ಲಿ ಅಭಿನಯಿಸಿದ್ದಾರೆ. ಆದಿತ್ಯ ಮತ್ತು ರಂಜನಿ ರಾಘವನ್ ಕಾಂಬಿನೇಷನ್​ ಬಗ್ಗೆ ನಿರೀಕ್ಷೆ ಮೂಡಿದೆ. ಈ ಮೊದಲು ರಂಜನಿ ಅವರು ಕೆಲ ಸಿನಿಮಾಗಳಲ್ಲಿ ನಟಿಸಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 2:39 pm, Fri, 28 July 23

ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ